< ١ أخبار 21 >

وَوَقَفَ ٱلشَّيْطَانُ ضِدَّ إِسْرَائِيلَ، وَأَغْوَى دَاوُدَ لِيُحْصِيَ إِسْرَائِيلَ. ١ 1
ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.
فَقَالَ دَاوُدُ لِيُوآبَ وَلِرُؤَسَاءِ ٱلشَّعْبِ: «ٱذْهَبُوا عِدُّوا إِسْرَائِيلَ مِنْ بِئْرِ سَبْعٍ إِلَى دَانَ، وَأْتُوا إِلَيَّ فَأَعْلَمَ عَدَدَهُمْ». ٢ 2
ಆದ್ದರಿಂದ ದಾವೀದನು ಯೋವಾಬನನ್ನೂ ಜನರ ಪ್ರಧಾನರನ್ನೂ ಕರೆದು ಅವರಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀವು ಹೋಗಿ ಬೇರ್ಷೆಬವು ಮೊದಲುಗೊಂಡು, ದಾನ್ ಊರಿನವರೆಗೆ ಇಸ್ರಾಯೇಲರನ್ನು ಲೆಕ್ಕಿಸಿ, ಅವರ ಲೆಕ್ಕವನ್ನು ನನಗೆ ತೆಗೆದುಕೊಂಡು ಬನ್ನಿರಿ,” ಎಂದನು.
فَقَالَ يُوآبُ: «لِيَزِدِ ٱلرَّبُّ عَلَى شَعْبِهِ أَمْثَالَهُمْ مِئَةَ ضِعْفٍ. أَلَيْسُوا جَمِيعًا يَا سَيِّدِي ٱلْمَلِكَ عَبِيدًا لِسَيِّدِي؟ لِمَاذَا يَطْلُبُ هَذَا سَيِّدِي؟ لِمَاذَا يَكُونُ سَبَبَ إِثْمٍ لِإِسْرَائِيلَ؟» ٣ 3
ಆಗ ಯೋವಾಬನು, “ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ. ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರೂ ನನ್ನ ಒಡೆಯನ ಸೇವಕರಲ್ಲವೋ, ನನ್ನ ಒಡೆಯನು ಈ ಕಾರ್ಯವನ್ನು ಅಪೇಕ್ಷಿಸುವುದು ಏಕೆ? ಇದು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವುದು,” ಎಂದನು.
فَٱشْتَدَّ كَلَامُ ٱلْمَلِكِ عَلَى يُوآبَ. فَخَرَجَ يُوآبُ وَطَافَ فِي كُلِّ إِسْرَائِيلَ ثُمَّ جَاءَ إِلَى أُورُشَلِيمَ. ٤ 4
ಆದರೆ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆಗ ಅವನು ಹೊರಟು, ಇಸ್ರಾಯೇಲಿನ ಸಮಸ್ತ ಪ್ರಾಂತಗಳಿಗೆ ಹೋಗಿ, ಯೆರೂಸಲೇಮಿಗೆ ತಿರುಗಿಬಂದನು.
فَدَفَعَ يُوآبُ جُمْلَةَ عَدَدِ ٱلشَّعْبِ إِلَى دَاوُدَ، فَكَانَ كُلُّ إِسْرَائِيلَ أَلْفَ أَلْفٍ وَمِئَةَ أَلْفِ رَجُلٍ مُسْتَلِّي ٱلسَّيْفِ، وَيَهُوذَا أَرْبَعَ مِئَةٍ وَسَبْعِينَ أَلْفَ رَجُلٍ مُسْتَلِّي ٱلسَّيْفِ، ٥ 5
ಯೋವಾಬನು ದಾವೀದನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಸಮಸ್ತ ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಹನ್ನೊಂದು ಲಕ್ಷಮಂದಿ ಇದ್ದರು. ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಇದ್ದರು.
وَأَمَّا لَاوِي وَبَنْيَامِينُ فَلَمْ يَعُدَّهُمْ مَعَهُمْ لِأَنَّ كَلَامَ ٱلْمَلِكِ كَانَ مَكْرُوهًا لَدَى يُوآبَ. ٦ 6
ಆದರೆ ಲೇವಿಯರನ್ನೂ, ಬೆನ್ಯಾಮೀನರನ್ನೂ ಅವರಲ್ಲಿ ಎಣಿಸಲಿಲ್ಲ. ಏಕೆಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
وَقَبُحَ فِي عَيْنَيِ ٱللهِ هَذَا ٱلْأَمْرُ فَضَرَبَ إِسْرَائِيلَ. ٧ 7
ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದ್ದಾದದ್ದರಿಂದ, ದೇವರು ಇಸ್ರಾಯೇಲನ್ನು ಶಿಕ್ಷಿಸಿದರು.
