< صَمُوئِيلَ ٱلْأَوَّلُ 30 >

وَلَمَّا جَاءَ دَاوُدُ وَرِجَالُهُ إِلَى صِقْلَغَ فِي ٱلْيَوْمِ ٱلثَّالِثِ، كَانَ ٱلْعَمَالِقَةُ قَدْ غَزَوْا ٱلْجَنُوبَ وَصِقْلَغَ، وَضَرَبُوا صِقْلَغَ وَأَحْرَقُوهَا بِٱلنَّارِ، ١ 1
ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
وَسَبَوْا ٱلنِّسَاءَ ٱللَّوَاتِي فِيهَا. لَمْ يَقْتُلُوا أَحَدًا لَا صَغِيرًا وَلَا كَبِيرًا، بَلْ سَاقُوهُمْ وَمَضَوْا فِي طَرِيقِهِمْ. ٢ 2
ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರನ್ನಾದರೂ, ಕಿರಿಯರನ್ನಾದರೂ ಕೊಂದುಹಾಕದೆ, ಅವರನ್ನು ಸೆರೆಯಾಗಿ ತೆಗೆದುಕೊಂಡು, ತಮ್ಮ ಮಾರ್ಗವಾಗಿ ಹೊರಟು ಹೋದರು.
فَدَخَلَ دَاوُدُ وَرِجَالُهُ ٱلْمَدِينَةَ وَإِذَا هِيَ مُحْرَقَةٌ بِٱلنَّارِ، وَنِسَاؤُهُمْ وَبَنُوهُمْ وَبَنَاتُهُمْ قَدْ سُبُوا. ٣ 3
ದಾವೀದನೂ, ಅವನ ಜನರೂ ಆ ಪಟ್ಟಣಕ್ಕೆ ಬಂದಾಗ, ಅದು ಬೆಂಕಿಯಿಂದ ಸುಟ್ಟುಹೋಗಿರುವುದನ್ನೂ ಮತ್ತು ಆ ಜನರ ಹೆಂಡತಿಯರೂ ಅವರ ಪುತ್ರ ಪುತ್ರಿಯರೂ ಸೆರೆಯಾಗಿ ಹೋಗಿರುವುದನ್ನೂ ಕಂಡರು.
فَرَفَعَ دَاوُدُ وَٱلشَّعْبُ ٱلَّذِينَ مَعَهُ أَصْوَاتَهُمْ وَبَكَوْا حَتَّى لَمْ تَبْقَ لَهُمْ قُوَّةٌ لِلْبُكَاءِ. ٤ 4
ಆಗ ದಾವೀದನೂ, ಅವನ ಸಂಗಡ ಇದ್ದ ಜನರೂ ಅಳುವುದಕ್ಕೆ ತಮ್ಮಲ್ಲಿ ಶಕ್ತಿಯಿಲ್ಲದೆ ಹೋಗುವವರೆಗೂ ತಮ್ಮ ಸ್ವರವನ್ನೆತ್ತಿ ಅತ್ತರು.
وَسُبِيَتِ ٱمْرَأَتَا دَاوُدَ: أَخِينُوعَمُ ٱلْيَزْرَعِيلِيَّةُ وَأَبِيجَايِلُ ٱمْرَأَةُ نَابَالَ ٱلْكَرْمَلِيِّ. ٥ 5
ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೆಯೇಲಿನವಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳು ಸೆರೆಯಾಗಿ ಹೋಗಿದ್ದರು.
