< صَمُوئِيلَ ٱلْأَوَّلُ 10 >

فَأَخَذَ صَمُوئِيلُ قِنِّينَةَ ٱلدُّهْنِ وَصَبَّ عَلَى رَأْسِهِ وَقَبَّلَهُ وَقَالَ: «أَلَيْسَ لِأَنَّ ٱلرَّبَّ قَدْ مَسَحَكَ عَلَى مِيرَاثِهِ رَئِيسًا؟ ١ 1
ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.
فِي ذَهَابِكَ ٱلْيَوْمَ مِنْ عِنْدِي تُصَادِفُ رَجُلَيْنِ عِنْدَ قَبْرِ رَاحِيلَ، فِي تُخْمِ بَنْيَامِينَ فِي صَلْصَحَ، فَيَقُولَانِ لَكَ: قَدْ وُجِدَتِ ٱلْأُتُنُ، ٱلَّتِي ذَهَبْتَ تُفَتِّشُ عَلَيْهَا، وَهُوَذَا أَبُوكَ قَدْ تَرَكَ أَمْرَ ٱلْأُتُنِ وَٱهْتَمَّ بِكُمَا قَائِلًا: مَاذَا أَصْنَعُ لِٱبْنِي؟ ٢ 2
ನೀನು ಈ ಹೊತ್ತು ನನ್ನನ್ನು ಬಿಟ್ಟುಹೋದಾಗ, ಬೆನ್ಯಾಮೀನ್ಯರ ಮೇರೆಯಾದ ಚೆಲ್ಚಹಿನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವೆ. ಅವರು ನಿನಗೆ, ‘ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು, ನಿನಗೋಸ್ಕರ ಚಿಂತೆಪಟ್ಟು, ತನ್ನ ಮಗನಿಗೋಸ್ಕರ ಏನು ಮಾಡಲಿ? ಎನ್ನುತ್ತಾನೆ,’ ಎಂದು ಹೇಳುವರು.
وَتَعْدُو مِنْ هُنَاكَ ذَاهِبًا حَتَّى تَأْتِيَ إِلَى بَلُّوطَةِ تَابُورَ، فَيُصَادِفُكَ هُنَاكَ ثَلَاثَةُ رِجَالٍ صَاعِدُونَ إِلَى ٱللهِ إِلَى بَيْتِ إِيلٍ، وَاحِدٌ حَامِلٌ ثَلَاثَةَ جِدَاءٍ، وَوَاحِدٌ حَامِلٌ ثَلَاثَةَ أَرْغِفَةِ خُبْزٍ، وَوَاحِدٌ حَامِلٌ زِقَّ خَمْرٍ. ٣ 3
“ನೀನು ಆ ಸ್ಥಳವನ್ನು ಬಿಟ್ಟು, ಆ ಕಡೆ ದಾಟಿ, ತಾಬೋರಿನ ಹತ್ತಿರವಿರುವ ಅಲ್ಲೋನ್ ವೃಕ್ಷದ ಬಳಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವೆ.
فَيُسَلِّمُونَ عَلَيْكَ وَيُعْطُونَكَ رَغِيفَيْ خُبْزٍ، فَتَأْخُذُ مِنْ يَدِهِمْ. ٤ 4
ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ, ನಿನಗೆ ಎರಡು ರೊಟ್ಟಿಗಳನ್ನು ಕೊಡುವರು. ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವೆ.
بَعْدَ ذَلِكَ تَأْتِي إِلَى جِبْعَةِ ٱللهِ حَيْثُ أَنْصَابُ ٱلْفِلِسْطِينِيِّينَ. وَيَكُونُ عِنْدَ مَجِيئِكَ إِلَى هُنَاكَ إِلَى ٱلْمَدِينَةِ أَنَّكَ تُصَادِفُ زُمْرَةً مِنَ ٱلْأَنْبِيَاءِ نَازِلِينَ مِنَ ٱلْمُرْتَفَعَةِ وَأَمَامَهُمْ رَبَابٌ وَدُفٌّ وَنَايٌ وَعُودٌ وَهُمْ يَتَنَبَّأُونَ. ٥ 5
“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.
فَيَحِلُّ عَلَيْكَ رُوحُ ٱلرَّبِّ فَتَتَنَبَّأُ مَعَهُمْ وَتَتَحَوَّلُ إِلَى رَجُلٍ آخَرَ. ٦ 6
ಆಗ ಯೆಹೋವ ದೇವರ ಆತ್ಮವು ನಿನ್ನ ಮೇಲೆ ಬರುವುದು. ನೀನು ಅವರ ಸಂಗಡ ಪ್ರವಾದಿಸುವೆ, ಬೇರೆ ಮನುಷ್ಯನಾಗಿ ಮಾರ್ಪಡುವೆ.
