< صَمُوئِيلَ ٱلْأَوَّلُ 30 >

وَلَمَّا جَاءَ دَاوُدُ وَرِجَالُهُ إِلَى صِقْلَغَ فِي ٱلْيَوْمِ ٱلثَّالِثِ، كَانَ ٱلْعَمَالِقَةُ قَدْ غَزَوْا ٱلْجَنُوبَ وَصِقْلَغَ، وَضَرَبُوا صِقْلَغَ وَأَحْرَقُوهَا بِٱلنَّارِ، ١ 1
ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,
وَسَبَوْا ٱلنِّسَاءَ ٱللَّوَاتِي فِيهَا. لَمْ يَقْتُلُوا أَحَدًا لَا صَغِيرًا وَلَا كَبِيرًا، بَلْ سَاقُوهُمْ وَمَضَوْا فِي طَرِيقِهِمْ. ٢ 2
ಆ ಊರಿನಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು.
فَدَخَلَ دَاوُدُ وَرِجَالُهُ ٱلْمَدِينَةَ وَإِذَا هِيَ مُحْرَقَةٌ بِٱلنَّارِ، وَنِسَاؤُهُمْ وَبَنُوهُمْ وَبَنَاتُهُمْ قَدْ سُبُوا. ٣ 3
ಆದರೆ ಯಾರನ್ನೂ ಕೊಂದಿರಲಿಲ್ಲ. ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಡಲ್ಪಟ್ಟಿರುವುದನ್ನೂ, ತಮ್ಮ ಹೆಂಡತಿಯರೂ ಗಂಡುಮಕ್ಕಳೂ ಸೆರೆಯಾಗಿ ಒಯ್ಯಲ್ಪಟ್ಟಿರುವುದನ್ನೂ ಕಂಡು
فَرَفَعَ دَاوُدُ وَٱلشَّعْبُ ٱلَّذِينَ مَعَهُ أَصْوَاتَهُمْ وَبَكَوْا حَتَّى لَمْ تَبْقَ لَهُمْ قُوَّةٌ لِلْبُكَاءِ. ٤ 4
ಅವರು ತಮ್ಮಿಂದಾಗುವಷ್ಟು ಕಾಲ ಅತ್ತರು.
وَسُبِيَتِ ٱمْرَأَتَا دَاوُدَ: أَخِينُوعَمُ ٱلْيَزْرَعِيلِيَّةُ وَأَبِيجَايِلُ ٱمْرَأَةُ نَابَالَ ٱلْكَرْمَلِيِّ. ٥ 5
ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ, ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.
فَتَضَايَقَ دَاوُدُ جِدًّا لِأَنَّ ٱلشَّعْبَ قَالُوا بِرَجْمِهِ، لِأَنَّ أَنْفُسَ جَمِيعِ ٱلشَّعْبِ كَانَتْ مُرَّةً كُلُّ وَاحِدٍ عَلَى بَنِيهِ وَبَنَاتِهِ. وَأَمَّا دَاوُدُ فَتَشَدَّدَ بِٱلرَّبِّ إِلَهِهِ. ٦ 6
ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು
ثُمَّ قَالَ دَاوُدُ لِأَبِيَاثَارَ ٱلْكَاهِنِ ٱبْنِ أَخِيمَالِكَ: «قَدِّمْ إِلَيَّ ٱلْأَفُودَ». فَقَدَّمَ أَبِيَاثَارُ ٱلْأَفُودَ إِلَى دَاوُدَ. ٧ 7
ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.
فَسَأَلَ دَاوُدُ مِنَ ٱلرَّبِّ قَائِلًا: «إِذَا لَحِقْتُ هَؤُلَاءِ ٱلْغُزَاةَ فَهَلْ أُدْرِكُهُمْ؟» فَقَالَ لَهُ: «ٱلْحَقْهُمْ فَإِنَّكَ تُدْرِكُ وَتُنْقِذُ». ٨ 8
ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.
فَذَهَبَ دَاوُدُ هُوَ وَٱلسِّتُّ مِئَةِ ٱلرَّجُلِ ٱلَّذِينَ مَعَهُ وَجَاءُوا إِلَى وَادِي ٱلْبَسُورِ، وَٱلْمُتَخَلِّفُونَ وَقَفُوا. ٩ 9
ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು
وَأَمَّا دَاوُدُ فَلَحِقَ هُوَ وَأَرْبَعُ مِئَةِ رَجُلٍ، وَوَقَفَ مِئَتَا رَجُلٍ لِأَنَّهُمْ أَعْيَوْا عَنْ أَنْ يَعْبُرُوا وَادِيَ ٱلْبَسُورِ. ١٠ 10
೧೦ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.
