< اَلْمُلُوكِ ٱلْأَوَّلُ 18 >

وَبَعْدَ أَيَّامٍ كَثِيرَةٍ كَانَ كَلَامُ ٱلرَّبِّ إِلَى إِيلِيَّا فِي ٱلسَّنَةِ ٱلثَّالِثَةِ قَائِلًا: «ٱذْهَبْ وَتَرَاءَ لِأَخْآبَ فَأُعْطِيَ مَطَرًا عَلَى وَجْهِ ٱلْأَرْضِ». ١ 1
ಅನೇಕ ದಿವಸಗಳಾದ ತರುವಾಯ, ಮೂರನೆಯ ವರ್ಷದಲ್ಲಿ, ಯೆಹೋವ ದೇವರ ವಾಕ್ಯವು ಎಲೀಯನಿಗೆ ಬಂದಿತು, “ನೀನು ಹೋಗಿ ಅಹಾಬನಿಗೆ ನಿನ್ನನ್ನು ಪ್ರಕಟಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು,” ಎಂದು ಹೇಳಿದರು.
فَذَهَبَ إِيلِيَّا لِيَتَرَاءَى لِأَخْآبَ. وَكَانَ ٱلْجُوعُ شَدِيدًا فِي ٱلسَّامِرَةِ، ٢ 2
ಎಲೀಯನು ಅಹಾಬನಿಗೆ ತನ್ನನ್ನು ಪ್ರಕಟಿಸಿಕೊಳ್ಳಲು ಹೋದನು. ಆದರೆ ಸಮಾರ್ಯದಲ್ಲಿ ಬರವು ಘೋರವಾಗಿತ್ತು.
فَدَعَا أَخْآبُ عُوبَدْيَا ٱلَّذِي عَلَى ٱلْبَيْتِ، وَكَانَ عُوبَدْيَا يَخْشَى ٱلرَّبَّ جِدًّا. ٣ 3
ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. ಓಬದ್ಯನು ಯೆಹೋವ ದೇವರಿಗೆ ಬಹಳ ಭಯಭಕ್ತಿವುಳ್ಳವನಾಗಿದ್ದನು.
وَكَانَ حِينَمَا قَطَعَتْ إِيزَابَلُ أَنْبِيَاءَ ٱلرَّبِّ أَنَّ عُوبَدْيَا أَخَذَ مِئَةَ نَبِيٍّ وَخَبَّأَهُمْ خَمْسِينَ رَجُلًا فِي مُغَارَةٍ وَعَالَهُمْ بِخُبْزٍ وَمَاءٍ. ٤ 4
ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.
وَقَالَ أَخْآبُ لِعُوبَدْيَا: «ٱذْهَبْ فِي ٱلْأَرْضِ إِلَى جَمِيعِ عُيُونِ ٱلْمَاءِ وَإِلَى جَمِيعِ ٱلْأَوْدِيَةِ، لَعَلَّنَا نَجِدُ عُشْبًا فَنُحْيِيَ ٱلْخَيْلَ وَٱلْبِغَالَ وَلَا نُعْدَمَ ٱلْبَهَائِمَ كُلَّهَا». ٥ 5
ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು.
فَقَسَمَا بَيْنَهُمَا ٱلْأَرْضَ لِيَعْبُرَا بِهَا. فَذَهَبَ أَخْآبُ فِي طَرِيقٍ وَاحِدٍ وَحْدَهُ، وَذَهَبَ عُوبَدْيَا فِي طَرِيقٍ آخَرَ وَحْدَهُ. ٦ 6
ಅವರು ದೇಶವನ್ನು ಹಾದು ಹೋಗಲು, ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ, ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕವಾಗಿ ಹೋದರು.
وَفِيمَا كَانَ عُوبَدْيَا فِي ٱلطَّرِيقِ، إِذَا بِإِيلِيَّا قَدْ لَقِيَهُ فَعَرَفَهُ، وَخَرَّ عَلَى وَجْهِهِ وَقَالَ: «أَأَنْتَ هُوَ سَيِّدِي إِيلِيَّا؟» ٧ 7
ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.
