< اَلْمُلُوكِ ٱلْأَوَّلُ 2 >

وَلَمَّا قَرُبَتْ أَيَّامُ وَفَاةِ دَاوُدَ أَوْصَى سُلَيْمَانَ ٱبْنَهُ قَائِلًا: ١ 1
ದಾವೀದನಿಗೆ ಮರಣದ ಸಮಯ ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,
«أَنَا ذَاهِبٌ فِي طَرِيقِ ٱلْأَرْضِ كُلِّهَا، فَتَشَدَّدْ وَكُنْ رَجُلًا. ٢ 2
“ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.
اِحْفَظْ شَعَائِرَ ٱلرَّبِّ إِلَهِكَ، إِذْ تَسِيرُ فِي طُرُقِهِ، وَتَحْفَظُ فَرَائِضَهُ، وَصَايَاهُ وَأَحْكَامَهُ وَشَهَادَاتِهِ، كَمَا هُوَ مَكْتُوبٌ فِي شَرِيعَةِ مُوسَى، لِكَيْ تُفْلِحَ فِي كُلِّ مَا تَفْعَلُ وَحَيْثُمَا تَوَجَّهْتَ. ٣ 3
ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.
لِكَيْ يُقِيمَ ٱلرَّبُّ كَلَامَهُ ٱلَّذِي تَكَلَّمَ بِهِ عَنِّي قَائِلًا: إِذَا حَفِظَ بَنُوكَ طَرِيقَهُمْ وَسَلَكُوا أَمَامِي بِٱلْأَمَانَةِ مِنْ كُلِّ قُلُوبِهِمْ وَكُلِّ أَنْفُسِهِمْ، قَالَ لَا يُعْدَمُ لَكَ رَجُلٌ عَنْ كُرْسِيِّ إِسْرَائِيلَ. ٤ 4
ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,
وَأَنْتَ أَيْضًا تَعْلَمُ مَا فَعَلَ بِي يُوآبُ ٱبْنُ صَرُويَةَ، مَا فَعَلَ لِرَئِيسَيْ جُيُوشِ إِسْرَائِيلَ: ٱبْنَيْرَ بْنِ نَيْرَ وَعَمَاسَا بْنِ يَثْرٍ، إِذْ قَتَلَهُمَا وَسَفَكَ دَمَ ٱلْحَرْبِ فِي ٱلصُّلْحِ، وَجَعَلَ دَمَ ٱلْحَرْبِ فِي مِنْطَقَتِهِ ٱلَّتِي عَلَى حَقَوَيْهِ وَفِي نَعْلَيْهِ ٱللَّتَيْنِ بِرِجْلَيْهِ. ٥ 5
ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.
فَٱفْعَلْ حَسَبَ حِكْمَتِكَ وَلَا تَدَعْ شَيْبَتَهُ تَنْحَدِرُ بِسَلَامٍ إِلَى ٱلْهَاوِيَةِ. (Sheol h7585) ٦ 6
ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು. (Sheol h7585)
وَٱفْعَلْ مَعْرُوفًا لِبَنِي بَرْزِلَّايِ ٱلْجِلْعَادِيِّ فَيَكُونُوا بَيْنَ ٱلْآكِلِينَ عَلَى مَائِدَتِكَ، لِأَنَّهُمْ هَكَذَا تَقَدَّمُوا إِلَيَّ عِنْدَ هَرَبِي مِنْ وَجْهِ أَبْشَالُومَ أَخِيكَ. ٧ 7
ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.
وَهُوَذَا مَعَكَ شِمْعِي بْنُ جِيرَا ٱلْبَنْيَامِينِيُّ مِنْ بَحُورِيمَ، وَهُوَ لَعَنَنِي لَعْنَةً شَدِيدَةً يَوْمَ ٱنْطَلَقْتُ إِلَى مَحَنَايِمَ، وَقَدْ نَزَلَ لِلِقَائِي إِلَى ٱلْأُرْدُنِّ، فَحَلَفْتُ لَهُ بِٱلرَّبِّ قَائِلًا: إِنِّي لَا أُمِيتُكَ بِٱلسَّيْفِ. ٨ 8
ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮೀಯು ನಿನ್ನ ಬಳಿಯಲ್ಲಿರುತ್ತಾನಲ್ಲಾ. ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹು ಕ್ರೂರವಾಗಿ ಶಪಿಸಿದನು. ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕತ್ತಿಯಿಂದ ಕೊಲ್ಲುವುದಿಲ್ಲ’ ಎಂದು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದೆನು.
