< اَلْمُلُوكِ ٱلْأَوَّلُ 22 >

وَأَقَامُوا ثَلَاثَ سِنِينَ بِدُونِ حَرْبٍ بَيْنَ أَرَامَ وَإِسْرَائِيلَ. ١ 1
ಮೂರು ವರ್ಷಗಳ ಕಾಲ ಇಸ್ರಾಯೇಲರಿಗೂ ಅರಾಮ್ಯರಿಗೂ ಯುದ್ಧ ನಡೆಯಲಿಲ್ಲ.
وَفِي ٱلسَّنَةِ ٱلثَّالِثَةِ نَزَلَ يَهُوشَافَاطُ مَلِكُ يَهُوذَا إِلَى مَلِكِ إِسْرَائِيلَ. ٢ 2
ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.
فَقَالَ مَلِكُ إِسْرَائِيلَ لِعَبِيدِهِ: «أَتَعْلَمُونَ أَنَّ رَامُوتَ جِلْعَادَ لَنَا وَنَحْنُ سَاكِتُونَ عَنْ أَخْذِهَا مِنْ يَدِ مَلِكِ أَرَامَ؟» ٣ 3
ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.
وَقَالَ لِيَهُوشَافَاطَ: «أَتَذْهَبُ مَعِي لِلْحَرْبِ إِلَى رَامُوتَ جِلْعَادَ؟» فَقَالَ يَهُوشَافَاطُ لِمَلِكِ إِسْرَائِيلَ: «مَثَلِي مَثَلُكَ. شَعْبِي كَشَعْبِكَ، وَخَيْلِي كَخَيْلِكَ». ٤ 4
ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
ثُمَّ قَالَ يَهُوشَافَاطُ لِمَلِكِ إِسْرَائِيلَ: «ٱسْأَلِ ٱلْيَوْمَ عَنْ كَلَامِ ٱلرَّبِّ». ٥ 5
ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.
فَجَمَعَ مَلِكُ إِسْرَائِيلَ ٱلْأَنْبِيَاءَ، نَحْوَ أَرْبَعِ مِئَةِ رَجُلٍ وَقَالَ لَهُمْ: «أَأَذْهَبُ إِلَى رَامُوتَ جِلْعَادَ لِلْقِتَالِ أَمْ أَمْتَنِعُ؟» فَقَالُوا: «ٱصْعَدْ فَيَدْفَعَهَا ٱلسَّيِّدُ لِيَدِ ٱلْمَلِكِ». ٦ 6
ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
فَقَالَ يَهُوشَافَاطُ: «أَمَا يُوجَدُ هُنَا بَعْدُ نَبِيٌّ لِلرَّبِّ فَنَسْأَلَ مِنْهُ؟» ٧ 7
ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು.
فَقَالَ مَلِكُ إِسْرَائِيلَ لِيَهُوشَافَاطَ: «إِنَّهُ يُوجَدُ بَعْدُ رَجُلٌ وَاحِدٌ لِسُؤَالِ ٱلرَّبِّ بِهِ، وَلَكِنِّي أُبْغِضُهُ لِأَنَّهُ لَا يَتَنَبَّأُ عَلَيَّ خَيْرًا بَلْ شَرًّا، وَهُوَ مِيخَا بْنُ يَمْلَةَ». فَقَالَ يَهُوشَافَاطُ: «لَا يَقُلِ ٱلْمَلِكُ هَكَذَا». ٨ 8
ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.
فَدَعَا مَلِكُ إِسْرَائِيلَ خَصِيًّا وَقَالَ: «أَسْرِعْ إِلَيَّ بِمِيخَا بْنِ يَمْلَةَ». ٩ 9
ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.
وَكَانَ مَلِكُ إِسْرَائِيلَ وَيَهُوشَافَاطُ مَلِكُ يَهُوذَا جَالِسَيْنِ كُلُّ وَاحِدٍ عَلَى كُرْسِيِّهِ، لَابِسَيْنِ ثِيَابَهُمَا فِي سَاحَةٍ عِنْدَ مَدْخَلِ بَابِ ٱلسَّامِرَةِ، وَجَمِيعُ ٱلْأَنْبِيَاءِ يَتَنَبَّأُونَ أَمَامَهُمَا. ١٠ 10
೧೦ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.