فَقَالَ لَهُ: «أَنَا هُوَ. ٱذْهَبْ وَقُلْ لِسَيِّدِكَ: هُوَذَا إِيلِيَّا». ٨ 8
ಎಲೀಯನು ಅವನಿಗೆ, “ನಾನೇ, ನೀನು ಹೋಗಿ, ‘ಎಲೀಯನು ಇಲ್ಲಿದ್ದಾನೆ’ ಎಂದು ನಿನ್ನ ಯಜಮಾನನಿಗೆ ಹೇಳು,” ಎಂದನು.
فَقَالَ: «مَا هِيَ خَطِيَّتِي حَتَّى إِنَّكَ تَدْفَعُ عَبْدَكَ لِيَدِ أَخْآبَ لِيُمِيتَنِي؟ ٩ 9
ಅದಕ್ಕವನು, “ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು?
حَيٌّ هُوَ ٱلرَّبُّ إِلَهُكَ، إِنَّهُ لَا تُوجَدُ أُمَّةٌ وَلَا مَمْلَكَةٌ لَمْ يُرْسِلْ سَيِّدِي إِلَيْهَا لِيُفَتِّشَ عَلَيْكَ، وَكَانُوا يَقُولُونَ: إِنَّهُ لَا يُوجَدُ. وَكَانَ يَسْتَحْلِفُ ٱلْمَمْلَكَةَ وَٱلْأُمَّةَ أَنَّهُمْ لَمْ يَجِدُوكَ. ١٠ 10
ನಿನ್ನ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ, ರಾಜ್ಯವೂ ಒಂದೂ ಇಲ್ಲ. ಅವರು, ‘ಎಲೀಯನು ನಮ್ಮಲ್ಲಿ ಇಲ್ಲ,’ ಎಂದು ಹೇಳಿದಾಗ, ಅಹಾಬನು ಆ ರಾಜ್ಯಕ್ಕೂ, ಜನಾಂಗಕ್ಕೂ ಆಣೆ ಇಡಿಸಿಕೊಂಡನು.
وَٱلْآنَ أَنْتَ تَقُولُ: ٱذْهَبْ قُلْ لِسَيِّدِكَ هُوَذَا إِيلِيَّا. ١١ 11
ಈಗ ನೀನು, ‘ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು,’ ಎಂದು ಹೇಳುತ್ತೀ.
وَيَكُونُ إِذَا ٱنْطَلَقْتُ مِنْ عِنْدِكَ، أَنَّ رُوحَ ٱلرَّبِّ يَحْمِلُكَ إِلَى حَيْثُ لَا أَعْلَمُ. فَإِذَا أَتَيْتُ وَأَخْبَرْتُ أَخْآبَ وَلَمْ يَجِدْكَ فَإِنَّهُ يَقْتُلُنِي، وَأَنَا عَبْدُكَ أَخْشَى ٱلرَّبَّ مُنْذُ صِبَايَ. ١٢ 12
ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.
أَلَمْ يُخْبَرْ سَيِّدِي بِمَا فَعَلْتُ حِينَ قَتَلَتْ إِيزَابَلُ أَنْبِيَاءَ ٱلرَّبِّ، إِذْ خَبَّأْتُ مِنْ أَنْبِيَاءِ ٱلرَّبِّ مِئَةَ رَجُلٍ، خَمْسِينَ خَمْسِينَ رَجُلًا فِي مُغَارَةٍ وَعُلْتُهُمْ بِخُبْزٍ وَمَاءٍ؟ ١٣ 13
ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?
وَأَنْتَ ٱلْآنَ تَقُولُ: ٱذْهَبْ قُلْ لِسَيِّدِكَ: هُوَذَا إِيلِيَّا، فَيَقْتُلُنِي». ١٤ 14
ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದುಹಾಕುವ ಹಾಗೆ, ‘ಎಲೀಯನು ಇದ್ದಾನೆ ಎಂದು ನೀನು ಹೋಗಿ ಅವನಿಗೆ ಹೇಳು,’ ಎಂಬುದಾಗಿ ನೀನು ಹೇಳುತ್ತೀ,” ಎಂದನು.
