< اَلْمُلُوكِ ٱلْأَوَّلُ 12 >

وَذَهَبَ رَحُبْعَامُ إِلَى شَكِيمَ، لِأَنَّهُ جَاءَ إِلَى شَكِيمَ جَمِيعُ إِسْرَائِيلَ لِيُمَلِّكُوهُ. ١ 1
ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.
وَلَمَّا سَمِعَ يَرُبْعَامُ بْنُ نَبَاطَ وَهُوَ بَعْدُ فِي مِصْرَ، لِأَنَّهُ هَرَبَ مِنْ وَجْهِ سُلَيْمَانَ ٱلْمَلِكِ، وَأَقَامَ يَرُبْعَامُ فِي مِصْرَ، ٢ 2
ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಇದನ್ನು ಕೇಳಿ ಕರೆಯಿಸಿಕೊಂಡಿದ್ದರು.
وَأَرْسَلُوا فَدَعَوْهُ. أَتَى يَرُبْعَامُ وَكُلُّ جَمَاعَةِ إِسْرَائِيلَ وَكَلَّمُوا رَحُبْعَامَ قَائِلِينَ: ٣ 3
ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
«إِنَّ أَبَاكَ قَسَّى نِيرَنَا، وَأَمَّا أَنْتَ فَخَفِّفِ ٱلْآنَ مِنْ عُبُودِيَّةِ أَبِيكَ ٱلْقَاسِيَةِ، وَمِنْ نِيرِهِ ٱلثَّقِيلِ ٱلَّذِي جَعَلَهُ عَلَيْنَا، فَنَخْدِمَكَ». ٤ 4
ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ” ಎಂದು ಹೇಳಿದರು.
فَقَالَ لَهُمُ: «ٱذْهَبُوا إِلَى ثَلَاثَةِ أَيَّامٍ أَيْضًا ثُمَّ ٱرْجِعُوا إِلَيَّ». فَذَهَبَ ٱلشَّعْبُ. ٥ 5
ಅದಕ್ಕೆ ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಪುನಃ ಬನ್ನಿರಿ” ಎಂದು ಉತ್ತರಕೊಟ್ಟನು. ಜನರು ಹಿಂದಿರುಗಿ ಹೋದರು.
فَٱسْتَشَارَ ٱلْمَلِكُ رَحُبْعَامُ ٱلشُّيُوخَ ٱلَّذِينَ كَانُوا يَقِفُونَ أَمَامَ سُلَيْمَانَ أَبِيهِ وَهُوَ حَيٌّ، قَائِلًا: «كَيْفَ تُشِيرُونَ أَنْ أَرُدَّ جَوَابًا إِلَى هَذَا ٱلشَّعْبِ؟» ٦ 6
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.
فَكَلَّمُوهُ قَائِلِينَ: «إِنْ صِرْتَ ٱلْيَوْمَ عَبْدًا لِهَذَا ٱلشَّعْبِ وَخَدَمْتَهُمْ وَأَجَبْتَهُمْ وَكَلَّمْتَهُمْ كَلَامًا حَسَنًا، يَكُونُونَ لَكَ عَبِيدًا كُلَّ ٱلْأَيَّامِ». ٧ 7
ಅವರು ಅವನಿಗೆ, “ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು” ಎಂದರು.