فَقَالَ دَاوُدُ لِلهِ: «لَقَدْ أَخْطَأْتُ جِدًّا حَيْثُ عَمِلْتُ هَذَا ٱلْأَمْرَ. وَٱلْآنَ أَزِلْ إِثْمَ عَبْدِكَ لِأَنِّي سَفِهْتُ جِدًّا». ٨ 8
ದಾವೀದನು ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ, ಮಹಾಪಾಪ ಮಾಡಿದೆನು. ನೀವು ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ. ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.
فَكَلَّمَ ٱلرَّبُّ جَادَ رَائِيَ دَاوُدَ وَقَالَ: ٩ 9
ಆಗ ಯೆಹೋವ ದೇವರು ದಾವೀದನ ದರ್ಶಿಯಾದ ಗಾದನಿಗೆ,
«ٱذْهَبْ وَكَلِّمْ دَاوُدَ قَائِلًا: هَكَذَا قَالَ ٱلرَّبُّ: ثَلَاثَةً أَنَا عَارِضٌ عَلَيْكَ فَٱخْتَرْ لِنَفْسِكَ وَاحِدًا مِنْهَا فَأَفْعَلَهُ بِكَ». ١٠ 10
“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ,’ ಎಂದು ಹೇಳು,” ಎಂದರು.
فَجَاءَ جَادُ إِلَى دَاوُدَ وَقَالَ لَهُ: «هَكَذَا قَالَ ٱلرَّبُّ: ٱقْبَلْ لِنَفْسِكَ: ١١ 11
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನೇ ಆಯ್ದುಕೋ,
إِمَّا ثَلَاثَ سِنِينَ جُوعٌ، أَوْ ثَلَاثَةَ أَشْهُرٍ هَلَاكٌ أَمَامَ مُضَايِقِيكَ وَسَيْفُ أَعْدَائِكَ يُدْرِكُكَ، أَوْ ثَلَاثَةَ أَيَّامٍ يَكُونُ فِيهَا سَيْفُ ٱلرَّبِّ وَوَبَأٌ فِي ٱلْأَرْضِ، وَمَلَاكُ ٱلرَّبِّ يَعْثُو فِي كُلِّ تُخُومِ إِسْرَائِيلَ. فَٱنْظُرِ ٱلْآنَ مَاذَا أَرُدُّ جَوَابًا لِمُرْسِلِي». ١٢ 12
ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳವರೆಗೆ ನಿನ್ನ ಶತ್ರುಗಳ ಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಯೆಹೋವ ದೇವರ ದೂತನು ಇಸ್ರಾಯೇಲಿನ ಸಮಸ್ತ ಪ್ರಾಂತಗಳಲ್ಲಿ ಯೆಹೋವ ದೇವರ ಖಡ್ಗದಿಂದ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ನೀನು ಆರಿಸಿಕೋ. ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.
فَقَالَ دَاوُدُ لِجَادٍ: «قَدْ ضَاقَ بِيَ ٱلْأَمْرُ جِدًّا. دَعْنِي أَسْقُطْ فِي يَدِ ٱلرَّبِّ لِأَنَّ مَرَاحِمَهُ كَثِيرَةٌ، وَلَا أَسْقُطُ فِي يَدِ إِنْسَانٍ». ١٣ 13
ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಯೆಹೋವ ದೇವರ ಕೈಯಲ್ಲಿಯೇ ಬೀಳುತ್ತೇನೆ. ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.