وَٱلْآنَ فَلَا تُبَرِّرْهُ لِأَنَّكَ أَنْتَ رَجُلٌ حَكِيمٌ، فَٱعْلَمْ مَا تَفْعَلُ بِهِ وَأَحْدِرْ شَيْبَتَهُ بِٱلدَّمِ إِلَى ٱلْهَاوِيَةِ».». (Sheol h7585) ٩ 9
ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು. (Sheol h7585)
وَٱضْطَجَعَ دَاوُدُ مَعَ آبَائِهِ، وَدُفِنَ فِي مَدِينَةِ دَاوُدَ. ١٠ 10
೧೦ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.
وَكَانَ ٱلزَّمَانُ ٱلَّذِي مَلَكَ فِيهِ دَاوُدُ عَلَى إِسْرَائِيلَ أَرْبَعِينَ سَنَةً. فِي حَبْرُونَ مَلَكَ سَبْعَ سِنِينٍ، وَفِي أُورُشَلِيمَ مَلَكَ ثَلَاثًا وَثَلَاثِينَ سَنَةً. ١١ 11
೧೧ದಾವೀದನು ಇಸ್ರಾಯೇಲರನ್ನು ಆಳಿದ್ದು ಒಟ್ಟು ನಲ್ವತ್ತು ವರ್ಷ. ಹೇಗೆಂದರೆ, ಹೆಬ್ರೋನಿನಲ್ಲಿ ಏಳು ವರ್ಷ ಮತ್ತು ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳ್ವಿಕೆ ಮಾಡಿದನು.
وَجَلَسَ سُلَيْمَانُ عَلَى كُرْسِيِّ دَاوُدَ أَبِيهِ، وَتَثَبَّتَ مُلْكُهُ جِدًّا. ١٢ 12
೧೨ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.
ثُمَّ جَاءَ أَدُونِيَّا ٱبْنُ حَجِّيثَ إِلَى بَثْشَبَعَ أُمِّ سُلَيْمَانَ. فَقَالَتْ: «أَلِلسَّلَامِ جِئْتَ؟» فَقَالَ: «لِلسَّلَامِ». ١٣ 13
೧೩ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು, “ನೀನು ಸಮಾಧಾನದಿಂದ ಬಂದಿರುವೆಯೋ?” ಎಂದು ಕೇಳಿದಳು. ಅವನು, “ಹೌದು ಸಮಾಧಾನದಿಂದ ಬಂದೆನು” ಎಂದನು.
ثُمَّ قَالَ: «لِي مَعَكِ كَلِمَةٌ». فَقَالَتْ: «تَكَلَّمْ». ١٤ 14
೧೪ಆಮೇಲೆ ಅವನು, “ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ” ಎಂದನು. ಅದಕ್ಕೆ ಆಕೆಯು, “ಹೇಳು” ಎಂದಳು.
فَقَالَ: «أَنْتِ تَعْلَمِينَ أَنَّ ٱلْمُلْكَ كَانَ لِي، وَقَدْ جَعَلَ جَمِيعُ إِسْرَائِيلَ وُجُوهَهُمْ نَحْوِي لِأَمْلِكَ، فَدَارَ ٱلْمُلْكُ وَصَارَ لِأَخِي لِأَنَّهُ مِنْ قِبَلِ ٱلرَّبِّ صَارَ لَهُ. ١٥ 15
೧೫ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.