فَصَادَفُوا رَجُلًا مِصْرِيًّا فِي ٱلْحَقْلِ فَأَخَذُوهُ إِلَى دَاوُدَ، وَأَعْطَوْهُ خُبْزًا فَأَكَلَ وَسَقَوْهُ مَاءً، ١١ 11
೧೧ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ,
وَأَعْطَوْهُ قُرْصًا مِنَ ٱلتِّينِ وَعُنْقُودَيْنِ مِنَ ٱلزَّبِيبِ، فَأَكَلَ وَرَجَعَتْ رُوحُهُ إِلَيْهِ، لِأَنَّهُ لَمْ يَأْكُلْ خُبْزًا وَلَا شَرِبَ مَاءً فِي ثَلَاثَةِ أَيَّامٍ وَثَلَاثِ لَيَالٍ. ١٢ 12
೧೨ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.
فَقَالَ لَهُ دَاوُدُ: «لِمَنْ أَنْتَ؟ وَمِنْ أَيْنَ أَنْتَ؟» فَقَالَ: «أَنَا غُلَامٌ مِصْرِيٌّ عَبْدٌ لِرَجُلٍ عَمَالِيقِيٍّ، وَقَدْ تَرَكَنِي سَيِّدِي لِأَنِّي مَرِضْتُ مُنْذُ ثَلَاثَةِ أَيَّامٍ. ١٣ 13
೧೩ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು, ಎಲ್ಲಿಯವನು?” ಎಂದು ಕೇಳಿದನು. ಅವನು “ನಾನು ಐಗುಪ್ತನು, ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡಿದ್ದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
فَإِنَّنَا قَدْ غَزَوْنَا عَلَى جَنُوبِيِّ ٱلْكَرِيتِيِّينَ، وَعَلَى مَا لِيَهُوذَا وَعَلَى جَنُوبِيِّ كَالِبَ وَأَحْرَقْنَا صِقْلَغَ بِٱلنَّارِ». ١٤ 14
೧೪ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು.
فَقَالَ لَهُ دَاوُدُ: «هَلْ تَنْزِلُ بِي إِلَى هَؤُلَاءِ ٱلْغُزَاةِ؟» فَقَالَ: «ٱحْلِفْ لِي بِٱللهِ أَنَّكَ لَا تَقْتُلُنِي وَلَا تُسَلِّمُنِي لِيَدِ سَيِّدِي، فَأَنْزِلَ بِكَ إِلَى هَؤُلَاءِ ٱلْغُزَاةِ». ١٥ 15
೧೫ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.
فَنَزَلَ بِهِ وَإِذَا بِهِمْ مُنْتَشِرُونَ عَلَى وَجْهِ كُلِّ ٱلْأَرْضِ، يَأْكُلُونَ وَيَشْرَبُونَ وَيَرْقُصُونَ بِسَبَبِ جَمِيعِ ٱلْغَنِيمَةِ ٱلْعَظِيمَةِ ٱلَّتِي أَخَذُوا مِنْ أَرْضِ ٱلْفِلِسْطِينِيِّينَ وَمِنْ أَرْضِ يَهُوذَا. ١٦ 16
೧೬ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಮತ್ತು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿಮಿತ್ತವಾಗಿ ಸಂತೋಷಿಸಿ, ಉಂಡು ಕುಡಿದು, ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.
فَضَرَبَهُمْ دَاوُدُ مِنَ ٱلْعَتَمَةِ إِلَى مَسَاءِ غَدِهِمْ، وَلَمْ يَنْجُ مِنْهُمْ رَجُلٌ إِلَّا أَرْبَعَ مِئَةِ غُلَامٍ ٱلَّذِينَ رَكِبُوا جِمَالًا وَهَرَبُوا. ١٧ 17
೧೭ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
وَٱسْتَخْلَصَ دَاوُدُ كُلَّ مَا أَخَذَهُ عَمَالِيقُ، وَأَنْقَذَ دَاوُدُ ٱمْرَأَتَيْهِ. ١٨ 18
೧೮ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.
وَلَمْ يُفْقَدْ لَهُمْ شَيْءٌ لَا صَغِيرٌ وَلَا كَبِيرٌ، وَلَا بَنُونَ وَلَا بَنَاتٌ وَلَا غَنِيمَةٌ، وَلَا شَيْءٌ مِنْ جَمِيعِ مَا أَخَذُوا لَهُمْ، بَلْ رَدَّ دَاوُدُ ٱلْجَمِيعَ. ١٩ 19
೧೯ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರುಗಿ ತೆಗೆದುಕೊಂಡು ಬಂದನು.
وَأَخَذَ دَاوُدُ ٱلْغَنَمَ وَٱلْبَقَرَ. سَاقُوهَا أَمَامَ تِلْكَ ٱلْمَاشِيَةِ وَقَالُوا: «هَذِهِ غَنِيمَةُ دَاوُدَ». ٢٠ 20
೨೦ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡೆದುಕೊಂಡು ಬಂದರು.
وَجَاءَ دَاوُدُ إِلَى مِئَتَيِ ٱلرَّجُلِ ٱلَّذِينَ أَعْيَوْا عَنِ ٱلذَّهَابِ وَرَاءَ دَاوُدَ، فَأَرْجَعُوهُمْ فِي وَادِي ٱلْبَسُورِ، فَخَرَجُوا لِلِقَاءِ دَاوُدَ وَلِقَاءِ ٱلشَّعْبِ ٱلَّذِينَ مَعَهُ. فَتَقَدَّمَ دَاوُدُ إِلَى ٱلْقَوْمِ وَسَأَلَ عَنْ سَلَامَتِهِمْ. ٢١ 21
೨೧ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.
