< صَمُوئِيلَ ٱلْأَوَّلُ 6 >

وَكَانَ تَابُوتُ ٱللهِ فِي بِلَادِ ٱلْفِلِسْطِينِيِّينَ سَبْعَةَ أَشْهُرٍ. ١ 1
ಯೆಹೋವನ ಮಂಜೂಷವು ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳ ಕಾಲ ಇತ್ತು.
فَدَعَا ٱلْفِلِسْطِينِيُّونَ ٱلْكَهَنَةَ وَٱلْعَرَّافِينَ قَائِلِينَ: «مَاذَا نَعْمَلُ بِتَابُوتِ ٱلرَّبِّ؟ أَخْبِرُونَا بِمَاذَا نُرْسِلُهُ إِلَى مَكَانِهِ». ٢ 2
ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, “ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ” ಅನ್ನಲು
فَقَالُوا: «إِذَا أَرْسَلْتُمْ تَابُوتَ إِلَهِ إِسْرَائِيلَ، فَلَا تُرْسِلُوهُ فَارِغًا، بَلْ رُدُّوا لَهُ قُرْبَانَ إِثْمٍ. حِينَئِذٍ تَشْفَوْنَ وَيُعْلَمُ عِنْدَكُمْ لِمَاذَا لَا تَرْتَفِعُ يَدُهُ عَنْكُمْ». ٣ 3
ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.
فَقَالُوا: «وَمَا هُوَ قُرْبَانُ ٱلْإِثْمِ ٱلَّذِي نَرُدُّهُ لَهُ؟» فَقَالُوا: «حَسَبَ عَدَدِ أَقْطَابِ ٱلْفِلِسْطِينِيِّينَ: خَمْسَةَ بَوَاسِيرَ مِنْ ذَهَبٍ، وَخَمْسَةَ فِيرَانٍ مِنْ ذَهَبٍ. لِأَنَّ ٱلضَّرْبَةَ وَاحِدَةٌ عَلَيْكُمْ جَمِيعًا وَعَلَى أَقْطَابِكُمْ. ٤ 4
ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.
وَٱصْنَعُوا تَمَاثِيلَ بَوَاسِيرِكُمْ وَتَمَاثِيلَ فِيرَانِكُمُ ٱلَّتِي تُفْسِدُ ٱلْأَرْضَ، وَأَعْطُوا إِلَهَ إِسْرَائِيلَ مَجْدًا لَعَلَّهُ يُخَفِّفُ يَدَهُ عَنْكُمْ وَعَنْ آلِهَتِكُمْ وَعَنْ أَرْضِكُمْ. ٥ 5
ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.
وَلِمَاذَا تُغْلِظُونَ قُلُوبَكُمْ كَمَا أَغْلَظَ ٱلْمِصْرِيُّونَ وَفِرْعَوْنُ قُلُوبَهُمْ؟ أَلَيْسَ عَلَى مَا فَعَلَ بِهِمْ أَطْلَقُوهُمْ فَذَهَبُوا؟ ٦ 6
ಐಗುಪ್ತರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವುದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.
فَٱلْآنَ خُذُوا وَٱعْمَلُوا عَجَلَةً وَاحِدَةً جَدِيدَةً وَبَقَرَتَيْنِ مُرْضِعَتَيْنِ لَمْ يَعْلُهُمَا نِيرٌ، وَٱرْبِطُوا ٱلْبَقَرَتَيْنِ إِلَى ٱلْعَجَلَةِ، وَأَرْجِعُوا وَلَدَيْهِمَا عَنْهُمَا إِلَى ٱلْبَيْتِ. ٧ 7
ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿರಿ. ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ
وَخُذُوا تَابُوتَ ٱلرَّبِّ وَٱجْعَلُوهُ عَلَى ٱلْعَجَلَةِ، وَضَعُوا أَمْتِعَةَ ٱلذَّهَبِ ٱلَّتِي تَرُدُّونَهَا لَهُ قُرْبَانَ إِثْمٍ فِي صُنْدُوقٍ بِجَانِبِهِ وَأَطْلِقُوهُ فَيَذْهَبَ. ٨ 8
ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ, ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ.