وَعَمِلَ صِدْقِيَّا بْنُ كَنْعَنَةَ لِنَفْسِهِ قَرْنَيْ حَدِيدٍ وَقَالَ: «هَكَذَا قَالَ ٱلرَّبُّ: بِهَذِهِ تَنْطَحُ ٱلْأَرَامِيِّينَ حَتَّى يَفْنَوْا». ١١ 11
೧೧ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.
وَتَنَبَّأَ جَمِيعُ ٱلْأَنْبِيَاءِ هَكَذَا قَائِلِينَ: «ٱصْعَدْ إِلَى رَامُوتَ جِلْعَادَ وَأَفْلِحْ، فَيَدْفَعَهَا ٱلرَّبُّ لِيَدِ ٱلْمَلِكِ». ١٢ 12
೧೨ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
وَأَمَّا ٱلرَّسُولُ ٱلَّذِي ذَهَبَ لِيَدْعُوَ مِيخَا فَكَلَّمَهُ قَائِلًا: «هُوَذَا كَلَامُ جَمِيعِ ٱلْأَنْبِيَاءِ بِفَمٍ وَاحِدٍ خَيْرٌ لِلْمَلِكِ، فَلْيَكُنْ كَلَامُكَ مِثْلَ كَلَامِ وَاحِدٍ مِنْهُمْ، وَتَكَلَّمْ بِخَيْرٍ». ١٣ 13
೧೩ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.
فَقَالَ مِيخَا: «حَيٌّ هُوَ ٱلرَّبُّ، إِنَّ مَا يَقُولُهُ لِيَ ٱلرَّبُّ بِهِ أَتَكَلَّمُ». ١٤ 14
೧೪ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
وَلَمَّا أَتَى إِلَى ٱلْمَلِكِ قَالَ لَهُ ٱلْمَلِكُ: «يَا مِيخَا، أَنَصْعَدُ إِلَى رَامُوتَ جِلْعَادَ لِلْقِتَالِ، أَمْ نَمْتَنِعُ؟» فَقَالَ لَهُ: «ٱصْعَدْ وَأَفْلِحْ فَيَدْفَعَهَا ٱلرَّبُّ لِيَدِ ٱلْمَلِكِ». ١٥ 15
೧೫ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.
فَقَالَ لَهُ ٱلْمَلِكُ: «كَمْ مَرَّةٍ ٱسْتَحْلَفْتُكَ أَنْ لَا تَقُولَ لِي إِلَّا ٱلْحَقَّ بِٱسْمِ ٱلرَّبِّ». ١٦ 16
೧೬ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.
فَقَالَ: «رَأَيْتُ كُلَّ إِسْرَائِيلَ مُشَتَّتِينَ عَلَى ٱلْجِبَالِ كَخِرَافٍ لَا رَاعِيَ لَهَا. فَقَالَ ٱلرَّبُّ: لَيْسَ لِهَؤُلَاءِ أَصْحَابٌ، فَلْيَرْجِعُوا كُلُّ وَاحِدٍ إِلَى بَيْتِهِ بِسَلَامٍ». ١٧ 17
೧೭ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.
فَقَالَ مَلِكُ إِسْرَائِيلَ لِيَهُوشَافَاطَ: «أَمَا قُلْتُ لَكَ إِنَّهُ لَا يَتَنَبَّأُ عَلَيَّ خَيْرًا بَلْ شَرًّا؟» ١٨ 18
೧೮ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
وَقَالَ: «فَٱسْمَعْ إِذًا كَلَامَ ٱلرَّبِّ: قَدْ رَأَيْتُ ٱلرَّبَّ جَالِسًا عَلَى كُرْسِيِّهِ، وَكُلُّ جُنْدِ ٱلسَّمَاءِ وُقُوفٌ لَدَيْهِ عَنْ يَمِينِهِ وَعَنْ يَسَارِهِ. ١٩ 19
೧೯ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
فَقَالَ ٱلرَّبُّ: مَنْ يُغْوِي أَخْآبَ فَيَصْعَدَ وَيَسْقُطَ فِي رَامُوتَ جِلْعَادَ؟ فَقَالَ هَذَا هَكَذَا، وَقَالَ ذَاكَ هَكَذَا. ٢٠ 20
೨೦ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
ثُمَّ خَرَجَ ٱلرُّوحُ وَوَقَفَ أَمَامَ ٱلرَّبِّ وَقَالَ: أَنَا أُغْوِيهِ. وَقَالَ لَهُ ٱلرَّبُّ: بِمَاذَا؟ ٢١ 21
೨೧ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು.
