< ١ أخبار 16 >

وَأَدْخَلُوا تَابُوتَ ٱللهِ وَأَثْبَتُوهُ فِي وَسَطِ ٱلْخَيْمَةِ ٱلَّتِي نَصَبَهَا لَهُ دَاوُدُ، وَقَرَّبُوا مُحْرَقَاتٍ وَذَبَائِحَ سَلَامَةٍ أَمَامَ ٱللهِ. ١ 1
ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
وَلَمَّا ٱنْتَهَى دَاوُدُ مِنْ إِصْعَادِ ٱلْمُحْرَقَاتِ وَذَبَائِحِ ٱلسَّلَامَةِ بَارَكَ ٱلشَّعْبَ بِٱسْمِ ٱلرَّبِّ. ٢ 2
ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು.
وَقَسَمَ عَلَى كُلِّ آلِ إِسْرَائِيلَ مِنَ ٱلرِّجَالِ وَٱلنِّسَاءِ، عَلَى كُلِّ إِنْسَانٍ، رَغِيفَ خُبْزٍ وَكَأْسَ خَمْرٍ وَقُرْصَ زَبِيبٍ. ٣ 3
ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.
وَجَعَلَ أَمَامَ تَابُوتِ ٱلرَّبِّ مِنَ ٱللَّاوِيِّينَ خُدَّامًا، وَلِأَجْلِ ٱلتَّذْكِيرِ وَٱلشُّكْرِ وَتَسْبِيحِ ٱلرَّبِّ إِلَهِ إِسْرَائِيلَ: ٤ 4
ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
آسَافَ ٱلرَّأْسَ وَزَكَرِيَّا ثَانِيَهُ، وَيَعِيئِيلَ وَشَمِيرَامُوثَ وَيَحِيئِيلَ وَمَتَّثْيَا وَأَلِيآبَ وَبَنَايَا وَعُوبِيدَ أَدُومَ وَيَعِيئِيلَ بِآلَاتٍ رَبَابٍ وَعِيدَانٍ. وَكَانَ آسَافُ يُصَوِّتُ بِٱلصُّنُوجِ. ٥ 5
ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.
وَبَنَايَا وَيَحْزِيئِيلُ ٱلْكَاهِنَانِ بِٱلْأَبْوَاقِ دَائِمًا أَمَامَ تَابُوتِ عَهْدِ ٱللهِ. ٦ 6
ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.
حِينَئِذٍ فِي ذَلِكَ ٱلْيَوْمِ أَوَّلًا جَعَلَ دَاوُدُ يَحْمَدُ ٱلرَّبَّ بِيَدِ آسَافَ وَإِخْوَتِهِ: ٧ 7
ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;
«اِحْمَدُوا ٱلرَّبَّ. ٱدْعُوا بِٱسْمِهِ. أَخْبِرُوا فِي ٱلشُّعُوبِ بِأَعْمَالِهِ. ٨ 8
“ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
غَنُّوا لَهُ. تَرَنَّمُوا لَهُ. تَحَادَثُوا بِكُلِّ عَجَائِبِهِ. ٩ 9
ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
ٱفْتَخِرُوا بِٱسْمِ قُدْسِهِ. تَفْرَحُ قُلُوبُ ٱلَّذِينَ يَلْتَمِسُونَ ٱلرَّبَّ. ١٠ 10
೧೦ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ.
ٱطْلُبُوا ٱلرَّبَّ وَعِزَّهُ. ٱلْتَمِسُوا وَجْهَهُ دَائِمًا. ١١ 11
೧೧ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
ٱذْكُرُوا عَجَائِبَهُ ٱلَّتِي صَنَعَ. آيَاتِهِ وَأَحْكَامَ فَمِهِ. ١٢ 12
೧೨ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,
يَا ذُرِّيَّةَ إِسْرَائِيلَ عَبْدِهِ، وَبَنِي يَعْقُوبَ مُخْتَارِيهِ. ١٣ 13
೧೩ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ.
هُوَ ٱلرَّبُّ إِلَهُنَا. فِي كُلِّ ٱلْأَرْضِ أَحْكَامُهُ. ١٤ 14
೧೪ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
ٱذْكُرُوا إِلَى ٱلْأَبَدِ عَهْدَهُ، ٱلْكَلِمَةَ ٱلَّتِي أَوْصَى بِهَا إِلَى أَلْفِ جِيلٍ. ١٥ 15
೧೫ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.
