< ١ أخبار 19 >

وَكَانَ بَعْدَ ذَلِكَ أَنَّ نَاحَاشَ مَلِكَ بَنِي عَمُّونَ مَاتَ، فَمَلَكَ ٱبْنُهُ عِوَضًا عَنْهُ. ١ 1
ಇದರ ತರುವಾಯ, ಅಮ್ಮೋನಿಯರ ಅರಸನಾದ ನಾಹಾಷನು ಮರಣಹೊಂದಿದನು; ಅವನಿಗೆ ಬದಲಾಗಿ ಅವನ ಮಗನು ಅರಸನಾದನು.
فَقَالَ دَاوُدُ: «أَصْنَعُ مَعْرُوفًا مَعَ حَانُونَ بْنِ نَاحَاشَ، لِأَنَّ أَبَاهُ صَنَعَ مَعِي مَعْرُوفًا». فَأَرْسَلَ دَاوُدُ رُسُلًا لِيُعَزِّيَهُ بِأَبِيهِ. فَجَاءَ عَبِيدُ دَاوُدَ إِلَى أَرْضِ بَنِي عَمُّونَ إِلَى حَانُونَ لِيُعَزُّوهُ. ٢ 2
ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ದೂತರು ಹಾನೂನನಿಗೆ ಸಂತಾಪ ಸೂಚಿಸಲು, ಅಮ್ಮೋನಿಯರ ದೇಶಕ್ಕೆ ಬಂದರು.
فَقَالَ رُؤَسَاءُ بَنِي عَمُّونَ لِحَانُونَ: «هَلْ يُكْرِمُ دَاوُدُ أَبَاكَ فِي عَيْنَيْكَ حَتَّى أَرْسَلَ إِلَيْكَ مُعَزِّينَ؟ أَلَيْسَ إِنَّمَا لِأَجْلِ ٱلْفَحْصِ وَٱلْقَلْبِ وَتَجَسُّسِ ٱلْأَرْضِ جَاءَ عَبِيدُهُ إِلَيْكَ؟» ٣ 3
ಆಗ ಅಮ್ಮೋನಿಯರ ಪ್ರಧಾನರು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ಅವನ ದೂತರು ಈ ದೇಶವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಬರಲಿಲ್ಲವೋ?” ಎಂದರು.
فَأَخَذَ حَانُونُ عَبِيدَ دَاوُدَ وَحَلَقَ لِحَاهُمْ وَقَصَّ ثِيَابَهُمْ مِنَ ٱلْوَسَطِ عِنْدَ ٱلسَّوْءَةِ ثُمَّ أَطْلَقَهُمْ. ٤ 4
ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.
فَذَهَبَ أُنَاسٌ وَأَخْبَرُوا دَاوُدَ عَنِ ٱلرِّجَالِ. فَأَرْسَلَ لِلِقَائِهِمْ لِأَنَّ ٱلرِّجَالَ كَانُوا خَجِلِينَ جِدًّا. وَقَالَ ٱلْمَلِكُ: «أَقِيمُوا فِي أَرِيحَا حَتَّى تَنْبُتَ لِحَاكُمْ ثُمَّ ٱرْجِعُوا». ٥ 5
ಆಗ ಕೆಲವರು ಹೋಗಿ, ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ,” ಎಂದು ಹೇಳಿಸಿದನು.
وَلَمَّا رَأَى بَنُو عَمُّونَ أَنَّهُمْ قَدْ أَنْتَنُوا عِنْدَ دَاوُدَ، أَرْسَلَ حَانُونُ وَبَنُو عَمُّونَ أَلْفَ وَزْنَةٍ مِنَ ٱلْفِضَّةِ لِكَيْ يَسْتَأْجِرُوا لِأَنْفُسِهِمْ مِنْ أَرَامِ ٱلنَّهْرَيْنِ وَمِنْ أَرَامِ مَعْكَةَ وَمِنْ صُوبَةَ مَرْكَبَاتٍ وَفُرْسَانًا. ٦ 6
ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನಿಗೆ ಮತ್ತು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅರಾಮಿನಲ್ಲಿಯೂ, ಅರಾಮ್ ಮಾಕದಲ್ಲಿಯೂ, ಚೋಬದಲ್ಲಿಯೂ ರಥಗಳನ್ನೂ, ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.
فَٱسْتَأْجَرُوا لِأَنْفُسِهِمِ ٱثْنَيْنِ وَثَلَاثِينَ أَلْفَ مَرْكَبَةٍ، وَمَلِكَ مَعْكَةَ وَشَعْبَهُ. فَجَاءُوا وَنَزَلُوا مُقَابِلَ مَيْدَبَا. وَٱجْتَمَعَ بَنُو عَمُّونَ مِنْ مُدُنِهِمْ وَأَتَوْا لِلْحَرْبِ. ٧ 7
ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ, ಮಾಕದ ಅರಸನನ್ನೂ, ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಊರಿನ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋನಿಯರು ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.
وَلَمَّا سَمِعَ دَاوُدُ أَرْسَلَ يُوآبَ وَكُلَّ جَيْشِ ٱلْجَبَابِرَةِ. ٨ 8
ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.
فَخَرَجَ بَنُو عَمُّونَ وَٱصْطَفُّوا لِلْحَرْبِ عِنْدَ بَابِ ٱلْمَدِينَةِ، وَٱلْمُلُوكُ ٱلَّذِينَ جَاءُوا كَانُوا وَحْدَهُمْ فِي ٱلْحَقْلِ. ٩ 9
ಆಗ ಅಮ್ಮೋನಿಯರು ಹೊರಟು, ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.