وَٱنْظُرُوا، فَإِنْ صَعِدَ فِي طَرِيقِ تُخْمِهِ إِلَى بَيْتَشَمْسَ فَإِنَّهُ هُوَ ٱلَّذِي فَعَلَ بِنَا هَذَا ٱلشَّرَّ ٱلْعَظِيمَ. وَإِلَّا فَنَعْلَمُ أَنْ يَدَهُ لَمْ تَضْرِبْنَا. كَانَ ذَلِكَ عَلَيْنَا عَرَضًا». ٩ 9
ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.
فَفَعَلَ ٱلرِّجَالُ كَذَلِكَ، وَأَخَذُوا بَقَرَتَيْنِ مُرْضِعَتَيْنِ وَرَبَطُوهُمَا إِلَى ٱلْعَجَلَةِ، وَحَبَسُوا وَلَدَيْهِمَا فِي ٱلْبَيْتِ، ١٠ 10
೧೦ಅದೇ ಪ್ರಕಾರ ಫಿಲಿಷ್ಟಿಯರು ಹಾಲುಕರೆಯುವ ಎರಡು ಹಸುಗಳನ್ನು ಹಿಡಿದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿದರು.
وَوَضَعُوا تَابُوتَ ٱلرَّبِّ عَلَى ٱلْعَجَلَةِ مَعَ ٱلصُّنْدُوقِ وَفِيرَانِ ٱلذَّهَبِ وَتَمَاثِيلِ بَوَاسِيرِهِمْ. ١١ 11
೧೧ಯೆಹೋವನ ಮಂಜೂಷವನ್ನೂ, ಚಿನ್ನದ ಇಲಿಗಳೂ, ಗಡ್ಡೆಗಳೂ ಇದ್ದ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು.
فَٱسْتَقَامَتِ ٱلْبَقَرَتَانِ فِي ٱلطَّرِيقِ إِلَى طَرِيقِ بَيْتَشَمْسَ، وَكَانَتَا تَسِيرَانِ فِي سِكَّةٍ وَاحِدَةٍ وَتَجْأَرَانِ، وَلَمْ تَمِيلَا يَمِينًا وَلَا شِمَالًا، وَأَقْطَابُ ٱلْفِلِسْطِينِيِّينَ يَسِيرُونَ وَرَاءَهُمَا إِلَى تُخْمِ بَيْتَشَمْسَ. ١٢ 12
೧೨ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.
وَكَانَ أَهْلُ بَيْتَشَمْسَ يَحْصُدُونَ حَصَادَ ٱلْحِنْطَةِ فِي ٱلْوَادِي، فَرَفَعُوا أَعْيُنَهُمْ وَرَأَوْا ٱلتَّابُوتَ وَفَرِحُوا بِرُؤْيَتِهِ. ١٣ 13
೧೩ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹು ಸಂತೋಷಪಟ್ಟರು.
فَأَتَتِ ٱلْعَجَلَةُ إِلَى حَقْلِ يَهُوشَعَ ٱلْبَيْتَشَمْسِيِّ وَوَقَفَتْ هُنَاكَ. وَهُنَاكَ حَجَرٌ كَبِيرٌ. فَشَقَّقُوا خَشَبَ ٱلْعَجَلَةِ وَأَصْعَدُوا ٱلْبَقَرَتَيْنِ مُحْرَقَةً لِلرَّبِّ. ١٤ 14
೧೪ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು.
