< صَمُوئِيلَ ٱلْأَوَّلُ 26 >

ثُمَّ جَاءَ ٱلزِّيفِيُّونَ إِلَى شَاوُلَ إِلَى جِبْعَةَ قَائِلِينَ: «أَلَيْسَ دَاوُدُ مُخْتَفِيًا فِي تَلِّ حَخِيلَةَ ٱلَّذِي مُقَابِلَ ٱلْقَفْرِ؟» ١ 1
ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವುದು ನಿನಗೆ ಗೊತ್ತಿಲ್ಲವೋ?” ಅಂದರು.
فَقَامَ شَاوُلُ وَنَزَلَ إِلَى بَرِّيَّةِ زِيفٍ وَمَعَهُ ثَلَاثَةُ آلَافِ رَجُلٍ مُنْتَخَبِي إِسْرَائِيلَ لِكَيْ يُفَتِّشَ عَلَى دَاوُدَ فِي بَرِّيَّةِ زِيفٍ. ٢ 2
ಆಗ ಸೌಲನು ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ ಅದರ ಮೂಡಣದಿಕ್ಕಿನಲ್ಲಿ,
وَنَزَلَ شَاوُلُ فِي تَلِّ حَخِيلَةَ ٱلَّذِي مُقَابِلَ ٱلْقَفْرِ عَلَى ٱلطَّرِيقِ. وَكَانَ دَاوُدُ مُقِيمًا فِي ٱلْبَرِّيَّةِ. فَلَمَّا رَأَى أَنَّ شَاوُلَ قَدْ جَاءَ وَرَاءَهُ إِلَى ٱلْبَرِّيَّةِ ٣ 3
ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯಮಾಡಿಕೊಂಡರು. ಸೌಲನು ತನ್ನನ್ನು ಹಿಡಿಯುವುದಕ್ಕೋಸ್ಕರ ಅರಣ್ಯಕ್ಕೆ ಬಂದಿದ್ದಾನೆಂಬ ವರ್ತಮಾನವು ಅಲ್ಲಿಯೇ ಇದ್ದ ದಾವೀದನಿಗೆ ತಲುಪಲು
أَرْسَلَ دَاوُدُ جَوَاسِيسَ وَعَلِمَ بِٱلْيَقِينِ أَنَّ شَاوُلَ قَدْ جَاءَ. ٤ 4
ಅವನು ಕೂಡಲೇ ಗೂಢಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಗೊತ್ತುಮಾಡಿಕೊಂಡನು.
فَقَامَ دَاوُدُ وَجَاءَ إِلَى ٱلْمَكَانِ ٱلَّذِي نَزَلَ فِيهِ شَاوُلُ، وَنَظَرَ دَاوُدُ ٱلْمَكَانَ ٱلَّذِي ٱضْطَجَعَ فِيهِ شَاوُلُ وَأَبْنَيْرُ بْنُ نَيْرٍ رَئِيسُ جَيْشِهِ. وَكَانَ شَاوُلُ مُضْطَجِعًا عِنْدَ ٱلْمِتْرَاسِ وَٱلشَّعْبُ نُزُولٌ حَوَالَيْهِ. ٥ 5
ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ, ಸೌಲನೂ, ನೇರನ ಮಗನಾದ ಅವನ ಸೇನಾಪತಿ ಅಬ್ನೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ರಥಗಳನ್ನು ಬಿಟ್ಟಿರುವ ಸ್ಥಳಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು.
فَأَجَابَ دَاوُدُ وَكَلَّمَ أَخِيمَالِكَ ٱلْحِثِّيَّ وَأَبِيشَايَ ٱبْنَ صُرُوِيَّةَ أَخَا يُوآبَ قَائِلًا: «مَنْ يَنْزِلُ مَعِي إِلَى شَاوُلَ إِلَى ٱلْمَحَلَّةِ؟» فَقَالَ أَبِيشَايُ: «أَنَا أَنْزِلُ مَعَكَ». ٦ 6
ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.
