< ١ أخبار 21 >

وَوَقَفَ ٱلشَّيْطَانُ ضِدَّ إِسْرَائِيلَ، وَأَغْوَى دَاوُدَ لِيُحْصِيَ إِسْرَائِيلَ. ١ 1
ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.
فَقَالَ دَاوُدُ لِيُوآبَ وَلِرُؤَسَاءِ ٱلشَّعْبِ: «ٱذْهَبُوا عِدُّوا إِسْرَائِيلَ مِنْ بِئْرِ سَبْعٍ إِلَى دَانَ، وَأْتُوا إِلَيَّ فَأَعْلَمَ عَدَدَهُمْ». ٢ 2
ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.
فَقَالَ يُوآبُ: «لِيَزِدِ ٱلرَّبُّ عَلَى شَعْبِهِ أَمْثَالَهُمْ مِئَةَ ضِعْفٍ. أَلَيْسُوا جَمِيعًا يَا سَيِّدِي ٱلْمَلِكَ عَبِيدًا لِسَيِّدِي؟ لِمَاذَا يَطْلُبُ هَذَا سَيِّدِي؟ لِمَاذَا يَكُونُ سَبَبَ إِثْمٍ لِإِسْرَائِيلَ؟» ٣ 3
ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು.
فَٱشْتَدَّ كَلَامُ ٱلْمَلِكِ عَلَى يُوآبَ. فَخَرَجَ يُوآبُ وَطَافَ فِي كُلِّ إِسْرَائِيلَ ثُمَّ جَاءَ إِلَى أُورُشَلِيمَ. ٤ 4
ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು.
فَدَفَعَ يُوآبُ جُمْلَةَ عَدَدِ ٱلشَّعْبِ إِلَى دَاوُدَ، فَكَانَ كُلُّ إِسْرَائِيلَ أَلْفَ أَلْفٍ وَمِئَةَ أَلْفِ رَجُلٍ مُسْتَلِّي ٱلسَّيْفِ، وَيَهُوذَا أَرْبَعَ مِئَةٍ وَسَبْعِينَ أَلْفَ رَجُلٍ مُسْتَلِّي ٱلسَّيْفِ، ٥ 5
ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.
وَأَمَّا لَاوِي وَبَنْيَامِينُ فَلَمْ يَعُدَّهُمْ مَعَهُمْ لِأَنَّ كَلَامَ ٱلْمَلِكِ كَانَ مَكْرُوهًا لَدَى يُوآبَ. ٦ 6
ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.
وَقَبُحَ فِي عَيْنَيِ ٱللهِ هَذَا ٱلْأَمْرُ فَضَرَبَ إِسْرَائِيلَ. ٧ 7
ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.
فَقَالَ دَاوُدُ لِلهِ: «لَقَدْ أَخْطَأْتُ جِدًّا حَيْثُ عَمِلْتُ هَذَا ٱلْأَمْرَ. وَٱلْآنَ أَزِلْ إِثْمَ عَبْدِكَ لِأَنِّي سَفِهْتُ جِدًّا». ٨ 8
ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ದೇವರನ್ನು ಪ್ರಾರ್ಥಿಸಿದನು.
فَكَلَّمَ ٱلرَّبُّ جَادَ رَائِيَ دَاوُدَ وَقَالَ: ٩ 9
ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ,
«ٱذْهَبْ وَكَلِّمْ دَاوُدَ قَائِلًا: هَكَذَا قَالَ ٱلرَّبُّ: ثَلَاثَةً أَنَا عَارِضٌ عَلَيْكَ فَٱخْتَرْ لِنَفْسِكَ وَاحِدًا مِنْهَا فَأَفْعَلَهُ بِكَ». ١٠ 10
೧೦ಯೆಹೋವನು ಇಂತೆನ್ನುತ್ತಾನೆ, “ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂಬುದಾಗಿ ದಾವೀದನಿಗೆ ಹೇಳು” ಎಂದನು.
