< صَمُوئِيلَ ٱلْأَوَّلُ 10 >

فَأَخَذَ صَمُوئِيلُ قِنِّينَةَ ٱلدُّهْنِ وَصَبَّ عَلَى رَأْسِهِ وَقَبَّلَهُ وَقَالَ: «أَلَيْسَ لِأَنَّ ٱلرَّبَّ قَدْ مَسَحَكَ عَلَى مِيرَاثِهِ رَئِيسًا؟ ١ 1
ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
فِي ذَهَابِكَ ٱلْيَوْمَ مِنْ عِنْدِي تُصَادِفُ رَجُلَيْنِ عِنْدَ قَبْرِ رَاحِيلَ، فِي تُخْمِ بَنْيَامِينَ فِي صَلْصَحَ، فَيَقُولَانِ لَكَ: قَدْ وُجِدَتِ ٱلْأُتُنُ، ٱلَّتِي ذَهَبْتَ تُفَتِّشُ عَلَيْهَا، وَهُوَذَا أَبُوكَ قَدْ تَرَكَ أَمْرَ ٱلْأُتُنِ وَٱهْتَمَّ بِكُمَا قَائِلًا: مَاذَا أَصْنَعُ لِٱبْنِي؟ ٢ 2
ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು.
وَتَعْدُو مِنْ هُنَاكَ ذَاهِبًا حَتَّى تَأْتِيَ إِلَى بَلُّوطَةِ تَابُورَ، فَيُصَادِفُكَ هُنَاكَ ثَلَاثَةُ رِجَالٍ صَاعِدُونَ إِلَى ٱللهِ إِلَى بَيْتِ إِيلٍ، وَاحِدٌ حَامِلٌ ثَلَاثَةَ جِدَاءٍ، وَوَاحِدٌ حَامِلٌ ثَلَاثَةَ أَرْغِفَةِ خُبْزٍ، وَوَاحِدٌ حَامِلٌ زِقَّ خَمْرٍ. ٣ 3
ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್‌ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.
فَيُسَلِّمُونَ عَلَيْكَ وَيُعْطُونَكَ رَغِيفَيْ خُبْزٍ، فَتَأْخُذُ مِنْ يَدِهِمْ. ٤ 4
ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.
بَعْدَ ذَلِكَ تَأْتِي إِلَى جِبْعَةِ ٱللهِ حَيْثُ أَنْصَابُ ٱلْفِلِسْطِينِيِّينَ. وَيَكُونُ عِنْدَ مَجِيئِكَ إِلَى هُنَاكَ إِلَى ٱلْمَدِينَةِ أَنَّكَ تُصَادِفُ زُمْرَةً مِنَ ٱلْأَنْبِيَاءِ نَازِلِينَ مِنَ ٱلْمُرْتَفَعَةِ وَأَمَامَهُمْ رَبَابٌ وَدُفٌّ وَنَايٌ وَعُودٌ وَهُمْ يَتَنَبَّأُونَ. ٥ 5
ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.
فَيَحِلُّ عَلَيْكَ رُوحُ ٱلرَّبِّ فَتَتَنَبَّأُ مَعَهُمْ وَتَتَحَوَّلُ إِلَى رَجُلٍ آخَرَ. ٦ 6
ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.
وَإِذَا أَتَتْ هَذِهِ ٱلْآيَاتُ عَلَيْكَ، فَٱفْعَلْ مَا وَجَدَتْهُ يَدُكَ، لِأَنَّ ٱللهَ مَعَكَ. ٧ 7
ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.
وَتَنْزِلُ قُدَّامِي إِلَى ٱلْجِلْجَالِ، وَهُوَذَا أَنَا أَنْزِلُ إِلَيْكَ لِأُصْعِدَ مُحْرَقَاتٍ وَأَذْبَحَ ذَبَائِحَ سَلَامَةٍ. سَبْعَةَ أَيَّامٍ تَلْبَثُ حَتَّى آتِيَ إِلَيْكَ وَأُعَلِّمَكَ مَاذَا تَفْعَلُ». ٨ 8
ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.
وَكَانَ عِنْدَمَا أَدَارَ كَتِفَهُ لِكَيْ يَذْهَبَ مِنْ عِنْدِ صَمُوئِيلَ أَنَّ ٱللهَ أَعْطَاهُ قَلْبًا آخَرَ، وَأَتَتْ جَمِيعُ هَذِهِ ٱلْآيَاتِ فِي ذَلِكَ ٱلْيَوْمِ. ٩ 9
ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು.