فَتَرَكَ مَشُورَةَ ٱلشُّيُوخِ ٱلَّتِي أَشَارُوا بِهَا عَلَيْهِ وَٱسْتَشَارَ ٱلْأَحْدَاثَ ٱلَّذِينَ نَشَأُوا مَعَهُ وَوَقَفُوا أَمَامَهُ، ٨ 8
ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,
وَقَالَ لَهُمْ: «بِمَاذَا تُشِيرُونَ أَنْتُمْ فَنَرُدَّ جَوَابًا عَلَى هَذَا ٱلشَّعْبِ ٱلَّذِينَ كَلَّمُونِي قَائِلِينَ: خَفِّفْ مِنَ ٱلنِّيرِ ٱلَّذِي جَعَلَهُ عَلَيْنَا أَبُوكَ». ٩ 9
“ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
فَكَلَّمَهُ ٱلْأَحْدَاثُ ٱلَّذِينَ نَشَأُوا مَعَهُ قَائِلِينَ: «هَكَذَا تَقُولُ لِهَذَا ٱلشَّعْبِ ٱلَّذِينَ كَلَّمُوكَ قَائِلِينَ: إِنَّ أَبَاكَ ثَقَّلَ نِيرَنَا وَأَمَّا أَنْتَ فَخَفِّفْ مِنْ نِيرِنَا، هَكَذَا تَقُولُ لَهُمْ: إِنَّ خِنْصَرِي أَغْلَظُ مِنْ مَتْنَيْ أَبِي. ١٠ 10
೧೦ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.
وَٱلْآنَ أَبِي حَمَّلَكُمْ نِيرًا ثَقِيلًا وَأَنَا أَزِيدُ عَلَى نِيرِكُمْ. أَبِي أَدَّبَكُمْ بِٱلسِّيَاطِ وَأَنَا أُؤَدِّبُكُمْ بِٱلْعَقَارِبِ». ١١ 11
೧೧ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟನು.
فَجَاءَ يَرُبْعَامُ وَجَمِيعُ ٱلشَّعْبِ إِلَى رَحُبْعَامَ فِي ٱلْيَوْمِ ٱلثَّالِثِ كَمَا تَكَلَّمَ ٱلْمَلِكُ قَائِلًا: «ٱرْجِعُوا إِلَيَّ فِي ٱلْيَوْمِ ٱلثَّالِثِ». ١٢ 12
೧೨ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು.
فَأَجَابَ ٱلْمَلِكُ ٱلشَّعْبَ بِقَسَاوَةٍ، وَتَرَكَ مَشُورَةَ ٱلشُّيُوخِ ٱلَّتِي أَشَارُوا بِهَا عَلَيْهِ، ١٣ 13
೧೩ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ,
وَكَلَّمَهُمْ حَسَبَ مَشُورَةِ ٱلْأَحْدَاثِ قَائِلًا: «أَبِي ثَقَّلَ نِيرَكُمْ وَأَنَا أَزِيدُ عَلَى نِيرِكُمْ. أَبِي أَدَّبَكُمْ بِٱلسِّيَاطِ وَأَنَا أُؤَدِّبُكُمْ بِٱلْعَقَارِبِ». ١٤ 14
೧೪“ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
وَلَمْ يَسْمَعِ ٱلْمَلِكُ لِلشَّعْبِ، لِأَنَّ ٱلسَّبَبَ كَانَ مِنْ قِبَلِ ٱلرَّبِّ لِيُقِيمَ كَلَامَهُ ٱلَّذِي تَكَلَّمَ بِهِ ٱلرَّبُّ عَنْ يَدِ أَخِيَّا ٱلشِّيلُونِيِّ إِلَى يَرُبْعَامَ بْنِ نَبَاطَ. ١٥ 15
೧೫ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
فَلَمَّا رَأَى كُلُّ إِسْرَائِيلَ أَنَّ ٱلْمَلِكَ لَمْ يَسْمَعْ لَهُمْ، رَدَّ ٱلشَّعْبُ جَوَابًا عَلَى ٱلْمَلِكِ قَائِلِينَ: «أَيُّ قِسْمٍ لَنَا فِي دَاوُدَ؟ وَلَا نَصِيبَ لَنَا فِي ٱبْنِ يَسَّى! إِلَى خِيَامِكَ يَا إِسْرَائِيلُ. ٱلْآنَ ٱنْظُرْ إِلَى بَيْتِكَ يَادَاوُدُ». وَذَهَبَ إِسْرَائِيلُ إِلَى خِيَامِهِمْ. ١٦ 16
೧೬ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
وَأَمَّا بَنُو إِسْرَائِيلَ ٱلسَّاكِنُونَ فِي مُدُنِ يَهُوذَا فَمَلَكَ عَلَيْهِمْ رَحُبْعَامُ. ١٧ 17
೧೭ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.