فَتَضَايَقَ دَاوُدُ جِدًّا لِأَنَّ ٱلشَّعْبَ قَالُوا بِرَجْمِهِ، لِأَنَّ أَنْفُسَ جَمِيعِ ٱلشَّعْبِ كَانَتْ مُرَّةً كُلُّ وَاحِدٍ عَلَى بَنِيهِ وَبَنَاتِهِ. وَأَمَّا دَاوُدُ فَتَشَدَّدَ بِٱلرَّبِّ إِلَهِهِ. ٦ 6
ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
ثُمَّ قَالَ دَاوُدُ لِأَبِيَاثَارَ ٱلْكَاهِنِ ٱبْنِ أَخِيمَالِكَ: «قَدِّمْ إِلَيَّ ٱلْأَفُودَ». فَقَدَّمَ أَبِيَاثَارُ ٱلْأَفُودَ إِلَى دَاوُدَ. ٧ 7
ಆಗ ದಾವೀದನು ಅಹೀಮೆಲೆಕನ ಮಗ ಅಬಿಯಾತರನೆಂಬ ಯಾಜಕನಿಗೆ, “ನೀನು ದಯಮಾಡಿ ಏಫೋದನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ಅಬ್ಯತಾರನು ಏಫೋದನ್ನು ದಾವೀದನ ಬಳಿಗೆ ತಂದನು.
فَسَأَلَ دَاوُدُ مِنَ ٱلرَّبِّ قَائِلًا: «إِذَا لَحِقْتُ هَؤُلَاءِ ٱلْغُزَاةَ فَهَلْ أُدْرِكُهُمْ؟» فَقَالَ لَهُ: «ٱلْحَقْهُمْ فَإِنَّكَ تُدْرِكُ وَتُنْقِذُ». ٨ 8
ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.
فَذَهَبَ دَاوُدُ هُوَ وَٱلسِّتُّ مِئَةِ ٱلرَّجُلِ ٱلَّذِينَ مَعَهُ وَجَاءُوا إِلَى وَادِي ٱلْبَسُورِ، وَٱلْمُتَخَلِّفُونَ وَقَفُوا. ٩ 9
ಆಗ ದಾವೀದನೂ, ಅವನ ಸಂಗಡ ಇದ್ದ ಆರುನೂರು ಜನರೂ ಹೋದರು. ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ, ಹಿಂದುಳಿದವರು ಅಲ್ಲಿಯೇ ನಿಂತರು.
وَأَمَّا دَاوُدُ فَلَحِقَ هُوَ وَأَرْبَعُ مِئَةِ رَجُلٍ، وَوَقَفَ مِئَتَا رَجُلٍ لِأَنَّهُمْ أَعْيَوْا عَنْ أَنْ يَعْبُرُوا وَادِيَ ٱلْبَسُورِ. ١٠ 10
ದಾವೀದನು ತಾನೂ, ನಾನೂರು ಜನರೂ ಹಿಂದಟ್ಟಿ ಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದರಿಂದ, ಇನ್ನೂರು ಜನರು ಅಲ್ಲಿ ನಿಂತರು.
فَصَادَفُوا رَجُلًا مِصْرِيًّا فِي ٱلْحَقْلِ فَأَخَذُوهُ إِلَى دَاوُدَ، وَأَعْطَوْهُ خُبْزًا فَأَكَلَ وَسَقَوْهُ مَاءً، ١١ 11
ಅವನ ಜನರು ಒಬ್ಬ ಈಜಿಪ್ಟಿನವನು ಅಡವಿಯಲ್ಲಿ ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ಕೊಟ್ಟರು. ಅವನು ತಿಂದನು.
