< اَلْمُلُوكِ ٱلْأَوَّلُ 18 >

وَبَعْدَ أَيَّامٍ كَثِيرَةٍ كَانَ كَلَامُ ٱلرَّبِّ إِلَى إِيلِيَّا فِي ٱلسَّنَةِ ٱلثَّالِثَةِ قَائِلًا: «ٱذْهَبْ وَتَرَاءَ لِأَخْآبَ فَأُعْطِيَ مَطَرًا عَلَى وَجْهِ ٱلْأَرْضِ». ١ 1
ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು.
فَذَهَبَ إِيلِيَّا لِيَتَرَاءَى لِأَخْآبَ. وَكَانَ ٱلْجُوعُ شَدِيدًا فِي ٱلسَّامِرَةِ، ٢ 2
ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,
فَدَعَا أَخْآبُ عُوبَدْيَا ٱلَّذِي عَلَى ٱلْبَيْتِ، وَكَانَ عُوبَدْيَا يَخْشَى ٱلرَّبَّ جِدًّا. ٣ 3
ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು.
وَكَانَ حِينَمَا قَطَعَتْ إِيزَابَلُ أَنْبِيَاءَ ٱلرَّبِّ أَنَّ عُوبَدْيَا أَخَذَ مِئَةَ نَبِيٍّ وَخَبَّأَهُمْ خَمْسِينَ رَجُلًا فِي مُغَارَةٍ وَعَالَهُمْ بِخُبْزٍ وَمَاءٍ. ٤ 4
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.
وَقَالَ أَخْآبُ لِعُوبَدْيَا: «ٱذْهَبْ فِي ٱلْأَرْضِ إِلَى جَمِيعِ عُيُونِ ٱلْمَاءِ وَإِلَى جَمِيعِ ٱلْأَوْدِيَةِ، لَعَلَّنَا نَجِدُ عُشْبًا فَنُحْيِيَ ٱلْخَيْلَ وَٱلْبِغَالَ وَلَا نُعْدَمَ ٱلْبَهَائِمَ كُلَّهَا». ٥ 5
ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.
فَقَسَمَا بَيْنَهُمَا ٱلْأَرْضَ لِيَعْبُرَا بِهَا. فَذَهَبَ أَخْآبُ فِي طَرِيقٍ وَاحِدٍ وَحْدَهُ، وَذَهَبَ عُوبَدْيَا فِي طَرِيقٍ آخَرَ وَحْدَهُ. ٦ 6
ಅವರು ಸಂಚಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಕಡೆ ತಾನೇ ಹೊರಟುಹೋದನು.
وَفِيمَا كَانَ عُوبَدْيَا فِي ٱلطَّرِيقِ، إِذَا بِإِيلِيَّا قَدْ لَقِيَهُ فَعَرَفَهُ، وَخَرَّ عَلَى وَجْهِهِ وَقَالَ: «أَأَنْتَ هُوَ سَيِّدِي إِيلِيَّا؟» ٧ 7
ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.
فَقَالَ لَهُ: «أَنَا هُوَ. ٱذْهَبْ وَقُلْ لِسَيِّدِكَ: هُوَذَا إِيلِيَّا». ٨ 8
ಅದಕ್ಕೆ ಅವನು, “ಹೌದು, ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆ’ ಎಂದು ಹೇಳು” ಎಂದನು.
فَقَالَ: «مَا هِيَ خَطِيَّتِي حَتَّى إِنَّكَ تَدْفَعُ عَبْدَكَ لِيَدِ أَخْآبَ لِيُمِيتَنِي؟ ٩ 9
ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆನು?
حَيٌّ هُوَ ٱلرَّبُّ إِلَهُكَ، إِنَّهُ لَا تُوجَدُ أُمَّةٌ وَلَا مَمْلَكَةٌ لَمْ يُرْسِلْ سَيِّدِي إِلَيْهَا لِيُفَتِّشَ عَلَيْكَ، وَكَانُوا يَقُولُونَ: إِنَّهُ لَا يُوجَدُ. وَكَانَ يَسْتَحْلِفُ ٱلْمَمْلَكَةَ وَٱلْأُمَّةَ أَنَّهُمْ لَمْ يَجِدُوكَ. ١٠ 10
೧೦ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.