وَإِذَا أَتَتْ هَذِهِ ٱلْآيَاتُ عَلَيْكَ، فَٱفْعَلْ مَا وَجَدَتْهُ يَدُكَ، لِأَنَّ ٱللهَ مَعَكَ. ٧ 7
ಈ ಗುರುತುಗಳೆಲ್ಲಾ ನಿನಗೆ ಸಂಭವಿಸಿದಾಗ, ದೇವರು ನಿನ್ನ ಸಂಗಡ ಇರುವುದರಿಂದ ನೀನು ಆ ವೇಳೆಯಲ್ಲಿ ನಿನಗೆ ಕೈಗೂಡಿದ ಹಾಗೆ ಮಾಡು.
وَتَنْزِلُ قُدَّامِي إِلَى ٱلْجِلْجَالِ، وَهُوَذَا أَنَا أَنْزِلُ إِلَيْكَ لِأُصْعِدَ مُحْرَقَاتٍ وَأَذْبَحَ ذَبَائِحَ سَلَامَةٍ. سَبْعَةَ أَيَّامٍ تَلْبَثُ حَتَّى آتِيَ إِلَيْكَ وَأُعَلِّمَكَ مَاذَا تَفْعَلُ». ٨ 8
“ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದು ಹೋಗಬೇಕು. ನಾನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು,” ಎಂದನು.
وَكَانَ عِنْدَمَا أَدَارَ كَتِفَهُ لِكَيْ يَذْهَبَ مِنْ عِنْدِ صَمُوئِيلَ أَنَّ ٱللهَ أَعْطَاهُ قَلْبًا آخَرَ، وَأَتَتْ جَمِيعُ هَذِهِ ٱلْآيَاتِ فِي ذَلِكَ ٱلْيَوْمِ. ٩ 9
ಅವನು ಸಮುಯೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ, ದೇವರು ಅವನಿಗೆ ಹೊಸ ಹೃದಯವನ್ನು ಕೊಟ್ಟರು. ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.
وَلَمَّا جَاءُوا إِلَى هُنَاكَ إِلَى جِبْعَةَ، إِذَا بِزُمْرَةٍ مِنَ ٱلْأَنْبِيَاءِ لَقِيَتْهُ، فَحَلَّ عَلَيْهِ رُوحُ ٱللهِ فَتَنَبَّأَ فِي وَسَطِهِمْ. ١٠ 10
ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು.
وَلَمَّا رَآهُ جَمِيعُ ٱلَّذِينَ عَرَفُوهُ مُنْذُ أَمْسِ وَمَا قَبْلَهُ أَنَّهُ يَتَنَبَّأُ مَعَ ٱلْأَنْبِيَاءِ، قَالَ ٱلشَّعْبُ، ٱلْوَاحِدُ لِصَاحِبِهِ: «مَاذَا صَارَ لِٱبْنِ قَيْسٍ؟ أَشَاوُلُ أَيْضًا بَيْنَ ٱلْأَنْبِيَاءِ؟» ١١ 11
ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು, ಅವನು ಪ್ರವಾದಿಗಳ ಸಂಗಡವಿದ್ದು ಪ್ರವಾದಿಸುವುದನ್ನು ಕಂಡಾಗ, ಅವರು ಒಬ್ಬರ ಸಂಗಡ ಒಬ್ಬರು, “ಕೀಷನ ಮಗನಿಗೆ ಆದದ್ದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂದರು.
فَأَجَابَ رَجُلٌ مِنْ هُنَاكَ وَقَالَ: «وَمَنْ هُوَ أَبُوهُمْ؟». وَلِذَلِكَ ذَهَبَ مَثَلًا: «أَشَاوُلُ أَيْضًا بَيْنَ ٱلْأَنْبِيَاءِ؟». ١٢ 12
ಅದಕ್ಕೆ ಅಲ್ಲಿಯವನೊಬ್ಬನು, “ಹಾಗಾದರೆ ಅವರ ನಾಯಕರು ಯಾರು?” ಎಂದನು. ಆದ್ದರಿಂದ, “ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂಬ ಗಾದೆ ಉಂಟಾಯಿತು.
وَلَمَّا ٱنْتَهَى مِنَ ٱلتَّنَبِّي جَاءَ إِلَى ٱلْمُرْتَفَعَةِ. ١٣ 13
ಅವನು ಪ್ರವಾದಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.