وَلَمَّا جَاءُوا إِلَى هُنَاكَ إِلَى جِبْعَةَ، إِذَا بِزُمْرَةٍ مِنَ ٱلْأَنْبِيَاءِ لَقِيَتْهُ، فَحَلَّ عَلَيْهِ رُوحُ ٱللهِ فَتَنَبَّأَ فِي وَسَطِهِمْ. ١٠ 10
೧೦ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.
وَلَمَّا رَآهُ جَمِيعُ ٱلَّذِينَ عَرَفُوهُ مُنْذُ أَمْسِ وَمَا قَبْلَهُ أَنَّهُ يَتَنَبَّأُ مَعَ ٱلْأَنْبِيَاءِ، قَالَ ٱلشَّعْبُ، ٱلْوَاحِدُ لِصَاحِبِهِ: «مَاذَا صَارَ لِٱبْنِ قَيْسٍ؟ أَشَاوُلُ أَيْضًا بَيْنَ ٱلْأَنْبِيَاءِ؟» ١١ 11
೧೧ಅವನು ಪರವಶನಾಗಿ ಮಾತನಾಡುವುದನ್ನು ಅವನ ಪರಿಚಿತರು ಕಂಡು ತಮ್ಮ ತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೋ?” ಎಂದು ಮಾತನಾಡಿಕೊಳ್ಳುತ್ತಿದ್ದರು.
فَأَجَابَ رَجُلٌ مِنْ هُنَاكَ وَقَالَ: «وَمَنْ هُوَ أَبُوهُمْ؟». وَلِذَلِكَ ذَهَبَ مَثَلًا: «أَشَاوُلُ أَيْضًا بَيْنَ ٱلْأَنْبِيَاءِ؟». ١٢ 12
೧೨ಆಗ ಆ ಸ್ಥಳದವನೊಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಸಂಗತಿಯಿಂದ “ಸೌಲನು ಪ್ರವಾದಿಗಳಲ್ಲಿದ್ದಾನೆ” ಎಂಬ ವಿಷಯ ಹುಟ್ಟಿತು.
وَلَمَّا ٱنْتَهَى مِنَ ٱلتَّنَبِّي جَاءَ إِلَى ٱلْمُرْتَفَعَةِ. ١٣ 13
೧೩ಅವನು ಪ್ರವಾದಿಸಿದ ನಂತರ ಬೆಟ್ಟದ ಮೇಲಿದ್ದ ಯಜ್ಞವೇದಿಯ ಬಳಿಗೆ ಬಂದನು.
فَقَالَ عَمُّ شَاوُلَ لَهُ وَلِغُلَامِهِ: «إِلَى أَيْنَ ذَهَبْتُمَا؟» فَقَالَ: «لِكَيْ نُفَتِّشَ عَلَى ٱلْأُتُنِ. وَلَمَّا رَأَيْنَا أَنَّهَا لَمْ تُوجَدْ جِئْنَا إِلَى صَمُوئِيلَ». ١٤ 14
೧೪ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಲು ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದ್ದರಿಂದ ಸಮುವೇಲನ ಬಳಿಗೆ ಹೋದೆವು” ಅಂದನು.
فَقَالَ عَمُّ شَاوُلَ: «أَخْبِرْنِي مَاذَا قَالَ لَكُمَا صَمُوئِيلُ؟». ١٥ 15
೧೫“ಸಮುವೇಲನು ಏನು ಹೇಳಿದನು?” ಎಂದು ಚಿಕ್ಕಪ್ಪನು ಕೇಳಲು
فَقَالَ شَاوُلُ لِعَمِّهِ: «أَخْبَرَنَا بِأَنَّ ٱلْأُتُنَ قَدْ وُجِدَتْ». وَلَكِنَّهُ لَمْ يُخْبِرْهُ بِأَمْرِ ٱلْمَمْلَكَةِ ٱلَّذِي تَكَلَّمَ بِهِ صَمُوئِيلُ. ١٦ 16
೧೬ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.
وَٱسْتَدْعَى صَمُوئِيلُ ٱلشَّعْبَ إِلَى ٱلرَّبِّ إِلَى ٱلْمِصْفَاةِ، ١٧ 17
೧೭ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು.