ٱلَّذِي قَطَعَهُ مَعَ إِبْرَاهِيمَ. وَقَسَمَهُ لِإِسْحَاقَ. ١٦ 16
೧೬ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.
وَقَدْ أَقَامَهُ لِيَعْقُوبَ فَرِيضَةً، وَلِإِسْرَائِيلَ عَهْدًا أَبَدِيًّا. ١٧ 17
೧೭ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.
قَائِلًا: لَكَ أُعْطِي أَرْضَ كَنْعَانَ حَبْلَ مِيرَاثِكُمْ. ١٨ 18
೧೮ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ
حِينَ كُنْتُمْ عَدَدًا قَلِيلًا، قَلِيلِينَ جِدًّا وَغُرَبَاءَ فِيهَا. ١٩ 19
೧೯ಆತನು, ‘ನಿಮಗೆ ಈ ದೇಶವನ್ನು ಕೊಡುವೆನು ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು’ ಎಂದು ವಾಗ್ದಾನ ಮಾಡಿದನು.
وَذَهَبُوا مِنْ أُمَّةٍ إِلَى أُمَّةٍ وَمِنْ مَمْلَكَةٍ إِلَى شَعْبٍ آخَرَ. ٢٠ 20
೨೦ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ
لَمْ يَدَعْ أَحَدًا يَظْلِمُهُمْ بَلْ وَبَّخَ مِنْ أَجْلِهِمْ مُلُوكًا. ٢١ 21
೨೧ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ,
لَا تَمَسُّوا مُسَحَائِي وَلَا تُؤْذُوا أَنْبِيَائِي. ٢٢ 22
೨೨‘ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾದಿಗಳಿಗೆ ಯಾವ ಕೇಡನ್ನು ಮಾಡಬಾರದು’ ಎಂದು ಹೇಳಿದನು.
«غَنُّوا لِلرَّبِّ يَا كُلَّ ٱلْأَرْضِ. بَشِّرُوا مِنْ يَوْمٍ إِلَى يَوْمٍ بِخَلَاصِهِ. ٢٣ 23
೨೩ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ.
حَدِّثُوا فِي ٱلْأُمَمِ بِمَجْدِهِ وَفِي كُلِّ ٱلشُّعُوبِ بِعَجَائِبِهِ. ٢٤ 24
೨೪ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ.
لِأَنَّ ٱلرَّبَّ عَظِيمٌ وَمُفْتَخَرٌ جِدًّا. وَهُوَ مَرْهُوبٌ فَوْقَ جَمِيعِ ٱلْآلِهَةِ. ٢٥ 25
೨೫ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು.
لِأَنَّ كُلَّ آلِهَةِ ٱلْأُمَمِ أَصْنَامٌ، وَأَمَّا ٱلرَّبُّ فَقَدْ صَنَعَ ٱلسَّمَاوَاتِ. ٢٦ 26
೨೬ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.
ٱلْجَلَالُ وَٱلْبَهَاءُ أَمَامَهُ. ٱلْعِزَّةُ وَٱلْبَهْجَةُ فِي مَكَانِهِ. ٢٧ 27
೨೭ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ.
هَبُوا ٱلرَّبَّ يَا عَشَائِرَ ٱلشُّعُوبِ، هَبُوا ٱلرَّبَّ مَجْدًا وَعِزَّةً. ٢٨ 28
೨೮ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.
هَبُوا ٱلرَّبَّ مَجْدَ ٱسْمِهِ. ٱحْمِلُوا هَدَايَا وَتَعَالَوْا إِلَى أَمَامِهِ. ٱسْجُدُوا لِلرَّبِّ فِي زِينَةٍ مُقَدَّسَةٍ. ٢٩ 29
೨೯ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.
ٱرْتَعِدُوا أَمَامَهُ يَا جَمِيعَ ٱلْأَرْضِ. تَثَبَّتَتِ ٱلْمَسْكُونَةُ أَيْضًا، لَا تَتَزَعْزَعُ. ٣٠ 30
೩೦ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ,
لِتَفْرَحِ ٱلسَّمَاوَاتُ وَتَبْتَهِجِ ٱلْأَرْضُ وَيَقُولُوا فِي ٱلْأُمَمِ: ٱلرَّبُّ قَدْ مَلَكَ. ٣١ 31
೩೧ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
لِيَعِجَّ ٱلْبَحْرُ وَمِلْؤُهُ، وَلْتَبْتَهِجِ ٱلْبَرِّيَّةُ وَكُلُّ مَا فِيهَا. ٣٢ 32
೩೨ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.