وَلَمَّا رَأَى يُوآبُ أَنَّ مُقَدِّمَةَ ٱلْحَرْبِ كَانَتْ نَحْوَهُ مِنْ قُدَّامٍ وَمِنْ وَرَاءٍ، ٱخْتَارَ مِنْ جَمِيعِ مُنْتَخَبِي إِسْرَائِيلَ وَصَفَّهُمْ لِلِقَاءِ أَرَامَ. ١٠ 10
ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.
وَسَلَّمَ بَقِيَّةَ ٱلشَّعْبِ لِيَدِ أَبْشَايَ أَخِيهِ، فَٱصْطَفُّوا لِلِقَاءِ بَنِي عَمُّونَ. ١١ 11
ಆದರೆ ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,
وَقَالَ: «إِنْ قَوِيَ أَرَامُ عَلَيَّ تَكُونُ لِي نَجْدَةً، وَإِنْ قَوِيَ بَنُو عَمُّونَ عَلَيْكَ أَنْجَدْتُكَ. ١٢ 12
ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.
تَجَلَّدْ، وَلْنَتَشَدَّدْ لِأَجْلِ شَعْبِنَا وَلِأَجْلِ مُدُنِ إِلَهِنَا، وَمَا يَحْسُنُ فِي عَيْنَيِ ٱلرَّبِّ يَفْعَلُ». ١٣ 13
ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ. ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.
وَتَقَدَّمَ يُوآبُ وَٱلشَّعْبُ ٱلَّذِينَ مَعَهُ نَحْوَ أَرَامَ لِلْمُحَارَبَةِ، فَهَرَبُوا مِنْ أَمَامِهِ. ١٤ 14
ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.
وَلَمَّا رَأَى بَنُو عَمُّونَ أَنَّهُ قَدْ هَرَبَ أَرَامُ هَرَبُوا هُمْ أَيْضًا مِنْ أَمَامِ أَبْشَايَ أَخِيهِ وَدَخَلُوا إِلَى ٱلْمَدِينَةِ. وَجَاءَ يُوآبُ إِلَى أُورُشَلِيمَ. ١٥ 15
ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರೂ ಸಹ ಯೋವಾಬನ ತಮ್ಮನಾದ ಅಬೀಷೈಯನ ಎದುರಿನಿಂದ ಓಡಿಹೋಗಿ, ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಯೆರೂಸಲೇಮಿಗೆ ತಿರುಗಿಹೋದನು.
وَلَمَّا رَأَى أَرَامُ أَنَّهُمْ قَدِ ٱنْكَسَرُوا أَمَامَ إِسْرَائِيلَ أَرْسَلُوا رُسُلًا، وَأَبْرَزُوا أَرَامَ ٱلَّذِينَ فِي عَبْرِ ٱلنَّهْرِ، وَأَمَامَهُمْ شُوبَكُ رَئِيسُ جَيْشِ هَدَرَ عَزَرَ. ١٦ 16
ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರು ದೂತರನ್ನು ಕಳುಹಿಸಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡರು. ಹದದೆಜೆರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.
وَلَمَّا أُخْبِرَ دَاوُدُ جَمَعَ كُلَّ إِسْرَائِيلَ وَعَبَرَ ٱلْأُرْدُنَّ وَجَاءَ إِلَيْهِمْ وَٱصْطَفَّ ضِدَّهُمْ. اِصْطَفَّ دَاوُدُ لِلِقَاءِ أَرَامَ فِي ٱلْحَرْبِ فَحَارَبُوهُ. ١٧ 17
ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ, ಅವರಿಗೆದುರಾಗಿ ವ್ಯೂಹ ಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹ ಕಟ್ಟಿದ ಮೇಲೆ, ಅವರು ಅವನ ವಿರುದ್ಧ ಯುದ್ಧಮಾಡಿದರು.
وَهَرَبَ أَرَامُ مِنْ أَمَامِ إِسْرَائِيلَ، وَقَتَلَ دَاوُدُ مِنْ أَرَامَ سَبْعَةَ آلَافِ مَرْكَبَةٍ وَأَرْبَعِينَ أَلْفَ رَاجِلٍ، وَقَتَلَ شُوبَكَ رَئِيسَ ٱلْجَيْشِ. ١٨ 18
ಆದರೆ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ, ಅವರ ಸೇನಾಧಿಪತಿಯಾದ ಶೋಫಕನನ್ನೂ ಕೊಂದುಹಾಕಿದನು.
وَلَمَّا رَأَى عَبِيدُ هَدَرَ عَزَرَ أَنَّهُمْ قَدِ ٱنْكَسَرُوا أَمَامَ إِسْرَائِيلَ صَالَحُوا دَاوُدَ وَخَدَمُوهُ. وَلَمْ يَشَأْ أَرَامُ أَنْ يُنْجِدُوا بَنِي عَمُّونَ بَعْدُ. ١٩ 19
ಹದದೆಜೆರನ ಅಧೀನ ರಾಜರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ದಾವೀದನ ಸಂಗಡ ಸಂಧಾನ ಮಾಡಿಕೊಂಡು, ಅವನಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದವರಾದರು.

< ١ أخبار 19 >