وَقَالَ لِبَنِي إِسْرَائِيلَ: «هَكَذَا يَقُولُ ٱلرَّبُّ إِلَهُ إِسْرَائِيلَ: إِنِّي أَصْعَدْتُ إِسْرَائِيلَ مِنْ مِصْرَ وَأَنْقَذْتُكُمْ مِنْ يَدِ ٱلْمِصْرِيِّينَ وَمِنْ يَدِ جَمِيعِ ٱلْمَمَالِكِ ٱلَّتِي ضَايَقَتْكُمْ. ١٨ 18
೧೮ಆತನು ಅವರಿಗೆ, ಇಸ್ರಾಯೇಲ್‌ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.
وَأَنْتُمْ قَدْ رَفَضْتُمُ ٱلْيَوْمَ إِلَهَكُمُ ٱلَّذِي هُوَ مُخَلِّصُكُمْ مِنْ جَمِيعِ ٱلَّذِينَ يُسِيئُونَ إِلَيْكُمْ وَيُضَايِقُونَكُمْ، وَقُلْتُمْ لَهُ: بَلْ تَجْعَلُ عَلَيْنَا مَلِكًا. فَٱلْآنَ ٱمْثُلُوا أَمَامَ ٱلرَّبِّ حَسَبَ أَسْبَاطِكُمْ وَأُلُوفِكُمْ». ١٩ 19
೧೯ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.
فَقَدَّمَ صَمُوئِيلُ جَمِيعَ أَسْبَاطِ إِسْرَائِيلَ، فَأُخِذَ سِبْطُ بَنْيَامِينَ. ٢٠ 20
೨೦ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು.
ثُمَّ قَدَّمَ سِبْطَ بَنْيَامِينَ حَسَبَ عَشَائِرِهِ، فَأُخِذَتْ عَشِيرَةُ مَطْرِي، وَأُخِذَ شَاوُلُ بْنُ قَيْسَ. فَفَتَّشُوا عَلَيْهِ فَلَمْ يُوجَدْ. ٢١ 21
೨೧ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.
فَسَأَلُوا أَيْضًا مِنَ ٱلرَّبِّ: «هَلْ يَأْتِي ٱلرَّجُلُ أَيْضًا إِلَى هُنَا؟» فَقَالَ ٱلرَّبُّ: «هُوَذَا قَدِ ٱخْتَبَأَ بَيْنَ ٱلْأَمْتِعَةِ». ٢٢ 22
೨೨ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು.
فَرَكَضُوا وَأَخَذُوهُ مِنْ هُنَاكَ، فَوَقَفَ بَيْنَ ٱلشَّعْبِ، فَكَانَ أَطْوَلَ مِنْ كُلِّ ٱلشَّعْبِ مِنْ كَتِفِهِ فَمَا فَوْقُ. ٢٣ 23
೨೩ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು.
فَقَالَ صَمُوئِيلُ لِجَمِيعِ ٱلشَّعْبِ: «أَرَأَيْتُمُ ٱلَّذِي ٱخْتَارَهُ ٱلرَّبُّ، أَنَّهُ لَيْسَ مِثْلُهُ فِي جَمِيعِ ٱلشَّعْبِ؟» فَهَتَفَ كُلُّ ٱلشَّعْبِ وَقَالُوا: «لِيَحْيَ ٱلْمَلِكُ!». ٢٤ 24
೨೪ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.
فَكَلَّمَ صَمُوئِيلُ ٱلشَّعْبَ بِقَضَاءِ ٱلْمَمْلَكَةِ، وَكَتَبَهُ فِي ٱلسِّفْرِ وَوَضَعَهُ أَمَامَ ٱلرَّبِّ. ثُمَّ أَطْلَقَ صَمُوئِيلُ جَمِيعَ ٱلشَّعْبِ كُلَّ وَاحِدٍ إِلَى بَيْتِهِ. ٢٥ 25
೨೫ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.
وَشَاوُلُ أَيْضًا ذَهَبَ إِلَى بَيْتِهِ إِلَى جِبْعَةَ، وَذَهَبَ مَعَهُ ٱلْجَمَاعَةُ ٱلَّتِي مَسَّ ٱللهُ قَلْبَهَا. ٢٦ 26
೨೬ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.
وَأَمَّا بَنُو بَلِيَّعَالَ فَقَالُوا: «كَيْفَ يُخَلِّصُنَا هَذَا؟». فَٱحْتَقَرُوهُ وَلَمْ يُقَدِّمُوا لَهُ هَدِيَّةً. فَكَانَ كَأَصَمَّ. ٢٧ 27
೨೭ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.

< صَمُوئِيلَ ٱلْأَوَّلُ 10 >