فَقَالَ: أَخْرُجُ وَأَكُونُ رُوحَ كَذِبٍ فِي أَفْوَاهِ جَمِيعِ أَنْبِيَائِهِ. فَقَالَ: إِنَّكَ تُغْوِيهِ وَتَقْتَدِرُ، فَٱخْرُجْ وَٱفْعَلْ هَكَذَا. ٢٢ 22
೨೨‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
وَٱلْآنَ هُوَذَا قَدْ جَعَلَ ٱلرَّبُّ رُوحَ كَذِبٍ فِي أَفْوَاهِ جَمِيعِ أَنْبِيَائِكَ هَؤُلَاءِ، وَٱلرَّبُّ تَكَلَّمَ عَلَيْكَ بِشَرٍّ». ٢٣ 23
೨೩ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
فَتَقَدَّمَ صِدْقِيَّا بْنُ كَنْعَنَةَ وَضَرَبَ مِيخَا عَلَى ٱلْفَكِّ وَقَالَ: «مِنْ أَيْنَ عَبَرَ رُوحُ ٱلرَّبِّ مِنِّي لِيُكَلِّمَكَ؟» ٢٤ 24
೨೪ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು
فَقَالَ مِيخَا: «إِنَّكَ سَتَرَى فِي ذَلِكَ ٱلْيَوْمِ ٱلَّذِي تَدْخُلُ فِيهِ مِنْ مِخْدَعٍ إِلَى مِخْدَعٍ لِتَخْتَبِئَ». ٢٥ 25
೨೫ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.
فَقَالَ مَلِكُ إِسْرَائِيلَ: «خُذْ مِيخَا وَرُدَّهُ إِلَى آمُونَ رَئِيسِ ٱلْمَدِينَةِ، وَإِلَى يُوآشَ ٱبْنِ ٱلْمَلِكِ، ٢٦ 26
೨೬ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,
وَقُلْ هَكَذَا قَالَ ٱلْمَلِكُ: ضَعُوا هَذَا فِي ٱلسِّجْنِ، وَأَطْعِمُوهُ خُبْزَ ٱلضِّيقِ وَمَاءَ ٱلضِّيقِ حَتَّى آتِيَ بِسَلَامٍ». ٢٧ 27
೨೭‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
فَقَالَ مِيخَا: «إِنْ رَجَعْتَ بِسَلَامٍ فَلَمْ يَتَكَلَّمِ ٱلرَّبُّ بِي». وَقَالَ: «ٱسْمَعُوا أَيُّهَا ٱلشَّعْبُ أَجْمَعُونَ». ٢٨ 28
೨೮ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.
فَصَعِدَ مَلِكُ إِسْرَائِيلَ وَيَهُوشَافَاطُ مَلِكُ يَهُوذَا إِلَى رَامُوتَ جِلْعَادَ. ٢٩ 29
೨೯ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು.
فَقَالَ مَلِكُ إِسْرَائِيلَ لِيَهُوشَافَاطَ: «إِنِّي أَتَنَكَّرُ وَأَدْخُلُ ٱلْحَرْبَ، وَأَمَّا أَنْتَ فَٱلْبَسْ ثِيَابَكَ». فَتَنَكَّرَ مَلِكُ إِسْرَائِيلَ وَدَخَلَ ٱلْحَرْبَ. ٣٠ 30
೩೦ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.
وَأَمَرَ مَلِكُ أَرَامَ رُؤَسَاءَ ٱلْمَرْكَبَاتِ ٱلَّتِي لَهُ، ٱلِٱثْنَيْنِ وَٱلثَّلَاثِينَ، وَقَالَ: «لَا تُحَارِبُوا صَغِيرًا وَلَا كَبِيرًا إِلَّا مَلِكَ إِسْرَائِيلَ وَحْدَهُ». ٣١ 31
೩೧ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು.