وَأَعْطَوْهُ قُرْصًا مِنَ ٱلتِّينِ وَعُنْقُودَيْنِ مِنَ ٱلزَّبِيبِ، فَأَكَلَ وَرَجَعَتْ رُوحُهُ إِلَيْهِ، لِأَنَّهُ لَمْ يَأْكُلْ خُبْزًا وَلَا شَرِبَ مَاءً فِي ثَلَاثَةِ أَيَّامٍ وَثَلَاثِ لَيَالٍ. ١٢ 12
ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
فَقَالَ لَهُ دَاوُدُ: «لِمَنْ أَنْتَ؟ وَمِنْ أَيْنَ أَنْتَ؟» فَقَالَ: «أَنَا غُلَامٌ مِصْرِيٌّ عَبْدٌ لِرَجُلٍ عَمَالِيقِيٍّ، وَقَدْ تَرَكَنِي سَيِّدِي لِأَنِّي مَرِضْتُ مُنْذُ ثَلَاثَةِ أَيَّامٍ. ١٣ 13
ದಾವೀದನು ಅವನನ್ನು, “ನೀನು ಯಾರ ಕಡೆಯವನು? ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಈಜಿಪ್ಟಿನವನು, ಒಬ್ಬ ಅಮಾಲೇಕ್ಯನ ಸೇವಕನು. ಮೂರು ದಿನಗಳಿಂದ ನಾನು ರೋಗದಲ್ಲಿ ಬಿದ್ದುದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
فَإِنَّنَا قَدْ غَزَوْنَا عَلَى جَنُوبِيِّ ٱلْكَرِيتِيِّينَ، وَعَلَى مَا لِيَهُوذَا وَعَلَى جَنُوبِيِّ كَالِبَ وَأَحْرَقْنَا صِقْلَغَ بِٱلنَّارِ». ١٤ 14
ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.
فَقَالَ لَهُ دَاوُدُ: «هَلْ تَنْزِلُ بِي إِلَى هَؤُلَاءِ ٱلْغُزَاةِ؟» فَقَالَ: «ٱحْلِفْ لِي بِٱللهِ أَنَّكَ لَا تَقْتُلُنِي وَلَا تُسَلِّمُنِي لِيَدِ سَيِّدِي، فَأَنْزِلَ بِكَ إِلَى هَؤُلَاءِ ٱلْغُزَاةِ». ١٥ 15
ದಾವೀದನು ಅವನಿಗೆ, “ನೀನು ನನ್ನನ್ನು ಆ ಗುಂಪಿನ ಬಳಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಕೇಳಿದನು. ಅದಕ್ಕವನು, “ನೀನು ನನ್ನನ್ನು ಕೊಂದುಹಾಕುವುದಿಲ್ಲ ಇಲ್ಲವೆ ನನ್ನನ್ನು ನನ್ನ ಯಜಮಾನನ ಕೈಯಲ್ಲಿ ಒಪ್ಪಿಸಿಕೊಡುವುದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಮಾಡಿದರೆ, ನಿನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತೇನೆ,” ಎಂದನು.
فَنَزَلَ بِهِ وَإِذَا بِهِمْ مُنْتَشِرُونَ عَلَى وَجْهِ كُلِّ ٱلْأَرْضِ، يَأْكُلُونَ وَيَشْرَبُونَ وَيَرْقُصُونَ بِسَبَبِ جَمِيعِ ٱلْغَنِيمَةِ ٱلْعَظِيمَةِ ٱلَّتِي أَخَذُوا مِنْ أَرْضِ ٱلْفِلِسْطِينِيِّينَ وَمِنْ أَرْضِ يَهُوذَا. ١٦ 16
ಇವನು ದಾವೀದನನ್ನು ಕರೆದುಕೊಂಡು ಅಲ್ಲಿಗೆ ಹೋದಾಗ, ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶದಲ್ಲಿಯೂ, ಯೆಹೂದ ದೇಶದಲ್ಲಿಯೂ ವ್ಯಾಪಿಸಿಕೊಂಡು, ಸಮಸ್ತ ಕೊಳ್ಳೆ ತೆಗೆದುಕೊಂಡು ಬಂದುದರಿಂದ, ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
فَضَرَبَهُمْ دَاوُدُ مِنَ ٱلْعَتَمَةِ إِلَى مَسَاءِ غَدِهِمْ، وَلَمْ يَنْجُ مِنْهُمْ رَجُلٌ إِلَّا أَرْبَعَ مِئَةِ غُلَامٍ ٱلَّذِينَ رَكِبُوا جِمَالًا وَهَرَبُوا. ١٧ 17
ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ.