ثُمَّ أَرْسَلَ ٱلْمَلِكُ رَحُبْعَامُ أَدُورَامَ ٱلَّذِي عَلَى ٱلتَّسْخِيرِ فَرَجَمَهُ جَمِيعُ إِسْرَائِيلَ بِٱلْحِجَارَةِ فَمَاتَ. فَبَادَرَ ٱلْمَلِكُ رَحُبْعَامُ وَصَعِدَ إِلَى ٱلْمَرْكَبَةِ لِيَهْرُبَ إِلَى أُورُشَلِيمَ. ١٨ 18
೧೮ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
فَعَصَى إِسْرَائِيلُ عَلَى بَيْتِ دَاوُدَ إِلَى هَذَا ٱلْيَوْمِ. ١٩ 19
೧೯ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.
وَلَمَّا سَمِعَ جَمِيعُ إِسْرَائِيلَ بِأَنَّ يَرُبْعَامَ قَدْ رَجَعَ، أَرْسَلُوا فَدَعَوْهُ إِلَى ٱلْجَمَاعَةِ، وَمَلَّكُوهُ عَلَى جَمِيعِ إِسْرَائِيلَ. لَمْ يَتْبَعْ بَيْتَ دَاوُدَ إِلَّا سِبْطُ يَهُوذَا وَحْدَهُ. ٢٠ 20
೨೦ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.
وَلَمَّا جَاءَ رَحُبْعَامُ إِلَى أُورُشَلِيمَ جَمَعَ كُلَّ بَيْتِ يَهُوذَا وَسِبْطَ بَنْيَامِينَ، مِئَةً وَثَمَانِينَ أَلْفَ مُخْتَارٍ مُحَارِبٍ، لِيُحَارِبُوا بَيْتَ إِسْرَائِيلَ وَيَرُدُّوا ٱلْمَمْلَكَةَ لَرَحُبْعَامَ بْنِ سُلَيْمَانَ. ٢١ 21
೨೧ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
وَكَانَ كَلَامُ ٱللهِ إِلَى شِمَعْيَا رَجُلِ ٱللهِ قَائِلًا: ٢٢ 22
೨೨ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.
«كَلِّمْ رَحُبْعَامَ بْنَ سُلَيْمَانَ مَلِكِ يَهُوذَا وَكُلَّ بَيْتِ يَهُوذَا وَبَنْيَامِينَ وَبَقِيَّةِ ٱلشَّعْبِ قَائِلًا: ٢٣ 23
೨೩“ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ
هَكَذَا قَالَ ٱلرَّبُّ: لَا تَصْعَدُوا وَلَا تُحَارِبُوا إِخْوَتَكُمْ بَنِي إِسْرَائِيلَ. ٱرْجِعُوا كُلُّ وَاحِدٍ إِلَى بَيْتِهِ، لِأَنَّ مِنْ عِنْدِي هَذَا ٱلْأَمْرَ». فَسَمِعُوا لِكَلَامِ ٱلرَّبِّ وَرَجَعُوا لِيَنْطَلِقُوا حَسَبَ قَوْلِ ٱلرَّبِّ. ٢٤ 24
೨೪‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.
وَبَنَى يَرُبْعَامُ شَكِيمَ فِي جَبَلِ أَفْرَايِمَ وَسَكَنَ بِهَا. ثُمَّ خَرَجَ مِنْ هُنَاكَ وَبَنَى فَنُوئِيلَ. ٢٥ 25
೨೫ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.