فَلَمَّا رَأَى رُؤَسَاءُ ٱلْمَرْكَبَاتِ يَهُوشَافَاطَ، قَالُوا: «إِنَّهُ مَلِكُ إِسْرَائِيلَ» فَمَالُوا عَلَيْهِ لِيُقَاتِلُوهُ، فَصَرَخَ يَهُوشَافَاطُ. ٣٢ 32
೩೨ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.
فَلَمَّا رَأَى رُؤَسَاءُ ٱلْمَرْكَبَاتِ أَنَّهُ لَيْسَ مَلِكَ إِسْرَائِيلَ رَجَعُوا عَنْهُ. ٣٣ 33
೩೩ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.
وَإِنَّ رَجُلًا نَزَعَ فِي قَوْسِهِ غَيْرَ مُتَعَمِّدٍ وَضَرَبَ مَلِكَ إِسْرَائِيلَ بَيْنَ أَوْصَالِ ٱلدِّرْعِ. فَقَالَ لِمُدِيرِ مَرْكَبَتِهِ: «رُدَّ يَدَكَ وَأَخْرِجْنِي مِنَ ٱلْجَيْشِ لِأَنِّي قَدْ جُرِحْتُ». ٣٤ 34
೩೪ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
وَٱشْتَدَّ ٱلْقِتَالُ فِي ذَلِكَ ٱلْيَوْمِ، وَأُوقِفَ ٱلْمَلِكُ فِي مَرْكَبَتِهِ مُقَابِلَ أَرَامَ، وَمَاتَ عِنْدَ ٱلْمَسَاءِ، وَجَرَى دَمُ ٱلْجُرْحِ إِلَى حِضْنِ ٱلْمَرْكَبَةِ. ٣٥ 35
೩೫ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.
وَعَبَرَتِ ٱلرَّنَّةُ فِي ٱلْجُنْدِ عِنْدَ غُرُوبِ ٱلشَّمْسِ قَائِلًا: «كُلُّ رَجُلٍ إِلَى مَدِينَتِهِ، وَكُلُّ رَجُلٍ إِلَى أَرْضِهِ». ٣٦ 36
೩೬ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು
فَمَاتَ ٱلْمَلِكُ وَأُدْخِلَ ٱلسَّامِرَةَ فَدَفَنُوا ٱلْمَلِكَ فِي ٱلسَّامِرَةِ. ٣٧ 37
೩೭ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.
وَغُسِلَتِ ٱلْمَرْكَبَةُ فِي بِرْكَةِ ٱلسَّامِرَةِ فَلَحَسَتِ ٱلْكِلَابُ دَمَهُ، وَغَسَلُوا سِلَاحَهُ. حَسَبَ كَلَامِ ٱلرَّبِّ ٱلَّذِي تَكَلَّمَ بِهِ. ٣٨ 38
೩೮ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.
وَبَقِيَّةُ أُمُورِ أَخْآبَ وَكُلُّ مَا فَعَلَ، وَبَيْتُ ٱلْعَاجِ ٱلَّذِي بَنَاهُ، وَكُلُّ ٱلْمُدُنِ ٱلَّتِي بَنَاهَا، أَمَا هِيَ مَكْتُوبَةٌ فِي سِفْرِ أَخْبَارِ ٱلْأَيَّامِ لِمُلُوكِ إِسْرَائِيلَ؟ ٣٩ 39
೩೯ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
فَٱضْطَجَعَ أَخْآبُ مَعَ آبَائِهِ، وَمَلَكَ أَخَزْيَا ٱبْنُهُ عِوَضًا عَنْهُ. ٤٠ 40
೪೦ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು.
وَمَلَكَ يَهُوشَافَاطُ بْنُ آسَا عَلَى يَهُوذَا فِي ٱلسَّنَةِ ٱلرَّابِعَةِ لِأَخْآبَ مَلِكِ إِسْرَائِيلَ. ٤١ 41
೪೧ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.