فَقَالَ عَمُّ شَاوُلَ لَهُ وَلِغُلَامِهِ: «إِلَى أَيْنَ ذَهَبْتُمَا؟» فَقَالَ: «لِكَيْ نُفَتِّشَ عَلَى ٱلْأُتُنِ. وَلَمَّا رَأَيْنَا أَنَّهَا لَمْ تُوجَدْ جِئْنَا إِلَى صَمُوئِيلَ». ١٤ 14
ಆಗ ಸೌಲನ ಚಿಕ್ಕಪ್ಪನು, “ನೀವು ಎಲ್ಲಿಗೆ ಹೋದಿರಿ?” ಎಂದು ಅವನನ್ನೂ, ಅವನ ಸೇವಕನನ್ನೂ ಕೇಳಿದನು. ಅದಕ್ಕವನು, “ಕತ್ತೆಗಳನ್ನು ಹುಡುಕುವುದಕ್ಕೆ, ಅವುಗಳನ್ನು ಕಾಣದೆ ಹೋದುದರಿಂದ ಸಮುಯೇಲನ ಬಳಿಗೆ ಹೋದೆವು,” ಎಂದನು.
فَقَالَ عَمُّ شَاوُلَ: «أَخْبِرْنِي مَاذَا قَالَ لَكُمَا صَمُوئِيلُ؟». ١٥ 15
ಅದಕ್ಕೆ ಸೌಲನ ಚಿಕ್ಕಪ್ಪನು, “ಸಮುಯೇಲನು ನಿನಗೆ ಏನು ಹೇಳಿದನು? ದಯಮಾಡಿ ನನಗೆ ತಿಳಿಸು,” ಎಂದನು.
فَقَالَ شَاوُلُ لِعَمِّهِ: «أَخْبَرَنَا بِأَنَّ ٱلْأُتُنَ قَدْ وُجِدَتْ». وَلَكِنَّهُ لَمْ يُخْبِرْهُ بِأَمْرِ ٱلْمَمْلَكَةِ ٱلَّذِي تَكَلَّمَ بِهِ صَمُوئِيلُ. ١٦ 16
ಸೌಲನು ತನ್ನ ಚಿಕ್ಕಪ್ಪನಿಗೆ, “ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು,” ಎಂದನು. ಆದರೆ ಅವನು ಸಮುಯೇಲನು ಹೇಳಿದ ರಾಜ್ಯಭಾರದ ಮಾತನ್ನು ಅವನಿಗೆ ತಿಳಿಸಲಿಲ್ಲ.
وَٱسْتَدْعَى صَمُوئِيلُ ٱلشَّعْبَ إِلَى ٱلرَّبِّ إِلَى ٱلْمِصْفَاةِ، ١٧ 17
ಸಮುಯೇಲನು ಇಸ್ರಾಯೇಲರನ್ನು ಮಿಚ್ಪೆಯಲ್ಲಿ ಯೆಹೋವ ದೇವರ ಬಳಿಗೆ ಒಟ್ಟಾಗಿ ಕರೆದು ಅವರಿಗೆ,
وَقَالَ لِبَنِي إِسْرَائِيلَ: «هَكَذَا يَقُولُ ٱلرَّبُّ إِلَهُ إِسْرَائِيلَ: إِنِّي أَصْعَدْتُ إِسْرَائِيلَ مِنْ مِصْرَ وَأَنْقَذْتُكُمْ مِنْ يَدِ ٱلْمِصْرِيِّينَ وَمِنْ يَدِ جَمِيعِ ٱلْمَمَالِكِ ٱلَّتِي ضَايَقَتْكُمْ. ١٨ 18
“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮನ್ನು ಈಜಿಪ್ಟಿನವರ ಕೈಯಿಂದಲೂ, ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.’
وَأَنْتُمْ قَدْ رَفَضْتُمُ ٱلْيَوْمَ إِلَهَكُمُ ٱلَّذِي هُوَ مُخَلِّصُكُمْ مِنْ جَمِيعِ ٱلَّذِينَ يُسِيئُونَ إِلَيْكُمْ وَيُضَايِقُونَكُمْ، وَقُلْتُمْ لَهُ: بَلْ تَجْعَلُ عَلَيْنَا مَلِكًا. فَٱلْآنَ ٱمْثُلُوا أَمَامَ ٱلرَّبِّ حَسَبَ أَسْبَاطِكُمْ وَأُلُوفِكُمْ». ١٩ 19
ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಅವರಿಗೆ, ‘ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು,’ ಎಂದು ಹೇಳಿದಿರಿ. ಆದ್ದರಿಂದ ಈಗ ಯೆಹೋವ ದೇವರ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ, ನಿಮ್ಮ ಕುಲಗಳ ಪ್ರಕಾರವಾಗಿಯೂ ಬನ್ನಿರಿ,” ಎಂದನು.
