< صَمُوئِيلَ ٱلْأَوَّلُ 11 >

وَصَعِدَ نَاحَاشُ ٱلْعَمُّونِيُّ وَنَزَلَ عَلَى يَابِيشِ جِلْعَادَ. فَقَالَ جَمِيعُ أَهْلِ يَابِيشَ لِنَاحَاشَ: «ٱقْطَعْ لَنَا عَهْدًا فَنُسْتَعْبَدَ لَكَ». ١ 1
ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು.
فَقَالَ لَهُمْ نَاحَاشُ ٱلْعَمُّونِيُّ: «بِهَذَا أَقْطَعُ لَكُمْ. بِتَقْوِيرِ كُلِّ عَيْنٍ يُمْنَى لَكُمْ وَجَعْلِ ذَلِكَ عَارًا عَلَى جَمِيعِ إِسْرَائِيلَ». ٢ 2
ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು.
فَقَالَ لَهُ شُيُوخُ يَابِيشَ: «ٱتْرُكْنَا سَبْعَةَ أَيَّامٍ فَنُرْسِلَ رُسُلًا إِلَى جَمِيعِ تُخُومِ إِسْرَائِيلَ. فَإِنْ لَمْ يُوجَدْ مَنْ يُخَلِّصُنَا نَخْرُجْ إِلَيْكَ». ٣ 3
ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ, “ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಅವಕಾಶವನ್ನು ಕೊಡು. ನಮ್ಮನ್ನು ರಕ್ಷಿಸುವವರು ಯಾರೂ ಇಲ್ಲದೆ ಹೋದರೆ, ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು,” ಎಂದರು.
فَجَاءَ ٱلرُّسُلُ إِلَى جِبْعَةِ شَاوُلَ وَتَكَلَّمُوا بِهَذَا ٱلْكَلَامِ فِي آذَانِ ٱلشَّعْبِ، فَرَفَعَ كُلُّ ٱلشَّعْبِ أَصْوَاتَهُمْ وَبَكَوْا. ٤ 4
ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.
وَإِذَا بِشَاوُلَ آتٍ وَرَاءَ ٱلْبَقَرِ مِنَ ٱلْحَقْلِ، فَقَالَ شَاوُلُ: «مَا بَالُ ٱلشَّعْبِ يَبْكُونَ؟» فَقَصُّوا عَلَيْهِ كَلَامَ أَهْلِ يَابِيشَ. ٥ 5
ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು, “ಜನರು ಅಳುವುದೇಕೆ?” ಎಂದು ಕೇಳಿದನು. ಅವರು ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
فَحَلَّ رُوحُ ٱللهِ عَلَى شَاوُلَ عِنْدَمَا سَمِعَ هَذَا ٱلْكَلَامَ وَحَمِيَ غَضَبُهُ جِدًّا. ٦ 6
ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,
فَأَخَذَ فَدَّانَ بَقَرٍ وَقَطَّعَهُ، وَأَرْسَلَ إِلَى كُلِّ تُخُومِ إِسْرَائِيلَ بِيَدِ ٱلرُّسُلِ قَائِلًا: «مَنْ لَا يَخْرُجُ وَرَاءَ شَاوُلَ وَوَرَاءَ صَمُوئِيلَ، فَهَكَذَا يُفْعَلُ بِبَقَرِهِ». فَوَقَعَ رُعْبُ ٱلرَّبِّ عَلَى ٱلشَّعْبِ، فَخَرَجُوا كَرَجُلٍ وَاحِدٍ. ٧ 7
ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು.
وَعَدَّهُمْ فِي بَازَقَ، فَكَانَ بَنُو إِسْرَائِيلَ ثَلَاثَ مِئَةِ أَلْفٍ، وَرِجَالُ يَهُوذَا ثَلَاثِينَ أَلْفًا. ٨ 8
ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ, ಇಸ್ರಾಯೇಲರು ಮೂರು ಲಕ್ಷ ಜನರೂ, ಯೆಹೂದ್ಯರಲ್ಲಿ ಮೂವತ್ತು ಸಾವಿರ ಜನರೂ ಆಗಿದ್ದರು.