فَقَالَ إِيلِيَّا: «حَيٌّ هُوَ رَبُّ ٱلْجُنُودِ ٱلَّذِي أَنَا وَاقِفٌ أَمَامَهُ، إِنِّي ٱلْيَوْمَ أَتَرَاءَى لَهُ». ١٥ 15
ಅದಕ್ಕೆ ಎಲೀಯನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರ ಯೆಹೋವ ದೇವರಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು,” ಎಂದನು.
فَذَهَبَ عُوبَدْيَا لِلِقَاءِ أَخْآبَ وَأَخْبَرَهُ، فَسَارَ أَخْآبُ لِلِقَاءِ إِيلِيَّا. ١٦ 16
ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರುಗೊಳ್ಳಲು ಹೋದನು.
وَلَمَّا رَأَى أَخْآبُ إِيلِيَّا قَالَ لَهُ أَخْآبُ: «أَأَنْتَ هُوَ مُكَدِّرُ إِسْرَائِيلَ؟» ١٧ 17
ಅಹಾಬನು ಎಲೀಯನನ್ನು ಕಂಡಾಗ ಅವನಿಗೆ, “ಇಸ್ರಾಯೇಲನ್ನು ಕಷ್ಟಕ್ಕೆ ಒಳಪಡಿಸುವವನು ನೀನಲ್ಲವೋ?” ಎಂದನು.
فَقَالَ: «لَمْ أُكَدِّرْ إِسْرَائِيلَ، بَلْ أَنْتَ وَبَيْتُ أَبِيكَ بِتَرْكِكُمْ وَصَايَا ٱلرَّبِّ وَبِسَيْرِكَ وَرَاءَ ٱلْبَعْلِيمِ. ١٨ 18
ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.
فَٱلْآنَ أَرْسِلْ وَٱجْمَعْ إِلَيَّ كُلَّ إِسْرَائِيلَ إِلَى جَبَلِ ٱلْكَرْمَلِ، وَأَنْبِيَاءَ ٱلْبَعْلِ أَرْبَعَ ٱلْمِئَةِ وَٱلْخَمْسِينَ، وَأَنْبِيَاءَ ٱلسَّوَارِي أَرْبَعَ ٱلْمِئَةِ ٱلَّذِينَ يَأْكُلُونَ عَلَى مَائِدَةِ إِيزَابَلَ». ١٩ 19
ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.
فَأَرْسَلَ أَخْآبُ إِلَى جَمِيعِ بَنِي إِسْرَائِيلَ، وَجَمَعَ ٱلْأَنْبِيَاءَ إِلَى جَبَلِ ٱلْكَرْمَلِ. ٢٠ 20
ಹೀಗೆ ಅಹಾಬನು ಇಸ್ರಾಯೇಲರೆಲ್ಲರನ್ನೂ ಕರೆಯಿಸಿ, ಕರ್ಮೆಲು ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.
فَتَقَدَّمَ إِيلِيَّا إِلَى جَمِيعِ ٱلشَّعْبِ وَقَالَ: «حَتَّى مَتَى تَعْرُجُونَ بَيْنَ ٱلْفِرْقَتَيْنِ؟ إِنْ كَانَ ٱلرَّبُّ هُوَ ٱللهَ فَٱتَّبِعُوهُ، وَإِنْ كَانَ ٱلْبَعْلُ فَٱتَّبِعُوهُ». فَلَمْ يُجِبْهُ ٱلشَّعْبُ بِكَلِمَةٍ. ٢١ 21
ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
ثُمَّ قَالَ إِيلِيَّا لِلشَّعْبِ: «أَنَا بَقِيتُ نَبِيًّا لِلرَّبِّ وَحْدِي، وَأَنْبِيَاءُ ٱلْبَعْلِ أَرْبَعُ مِئَةٍ وَخَمْسُونَ رَجُلًا. ٢٢ 22
ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ.