فَجَاءَ دَاوُدُ وَأَبِيشَايُ إِلَى ٱلشَّعْبِ لَيْلًا وَإِذَا بِشَاوُلَ مُضْطَجعٌ نَائِمٌ عِنْدَ ٱلْمِتْرَاسِ، وَرُمْحُهُ مَرْكُوزٌ فِي ٱلْأَرْضِ عِنْدَ رَأْسِهِ، وَأَبْنَيْرُ وَٱلشَّعْبُ مُضْطَجِعُونَ حَوَالَيْهِ. ٧ 7
ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು.
فَقَالَ أَبِيشَايُ لِدَاوُدَ: «قَدْ حَبَسَ ٱللهُ ٱلْيَوْمَ عَدُوَّكَ فِي يَدِكَ. فَدَعْنِيَ ٱلْآنَ أَضْرِبْهُ بِٱلرُّمْحِ إِلَى ٱلْأَرْضِ دَفْعَةً وَاحِدَةً وَلَا أُثَنِّي عَلَيْهِ». ٨ 8
ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.
فَقَالَ دَاوُدُ لِأَبِيشَايَ: «لَا تُهْلِكْهُ، فَمَنِ ٱلَّذِي يَمُدُّ يَدَهُ إِلَى مَسِيحِ ٱلرَّبِّ وَيَتَبَرَّأُ؟» ٩ 9
ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.
وَقَالَ دَاوُدُ: «حَيٌّ هُوَ ٱلرَّبُّ، إِنَّ ٱلرَّبَّ سَوْفَ يَضْرِبُهُ، أَوْ يَأْتِي يَوْمُهُ فَيَمُوتُ، أَوْ يَنْزِلُ إِلَى ٱلْحَرْبِ وَيَهْلِكُ. ١٠ 10
೧೦ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.
حَاشَا لِي مِنْ قِبَلِ ٱلرَّبِّ أَنْ أَمُدَّ يَدِي إِلَى مَسِيحِ ٱلرَّبِّ! وَٱلْآنَ فَخُذِ ٱلرُّمْحَ ٱلَّذِي عِنْدَ رَأْسِهِ وَكُوزَ ٱلْمَاءِ وَهَلُمَّ». ١١ 11
೧೧ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು, ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ” ಎಂದು ಹೇಳಿ
فَأَخَذَ دَاوُدُ ٱلرُّمْحَ وَكُوزَ ٱلْمَاءِ مِنْ عِنْدِ رَأْسِ شَاوُلَ وَذَهَبَا، وَلَمْ يَرَ وَلَا عَلِمَ وَلَا ٱنْتَبَهَ أَحَدٌ لِأَنَّهُمْ جَمِيعًا كَانُوا نِيَامًا، لِأَنَّ سُبَاتَ ٱلرَّبِّ وَقَعَ عَلَيْهِمْ. ١٢ 12
೧೨ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.
وَعَبَرَ دَاوُدُ إِلَى ٱلْعَبْرِ وَوَقَفَ عَلَى رَأْسِ ٱلْجَبَلِ عَنْ بُعْدٍ، وَٱلْمَسَافَةُ بَيْنَهُمْ كَبِيرَةٌ. ١٣ 13
೧೩ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು,
وَنَادَى دَاوُدُ ٱلشَّعْبَ وَأَبْنَيْرَ بْنَ نَيْرٍ قَائِلًا: «أَمَا تُجِيبُ يَا أَبْنَيْرُ؟» فَأَجَابَ أَبْنَيْرُ وَقَالَ: «مَنْ أَنْتَ ٱلَّذِي يُنَادِي ٱلْمَلِكَ؟» ١٤ 14
೧೪“ಅಬ್ನೇರನೇ ಕಿವಿಗೊಡುವುದಿಲ್ಲವೋ?” ಎಂದು ನೇರನ ಮಗನಾದ ಅವನಿಗೂ, ಸೈನಿಕರಿಗೂ ಕೇಳಿಸುವಂತೆ ಕೂಗಿದನು. ಅಬ್ನೇರನು, “ಅರಸನನ್ನು ಕೂಗುವ ನೀನಾರು?” ಎಂದು ಕೇಳಿದನು.