وَٱلْآنَ أَسْأَلُكِ سُؤَالًا وَاحِدًا فَلَا تَرُدِّينِي فِيهِ». فَقَالَتْ لَهُ: «تَكَلَّمْ». ١٦ 16
೧೬ಅದನ್ನು ತಿರಸ್ಕರಿಸಬೇಡ” ಎನ್ನಲು ಆಕೆಯು, “ಅದೇನು ಹೇಳು” ಎಂದಳು.
فَقَالَ: «قُولِي لِسُلَيْمَانَ ٱلْمَلِكِ، لِأَنَّهُ لَا يَرُدُّكِ، أَنْ يُعْطِيَنِي أَبِيشَجَ ٱلشُّونَمِيَّةَ ٱمْرَأَةً». ١٧ 17
೧೭ಆಗ ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು. ಅವನು ನಿನ್ನ ಮಾತನ್ನು ತಳ್ಳಿಹಾಕುವುದಿಲ್ಲ” ಎಂದನು.
فَقَالَتْ بَثْشَبَعُ: «حَسَنًا. أَنَا أَتَكَلَّمُ عَنْكَ إِلَى ٱلْمَلِكِ». ١٨ 18
೧೮ಆಗ ಬತ್ಷೆಬೆಯು, “ಒಳ್ಳೇಯದು, ನಾನು ನಿನಗೋಸ್ಕರ ಅರಸನ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ” ಎಂದು ಹೇಳಿದಳು.
فَدَخَلَتْ بَثْشَبَعُ إِلَى ٱلْمَلِكِ سُلَيْمَانَ لِتُكَلِّمَهُ عَنْ أَدُونِيَّا. فَقَامَ ٱلْمَلِكُ لِلِقَائِهَا وَسَجَدَ لَهَا وَجَلَسَ عَلَى كُرْسِيِّهِ، وَوَضَعَ كُرْسِيًّا لِأُمِّ ٱلْمَلِكِ فَجَلَسَتْ عَنْ يَمِينِهِ. ١٩ 19
೧೯ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
وَقَالَتْ: «إِنَّمَا أَسْأَلُكَ سُؤَالًا وَاحِدًا صَغِيرًا. لَا تَرُدَّنِي». فَقَالَ لَهَا ٱلْمَلِكُ: «ٱسْأَلِي يَا أُمِّي، لِأَنِّي لَا أَرُدُّكِ». ٢٠ 20
೨೦ಆಗ ಆಕೆಯು, “ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ” ಎಂದು ಹೇಳಿದಳು. ಅರಸನು, “ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ” ಎಂದನು.
فَقَالَتْ: «لِتُعْطَ أَبِيشَجُ ٱلشُّونَمِيَّةُ لِأَدُونِيَّا أَخِيكَ ٱمْرَأَةً». ٢١ 21
೨೧ಆಗ ಆಕೆಯು, “ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಮದುವೆ ಮಾಡಿಕೊಡು” ಎಂದಳು.
فَأَجَابَ ٱلْمَلِكُ سُلَيْمَانُ وَقَالَ لِأُمِّهِ: «وَلِمَاذَا أَنْتِ تَسْأَلِينَ أَبِيشَجَ ٱلشُّونَمِيَّةَ لِأَدُونِيَّا؟ فَٱسْأَلِي لَهُ ٱلْمُلْكَ لِأَنَّهُ أَخِي ٱلْأَكْبَرُ مِنِّي! لَهُ وَلِأَبِيَاثَارَ ٱلْكَاهِنِ وَلِيُوآبَ ٱبْنِ صَرُويَةَ». ٢٢ 22
೨೨ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು.
وَحَلَفَ سُلَيْمَانُ ٱلْمَلِكُ بِٱلرَّبِّ قَائِلًا: «هَكَذَا يَفْعَلُ لِيَ ٱللهُ وَهَكَذَا يَزِيدُ، إِنَّهُ قَدْ تَكَلَّمَ أَدُونِيَّا بِهَذَا ٱلْكَلَامِ ضِدَّ نَفْسِهِ. ٢٣ 23
೨೩ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.