فَلْيُعْطُونَا ثَوْرَيْنِ، فَيَخْتَارُوا لِأَنْفُسِهِمْ ثَوْرًا وَاحِدًا وَيُقَطِّعُوهُ وَيَضَعُوهُ عَلَى ٱلْحَطَبِ، وَلَكِنْ لَا يَضَعُوا نَارًا. وَأَنَا أُقَرِّبُ ٱلثَّوْرَ ٱلْآخَرَ وَأَجْعَلُهُ عَلَى ٱلْحَطَبِ، وَلَكِنْ لَا أَضَعُ نَارًا. ٢٣ 23
ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ. ಒಂದು ಹೋರಿಯನ್ನು ಅವರು ಆಯ್ದುಕೊಂಡು, ಅದನ್ನು ತುಂಡುತುಂಡಾಗಿ ಕಡಿದು, ಬೆಂಕಿ ಹಾಕದೆ, ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆ ಮಾಡಿ, ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.
ثُمَّ تَدْعُونَ بِٱسْمِ آلِهَتِكُمْ وَأَنَا أَدْعُو بِٱسْمِ ٱلرَّبِّ. وَٱلْإِلَهُ ٱلَّذِي يُجِيبُ بِنَارٍ فَهُوَ ٱللهُ». فَأَجَابَ جَمِيعُ ٱلشَّعْبِ وَقَالُوا: «ٱلْكَلَامُ حَسَنٌ». ٢٤ 24
ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಅನಂತರ ನಾನು ಯೆಹೋವ ದೇವರ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ, ಬೆಂಕಿಯನ್ನು ಕಳುಹಿಸುವರೋ, ಅವರೇ ದೇವರೆಂದು ನಿಶ್ಚಯಿಸೋಣ,” ಎಂದನು. ಅದಕ್ಕೆ ಜನರೆಲ್ಲರು ಉತ್ತರವಾಗಿ, “ಈ ಮಾತು ಸರಿ,” ಎಂದರು.
فَقَالَ إِيلِيَّا لِأَنْبِيَاءِ ٱلْبَعْلِ: «ٱخْتَارُوا لِأَنْفُسِكُمْ ثَوْرًا وَاحِدًا وَقَرِّبُوا أَوَّلًا، لِأَنَّكُمْ أَنْتُمُ ٱلْأَكْثَرُ، وَٱدْعُوا بِٱسْمِ آلِهَتِكُمْ، وَلَكِنْ لَا تَضَعُوا نَارًا». ٢٥ 25
ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಅನೇಕರಾಗಿರುವುದರಿಂದ ಒಂದು ಹೋರಿಯನ್ನು ಆಯ್ದುಕೊಂಡು, ಅದನ್ನು ಮೊದಲು ಸಿದ್ಧಮಾಡಿ, ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ. ಆದರೆ ಬೆಂಕಿಯನ್ನು ಹೊತ್ತಿಸಬೇಡಿರಿ,” ಎಂದನು.
فَأَخَذُوا ٱلثَّوْرَ ٱلَّذِي أُعْطِيَ لَهُمْ وَقَرَّبُوهُ، وَدَعَوْا بِٱسْمِ ٱلْبَعْلِ مِنَ ٱلصَّبَاحِ إِلَى ٱلظُّهْرِ قَائِلِينَ: «يَا بَعْلُ أَجِبْنَا». فَلَمْ يَكُنْ صَوْتٌ وَلَا مُجِيبٌ. وَكَانُوا يَرْقُصُونَ حَوْلَ ٱلْمَذْبَحِ ٱلَّذِي عُمِلَ. ٢٦ 26
ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
وَعِنْدَ ٱلظُّهْرِ سَخِرَ بِهِمْ إِيلِيَّا وَقَالَ: «ٱدْعُوا بِصَوْتٍ عَالٍ لِأَنَّهُ إِلَهٌ! لَعَلَّهُ مُسْتَغْرِقٌ أَوْ فِي خَلْوَةٍ أَوْ فِي سَفَرٍ! أَوْ لَعَلَّهُ نَائِمٌ فَيَتَنَبَّهَ!» ٢٧ 27
ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು.