فَقَالَ دَاوُدُ لِأَبْنَيْرَ: «أَمَا أَنْتَ رَجُلٌ؟ وَمَنْ مِثْلُكَ فِي إِسْرَائِيلَ؟ فَلِمَاذَا لَمْ تَحْرُسْ سَيِّدَكَ ٱلْمَلِكَ؟ لِأَنَّهُ قَدْ جَاءَ وَاحِدٌ مِنَ ٱلشَّعْبِ لِكَيْ يُهْلِكَ ٱلْمَلِكَ سَيِّدَكَ. ١٥ 15
೧೫ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೋ? ಇಸ್ರಾಯೇಲರಲ್ಲಿ ನಿನಗೆ ಸಮಾನನಾದವನು ಯಾರು? ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ. ಜನರಲ್ಲೊಬ್ಬನು ಒಳಕ್ಕೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.
لَيْسَ حَسَنًا هَذَا ٱلْأَمْرُ ٱلَّذِي عَمِلْتَ. حَيٌّ هُوَ ٱلرَّبُّ، إِنَّكُمْ أَبْنَاءُ ٱلْمَوْتِ أَنْتُمْ، لِأَنَّكُمْ لَمْ تُحَافِظُوا عَلَى سَيِّدِكُمْ، عَلَى مَسِيحِ ٱلرَّبِّ. فَٱنْظُرِ ٱلْآنَ أَيْنَ هُوَ رُمْحُ ٱلْمَلِكِ وَكُوزُ ٱلْمَاءِ ٱلَّذِي كَانَ عِنْدَ رَأْسِهِ». ١٦ 16
೧೬ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು.
وَعَرَفَ شَاوُلُ صَوْتَ دَاوُدَ فَقَالَ: «أَهَذَا هُوَ صَوْتُكَ يَا ٱبْنِي دَاوُدُ؟» فَقَالَ دَاوُدُ: «إِنَّهُ صَوْتِي يَاسَيِّدِي ٱلْمَلِكَ». ١٧ 17
೧೭ಸೌಲನು ದಾವೀದನ ಸ್ವರದ ಗುರುತು ಹಿಡಿದು ಅವನನ್ನು, “ದಾವೀದನೇ ನನ್ನ ಮಗನೇ, ಇದು ನಿನ್ನ ಸ್ವರವೋ” ಎಂದು ಕೇಳಲು ಅವನು, “ಅರಸನೇ, ನನ್ನ ಒಡೆಯನೇ ಹೌದು, ನನ್ನ ಸ್ವರವೇ,
ثُمَّ قَالَ: «لِمَاذَا سَيِّدِي يَسْعَى وَرَاءَ عَبْدِهِ؟ لِأَنِّي مَاذَا عَمِلْتُ وَأَيُّ شَرٍّ بِيَدِي؟ ١٨ 18
೧೮ನನ್ನ ಸ್ವಾಮಿಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೇ? ನಾನೇನು ಮಾಡಿದೆನು?
وَٱلْآنَ فَلْيَسْمَعْ سَيِّدِي ٱلْمَلِكُ كَلَامَ عَبْدِهِ: فَإِنْ كَانَ ٱلرَّبُّ قَدْ أَهَاجَكَ ضِدِّي فَلْيَشْتَمَّ تَقْدِمَةً. وَإِنْ كَانَ بَنُو ٱلنَّاسِ فَلْيَكُونُوا مَلْعُونِينَ أَمَامَ ٱلرَّبِّ، لِأَنَّهُمْ قَدْ طَرَدُونِي ٱلْيَوْمَ مِنَ ٱلِٱنْضِمَامِ إِلَى نَصِيبِ ٱلرَّبِّ قَائِلِينَ: ٱذْهَبِ ٱعْبُدْ آلِهَةً أُخْرَى. ١٩ 19
೧೯ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.