وَٱلْآنَ حَيٌّ هُوَ ٱلرَّبُّ ٱلَّذِي ثَبَّتَنِي وَأَجْلَسَنِي عَلَى كُرْسِيِّ دَاوُدَ أَبِي، وَٱلَّذِي صَنَعَ لِي بَيْتًا كَمَا تَكَلَّمَ، إِنَّهُ ٱلْيَوْمَ يُقْتَلُ أَدُونِيَّا». ٢٤ 24
೨೪ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.
فَأَرْسَلَ ٱلْمَلِكُ سُلَيْمَانُ بِيَدِ بَنَايَاهُو بْنِ يَهُويَادَاعَ، فَبَطَشَ بِهِ فَمَاتَ. ٢٥ 25
೨೫ಆಮೇಲೆ ಅರಸನು ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.
وَقَالَ ٱلْمَلِكُ لِأَبِيَاثَارَ ٱلْكَاهِنِ: «ٱذْهَبْ إِلَى عَنَاثُوثَ إِلَى حُقُولِكَ، لِأَنَّكَ مُسْتَوْجِبُ ٱلْمَوْتِ، وَلَسْتُ أَقْتُلُكَ فِي هَذَا ٱلْيَوْمِ، لِأَنَّكَ حَمَلْتَ تَابُوتَ سَيِّدِي ٱلرَّبِّ أَمَامَ دَاوُدَ أَبِي، وَلِأَنَّكَ تَذَلَّلْتَ بِكُلِّ مَا تَذَلَّلَ بِهِ أَبِي». ٢٦ 26
೨೬ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.
وَطَرَدَ سُلَيْمَانُ أَبِيَاثَارَ عَنْ أَنْ يَكُونَ كَاهِنًا لِلرَّبِّ، لِإِتْمَامِ كَلَامِ ٱلرَّبِّ ٱلَّذِي تَكَلَّمَ بِهِ عَلَى بَيْتِ عَالِي فِي شِيلُوهَ. ٢٧ 27
೨೭ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.
فَأَتَى ٱلْخَبَرُ إِلَى يُوآبَ، لِأَنَّ يُوآبَ مَالَ وَرَاءَ أَدُونِيَّا وَلَمْ يَمِلْ وَرَاءَ أَبْشَالُومَ، فَهَرَبَ يُوآبُ إِلَى خَيْمَةِ ٱلرَّبِّ وَتَمَسَّكَ بِقُرُونِ ٱلْمَذْبَحِ. ٢٨ 28
೨೮ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
فَأُخْبِرَ ٱلْمَلِكُ سُلَيْمَانُ بِأَنَّ يُوآبَ قَدْ هَرَبَ إِلَى خَيْمَةِ ٱلرَّبِّ وَهَا هُوَ بِجَانِبِ ٱلْمَذْبَحِ. فَأَرْسَلَ سُلَيْمَانُ بَنَايَاهُوَ بْنَ يَهُويَادَاعَ قَائِلًا: «ٱذْهَبِ ٱبْطِشْ بِهِ». ٢٩ 29
೨೯ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, “ಹೋಗಿ ಅವನನ್ನು ಕೊಂದು ಹಾಕು” ಎಂದು ಆಜ್ಞಾಪಿಸಿದನು.
فَدَخَلَ بَنَايَاهُو إِلَى خَيْمَةِ ٱلرَّبِّ وَقَالَ لَهُ: «هَكَذَا يَقُولُ ٱلْمَلِكُ: ٱخْرُجْ». فَقَالَ: «كَّلَا، وَلَكِنَّنِي هُنَا أَمُوتُ». فَرَدَّ بَنَايَاهُو ٱلْجَوَابَ عَلَى ٱلْمَلِكِ قَائِلًا: «هَكَذَا تَكَلَّمَ يُوآبُ وَهَكَذَا جَاوَبَنِي». ٣٠ 30
೩೦ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ” ಎಂದು ಹೇಳಲು ಅವನು “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
فَقَالَ لَهُ ٱلْمَلِكُ: «ٱفْعَلْ كَمَا تَكَلَّمَ، وَٱبْطِشْ بِهِ وَٱدْفِنْهُ، وَأَزِلْ عَنِّي وَعَنْ بَيْتِ أَبِي ٱلدَّمَ ٱلزَّكِيَّ ٱلَّذِي سَفَكَهُ يُوآبُ، ٣١ 31
೩೧ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.