فَصَرَخُوا بِصَوْتٍ عَالٍ، وَتَقَطَّعُوا حَسَبَ عَادَتِهِمْ بِٱلسُّيُوفِ وَٱلرِّمَاحِ حَتَّى سَالَ مِنْهُمُ ٱلدَّمُ. ٢٨ 28
ಅವರು ದೊಡ್ಡ ಶಬ್ದದಿಂದ ಕೂಗಿ, ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಖಡ್ಗಗಳಿಂದಲೂ, ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.
وَلَمَّا جَازَ ٱلظُّهْرُ، وَتَنَبَّأُوا إِلَى حِينِ إِصْعَادِ ٱلتَّقْدِمَةِ، وَلَمْ يَكُنْ صَوْتٌ وَلَا مُجِيبٌ وَلَا مُصْغٍ، ٢٩ 29
ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.
قَالَ إِيلِيَّا لِجَمِيعِ ٱلشَّعْبِ: «تَقَدَّمُوا إِلَيَّ». فَتَقَدَّمَ جَمِيعُ ٱلشَّعْبِ إِلَيْهِ. فَرَمَّمَ مَذْبَحَ ٱلرَّبِّ ٱلْمُنْهَدِمَ. ٣٠ 30
ಆಗ ಎಲೀಯನು ಸಮಸ್ತ ಜನರಿಗೂ, “ನನ್ನ ಬಳಿಗೆ ಬನ್ನಿರಿ,” ಎಂದನು. ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತು ಹಾಕಿದ ಯೆಹೋವ ದೇವರ ಬಲಿಪೀಠವನ್ನು ಅವನು ದುರಸ್ತಿ ಮಾಡಿದನು.
ثُمَّ أَخَذَ إِيلِيَّا ٱثْنَيْ عَشَرَ حَجَرًا، بِعَدَدِ أَسْبَاطِ بَنِي يَعْقُوبَ، ٱلَّذِي كَانَ كَلَامُ ٱلرَّبِّ إِلَيْهِ قَائِلًا: «إِسْرَائِيلَ يَكُونُ ٱسْمُكَ» ٣١ 31
“ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವುದು,” ಎಂದು ಯೆಹೋವ ದೇವರ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ, ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,
وَبَنَى ٱلْحِجَارَةَ مَذْبَحًا بِٱسْمِ ٱلرَّبِّ، وَعَمِلَ قَنَاةً حَوْلَ ٱلْمَذْبَحِ تَسَعُ كَيْلَتَيْنِ مِنَ ٱلْبَزْرِ. ٣٢ 32
ಆ ಕಲ್ಲುಗಳಿಂದ ಯೆಹೋವ ದೇವರ ಹೆಸರಿಗೆ ಬಲಿಪೀಠವನ್ನು ಕಟ್ಟಿ, ಆ ಬಲಿಪೀಠದ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ, ಒಂದು ಕಾಲುವೆಯನ್ನು ಮಾಡಿದನು.
ثُمَّ رَتَّبَ ٱلْحَطَبَ وَقَطَّعَ ٱلثَّوْرَ وَوَضَعَهُ عَلَى ٱلْحَطَبِ، وَقَالَ: «ٱمْلَأُوا أَرْبَعَ جَرَّاتٍ مَاءً وَصُبُّوا عَلَى ٱلْمُحْرَقَةِ وَعَلَى ٱلْحَطَبِ». ٣٣ 33
ತರುವಾಯ ಅವನು ಕಟ್ಟಿಗೆಗಳನ್ನು ಪೀಠದ ಮೇಲೆ ಇಟ್ಟು, ಹೋರಿಯನ್ನು ತುಂಡುತುಂಡಾಗಿ ಕಡಿದು, ಕಟ್ಟಿಗೆಗಳ ಮೇಲೆ ಇಟ್ಟು, “ನೀವು ನಾಲ್ಕು ಕೊಡ ನೀರು ತುಂಬಿಕೊಂಡು ದಹನಬಲಿಯ ಮೇಲೆಯೂ, ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ,” ಎಂದನು.