وَٱلْآنَ أَنْتَ تَقُولُ: ٱذْهَبْ قُلْ لِسَيِّدِكَ هُوَذَا إِيلِيَّا. ١١ 11
೧೧ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬುದಾಗಿ ಆಜ್ಞಾಪಿಸುವುದೇನು?
وَيَكُونُ إِذَا ٱنْطَلَقْتُ مِنْ عِنْدِكَ، أَنَّ رُوحَ ٱلرَّبِّ يَحْمِلُكَ إِلَى حَيْثُ لَا أَعْلَمُ. فَإِذَا أَتَيْتُ وَأَخْبَرْتُ أَخْآبَ وَلَمْ يَجِدْكَ فَإِنَّهُ يَقْتُلُنِي، وَأَنَا عَبْدُكَ أَخْشَى ٱلرَّبَّ مُنْذُ صِبَايَ. ١٢ 12
೧೨ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?
أَلَمْ يُخْبَرْ سَيِّدِي بِمَا فَعَلْتُ حِينَ قَتَلَتْ إِيزَابَلُ أَنْبِيَاءَ ٱلرَّبِّ، إِذْ خَبَّأْتُ مِنْ أَنْبِيَاءِ ٱلرَّبِّ مِئَةَ رَجُلٍ، خَمْسِينَ خَمْسِينَ رَجُلًا فِي مُغَارَةٍ وَعُلْتُهُمْ بِخُبْزٍ وَمَاءٍ؟ ١٣ 13
೧೩ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
وَأَنْتَ ٱلْآنَ تَقُولُ: ٱذْهَبْ قُلْ لِسَيِّدِكَ: هُوَذَا إِيلِيَّا، فَيَقْتُلُنِي». ١٤ 14
೧೪ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?” ಎಂದು ಉತ್ತರಕೊಟ್ಟನು.
فَقَالَ إِيلِيَّا: «حَيٌّ هُوَ رَبُّ ٱلْجُنُودِ ٱلَّذِي أَنَا وَاقِفٌ أَمَامَهُ، إِنِّي ٱلْيَوْمَ أَتَرَاءَى لَهُ». ١٥ 15
೧೫ಆಗ ಎಲೀಯನು ಅವನಿಗೆ, “ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು” ಅಂದನು.
فَذَهَبَ عُوبَدْيَا لِلِقَاءِ أَخْآبَ وَأَخْبَرَهُ، فَسَارَ أَخْآبُ لِلِقَاءِ إِيلِيَّا. ١٦ 16
೧೬ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ
وَلَمَّا رَأَى أَخْآبُ إِيلِيَّا قَالَ لَهُ أَخْآبُ: «أَأَنْتَ هُوَ مُكَدِّرُ إِسْرَائِيلَ؟» ١٧ 17
೧೭ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.
فَقَالَ: «لَمْ أُكَدِّرْ إِسْرَائِيلَ، بَلْ أَنْتَ وَبَيْتُ أَبِيكَ بِتَرْكِكُمْ وَصَايَا ٱلرَّبِّ وَبِسَيْرِكَ وَرَاءَ ٱلْبَعْلِيمِ. ١٨ 18
೧೮ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.
فَٱلْآنَ أَرْسِلْ وَٱجْمَعْ إِلَيَّ كُلَّ إِسْرَائِيلَ إِلَى جَبَلِ ٱلْكَرْمَلِ، وَأَنْبِيَاءَ ٱلْبَعْلِ أَرْبَعَ ٱلْمِئَةِ وَٱلْخَمْسِينَ، وَأَنْبِيَاءَ ٱلسَّوَارِي أَرْبَعَ ٱلْمِئَةِ ٱلَّذِينَ يَأْكُلُونَ عَلَى مَائِدَةِ إِيزَابَلَ». ١٩ 19
೧೯ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.