فَيَرُدُّ ٱلرَّبُّ دَمَهُ عَلَى رَأْسِهِ، لِأَنَّهُ بَطَشَ بِرَجُلَيْنِ بَرِيئَيْنِ وَخَيْرٍ مِنْهُ وَقَتَلَهُمَا بِٱلسَّيْفِ، وَأَبِي دَاوُدُ لَا يَعْلَمُ، وَهُمَا أَبْنَيْرُ بْنُ نَيْرٍ رَئِيسُ جَيْشِ إِسْرَائِيلَ، وَعَمَاسَا بْنُ يَثَرٍ رَئِيسُ جَيْشِ يَهُوذَا. ٣٢ 32
೩೨ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.
فَيَرْتَدُّ دَمُهُمَا عَلَى رَأْسِ يُوآبَ وَرَأْسِ نَسْلِهِ إِلَى ٱلْأَبَدِ، وَيَكُونُ لِدَاوُدَ وَنَسْلِهِ وَبَيْتِهِ وَكُرْسِيِّهِ سَلَامٌ إِلَى ٱلْأَبَدِ مِنْ عِنْدِ ٱلرَّبِّ». ٣٣ 33
೩೩ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.
فَصَعِدَ بَنَايَاهُو بْنُ يَهُويَادَاعَ وَبَطَشَ بِهِ وَقَتَلَهُ، فَدُفِنَ فِي بَيْتِهِ فِي ٱلْبَرِّيَّةِ. ٣٤ 34
೩೪ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.
وَجَعَلَ ٱلْمَلِكُ بَنَايَاهُوَ بْنَ يَهُويَادَاعَ مَكَانَهُ عَلَى ٱلْجَيْشِ، وَجَعَلَ ٱلْمَلِكُ صَادُوقَ ٱلْكَاهِنَ مَكَانَ أَبِيَاثَارَ. ٣٥ 35
೩೫ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.
ثُمَّ أَرْسَلَ ٱلْمَلِكُ وَدَعَا شِمْعِيَ وَقَالَ لَهُ: «اِبْنِ لِنَفْسِكَ بَيْتًا فِي أُورُشَلِيمَ، وَأَقِمْ هُنَاكَ وَلَا تَخْرُجْ مِنْ هُنَاكَ إِلَى هُنَا أَوْ هُنَالِكَ. ٣٦ 36
೩೬ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.
فَيَوْمَ تَخْرُجُ وَتَعْبُرُ وَادِيَ قَدْرُونَ، ٱعْلَمَنَّ بِأَنَّكَ مَوْتًا تَمُوتُ، وَيَكُونُ دَمُكَ عَلَى رَأْسِكَ». ٣٧ 37
೩೭ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು.
فَقَالَ شِمْعِي لِلْمَلِكِ: «حَسَنٌ ٱلْأَمْرُ. كَمَا تَكَلَّمَ سَيِّدِي ٱلْمَلِكُ كَذَلِكَ يَصْنَعُ عَبْدُكَ». فَأَقَامَ شِمْعِي فِي أُورُشَلِيمَ أَيَّامًا كَثِيرَةً. ٣٨ 38
೩೮ಅದಕ್ಕೆ ಶಿಮ್ಮೀಯು, “ಒಳ್ಳೇಯದು ನನ್ನ ಒಡೆಯನು ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು” ಎಂದು ಉತ್ತರಕೊಟ್ಟು ಬಹುದಿನಗಳ ವರೆಗೂ ಯೆರೂಸಲೇಮಿನಲ್ಲೇ ವಾಸಮಾಡುತ್ತಿದ್ದನು.