فَقَدَّمَ صَمُوئِيلُ جَمِيعَ أَسْبَاطِ إِسْرَائِيلَ، فَأُخِذَ سِبْطُ بَنْيَامِينَ. ٢٠ 20
ಸಮುಯೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸಮೀಪಕ್ಕೆ ಬರಮಾಡಿದಾಗ, ಬೆನ್ಯಾಮೀನನ ಗೋತ್ರಕ್ಕೆ ಚೀಟು ಬಿದ್ದಿತು.
ثُمَّ قَدَّمَ سِبْطَ بَنْيَامِينَ حَسَبَ عَشَائِرِهِ، فَأُخِذَتْ عَشِيرَةُ مَطْرِي، وَأُخِذَ شَاوُلُ بْنُ قَيْسَ. فَفَتَّشُوا عَلَيْهِ فَلَمْ يُوجَدْ. ٢١ 21
ಅವನು ಬೆನ್ಯಾಮೀನನ ಗೋತ್ರವನ್ನು ಅದರ ಕುಲಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ, ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಆದರೆ ಅವನನ್ನು ಹುಡುಕುವಾಗ, ಅವನು ಸಿಕ್ಕಲಿಲ್ಲ.
فَسَأَلُوا أَيْضًا مِنَ ٱلرَّبِّ: «هَلْ يَأْتِي ٱلرَّجُلُ أَيْضًا إِلَى هُنَا؟» فَقَالَ ٱلرَّبُّ: «هُوَذَا قَدِ ٱخْتَبَأَ بَيْنَ ٱلْأَمْتِعَةِ». ٢٢ 22
ಆದ್ದರಿಂದ ಅವರು, “ಅವನು ಇನ್ನು ಇಲ್ಲಿ ಬರುವನೋ?” ಎಂದು ಯೆಹೋವ ದೇವರನ್ನು ವಿಚಾರಿಸಿದರು. ಯೆಹೋವ ದೇವರು, “ಇಗೋ, ಅವನು ಸಲಕರಣೆಗಳಲ್ಲಿ ಅಡಗಿಕೊಂಡಿದ್ದಾನೆ,” ಎಂದು ಹೇಳಿದರು.
فَرَكَضُوا وَأَخَذُوهُ مِنْ هُنَاكَ، فَوَقَفَ بَيْنَ ٱلشَّعْبِ، فَكَانَ أَطْوَلَ مِنْ كُلِّ ٱلشَّعْبِ مِنْ كَتِفِهِ فَمَا فَوْقُ. ٢٣ 23
ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.
فَقَالَ صَمُوئِيلُ لِجَمِيعِ ٱلشَّعْبِ: «أَرَأَيْتُمُ ٱلَّذِي ٱخْتَارَهُ ٱلرَّبُّ، أَنَّهُ لَيْسَ مِثْلُهُ فِي جَمِيعِ ٱلشَّعْبِ؟» فَهَتَفَ كُلُّ ٱلشَّعْبِ وَقَالُوا: «لِيَحْيَ ٱلْمَلِكُ!». ٢٤ 24
ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು.
فَكَلَّمَ صَمُوئِيلُ ٱلشَّعْبَ بِقَضَاءِ ٱلْمَمْلَكَةِ، وَكَتَبَهُ فِي ٱلسِّفْرِ وَوَضَعَهُ أَمَامَ ٱلرَّبِّ. ثُمَّ أَطْلَقَ صَمُوئِيلُ جَمِيعَ ٱلشَّعْبِ كُلَّ وَاحِدٍ إِلَى بَيْتِهِ. ٢٥ 25
ಸಮುಯೇಲನು ರಾಜ್ಯದ ಪದ್ಧತಿಯನ್ನು ಜನರಿಗೆ ಹೇಳಿಕೊಟ್ಟು, ಒಂದು ಪುಸ್ತಕದಲ್ಲಿ ಬರೆದು, ಯೆಹೋವ ದೇವರ ಮುಂದೆ ಇಟ್ಟನು. ಆಗ ಸಮುಯೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
وَشَاوُلُ أَيْضًا ذَهَبَ إِلَى بَيْتِهِ إِلَى جِبْعَةَ، وَذَهَبَ مَعَهُ ٱلْجَمَاعَةُ ٱلَّتِي مَسَّ ٱللهُ قَلْبَهَا. ٢٦ 26
ಸೌಲನು ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದರೋ, ಅವರ ಒಂದು ಗುಂಪು ಅವನ ಸಂಗಡ ಹೋಯಿತು.
وَأَمَّا بَنُو بَلِيَّعَالَ فَقَالُوا: «كَيْفَ يُخَلِّصُنَا هَذَا؟». فَٱحْتَقَرُوهُ وَلَمْ يُقَدِّمُوا لَهُ هَدِيَّةً. فَكَانَ كَأَصَمَّ. ٢٧ 27
ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.

< صَمُوئِيلَ ٱلْأَوَّلُ 10 >