فَأَرْسَلَ أَخْآبُ إِلَى جَمِيعِ بَنِي إِسْرَائِيلَ، وَجَمَعَ ٱلْأَنْبِيَاءَ إِلَى جَبَلِ ٱلْكَرْمَلِ. ٢٠ 20
೨೦ಅಹಾಬನು ಇಸ್ರಾಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.
فَتَقَدَّمَ إِيلِيَّا إِلَى جَمِيعِ ٱلشَّعْبِ وَقَالَ: «حَتَّى مَتَى تَعْرُجُونَ بَيْنَ ٱلْفِرْقَتَيْنِ؟ إِنْ كَانَ ٱلرَّبُّ هُوَ ٱللهَ فَٱتَّبِعُوهُ، وَإِنْ كَانَ ٱلْبَعْلُ فَٱتَّبِعُوهُ». فَلَمْ يُجِبْهُ ٱلشَّعْبُ بِكَلِمَةٍ. ٢١ 21
೨೧ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.
ثُمَّ قَالَ إِيلِيَّا لِلشَّعْبِ: «أَنَا بَقِيتُ نَبِيًّا لِلرَّبِّ وَحْدِي، وَأَنْبِيَاءُ ٱلْبَعْلِ أَرْبَعُ مِئَةٍ وَخَمْسُونَ رَجُلًا. ٢٢ 22
೨೨ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.
فَلْيُعْطُونَا ثَوْرَيْنِ، فَيَخْتَارُوا لِأَنْفُسِهِمْ ثَوْرًا وَاحِدًا وَيُقَطِّعُوهُ وَيَضَعُوهُ عَلَى ٱلْحَطَبِ، وَلَكِنْ لَا يَضَعُوا نَارًا. وَأَنَا أُقَرِّبُ ٱلثَّوْرَ ٱلْآخَرَ وَأَجْعَلُهُ عَلَى ٱلْحَطَبِ، وَلَكِنْ لَا أَضَعُ نَارًا. ٢٣ 23
೨೩ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ ಅವುಗಳಲ್ಲಿ ಒಂದನ್ನು ಆರಿಸಿಕೊಂಡು ಕಡಿದು, ತುಂಡು ಮಾಡಿ, ಕಟ್ಟಿಗೆಯ ಮೇಲಿಡಲಿ. ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು
ثُمَّ تَدْعُونَ بِٱسْمِ آلِهَتِكُمْ وَأَنَا أَدْعُو بِٱسْمِ ٱلرَّبِّ. وَٱلْإِلَهُ ٱلَّذِي يُجِيبُ بِنَارٍ فَهُوَ ٱللهُ». فَأَجَابَ جَمِيعُ ٱلشَّعْبِ وَقَالُوا: «ٱلْكَلَامُ حَسَنٌ». ٢٤ 24
೨೪ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು.
فَقَالَ إِيلِيَّا لِأَنْبِيَاءِ ٱلْبَعْلِ: «ٱخْتَارُوا لِأَنْفُسِكُمْ ثَوْرًا وَاحِدًا وَقَرِّبُوا أَوَّلًا، لِأَنَّكُمْ أَنْتُمُ ٱلْأَكْثَرُ، وَٱدْعُوا بِٱسْمِ آلِهَتِكُمْ، وَلَكِنْ لَا تَضَعُوا نَارًا». ٢٥ 25
೨೫ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು.
فَأَخَذُوا ٱلثَّوْرَ ٱلَّذِي أُعْطِيَ لَهُمْ وَقَرَّبُوهُ، وَدَعَوْا بِٱسْمِ ٱلْبَعْلِ مِنَ ٱلصَّبَاحِ إِلَى ٱلظُّهْرِ قَائِلِينَ: «يَا بَعْلُ أَجِبْنَا». فَلَمْ يَكُنْ صَوْتٌ وَلَا مُجِيبٌ. وَكَانُوا يَرْقُصُونَ حَوْلَ ٱلْمَذْبَحِ ٱلَّذِي عُمِلَ. ٢٦ 26
೨೬ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.
