< ١ أخبار 13 >

وَشَاوَرَ دَاوُدُ قُوَّادَ ٱلْأُلُوفِ وَٱلْمِئَاتِ وَكُلَّ رَئِيسٍ. ١ 1
ದಾವೀದನು ಸಾವಿರ ಮಂದಿಗೂ, ನೂರು ಮಂದಿಗೂ ಪ್ರಧಾನರಾದವರ ಸಂಗಡ, ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.
وَقَالَ دَاوُدُ لِكُلِّ جَمَاعَةِ إِسْرَائِيلَ: «إِنْ حَسُنَ عِنْدَكُمْ وَكَانَ ذَلِكَ مِنَ ٱلرَّبِّ إِلَهِنَا، فَلْنُرْسِلْ إِلَى كُلِّ جِهَةٍ، إِلَى إِخْوَتِنَا ٱلْبَاقِينَ فِي كُلِّ أَرَاضِي إِسْرَائِيلَ وَمَعَهُمُ ٱلْكَهَنَةُ وَٱللَّاوِيُّونَ فِي مُدُنِ مَسَارِحِهِمْ لِيَجْتَمِعُوا إِلَيْنَا، ٢ 2
ದಾವೀದನು ಇಸ್ರಾಯೇಲಿನ ಸಮಸ್ತ ಜನರಿಗೆ, “ನಿಮಗೆ ಒಳ್ಳೆಯದಾಗಿ ಕಂಡರೆ, ನಮ್ಮ ದೇವರಾದ ಯೆಹೋವ ದೇವರ ಚಿತ್ತವಾದರೆ, ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲದರಲ್ಲಿ ಉಳಿದಿರುವ ನಮ್ಮ ಸಹೋದರರನ್ನೂ, ತಮ್ಮ ಪಟ್ಟಣಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕರನ್ನೂ, ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೆಯಕಳುಹಿಸಿ,
فَنُرْجِعَ تَابُوتَ إِلَهِنَا إِلَيْنَا لِأَنَّنَا لَمْ نَسْأَلْ بِهِ فِي أَيَّامِ شَاوُلَ». ٣ 3
ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.
فَقَالَ كُلُّ ٱلْجَمَاعَةِ بِأَنْ يَفْعَلُوا ذَلِكَ، لِأَنَّ ٱلْأَمْرَ حَسُنَ فِي أَعْيُنِ جَمِيعِ ٱلشَّعْبِ. ٤ 4
ಹಾಗೆಯೇ ಮಾಡೋಣ ಎಂದು ಕೂಟದವರೆಲ್ಲರೂ ಹೇಳಿದರು. ಏಕೆಂದರೆ ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.
وَجَمَعَ دَاوُدُ كُلَّ إِسْرَائِيلَ مِنْ شِيحُورِ مِصْرَ إِلَى مَدْخَلِ حَمَاةَ لِيَأْتُوا بِتَابُوتِ ٱللهِ مِنْ قَرْيَةِ يَعَارِيمَ. ٥ 5
ಹೀಗೆ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತರುವುದಕ್ಕೆ ದಾವೀದನು ಈಜಿಪ್ಟಿನ ಶೀಹೋರ್ ನದಿ ಮೊದಲ್ಗೊಂಡು ಲಿಬೋ ಹಮಾತಿನ ಪ್ರದೇಶದವರೆಗೆ ಇರುವ ಸಮಸ್ತ ಇಸ್ರಾಯೇಲರನ್ನು ಕೂಡಿಸಿದನು.
وَصَعِدَ دَاوُدُ وَكُلُّ إِسْرَائِيلَ إِلَى بَعْلَةَ، إِلَى قَرْيَةِ يَعَارِيمَ ٱلَّتِي لِيَهُوذَا، لِيُصْعِدُوا مِنْ هُنَاكَ تَابُوتَ ٱللهِ ٱلرَّبِّ ٱلْجَالِسِ عَلَى ٱلْكَرُوبِيمَ ٱلَّذِي دُعِيَ بِٱلِٱسْمِ. ٦ 6
ಆಗ ಕೆರೂಬಿಗಳ ನಡುವೆ ವಾಸವಾಗಿರುವ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು, ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಹೂದಕ್ಕೆ ಸೇರಿದ ಕಿರ್ಯತ್ ಯಾರೀಮಿನ ಬಾಲಾ ಎಂಬಲ್ಲಿಗೆ ಹೋದರು.
وَأَرْكَبُوا تَابُوتَ ٱللهِ عَلَى عَجَلَةٍ جَدِيدَةٍ مِنْ بَيْتِ أَبِينَادَابَ، وَكَانَ عُزَّا وَأَخِيُو يَسُوقَانِ ٱلْعَجَلَةَ، ٧ 7
ಅವರು ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು.
وَدَاوُدُ وَكُلُّ إِسْرَائِيلَ يَلْعَبُونَ أَمَامَ ٱللهِ بِكُلِّ عِزٍّ وَبِأَغَانِيَّ وَعِيدَانٍ وَرَبَابٍ وَدُفُوفٍ وَصُنُوجٍ وَأَبْوَاقٍ. ٨ 8
ಆಗ ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ದೇವರ ಮುಂದೆ ಹೋದರು.
وَلَمَّا ٱنْتَهَوْا إِلَى بَيْدَرِ كِيدُونَ، مَدَّ عُزَّا يَدَهُ لِيُمْسِكَ ٱلتَّابُوتَ، لِأَنَّ ٱلثِّيرَانَ ٱنْشَمَصَتْ. ٩ 9
ಆದರೆ ಅವರು ಕಿದೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.
فَحَمِيَ غَضَبُ ٱلرَّبِّ عَلَى عُزَّا وَضَرَبَهُ مِنْ أَجْلِ أَنَّهُ مَدَّ يَدَهُ إِلَى ٱلتَّابُوتِ، فَمَاتِ هُنَاكَ أَمَامَ ٱللهِ. ١٠ 10
ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸಿದರು. ಅವನು ಅಲ್ಲಿಯೇ ದೇವರ ಮುಂದೆ ಮರಣಹೊಂದಿದನು.
فَٱغْتَاظَ دَاوُدُ لِأَنَّ ٱلرَّبَّ ٱقْتَحَمَ عُزَّا ٱقْتِحَامًا، وَسَمَّى ذَلِكَ ٱلْمَوْضِعَ «فَارَصَ عُزَّا» إِلَى هَذَا ٱلْيَوْمِ. ١١ 11
ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ.
وَخَافَ دَاوُدُ ٱللهَ فِي ذَلِكَ ٱلْيَوْمِ قَائِلًا: «كَيْفَ آتِي بِتَابُوتِ ٱللهِ إِلَيَّ؟». ١٢ 12
ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು.
وَلَمْ يَنْقُلْ دَاوُدُ ٱلتَّابُوتَ إِلَيْهِ إِلَى مَدِينَةِ دَاوُدَ، بَلْ مَالَ بِهِ إِلَى بَيْتِ عُوبِيدَ أَدُومَ ٱلْجَتِّيِّ. ١٣ 13
ಹಾಗೆಯೇ ದಾವೀದನು ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.
وَبَقِيَ تَابُوتُ ٱللهِ عِنْدَ بَيْتِ عُوبِيدَ أَدُومَ فِي بَيْتِهِ ثَلَاثَةَ أَشْهُرٍ. وَبَارَكَ ٱلرَّبُّ بَيْتَ عُوبِيدَ أَدُومَ وَكُلَّ مَا لَهُ. ١٤ 14
ದೇವರ ಮಂಜೂಷವು ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ, ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದರು.

< ١ أخبار 13 >