وَفِي نِهَايَةِ ثَلَاثِ سِنِينَ هَرَبَ عَبْدَانِ لِشِمْعِي إِلَى أَخِيشَ بْنِ مَعْكَةَ مَلِكِ جَتَّ، فَأَخْبَرُوا شِمْعِي قَائِلِينَ: «هُوَذَا عَبْدَاكَ فِي جَتَّ». ٣٩ 39
೩೯ಮೂರು ವರ್ಷಗಳಾದನಂತರ ಶಿಮ್ಮೀಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ದಾಸರು ಗತ್ ಊರಿನಲ್ಲಿರುವುದು ಶಿಮ್ಮೀಗೆ ಗೊತ್ತಾಯಿತು.
فَقَامَ شِمْعِي وَشَدَّ عَلَى حِمَارِهِ وَذَهَبَ إِلَى جَتَّ إِلَى أَخِيشَ لِيُفَتِّشَ عَلَى عَبْدَيْهِ، فَٱنْطَلَقَ شِمْعِي وَأَتَى بِعَبْدَيْهِ مِنْ جَتَّ. ٤٠ 40
೪೦ಆಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟು ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.
فَأُخْبِرَ سُلَيْمَانُ بِأَنَّ شِمْعِي قَدِ ٱنْطَلَقَ مِنْ أُورُشَلِيمَ إِلَى جَتَّ وَرَجَعَ. ٤١ 41
೪೧ಶಿಮ್ಮೀಯು ಯೆರೂಸಲೇಮಿನಿಂದ ಗತ್ ಊರಿಗೆ ಬಂದ ಸಂಗತಿಯು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರೆಸಿ ಅವನಿಗೆ,
فَأَرْسَلَ ٱلْمَلِكُ وَدَعَا شِمْعِيَ وَقَالَ لَهُ: «أَمَا ٱسْتَحْلَفْتُكَ بِٱلرَّبِّ وَأَشْهَدْتُ عَلَيْكَ قَائِلًا: إِنَّكَ يَوْمَ تَخْرُجُ وَتَذْهَبُ إِلَى هُنَا وَهُنَالِكَ، ٱعْلَمَنَّ بِأَنَّكَ مَوْتًا تَمُوتُ؟ فَقُلْتَ لِي: حَسَنٌ ٱلْأَمْرُ. قَدْ سَمِعْتُ. ٤٢ 42
೪೨“ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, ‘ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ’ ಎಂದು ಹೇಳಿದಿಯಲ್ಲಾ.
فَلِمَاذَا لَمْ تَحْفَظْ يَمِينَ ٱلرَّبِّ وَٱلْوَصِيَّةَ ٱلَّتِي أَوْصَيْتُكَ بِهَا؟». ٤٣ 43
೪೩ಹಾಗಾದರೆ ಯೆಹೋವನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ನೀನು ಯಾಕೆ ಕೈಕೊಳ್ಳಲಿಲ್ಲ” ಎಂದನು.
ثُمَّ قَالَ ٱلْمَلِكُ لِشِمْعِي: «أَنْتَ عَرَفْتَ كُلَّ ٱلشَّرِّ ٱلَّذِي عَلِمَهُ قَلْبُكَ ٱلَّذِي فَعَلْتَهُ لِدَاوُدَ أَبِي، فَلِيَرُدَّ ٱلرَّبُّ شَرَّكَ عَلَى رَأْسِكَ. ٤٤ 44
೪೪ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
وَٱلْمَلِكُ سُلَيْمَانُ يُبَارَكُ، وَكُرْسِيُّ دَاوُدَ يَكُونُ ثَابِتًا أَمَامَ ٱلرَّبِّ إِلَى ٱلْأَبَدِ». ٤٥ 45
೪೫ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವು ಸ್ಥಿರವಾಗಿಯೂ ಇರಲಿ ಎಂದು ಹೇಳಿ,
وَأَمَرَ ٱلْمَلِكُ بَنَايَاهُوَ بْنَ يَهُويَادَاعَ، فَخَرَجَ وَبَطَشَ بِهِ فَمَاتَ. وَتَثَبَّتَ ٱلْمُلْكُ بِيَدِ سُلَيْمَانَ. ٤٦ 46
೪೬ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.

< اَلْمُلُوكِ ٱلْأَوَّلُ 2 >