وَقَالَ يَرُبْعَامُ فِي قَلْبِهِ: «ٱلْآنَ تَرْجِعُ ٱلْمَمْلَكَةُ إِلَى بَيْتِ دَاوُدَ. ٢٦ 26
೨೬ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,
إِنْ صَعِدَ هَذَا ٱلشَّعْبُ لِيُقَرِّبُوا ذَبَائِحَ فِي بَيْتِ ٱلرَّبِّ فِي أُورُشَلِيمَ، يَرْجِعْ قَلْبُ هَذَا ٱلشَّعْبِ إِلَى سَيِّدِهِمْ، إِلَى رَحُبْعَامَ مَلِكِ يَهُوذَا وَيَقْتُلُونِي، وَيَرْجِعُوا إِلَى رَحُبْعَامَ مَلِكِ يَهُوذَا». ٢٧ 27
೨೭ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು” ಅಂದುಕೊಂಡನು.
فَٱسْتَشَارَ ٱلْمَلِكُ وَعَمِلَ عِجْلَيْ ذَهَبٍ، وَقَالَ لَهُمْ: «كَثِيرٌ عَلَيْكُمْ أَنْ تَصْعَدُوا إِلَى أُورُشَلِيمَ. هُوَذَا آلِهَتُكَ يَاإِسْرَائِيلُ ٱلَّذِينَ أَصْعَدُوكَ مِنْ أَرْضِ مِصْرَ». ٢٨ 28
೨೮ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.
وَوَضَعَ وَاحِدًا فِي بَيْتِ إِيلَ، وَجَعَلَ ٱلْآخَرَ فِي دَانَ. ٢٩ 29
೨೯ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.
وَكَانَ هَذَا ٱلْأَمْرُ خَطِيَّةً. وَكَانَ ٱلشَّعْبُ يَذْهَبُونَ إِلَى أَمَامِ أَحَدِهِمَا حَتَّى إِلَى دَانَ. ٣٠ 30
೩೦ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.
وَبَنَى بَيْتَ ٱلْمُرْتَفَعَاتِ، وَصَيَّرَ كَهَنَةً مِنْ أَطْرَافِ ٱلشَّعْبِ لَمْ يَكُونُوا مِنْ بَنِي لَاوِي. ٣١ 31
೩೧ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.
وَعَمِلَ يَرُبْعَامُ عِيدًا فِي ٱلشَّهْرِ ٱلثَّامِنِ فِي ٱلْيَوْمِ ٱلْخَامِسَ عَشَرَ مِنَ ٱلشَّهْرِ، كَٱلْعِيدِ ٱلَّذِي فِي يَهُوذَا، وَأَصْعَدَ عَلَى ٱلْمَذْبَحِ. هَكَذَا فَعَلَ فِي بَيْتِ إِيلَ بِذَبْحِهِ لِلْعِجْلَيْنِ ٱللَّذَيْنِ عَمِلَهُمَا. وَأَوْقَفَ فِي بَيْتِ إِيلَ كَهَنَةَ ٱلْمُرْتَفَعَاتِ ٱلَّتِي عَمِلَهَا. ٣٢ 32
೩೨ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.
وَأَصْعَدَ عَلَى ٱلْمَذْبَحِ ٱلَّذِي عَمِلَ فِي بَيْتِ إِيلَ فِي ٱلْيَوْمِ ٱلْخَامِسَ عَشَرَ مِنَ ٱلشَّهْرِ ٱلثَّامِنِ، فِي ٱلشَّهْرِ ٱلَّذِي ٱبْتَدَعَهُ مِنْ قَلْبِهِ، فَعَمِلَ عِيدًا لِبَنِي إِسْرَائِيلَ، وَصَعِدَ عَلَى ٱلْمَذْبَحِ لِيُوقِدَ. ٣٣ 33
೩೩ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.

< اَلْمُلُوكِ ٱلْأَوَّلُ 12 >