وَقَالُوا لِلرُّسُلِ ٱلَّذِينَ جَاءُوا: «هَكَذَا تَقُولُونَ لِأَهْلِ يَابِيشَ جِلْعَادَ: غَدًا عِنْدَمَا تَحْمَى ٱلشَّمْسُ يَكُونُ لَكُمْ خَلَاصٌ». فَأَتَى ٱلرُّسُلُ وَأَخْبَرُوا أَهْلَ يَابِيشَ فَفَرِحُوا. ٩ 9
ಆಗ ಅವರು ಬಂದ ದೂತರಿಗೆ, “ನೀವು ಗಿಲ್ಯಾದಿನಲ್ಲಿರುವ ಯಾಬೇಷಿನ ಜನರಿಗೆ, ‘ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವುದು,’ ಎಂದು ಹೇಳಿರಿ,” ಎಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ, ಅವರು ಸಂತೋಷಪಟ್ಟರು.
وَقَالَ أَهْلُ يَابِيشَ: «غَدًا نَخْرُجُ إِلَيْكُمْ فَتَفْعَلُونَ بِنَا حَسَبَ كُلِّ مَا يَحْسُنُ فِي أَعْيُنِكُمْ». ١٠ 10
ತರುವಾಯ ಯಾಬೇಷಿನ ಜನರು ನಹಾಷನಿಗೆ, “ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನೀನು ನಿನಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡು,” ಎಂದರು.
وَكَانَ فِي ٱلْغَدِ أَنَّ شَاوُلَ جَعَلَ ٱلشَّعْبَ ثَلَاثَ فِرَقٍ، وَدَخَلُوا فِي وَسَطِ ٱلْمَحَلَّةِ عِنْدَ سَحَرِ ٱلصُّبْحِ وَضَرَبُوا ٱلْعَمُّونِيِّينَ حَتَّى حَمِيَ ٱلنَّهَارُ. وَٱلَّذِينَ بَقُوا تَشَتَّتُوا حَتَّى لَمْ يَبْقَ مِنْهُمُ ٱثْنَانِ مَعًا. ١١ 11
ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ.
وَقَالَ ٱلشَّعْبُ لِصَمُوئِيلَ: «مَنْ هُمُ ٱلَّذِينَ يَقُولُونَ: هَلْ شَاوُلُ يَمْلِكُ عَلَيْنَا؟ اِيْتُوا بِٱلرِّجَالِ فَنَقْتُلَهُمْ». ١٢ 12
ಆಗ ಜನರು ಸಮುಯೇಲನಿಗೆ, “ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರ‍್ಯಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ, ಅವರನ್ನು ಕೊಂದು ಹಾಕುತ್ತೇವೆ,” ಎಂದರು.
فَقَالَ شَاوُلُ: «لَا يُقْتَلْ أَحَدٌ فِي هَذَا ٱلْيَوْمِ، لِأَنَّهُ فِي هَذَا ٱلْيَوْمِ صَنَعَ ٱلرَّبُّ خَلَاصًا فِي إِسْرَائِيلَ». ١٣ 13
ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು.
وَقَالَ صَمُوئِيلُ لِلشَّعْبِ: «هَلُمُّوا نَذْهَبْ إِلَى ٱلْجِلْجَالِ وَنُجَدِّدْ هُنَاكَ ٱلْمَمْلَكَةَ». ١٤ 14
ಆಗ ಸಮುಯೇಲನು ಜನರಿಗೆ, “ನಾವು ಗಿಲ್ಗಾಲಿಗೆ ಹೋಗಿ, ಅಲ್ಲಿ ರಾಜ್ಯತ್ವವನ್ನು ದೃಢೀಕರಿಸೋಣ ಬನ್ನಿರಿ,” ಎಂದನು.
فَذَهَبَ كُلُّ ٱلشَّعْبِ إِلَى ٱلْجِلْجَالِ وَمَلَّكُوا هُنَاكَ شَاوُلَ أَمَامَ ٱلرَّبِّ فِي ٱلْجِلْجَالِ، وَذَبَحُوا هُنَاكَ ذَبَائِحَ سَلَامَةٍ أَمَامَ ٱلرَّبِّ. وَفَرِحَ هُنَاكَ شَاوُلُ وَجَمِيعُ رِجَالِ إِسْرَائِيلَ جِدًّا. ١٥ 15
ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.

< صَمُوئِيلَ ٱلْأَوَّلُ 11 >