فَأَجَابَ كُلُّ رَجُلٍ شِرِّيرٍ وَلَئِيمٍ مِنَ ٱلرِّجَالِ ٱلَّذِينَ سَارُوا مَعَ دَاوُدَ وَقَالُوا: «لِأَجْلِ أَنَّهُمْ لَمْ يَذْهَبُوا مَعَنَا لَا نُعْطِيهِمْ مِنَ ٱلْغَنِيمَةِ ٱلَّتِي ٱسْتَخْلَصْنَاهَا، بَلْ لِكُلِّ رَجُلٍ ٱمْرَأَتَهُ وَبَنِيهِ، فَلْيَقْتَادُوهُمْ وَيَنْطَلِقُوا». ٢٢ 22
೨೨ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ” ಎಂದರು.
فَقَالَ دَاوُدُ: «لَا تَفْعَلُوا هَكَذَا يَا إِخْوَتِي، لِأَنَّ ٱلرَّبَّ قَدْ أَعْطَانَا وَحَفِظَنَا وَدَفَعَ لِيَدِنَا ٱلْغُزَاةَ ٱلَّذِينَ جَاءُوا عَلَيْنَا. ٢٣ 23
೨೩ಆಗ ದಾವೀದನು ಅವರಿಗೆ, “ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.
وَمَنْ يَسْمَعُ لَكُمْ فِي هَذَا ٱلْأَمْرِ؟ لِأَنَّهُ كَنَصِيبِ ٱلنَّازِلِ إِلَى ٱلْحَرْبِ نَصِيبُ ٱلَّذِي يُقِيمُ عِنْدَ ٱلْأَمْتِعَةِ، فَإِنَّهُمْ يَقْتَسِمُونَ بِٱلسَّوِيَّةِ». ٢٤ 24
೨೪ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು.
وَكَانَ مِنْ ذَلِكَ ٱلْيَوْمِ فَصَاعِدًا أَنَّهُ جَعَلَهَا فَرِيضَةً وَقَضَاءً لِإِسْرَائِيلَ إِلَى هَذَا ٱلْيَوْمِ. ٢٥ 25
೨೫ದಾವೀದನು ಇಸ್ರಾಯೇಲರಲ್ಲಿ ಇದನ್ನು ಕಟ್ಟಳೆಯಾಗಿ ನೇಮಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.
وَلَمَّا جَاءَ دَاوُدُ إِلَى صِقْلَغَ أَرْسَلَ مِنَ ٱلْغَنِيمَةِ إِلَى شُيُوخِ يَهُوذَا، إِلَى أَصْحَابِهِ قَائِلًا: «هَذِهِ لَكُمْ بَرَكَةٌ مِنْ غَنِيمَةِ أَعْدَاءِ ٱلرَّبِّ». ٢٦ 26
೨೬ದಾವೀದನು ಚಿಕ್ಲಗ್ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, “ಇಗೋ ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ” ಎಂದು ಹೇಳಿದನು.
إِلَى ٱلَّذِينَ فِي بَيْتِ إِيلٍ وَٱلَّذِينَ فِي رَامُوتِ ٱلْجَنُوبِ وَٱلَّذِينَ فِي يَتِّيرَ، ٢٧ 27
೨೭ಬಹುಮಾನ ಹೊಂದಿದವರು ಯಾರೆಂದರೆ: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,
وَإِلَى ٱلَّذِينَ فِي عَرُوعِيرَ وَٱلَّذِينَ فِي سِفْمُوثَ وَٱلَّذِينَ فِي أَشْتِمُوعَ، ٢٨ 28
೨೮ಅರೋಯೇರಿನವರು ಸಿಪ್ಮೋತಿನವರು ಎಷ್ಟೆಮೋವದವರು,
وَإِلَى ٱلَّذِينَ فِي رَاخَالَ وَٱلَّذِينَ فِي مُدُنِ ٱلْيَرْحَمْئِيلِيِّينَ وَٱلَّذِينَ فِي مُدُنِ ٱلْقِينِيِّينَ، ٢٩ 29
೨೯ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,
وَإِلَى ٱلَّذِينَ فِي حُرْمَةَ وَٱلَّذِينَ فِي كُورِ عَاشَانَ وَٱلَّذِينَ فِي عَتَاكَ، ٣٠ 30
೩೦ಹೊರ್ಮದವರು, ಬೋರಾಷಾನಿನವರು, ಅತಾಕಿನವರು,
وَإِلَى ٱلَّذِينَ فِي حَبْرُونَ، وَإِلَى جَمِيعِ ٱلْأَمَاكِنِ ٱلَّتِي تَرَدَّدَ فِيهَا دَاوُدُ وَرِجَالُهُ. ٣١ 31
೩೧ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.

< صَمُوئِيلَ ٱلْأَوَّلُ 30 >