فَجَاءَ جَادُ إِلَى دَاوُدَ وَقَالَ لَهُ: «هَكَذَا قَالَ ٱلرَّبُّ: ٱقْبَلْ لِنَفْسِكَ: ١١ 11
೧೧ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ, “ಯೆಹೋವನು ಹೇಳುವುದೇನೆಂದರೆ,
إِمَّا ثَلَاثَ سِنِينَ جُوعٌ، أَوْ ثَلَاثَةَ أَشْهُرٍ هَلَاكٌ أَمَامَ مُضَايِقِيكَ وَسَيْفُ أَعْدَائِكَ يُدْرِكُكَ، أَوْ ثَلَاثَةَ أَيَّامٍ يَكُونُ فِيهَا سَيْفُ ٱلرَّبِّ وَوَبَأٌ فِي ٱلْأَرْضِ، وَمَلَاكُ ٱلرَّبِّ يَعْثُو فِي كُلِّ تُخُومِ إِسْرَائِيلَ. فَٱنْظُرِ ٱلْآنَ مَاذَا أَرُدُّ جَوَابًا لِمُرْسِلِي». ١٢ 12
೧೨‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.
فَقَالَ دَاوُدُ لِجَادٍ: «قَدْ ضَاقَ بِيَ ٱلْأَمْرُ جِدًّا. دَعْنِي أَسْقُطْ فِي يَدِ ٱلرَّبِّ لِأَنَّ مَرَاحِمَهُ كَثِيرَةٌ، وَلَا أَسْقُطُ فِي يَدِ إِنْسَانٍ». ١٣ 13
೧೩ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು.
فَجَعَلَ ٱلرَّبُّ وَبَأً فِي إِسْرَائِيلَ، فَسَقَطَ مِنْ إِسْرَائِيلَ سَبْعُونَ أَلْفَ رَجُلٍ. ١٤ 14
೧೪ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
وَأَرْسَلَ ٱللهُ مَلَاكًا عَلَى أُورُشَلِيمَ لِإِهْلَاكِهَا، وَفِيمَا هُوَ يُهْلِكُ رَأَى ٱلرَّبُّ فَنَدِمَ عَلَى ٱلشَّرِّ، وَقَالَ لِلْمَلَاكِ ٱلْمُهْلِكِ: «كَفَى ٱلْآنَ، رُدَّ يَدَكَ». وَكَانَ مَلَاكُ ٱلرَّبِّ وَاقِفًا عِنْدَ بَيْدَرِ أُرْنَانَ ٱلْيَبُوسِيِّ. ١٥ 15
೧೫ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.
وَرَفَعَ دَاوُدُ عَيْنَيْهِ فَرَأَى مَلَاكَ ٱلرَّبِّ وَاقِفًا بَيْنَ ٱلْأَرْضِ وَٱلسَّمَاءِ، وَسَيْفُهُ مَسْلُولٌ بِيَدِهِ وَمَمْدُودٌ عَلَى أُورُشَلِيمَ. فَسَقَطَ دَاوُدُ وَٱلشُّيُوخُ عَلَى وُجُوهِهِمْ مُكْتَسِينَ بِٱلْمُسُوحِ. ١٦ 16
೧೬ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.
وَقَالَ دَاوُدُ لِلهِ: «أَلَسْتُ أَنَا هُوَ ٱلَّذِي أَمَرَ بِإِحْصَاءِ ٱلشَّعْبِ؟ وَأَنَا هُوَ ٱلَّذِي أَخْطَأَ وَأَسَاءَ، وَأَمَّا هَؤُلَاءِ ٱلْخِرَافُ فَمَاذَا عَمِلُوا؟ فَأَيُّهَا ٱلرَّبُّ إِلَهِي لِتَكُنْ يَدُكَ عَلَيَّ وَعَلَى بَيْتِ أَبِي لَا عَلَى شَعْبِكَ لِضَرْبِهِمْ». ١٧ 17
೧೭ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು.
فَكَلَّمَ مَلَاكُ ٱلرَّبِّ جَادَ أَنْ يَقُولَ لِدَاوُدَ أَنْ يَصْعَدَ دَاوُدُ لِيُقِيمَ مَذْبَحًا لِلرَّبِّ فِي بَيْدَرِ أُرْنَانَ ٱلْيَبُوسِيِّ. ١٨ 18
೧೮ಆಗ ಯೆಹೋವನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು” ಎಂದು ಆಜ್ಞಾಪಿಸಿದನು.
فَصَعِدَ دَاوُدُ حَسَبَ كَلَامِ جَادَ ٱلَّذِي تَكَلَّمَ بِهِ بِٱسْمِ ٱلرَّبِّ. ١٩ 19
೧೯ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
فَٱلْتَفَتَ أُرْنَانُ فَرَأَى ٱلْمَلَاكَ. وَبَنُوهُ ٱلْأَرْبَعَةُ مَعَهُ ٱخْتَبَأُوا، وَكَانَ أُرْنَانُ يَدْرُسُ حِنْطَةً. ٢٠ 20
೨೦ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು.