وَٱلْآنَ لَا يَسْقُطْ دَمِي إِلَى ٱلْأَرْضِ أَمَامَ وَجْهِ ٱلرَّبِّ، لِأَنَّ مَلِكَ إِسْرَائِيلَ قَدْ خَرَجَ لِيُفَتِّشَ عَلَى بُرْغُوثٍ وَاحِدٍ! كَمَا يُتْبَعُ ٱلْحَجَلُ فِي ٱلْجِبَالِ!». ٢٠ 20
೨೦ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಲು ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲರ ಅರಸನು ಹೊರಟು ಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ” ಅಂದನು.
فَقَالَ شَاوُلُ: «قَدْ أَخْطَأْتُ. اِرْجِعْ يَا ٱبْنِي دَاوُدَ لِأَنِّي لَا أُسِيءُ إِلَيْكَ بَعْدُ مِنْ أَجْلِ أَنَّ نَفْسِي كَانَتْ كَرِيمَةً فِي عَيْنَيْكَ ٱلْيَوْمَ. هُوَذَا قَدْ حَمِقْتُ وَضَلَلْتُ كَثِيرًا جِدًّا». ٢١ 21
೨೧ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು
فَأَجَابَ دَاوُدُ وَقَالَ: «هُوَذَا رُمْحُ ٱلْمَلِكِ، فَلْيَعْبُرْ وَاحِدٌ مِنَ ٱلْغِلْمَانِ وَيَأْخُذْهُ. ٢٢ 22
೨೨ದಾವೀದನು ಅರಸನಿಗೆ, “ಅರಸನೇ, ಇಗೋ ನಿನ್ನ ಬರ್ಜಿ ಇಲ್ಲಿದೆ, ಸೇವಕರಲ್ಲೊಬ್ಬನು ಬಂದು ಅದನ್ನು ತೆಗೆದುಕೊಂಡು ಹೋಗಲಿ.
وَٱلرَّبُّ يَرُدُّ عَلَى كُلِّ وَاحِدٍ بِرَّهُ وَأَمَانَتَهُ، لِأَنَّهُ قَدْ دَفَعَكَ ٱلرَّبُّ ٱلْيَوْمَ لِيَدِي وَلَمْ أَشَأْ أَنْ أَمُدَّ يَدِي إِلَى مَسِيحِ ٱلرَّبِّ. ٢٣ 23
೨೩ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.
وَهُوَذَا كَمَا كَانَتْ نَفْسُكَ عَظِيمَةً ٱلْيَوْمَ فِي عَيْنَيَّ، كَذَلِكَ لِتَعْظُمْ نَفْسِي فِي عَيْنَيِ ٱلرَّبِّ فَيَنْقُذْنِي مِنْ كُلِّ ضِيقٍ». ٢٤ 24
೨೪ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.
فَقَالَ شَاوُلُ لِدَاوُدَ: «مُبَارَكٌ أَنْتَ يَا ٱبْنِي دَاوُدَ، فَإِنَّكَ تَفْعَلُ وَتَقْدِرُ». ثُمَّ ذَهَبَ دَاوُدُ فِي طَرِيقِهِ وَرَجَعَ شَاوُلُ إِلَى مَكَانِهِ. ٢٥ 25
೨೫ಆಗ ಸೌಲನು ದಾವೀದನಿಗೆ, “ನನ್ನ ಮಗನೇ ದಾವೀದನೇ ನೀನು ಆಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ” ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವೀದನು ತನ್ನ ದಾರಿಯನ್ನು ಹಿಡಿದನು.

< صَمُوئِيلَ ٱلْأَوَّلُ 26 >