حِينَئِذٍ تَتَرَنَّمُ أَشْجَارُ ٱلْوَعْرِ أَمَامَ ٱلرَّبِّ لِأَنَّهُ جَاءَ لِيَدِينَ ٱلْأَرْضَ. ٣٣ 33
೩೩ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ.
ٱحْمَدُوا ٱلرَّبَّ لِأَنَّهُ صَالِحٌ، لِأَنَّ إِلَى ٱلْأَبَدِ رَحْمَتَهُ. ٣٤ 34
೩೪ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.
وَقُولُوا: خَلِّصْنَا يَا إِلَهَ خَلَاصِنَا، وَٱجْمَعْنَا وَأَنْقِذْنَا مِنَ ٱلْأُمَمِ لِنَحْمَدَ ٱسْمَ قُدْسِكَ، وَنَتَفَاخَرَ بِتَسْبِيحَتِكَ. ٣٥ 35
೩೫ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.
مُبَارَكٌ ٱلرَّبُّ إِلَهُ إِسْرَائِيلَ مِنَ ٱلْأَزَلِ وَإِلَى ٱلْأَبَدِ». فَقَالَ كُلُّ ٱلشَّعْبِ: «آمِينَ» وَسَبَّحُوا ٱلرَّبَّ. ٣٦ 36
೩೬ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
وَتَرَكَ هُنَاكَ أَمَامَ تَابُوتِ عَهْدِ ٱلرَّبِّ آسَافَ وَإِخْوَتَهُ لِيَخْدِمُوا أَمَامَ ٱلتَّابُوتِ دَائِمًا خِدْمَةَ كُلِّ يَوْمٍ بِيَوْمِهَا، ٣٧ 37
೩೭ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,
وَعُوبِيدَ أَدُومَ وَإِخْوَتَهُمْ ثمَانِيَةً وَسِتِّينَ، وَعُوبِيدَ أَدُومَ بْنَ يَدِيثُونَ وَحُوسَةَ بَوَّابِينَ. ٣٨ 38
೩೮ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು.
وَصَادُوقَ ٱلْكَاهِنَ وَإِخْوَتَهُ ٱلْكَهَنَةَ أَمَامَ مَسْكَنِ ٱلرَّبِّ فِي ٱلْمُرْتَفَعَةِ ٱلَّتِي فِي جِبْعُونَ ٣٩ 39
೩೯ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.
لِيُصْعِدُوا مُحْرَقَاتٍ لِلرَّبِّ عَلَى مَذْبَحِ ٱلْمُحْرَقَةِ دَائِمًا صَبَاحًا وَمَسَاءً، وَحَسَبَ كُلِّ مَا هُوَ مَكْتُوبٌ فِي شَرِيعَةِ ٱلرَّبِّ ٱلَّتِي أَمَرَ بِهَا إِسْرَائِيلَ. ٤٠ 40
೪೦ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.
وَمَعَهُمْ هَيْمَانَ وَيَدُوثُونَ وَبَاقِيَ ٱلْمُنْتَخَبِينَ ٱلَّذِينَ ذُكِرَتْ أَسْمَاؤُهُمْ لِيَحْمَدُوا ٱلرَّبَّ، لِأَنَّ إِلَى ٱلْأَبَدِ رَحْمَتَهُ. ٤١ 41
೪೧ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.
وَمَعَهُمْ هَيْمَانُ وَيَدُوثُونُ بِأَبْوَاقٍ وَصُنُوجٍ لِلْمُصَوِّتِينَ، وَآلَاتِ غِنَاءٍلِلهِ، وَبَنُو يَدُوثُونَ بَوَّابُونَ. ٤٢ 42
೪೨ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.
ثُمَّ ٱنْطَلَقَ كُلُّ ٱلشَّعْبِ كُلُّ وَاحِدٍ إِلَى بَيْتِهِ، وَرَجَعَ دَاوُدُ لِيُبَارِكَ بَيْتَهُ. ٤٣ 43
೪೩ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು.

< ١ أخبار 16 >