وَجَاءَ دَاوُدُ إِلَى أُرْنَانَ. وَتَطَلَّعَ أُرْنَانُ فَرَأَى دَاوُدَ، وَخَرَجَ مِنَ ٱلْبَيْدَرِ وَسَجَدَ لِدَاوُدَ عَلَى وَجْهِهِ إِلَى ٱلْأَرْضِ. ٢١ 21
೨೧ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟು ಹೋಗಿ ಅವನಿಗೆ ಅಡ್ಡ ಬಿದ್ದನು.
فَقَالَ دَاوُدُ لِأُرْنَانَ: «أَعْطِنِي مَكَانَ ٱلْبَيْدَرِ فَأَبْنِيَ فِيهِ مَذْبَحًا لِلرَّبِّ. بِفِضَّةٍ كَامِلَةٍ أَعْطِنِي إِيَّاهُ، فَتَكُفَّ ٱلضَّرْبَةُ عَنِ ٱلشَّعْبِ». ٢٢ 22
೨೨ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.
فَقَالَ أُرْنَانُ لِدَاوُدَ: «خُذْهُ لِنَفْسِكَ، وَلْيَفْعَلْ سَيِّدِي ٱلْمَلِكُ مَا يَحْسُنُ فِي عَيْنَيْهِ. اُنْظُرْ. قَدْ أَعْطَيْتُ ٱلْبَقَرَ لِلْمُحْرَقَةِ، وَٱلنَّوَارِجَ لِلْوَقُودِ، وَٱلْحِنْطَةَ لِلتَّقْدِمَةِ. ٱلْجَمِيعَ أَعْطَيْتُ». ٢٣ 23
೨೩ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆಗಳೂ, ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ. ಇವೆಲ್ಲವನ್ನೂ ಕೊಡುತ್ತೇನೆ” ಎಂದು ಹೇಳಿದನು.
فَقَالَ ٱلْمَلِكُ دَاوُدُ لِأُرْنَانَ: «لَا! بَلْ شِرَاءً أَشْتَرِيهِ بِفِضَّةٍ كَامِلَةٍ، لِأَنِّي لَا آخُذُ مَا لَكَ لِلرَّبِّ فَأُصْعِدَ مُحْرَقَةً مَجَّانِيَّةً». ٢٤ 24
೨೪ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು.
وَدَفَعَ دَاوُدُ لِأُرْنَانَ عَنِ ٱلْمَكَانِ ذَهَبًا وَزْنُهُ سِتُّ مِئَةِ شَاقِلٍ. ٢٥ 25
೨೫ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು.
وَبَنَى دَاوُدُ هُنَاكَ مَذْبَحًا لِلرَّبِّ، وَأَصْعَدَ مُحْرَقَاتٍ وَذَبَائِحَ سَلَامَةٍ، وَدَعَا ٱلرَّبَّ فَأَجَابَهُ بِنَارٍ مِنَ ٱلسَّمَاءِ عَلَى مَذْبَحِ ٱلْمُحْرَقَةِ. ٢٦ 26
೨೬ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ,
وَأَمَرَ ٱلرَّبُّ ٱلْمَلَاكَ فَرَدَّ سَيْفَهُ إِلَى غِمْدِهِ. ٢٧ 27
೨೭ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.
فِي ذَلِكَ ٱلْوَقْتِ لَمَّا رَأَى دَاوُدُ أَنَّ ٱلرَّبَّ قَدْ أَجَابَهُ فِي بَيْدَرِ أُرْنَانَ ٱلْيَبُوسِيِّ ذَبَحَ هُنَاكَ. ٢٨ 28
೨೮ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.
وَمَسْكَنُ ٱلرَّبِّ ٱلَّذِي عَمِلَهُ مُوسَى فِي ٱلْبَرِّيَّةِ وَمَذْبَحُ ٱلْمُحْرَقَةِ كَانَا فِي ذَلِكَ ٱلْوَقْتِ فِي ٱلْمُرْتَفَعَةِ فِي جِبْعُونَ. ٢٩ 29
೨೯ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.
وَلَمْ يَسْتَطِعْ دَاوُدُ أَنْ يَذْهَبَ إِلَى أَمَامِهِ لِيَسْأَلَ ٱللهَ لِأَنَّهُ خَافَ مِنْ جِهَةِ سَيْفِ مَلَاكِ ٱلرَّبِّ. ٣٠ 30
೩೦ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು.

< ١ أخبار 21 >