وَعِنْدَ ٱلظُّهْرِ سَخِرَ بِهِمْ إِيلِيَّا وَقَالَ: «ٱدْعُوا بِصَوْتٍ عَالٍ لِأَنَّهُ إِلَهٌ! لَعَلَّهُ مُسْتَغْرِقٌ أَوْ فِي خَلْوَةٍ أَوْ فِي سَفَرٍ! أَوْ لَعَلَّهُ نَائِمٌ فَيَتَنَبَّهَ!» ٢٧ 27
೨೭ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.
فَصَرَخُوا بِصَوْتٍ عَالٍ، وَتَقَطَّعُوا حَسَبَ عَادَتِهِمْ بِٱلسُّيُوفِ وَٱلرِّمَاحِ حَتَّى سَالَ مِنْهُمُ ٱلدَّمُ. ٢٨ 28
೨೮ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.
وَلَمَّا جَازَ ٱلظُّهْرُ، وَتَنَبَّأُوا إِلَى حِينِ إِصْعَادِ ٱلتَّقْدِمَةِ، وَلَمْ يَكُنْ صَوْتٌ وَلَا مُجِيبٌ وَلَا مُصْغٍ، ٢٩ 29
೨೯ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.
قَالَ إِيلِيَّا لِجَمِيعِ ٱلشَّعْبِ: «تَقَدَّمُوا إِلَيَّ». فَتَقَدَّمَ جَمِيعُ ٱلشَّعْبِ إِلَيْهِ. فَرَمَّمَ مَذْبَحَ ٱلرَّبِّ ٱلْمُنْهَدِمَ. ٣٠ 30
೩೦ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು.
ثُمَّ أَخَذَ إِيلِيَّا ٱثْنَيْ عَشَرَ حَجَرًا، بِعَدَدِ أَسْبَاطِ بَنِي يَعْقُوبَ، ٱلَّذِي كَانَ كَلَامُ ٱلرَّبِّ إِلَيْهِ قَائِلًا: «إِسْرَائِيلَ يَكُونُ ٱسْمُكَ» ٣١ 31
೩೧ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,
وَبَنَى ٱلْحِجَارَةَ مَذْبَحًا بِٱسْمِ ٱلرَّبِّ، وَعَمِلَ قَنَاةً حَوْلَ ٱلْمَذْبَحِ تَسَعُ كَيْلَتَيْنِ مِنَ ٱلْبَزْرِ. ٣٢ 32
೩೨ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.
ثُمَّ رَتَّبَ ٱلْحَطَبَ وَقَطَّعَ ٱلثَّوْرَ وَوَضَعَهُ عَلَى ٱلْحَطَبِ، وَقَالَ: «ٱمْلَأُوا أَرْبَعَ جَرَّاتٍ مَاءً وَصُبُّوا عَلَى ٱلْمُحْرَقَةِ وَعَلَى ٱلْحَطَبِ». ٣٣ 33
೩೩ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು.
ثُمَّ قَالَ: «ثَنُّوا» فَثَنَّوْا. وَقَالَ: «ثَلِّثُوا» فَثَلَّثُوا. ٣٤ 34
೩೪ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು
فَجَرَى ٱلْمَاءُ حَوْلَ ٱلْمَذْبَحِ وَٱمْتَلَأَتِ ٱلْقَنَاةُ أَيْضًا مَاءً. ٣٥ 35
೩೫ನೀರು ಯಜ್ಞವೇದಿಯ ಸುತ್ತಲೂ ತುಂಬಿ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.
وَكَانَ عِنْدَ إِصْعَادِ ٱلتَّقْدِمَةِ أَنَّ إِيلِيَّا ٱلنَّبِيَّ تَقَدَّمَ وَقَالَ: «أَيُّهَا ٱلرَّبُّ إِلَهُ إِبْرَاهِيمَ وَإِسْحَاقَ وَإِسْرَائِيلَ، لِيُعْلَمِ ٱلْيَوْمَ أَنَّكَ أَنْتَ ٱللهُ فِي إِسْرَائِيلَ، وَأَنِّي أَنَا عَبْدُكَ، وَبِأَمْرِكَ قَدْ فَعَلْتُ كُلَّ هَذِهِ ٱلْأُمُورِ. ٣٦ 36
೩೬ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.