فَجَعَلَ ٱلرَّبُّ وَبَأً فِي إِسْرَائِيلَ، فَسَقَطَ مِنْ إِسْرَائِيلَ سَبْعُونَ أَلْفَ رَجُلٍ. ١٤ 14
ಆದಕಾರಣ ಯೆಹೋವ ದೇವರು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
وَأَرْسَلَ ٱللهُ مَلَاكًا عَلَى أُورُشَلِيمَ لِإِهْلَاكِهَا، وَفِيمَا هُوَ يُهْلِكُ رَأَى ٱلرَّبُّ فَنَدِمَ عَلَى ٱلشَّرِّ، وَقَالَ لِلْمَلَاكِ ٱلْمُهْلِكِ: «كَفَى ٱلْآنَ، رُدَّ يَدَكَ». وَكَانَ مَلَاكُ ٱلرَّبِّ وَاقِفًا عِنْدَ بَيْدَرِ أُرْنَانَ ٱلْيَبُوسِيِّ. ١٥ 15
ಇದಲ್ಲದೆ ಯೆರೂಸಲೇಮನ್ನು ನಾಶಮಾಡುವುದಕ್ಕೆ ದೇವರು ದೂತನನ್ನು ಕಳುಹಿಸಿದರು. ಅವನು ನಾಶಮಾಡುವುದನ್ನು ಯೆಹೋವ ದೇವರು ನೋಡಿ, ಆ ದಂಡನೆಗೋಸ್ಕರ ದುಃಖಪಟ್ಟು, ಜನರನ್ನು ನಾಶಮಾಡುವ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
وَرَفَعَ دَاوُدُ عَيْنَيْهِ فَرَأَى مَلَاكَ ٱلرَّبِّ وَاقِفًا بَيْنَ ٱلْأَرْضِ وَٱلسَّمَاءِ، وَسَيْفُهُ مَسْلُولٌ بِيَدِهِ وَمَمْدُودٌ عَلَى أُورُشَلِيمَ. فَسَقَطَ دَاوُدُ وَٱلشُّيُوخُ عَلَى وُجُوهِهِمْ مُكْتَسِينَ بِٱلْمُسُوحِ. ١٦ 16
ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.
وَقَالَ دَاوُدُ لِلهِ: «أَلَسْتُ أَنَا هُوَ ٱلَّذِي أَمَرَ بِإِحْصَاءِ ٱلشَّعْبِ؟ وَأَنَا هُوَ ٱلَّذِي أَخْطَأَ وَأَسَاءَ، وَأَمَّا هَؤُلَاءِ ٱلْخِرَافُ فَمَاذَا عَمِلُوا؟ فَأَيُّهَا ٱلرَّبُّ إِلَهِي لِتَكُنْ يَدُكَ عَلَيَّ وَعَلَى بَيْتِ أَبِي لَا عَلَى شَعْبِكَ لِضَرْبِهِمْ». ١٧ 17
ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.
فَكَلَّمَ مَلَاكُ ٱلرَّبِّ جَادَ أَنْ يَقُولَ لِدَاوُدَ أَنْ يَصْعَدَ دَاوُدُ لِيُقِيمَ مَذْبَحًا لِلرَّبِّ فِي بَيْدَرِ أُرْنَانَ ٱلْيَبُوسِيِّ. ١٨ 18
ಆಗ ಯೆಹೋವ ದೇವರ ದೂತನು ಗಾದನಿಗೆ, “ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು,” ಎಂದನು.
فَصَعِدَ دَاوُدُ حَسَبَ كَلَامِ جَادَ ٱلَّذِي تَكَلَّمَ بِهِ بِٱسْمِ ٱلرَّبِّ. ١٩ 19
ಗಾದನು ಯೆಹೋವ ದೇವರ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.
فَٱلْتَفَتَ أُرْنَانُ فَرَأَى ٱلْمَلَاكَ. وَبَنُوهُ ٱلْأَرْبَعَةُ مَعَهُ ٱخْتَبَأُوا، وَكَانَ أُرْنَانُ يَدْرُسُ حِنْطَةً. ٢٠ 20
ಒರ್ನಾನನು ಗೋಧಿಯನ್ನು ತುಳಿಸುತ್ತಿರುವಾಗ, ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ, ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಪುತ್ರರೂ ಅಡಗಿಕೊಂಡಿದ್ದರು.
وَجَاءَ دَاوُدُ إِلَى أُرْنَانَ. وَتَطَلَّعَ أُرْنَانُ فَرَأَى دَاوُدَ، وَخَرَجَ مِنَ ٱلْبَيْدَرِ وَسَجَدَ لِدَاوُدَ عَلَى وَجْهِهِ إِلَى ٱلْأَرْضِ. ٢١ 21
ಆದರೆ ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡನು, ಆಗ ಅವನು ಕಣದಿಂದ ಹೊರಟು, ದಾವೀದನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.
فَقَالَ دَاوُدُ لِأُرْنَانَ: «أَعْطِنِي مَكَانَ ٱلْبَيْدَرِ فَأَبْنِيَ فِيهِ مَذْبَحًا لِلرَّبِّ. بِفِضَّةٍ كَامِلَةٍ أَعْطِنِي إِيَّاهُ، فَتَكُفَّ ٱلضَّرْبَةُ عَنِ ٱلشَّعْبِ». ٢٢ 22
ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು.