وَٱسْتَخْلَصَ دَاوُدُ كُلَّ مَا أَخَذَهُ عَمَالِيقُ، وَأَنْقَذَ دَاوُدُ ٱمْرَأَتَيْهِ. ١٨ 18
ಅಮಾಲೇಕ್ಯರು ತೆಗೆದುಕೊಂಡು ಹೋದದ್ದನ್ನೆಲ್ಲವನ್ನೂ ತನ್ನ ಇಬ್ಬರು ಹೆಂಡತಿಯರನ್ನೂ ದಾವೀದನು ಬಿಡಿಸಿಕೊಂಡನು.
وَلَمْ يُفْقَدْ لَهُمْ شَيْءٌ لَا صَغِيرٌ وَلَا كَبِيرٌ، وَلَا بَنُونَ وَلَا بَنَاتٌ وَلَا غَنِيمَةٌ، وَلَا شَيْءٌ مِنْ جَمِيعِ مَا أَخَذُوا لَهُمْ، بَلْ رَدَّ دَاوُدُ ٱلْجَمِيعَ. ١٩ 19
ಅವರು ತೆಗೆದುಕೊಂಡು ಹೋದ ಕಿರಿಯರಲ್ಲಾದರೂ, ಹಿರಿಯರಲ್ಲಾದರೂ, ಪುತ್ರರಲ್ಲಾದರೂ, ಪುತ್ರಿಯರಲ್ಲಾದರೂ, ಕೊಳ್ಳೆಯಾದ ಯಾವ ವಸ್ತುಗಳಲ್ಲಾದರೂ ಒಂದೂ ಕಡಿಮೆ ಇಲ್ಲದ ಹಾಗೆ, ದಾವೀದನು ಎಲ್ಲವನ್ನು ತಿರುಗಿ ತೆಗೆದುಕೊಂಡು ಬಂದನು.
وَأَخَذَ دَاوُدُ ٱلْغَنَمَ وَٱلْبَقَرَ. سَاقُوهَا أَمَامَ تِلْكَ ٱلْمَاشِيَةِ وَقَالُوا: «هَذِهِ غَنِيمَةُ دَاوُدَ». ٢٠ 20
ಇದಲ್ಲದೆ ದಾವೀದನು ಶತ್ರುಗಳ ಸಮಸ್ತ ದನಕುರಿಗಳ ಮಂದೆಗಳನ್ನು ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ಪಶುಗಳ ಮುಂದಾಗಿ ಹೊಡೆದುಕೊಂಡು ಬಂದರು.
وَجَاءَ دَاوُدُ إِلَى مِئَتَيِ ٱلرَّجُلِ ٱلَّذِينَ أَعْيَوْا عَنِ ٱلذَّهَابِ وَرَاءَ دَاوُدَ، فَأَرْجَعُوهُمْ فِي وَادِي ٱلْبَسُورِ، فَخَرَجُوا لِلِقَاءِ دَاوُدَ وَلِقَاءِ ٱلشَّعْبِ ٱلَّذِينَ مَعَهُ. فَتَقَدَّمَ دَاوُدُ إِلَى ٱلْقَوْمِ وَسَأَلَ عَنْ سَلَامَتِهِمْ. ٢١ 21
ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು.
فَأَجَابَ كُلُّ رَجُلٍ شِرِّيرٍ وَلَئِيمٍ مِنَ ٱلرِّجَالِ ٱلَّذِينَ سَارُوا مَعَ دَاوُدَ وَقَالُوا: «لِأَجْلِ أَنَّهُمْ لَمْ يَذْهَبُوا مَعَنَا لَا نُعْطِيهِمْ مِنَ ٱلْغَنِيمَةِ ٱلَّتِي ٱسْتَخْلَصْنَاهَا، بَلْ لِكُلِّ رَجُلٍ ٱمْرَأَتَهُ وَبَنِيهِ، فَلْيَقْتَادُوهُمْ وَيَنْطَلِقُوا». ٢٢ 22
ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು.