ٱسْتَجِبْنِي يَارَبُّ ٱسْتَجِبْنِي، لِيَعْلَمَ هَذَا ٱلشَّعْبُ أَنَّكَ أَنْتَ ٱلرَّبُّ ٱلْإِلَهُ، وَأَنَّكَ أَنْتَ حَوَّلْتَ قُلُوبَهُمْ رُجُوعًا». ٣٧ 37
೩೭ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು.
فَسَقَطَتْ نَارُ ٱلرَّبِّ وَأَكَلَتِ ٱلْمُحْرَقَةَ وَٱلْحَطَبَ وَٱلْحِجَارَةَ وَٱلتُّرَابَ، وَلَحَسَتِ ٱلْمِيَاهَ ٱلَّتِي فِي ٱلْقَنَاةِ. ٣٨ 38
೩೮ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.
فَلَمَّا رَأَى جَمِيعُ ٱلشَّعْبِ ذَلِكَ سَقَطُوا عَلَى وُجُوهِهِمْ وَقَالُوا: «ٱلرَّبُّ هُوَ ٱللهُ! ٱلرَّبُّ هُوَ ٱللهُ!». ٣٩ 39
೩೯ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.
فَقَالَ لَهُمْ إِيلِيَّا: «أَمْسِكُوا أَنْبِيَاءَ ٱلْبَعْلِ وَلَا يُفْلِتْ مِنْهُمْ رَجُلٌ». فَأَمْسَكُوهُمْ، فَنَزَلَ بِهِمْ إِيلِيَّا إِلَى نَهْرِ قِيشُونَ وَذَبَحَهُمْ هُنَاكَ. ٤٠ 40
೪೦ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.
وَقَالَ إِيلِيَّا لِأَخْآبَ: «ٱصْعَدْ كُلْ وَٱشْرَبْ، لِأَنَّهُ حِسُّ دَوِيِّ مَطَرٍ». ٤١ 41
೪೧ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು.
فَصَعِدَ أَخْآبُ لِيَأْكُلَ وَيَشْرَبَ، وَأَمَّا إِيلِيَّا فَصَعِدَ إِلَى رَأْسِ ٱلْكَرْمَلِ وَخَرَّ إِلَى ٱلْأَرْضِ، وَجَعَلَ وَجْهَهُ بَيْنَ رُكْبَتَيْهِ. ٤٢ 42
೪೨ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.
وَقَالَ لِغُلَامِهِ: «ٱصْعَدْ تَطَلَّعْ نَحْوَ ٱلْبَحْرِ». فَصَعِدَ وَتَطَلَّعَ وَقَالَ: «لَيْسَ شَيْءٌ». فَقَالَ: «ٱرْجِعْ» سَبْعَ مَرَّاتٍ. ٤٣ 43
೪೩ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.
وَفِي ٱلْمَرَّةِ ٱلسَّابِعَةِ قَالَ: «هُوَذَا غَيْمَةٌ صَغِيرَةٌ قَدْرُ كَفِّ إِنْسَانٍ صَاعِدَةٌ مِنَ ٱلْبَحْرِ». فَقَالَ: «ٱصْعَدْ قُلْ لِأَخْآبَ: ٱشْدُدْ وَٱنْزِلْ لِئَلَّا يَمْنَعَكَ ٱلْمَطَرُ». ٤٤ 44
೪೪ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು.
وَكَانَ مِنْ هُنَا إِلَى هُنَا أَنَّ ٱلسَّمَاءَ ٱسْوَدَّتْ مِنَ ٱلْغَيْمِ وَٱلرِّيحِ، وَكَانَ مَطَرٌ عَظِيمٌ. فَرَكِبَ أَخْآبُ وَمَضَى إِلَى يَزْرَعِيلَ. ٤٥ 45
೪೫ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು.
وَكَانَتْ يَدُ ٱلرَّبِّ عَلَى إِيلِيَّا، فَشَدَّ حَقْوَيْهِ وَرَكَضَ أَمَامَ أَخْآبَ حَتَّى تَجِيءَ إِلَى يَزْرَعِيلَ. ٤٦ 46
೪೬ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.

< اَلْمُلُوكِ ٱلْأَوَّلُ 18 >