وَكَانَ يَهُوشَافَاطُ ٱبْنَ خَمْسٍ وَثَلَاثِينَ سَنَةً حِينَ مَلَكَ، وَمَلَكَ خَمْسًا وَعِشْرِينَ سَنَةً فِي أُورُشَلِيمَ، وَٱسْمُ أُمِّهِ عَزُوبَةُ بِنْتُ شَلْحِي. ٤٢ 42
೪೨ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ
وَسَارَ فِي كُلِّ طَرِيقِ آسَا أَبِيهِ. لَمْ يَحِدْ عَنْهَا، إِذْ عَمِلَ ٱلْمُسْتَقِيمَ فِي عَيْنَيِ ٱلرَّبِّ. إِلَّا أَنَّ ٱلْمُرْتَفَعَاتِ لَمْ تُنْتَزِعْ، بَلْ كَانَ ٱلشَّعْبُ لَا يَزَالُ يَذْبَحُ وَيُوقِدُ عَلَى ٱلْمُرْتَفَعَاتِ. ٤٣ 43
೪೩ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.
وَصَالَحَ يَهُوشَافَاطُ مَلِكَ إِسْرَائِيلَ. ٤٤ 44
೪೪ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.
وَبَقِيَّةُ أُمُورِ يَهُوشَافَاطَ وَجَبَرُوتُهُ ٱلَّذِي أَظْهَرَهُ، وَكَيْفَ حَارَبَ، أَمَاهِيَ مَكْتُوبَةٌ فِي سِفْرِ أَخْبَارِ ٱلْأَيَّامِ لِمُلُوكِ يَهُوذَا؟ ٤٥ 45
೪೫ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
وَبَقِيَّةُ ٱلْمَأْبُونِينَ ٱلَّذِينَ بَقُوا فِي أَيَّامِ آسَا أَبِيهِ أَبَادَهُمْ مِنَ ٱلْأَرْضِ. ٤٦ 46
೪೬ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.
وَلَمْ يَكُنْ فِي أَدُومَ مَلِكٌ. مَلَكَ وَكِيلٌ. ٤٧ 47
೪೭ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.
وَعَمِلَ يَهُوشَافَاطُ سُفُنَ تَرْشِيشَ لِكَيْ تَذْهَبَ إِلَى أُوفِيرَ لِأَجْلِ ٱلذَّهَبِ، فَلَمْ تَذْهَبْ، لِأَنَّ ٱلسُّفُنَ تَكَسَّرَتْ فِي عِصْيُونَ جَابِرَ. ٤٨ 48
೪೮ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.
حِينَئِذٍ قَالَ أَخَزْيَا بْنُ أَخْآبَ لِيَهُوشَافَاطَ: «لِيَذْهَبْ عَبِيدِي مَعَ عَبِيدِكَ فِي ٱلسُّفُنِ». فَلَمْ يَشَأْ يَهُوشَافَاطُ. ٤٩ 49
೪೯ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.
وَٱضْطَجَعَ يَهُوشَافَاطُ مَعَ آبَائِهِ، وَدُفِنَ مَعَ آبَائِهِ فِي مَدِينَةِ دَاوُدَ أَبِيهِ، فَمَلَكَ يَهُورَامُ ٱبْنُهُ عِوَضًا عَنْهُ. ٥٠ 50
೫೦ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.
أَخَزْيَا بْنُ أَخْآبَ مَلَكَ عَلَى إِسْرَائِيلَ فِي ٱلسَّامِرَةِ فِي ٱلسَّنَةِ ٱلسَّابِعَةَ عَشْرَةَ لِيَهُوشَافَاطَ مَلِكِ يَهُوذَا. مَلَكَ عَلَى إِسْرَائِيلَ سَنَتَيْنِ. ٥١ 51
೫೧ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು.
وَعَمِلَ ٱلشَّرَّ فِي عَيْنَيِ ٱلرَّبِّ، وَسَارَ فِي طَرِيقِ أَبِيهِ وَطَرِيقِ أُمِّهِ، وَطَرِيقِ يَرُبْعَامَ بْنِ نَبَاطَ ٱلَّذِي جَعَلَ إِسْرَائِيلَ يُخْطِئُ، ٥٢ 52
೫೨ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
وَعَبَدَ ٱلْبَعْلَ وَسَجَدَ لَهُ وَأَغَاظَ ٱلرَّبَّ إِلَهَ إِسْرَائِيلَ، حَسَبَ كُلِّ مَا فَعَلَ أَبُوهُ. ٥٣ 53
೫೩ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು.

< اَلْمُلُوكِ ٱلْأَوَّلُ 22 >