فَقَالَ أُرْنَانُ لِدَاوُدَ: «خُذْهُ لِنَفْسِكَ، وَلْيَفْعَلْ سَيِّدِي ٱلْمَلِكُ مَا يَحْسُنُ فِي عَيْنَيْهِ. اُنْظُرْ. قَدْ أَعْطَيْتُ ٱلْبَقَرَ لِلْمُحْرَقَةِ، وَٱلنَّوَارِجَ لِلْوَقُودِ، وَٱلْحِنْطَةَ لِلتَّقْدِمَةِ. ٱلْجَمِيعَ أَعْطَيْتُ». ٢٣ 23
ಒರ್ನಾನನು ದಾವೀದನಿಗೆ, “ನಿನಗಾಗಿ ತೆಗೆದುಕೋ, ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ, ಧಾನ್ಯ ಸಮರ್ಪಣೆಗೋಸ್ಕರ ಗೋಧಿ ಕೊಡುವುದಲ್ಲದೆ, ಸಮಸ್ತವನ್ನೂ ಕೊಡುವೆನು,” ಎಂದನು.
فَقَالَ ٱلْمَلِكُ دَاوُدُ لِأُرْنَانَ: «لَا! بَلْ شِرَاءً أَشْتَرِيهِ بِفِضَّةٍ كَامِلَةٍ، لِأَنِّي لَا آخُذُ مَا لَكَ لِلرَّبِّ فَأُصْعِدَ مُحْرَقَةً مَجَّانِيَّةً». ٢٤ 24
ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು, ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.
وَدَفَعَ دَاوُدُ لِأُرْنَانَ عَنِ ٱلْمَكَانِ ذَهَبًا وَزْنُهُ سِتُّ مِئَةِ شَاقِلٍ. ٢٥ 25
ಅಂತೆಯೇ ಆ ಭೂಮಿಗಾಗಿ ಒರ್ನಾನನಿಗೆ ಏಳು ಕಿಲೋಗ್ರಾಂ ಬಂಗಾರವನ್ನು ಕೊಟ್ಟು,
وَبَنَى دَاوُدُ هُنَاكَ مَذْبَحًا لِلرَّبِّ، وَأَصْعَدَ مُحْرَقَاتٍ وَذَبَائِحَ سَلَامَةٍ، وَدَعَا ٱلرَّبَّ فَأَجَابَهُ بِنَارٍ مِنَ ٱلسَّمَاءِ عَلَى مَذْبَحِ ٱلْمُحْرَقَةِ. ٢٦ 26
ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು. ಆಗ ಅವರು ಆಕಾಶದಿಂದ ದಹನಬಲಿಪೀಠದ ಮೇಲೆ ಅಗ್ನಿಯಿಂದ ಅವನಿಗೆ ಉತ್ತರಕೊಟ್ಟರು.
وَأَمَرَ ٱلرَّبُّ ٱلْمَلَاكَ فَرَدَّ سَيْفَهُ إِلَى غِمْدِهِ. ٢٧ 27
ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು.
فِي ذَلِكَ ٱلْوَقْتِ لَمَّا رَأَى دَاوُدُ أَنَّ ٱلرَّبَّ قَدْ أَجَابَهُ فِي بَيْدَرِ أُرْنَانَ ٱلْيَبُوسِيِّ ذَبَحَ هُنَاكَ. ٢٨ 28
ಯೆಹೋವ ದೇವರು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಉತ್ತರ ಕೊಟ್ಟರೆಂದು ದಾವೀದನು ಕಂಡಾಗ, ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.
وَمَسْكَنُ ٱلرَّبِّ ٱلَّذِي عَمِلَهُ مُوسَى فِي ٱلْبَرِّيَّةِ وَمَذْبَحُ ٱلْمُحْرَقَةِ كَانَا فِي ذَلِكَ ٱلْوَقْتِ فِي ٱلْمُرْتَفَعَةِ فِي جِبْعُونَ. ٢٩ 29
ಮರುಭೂಮಿಯಲ್ಲಿ ಮೋಶೆಯು ಮಾಡಿದ ಯೆಹೋವ ದೇವರ ಗುಡಾರವೂ, ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.
وَلَمْ يَسْتَطِعْ دَاوُدُ أَنْ يَذْهَبَ إِلَى أَمَامِهِ لِيَسْأَلَ ٱللهَ لِأَنَّهُ خَافَ مِنْ جِهَةِ سَيْفِ مَلَاكِ ٱلرَّبِّ. ٣٠ 30
ದಾವೀದನು ದೇವರ ಹತ್ತಿರ ವಿಚಾರಿಸಲು, ಅದರ ಬಳಿಗೆ ಹೋಗಲಾರದೆ ಇದ್ದನು. ಏಕೆಂದರೆ ಅವನು ಯೆಹೋವ ದೇವರ ದೂತನ ಖಡ್ಗದ ನಿಮಿತ್ತ ಹೆದರಿದ್ದನು.

< ١ أخبار 21 >