فَقَالَ دَاوُدُ: «لَا تَفْعَلُوا هَكَذَا يَا إِخْوَتِي، لِأَنَّ ٱلرَّبَّ قَدْ أَعْطَانَا وَحَفِظَنَا وَدَفَعَ لِيَدِنَا ٱلْغُزَاةَ ٱلَّذِينَ جَاءُوا عَلَيْنَا. ٢٣ 23
ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?
وَمَنْ يَسْمَعُ لَكُمْ فِي هَذَا ٱلْأَمْرِ؟ لِأَنَّهُ كَنَصِيبِ ٱلنَّازِلِ إِلَى ٱلْحَرْبِ نَصِيبُ ٱلَّذِي يُقِيمُ عِنْدَ ٱلْأَمْتِعَةِ، فَإِنَّهُمْ يَقْتَسِمُونَ بِٱلسَّوِيَّةِ». ٢٤ 24
ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು.
وَكَانَ مِنْ ذَلِكَ ٱلْيَوْمِ فَصَاعِدًا أَنَّهُ جَعَلَهَا فَرِيضَةً وَقَضَاءً لِإِسْرَائِيلَ إِلَى هَذَا ٱلْيَوْمِ. ٢٥ 25
ಹಾಗೆಯೇ ದಾವೀದನು ಆ ದಿವಸ ಮೊದಲ್ಗೊಂಡು ಇಂದಿನವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ, ಕಟ್ಟಳೆಯಾಗಿಯೂ ಮಾಡಿದನು.
وَلَمَّا جَاءَ دَاوُدُ إِلَى صِقْلَغَ أَرْسَلَ مِنَ ٱلْغَنِيمَةِ إِلَى شُيُوخِ يَهُوذَا، إِلَى أَصْحَابِهِ قَائِلًا: «هَذِهِ لَكُمْ بَرَكَةٌ مِنْ غَنِيمَةِ أَعْدَاءِ ٱلرَّبِّ». ٢٦ 26
ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು.
إِلَى ٱلَّذِينَ فِي بَيْتِ إِيلٍ وَٱلَّذِينَ فِي رَامُوتِ ٱلْجَنُوبِ وَٱلَّذِينَ فِي يَتِّيرَ، ٢٧ 27
ಹೀಗೆ ದಾವೀದನು ಬೇತೇಲಿನವರು, ನೆಗೆಬನ ರಾಮೋತನವರು ಹಾಗೂ ಯತ್ತೀರಿನವರು,
وَإِلَى ٱلَّذِينَ فِي عَرُوعِيرَ وَٱلَّذِينَ فِي سِفْمُوثَ وَٱلَّذِينَ فِي أَشْتِمُوعَ، ٢٨ 28
ಅರೋಯೇರಿನವರು, ಸಿಪ್ಮೋತಿನವರು, ಎಷ್ಟೆಮೋವದವರು,
وَإِلَى ٱلَّذِينَ فِي رَاخَالَ وَٱلَّذِينَ فِي مُدُنِ ٱلْيَرْحَمْئِيلِيِّينَ وَٱلَّذِينَ فِي مُدُنِ ٱلْقِينِيِّينَ، ٢٩ 29
ರಾಕಾಲಿನವರು, ಯೆರಹ್ಮೇಲ್ಯರು, ಕೇನ್ಯರು,
وَإِلَى ٱلَّذِينَ فِي حُرْمَةَ وَٱلَّذِينَ فِي كُورِ عَاشَانَ وَٱلَّذِينَ فِي عَتَاكَ، ٣٠ 30
ಹೊರ್ಮಾದವರು, ಬೋರಾಷಾನಿನವರು, ಅತಾಕಿನವರು,
وَإِلَى ٱلَّذِينَ فِي حَبْرُونَ، وَإِلَى جَمِيعِ ٱلْأَمَاكِنِ ٱلَّتِي تَرَدَّدَ فِيهَا دَاوُدُ وَرِجَالُهُ. ٣١ 31
ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು.

< صَمُوئِيلَ ٱلْأَوَّلُ 30 >