ثُمَّ قَالَ: «ثَنُّوا» فَثَنَّوْا. وَقَالَ: «ثَلِّثُوا» فَثَلَّثُوا. ٣٤ 34
ಅವರು ಅವನು ಹೇಳಿದಂತೆ ಮಾಡಿದರು. ಆಗ ಎಲೀಯನು, “ಎರಡನೆಯ ಸಾರಿ ಹೊಯ್ಯಿರಿ,” ಎಂದನು. ಅವರು ಎರಡನೆಯ ಸಾರಿಯೂ ಹೊಯ್ದರು. ಮೂರನೆಯ ಸಾರಿ, “ಹೊಯ್ಯಿರಿ,” ಎಂದನು. ಮೂರನೆಯ ಸಾರಿಯೂ ಹೊಯ್ದರು.
فَجَرَى ٱلْمَاءُ حَوْلَ ٱلْمَذْبَحِ وَٱمْتَلَأَتِ ٱلْقَنَاةُ أَيْضًا مَاءً. ٣٥ 35
ಆದ್ದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.
وَكَانَ عِنْدَ إِصْعَادِ ٱلتَّقْدِمَةِ أَنَّ إِيلِيَّا ٱلنَّبِيَّ تَقَدَّمَ وَقَالَ: «أَيُّهَا ٱلرَّبُّ إِلَهُ إِبْرَاهِيمَ وَإِسْحَاقَ وَإِسْرَائِيلَ، لِيُعْلَمِ ٱلْيَوْمَ أَنَّكَ أَنْتَ ٱللهُ فِي إِسْرَائِيلَ، وَأَنِّي أَنَا عَبْدُكَ، وَبِأَمْرِكَ قَدْ فَعَلْتُ كُلَّ هَذِهِ ٱلْأُمُورِ. ٣٦ 36
ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.
ٱسْتَجِبْنِي يَارَبُّ ٱسْتَجِبْنِي، لِيَعْلَمَ هَذَا ٱلشَّعْبُ أَنَّكَ أَنْتَ ٱلرَّبُّ ٱلْإِلَهُ، وَأَنَّكَ أَنْتَ حَوَّلْتَ قُلُوبَهُمْ رُجُوعًا». ٣٧ 37
ನೀವು ದೇವರಾದ ಯೆಹೋವ ದೇವರೆಂದೂ, ನೀವು ಅವರ ಹೃದಯವನ್ನು ತಿರುಗಿಸಿದ್ದೀರೆಂದೂ ಈ ಜನರು ತಿಳಿಯುವ ಹಾಗೆ ನನಗೆ ಉತ್ತರಕೊಡಿರಿ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ” ಎಂದು ಬೇಡಿದನು.
فَسَقَطَتْ نَارُ ٱلرَّبِّ وَأَكَلَتِ ٱلْمُحْرَقَةَ وَٱلْحَطَبَ وَٱلْحِجَارَةَ وَٱلتُّرَابَ، وَلَحَسَتِ ٱلْمِيَاهَ ٱلَّتِي فِي ٱلْقَنَاةِ. ٣٨ 38
ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
فَلَمَّا رَأَى جَمِيعُ ٱلشَّعْبِ ذَلِكَ سَقَطُوا عَلَى وُجُوهِهِمْ وَقَالُوا: «ٱلرَّبُّ هُوَ ٱللهُ! ٱلرَّبُّ هُوَ ٱللهُ!». ٣٩ 39
ಜನರೆಲ್ಲರು ಇದನ್ನು ಕಂಡಾಗ ಬೋರಲು ಬಿದ್ದು, “ಯೆಹೋವ ದೇವರೇ ದೇವರು! ಯೆಹೋವ ದೇವರೇ ದೇವರು!” ಎಂದರು.
فَقَالَ لَهُمْ إِيلِيَّا: «أَمْسِكُوا أَنْبِيَاءَ ٱلْبَعْلِ وَلَا يُفْلِتْ مِنْهُمْ رَجُلٌ». فَأَمْسَكُوهُمْ، فَنَزَلَ بِهِمْ إِيلِيَّا إِلَى نَهْرِ قِيشُونَ وَذَبَحَهُمْ هُنَاكَ. ٤٠ 40
ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.
وَقَالَ إِيلِيَّا لِأَخْآبَ: «ٱصْعَدْ كُلْ وَٱشْرَبْ، لِأَنَّهُ حِسُّ دَوِيِّ مَطَرٍ». ٤١ 41
ಅನಂತರ ಎಲೀಯನು ಅಹಾಬನಿಗೆ, “ನೀನು ಹೋಗಿ ತಿಂದು, ಕುಡಿ. ಏಕೆಂದರೆ ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.
فَصَعِدَ أَخْآبُ لِيَأْكُلَ وَيَشْرَبَ، وَأَمَّا إِيلِيَّا فَصَعِدَ إِلَى رَأْسِ ٱلْكَرْمَلِ وَخَرَّ إِلَى ٱلْأَرْضِ، وَجَعَلَ وَجْهَهُ بَيْنَ رُكْبَتَيْهِ. ٤٢ 42
ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.
وَقَالَ لِغُلَامِهِ: «ٱصْعَدْ تَطَلَّعْ نَحْوَ ٱلْبَحْرِ». فَصَعِدَ وَتَطَلَّعَ وَقَالَ: «لَيْسَ شَيْءٌ». فَقَالَ: «ٱرْجِعْ» سَبْعَ مَرَّاتٍ. ٤٣ 43
ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು.
وَفِي ٱلْمَرَّةِ ٱلسَّابِعَةِ قَالَ: «هُوَذَا غَيْمَةٌ صَغِيرَةٌ قَدْرُ كَفِّ إِنْسَانٍ صَاعِدَةٌ مِنَ ٱلْبَحْرِ». فَقَالَ: «ٱصْعَدْ قُلْ لِأَخْآبَ: ٱشْدُدْ وَٱنْزِلْ لِئَلَّا يَمْنَعَكَ ٱلْمَطَرُ». ٤٤ 44
ಏಳನೆಯ ಸಾರಿ ಇವನು ಹೋಗಿ ನೋಡಿದಾಗ, “ಇಗೋ, ಸಮುದ್ರದಿಂದ ಒಂದು ಮನುಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತಿದೆ,” ಎಂದನು. ಆಗ, “ನೀನು ಹೋಗಿ ಅಹಾಬನಿಗೆ ಬೇಗನೇ ರಥವನ್ನು ತೆಗೆದುಕೊಂಡು ಮಳೆಯು ನಿನ್ನನ್ನು ತಡೆಯದಂತೆ ಇಳಿದುಹೋಗೆಂದು ಹೇಳು,” ಎಂದನು.
وَكَانَ مِنْ هُنَا إِلَى هُنَا أَنَّ ٱلسَّمَاءَ ٱسْوَدَّتْ مِنَ ٱلْغَيْمِ وَٱلرِّيحِ، وَكَانَ مَطَرٌ عَظِيمٌ. فَرَكِبَ أَخْآبُ وَمَضَى إِلَى يَزْرَعِيلَ. ٤٥ 45
ಆಗ ಇದ್ದಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ, ಗಾಳಿಯಿಂದಲೂ ಕಪ್ಪಾಗಿ ದೊಡ್ಡಮಳೆಯು ಉಂಟಾಯಿತು. ಅಹಾಬನು ರಥದಲ್ಲಿ ಏರಿ ಇಜ್ರೆಯೇಲ್ ಪಟ್ಟಣಕ್ಕೆ ಹೋದನು.
وَكَانَتْ يَدُ ٱلرَّبِّ عَلَى إِيلِيَّا، فَشَدَّ حَقْوَيْهِ وَرَكَضَ أَمَامَ أَخْآبَ حَتَّى تَجِيءَ إِلَى يَزْرَعِيلَ. ٤٦ 46
ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.

< اَلْمُلُوكِ ٱلْأَوَّلُ 18 >