فَأَنْزَلَ ٱللَّاوِيُّونَ تَابُوتَ ٱلرَّبِّ وَٱلصُّنْدُوقَ ٱلَّذِي مَعَهُ ٱلَّذِي فِيهِ أَمْتِعَةُ ٱلذَّهَبِ وَوَضَعُوهُمَا عَلَى ٱلْحَجَرِ ٱلْكَبِيرِ. وَأَصْعَدَ أَهْلُ بَيْتَشَمْسَ مُحْرَقَاتٍ وَذَبَحُوا ذَبَائِحَ فِي ذَلِكَ ٱلْيَوْمِ لِلرَّبِّ. ١٥ 15
೧೫ಲೇವಿಯರು ಯೆಹೋವನ ಮಂಜೂಷವನ್ನೂ, ಚಿನ್ನದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್ ಷೆಮೆಷಿನವರು ಅದೇ ದಿನ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಮತ್ತು ಯಜ್ಞಗಳನ್ನೂ ಸಮರ್ಪಿಸಿದರು.
فَرَأَى أَقْطَابُ ٱلْفِلِسْطِينِيِّينَ ٱلْخَمْسَةُ وَرَجَعُوا إِلَى عَقْرُونَ فِي ذَلِكَ ٱلْيَوْمِ. ١٦ 16
೧೬ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.
وَهَذِهِ هِيَ بَوَاسِيرُ ٱلذَّهَبِ ٱلَّتِي رَدَّهَا ٱلْفِلِسْطِينِيُّونَ قُرْبَانَ إِثْمٍ لِلرَّبِّ: وَاحِدٌ لِأَشْدُودَ، وَوَاحِدٌ لِغَزَّةَ، وَوَاحِدٌ لِأَشْقَلُونَ، وَوَاحِدٌ لِجَتَّ، وَوَاحِدٌ لِعَقْرُونَ. ١٧ 17
೧೭ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ
وَفِيرَانُ ٱلذَّهَبِ بِعَدَدِ جَمِيعِ مُدُنِ ٱلْفِلِسْطِينِيِّينَ لِلْخَمْسَةِ ٱلْأَقْطَابِ مِنَ ٱلْمَدِينَةِ ٱلْمُحَصَّنَةِ إِلَى قَرْيَةِ ٱلصَّحْرَاءِ. وَشَاهِدٌ هُوَ ٱلْحَجَرُ ٱلْكَبِيرُ ٱلَّذِي وَضَعُوا عَلَيْهِ تَابُوتَ ٱلرَّبِّ. هُوَ إِلَى هَذَا ٱلْيَوْمِ فِي حَقْلِ يَهُوشَعَ ٱلْبَيْتِشَمْسِيِّ. ١٨ 18
೧೮ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅರಸುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮ ನಗರಗಳ ಸಂಖ್ಯೆಗಳಿಗೂ ಸರಿಯಾಗಿದ್ದವು. ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇರುವ ಯೆಹೋವನ ಮಂಜೂಷವೂ ಇಡಲ್ಪಟ್ಟ ಆ ದೊಡ್ಡ ಕಲ್ಲೇ ಇದಕ್ಕೆ ಸಾಕ್ಷಿಯಾಗಿ ಇಂದಿಗೂ ಇದೆ.
وَضَرَبَ أَهْلَ بَيْتَشَمْسَ لِأَنَّهُمْ نَظَرُوا إِلَى تَابُوتِ ٱلرَّبِّ. وَضَرَبَ مِنَ ٱلشَّعْبِ خَمْسِينَ أَلْفَ رَجُلٍ وَسَبْعِينَ رَجُلًا. فَنَاحَ ٱلشَّعْبُ لِأَنَّ ٱلرَّبَّ ضَرَبَ ٱلشَّعْبَ ضَرْبَةً عَظِيمَةً. ١٩ 19
೧೯ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.
وَقَالَ أَهْلُ بَيْتَشَمْسَ: «مَنْ يَقْدِرُ أَنْ يَقِفَ أَمَامَ ٱلرَّبِّ ٱلْإِلَهِ ٱلْقُدُّوسِ هَذَا؟ وَإِلَى مَنْ يَصْعَدُ عَنَّا؟» ٢٠ 20
೨೦ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು
وَأَرْسَلُوا رُسُلًا إِلَى سُكَّانِ قَرْيَةِ يَعَارِيمَ قَائِلِينَ: «قَدْ رَدَّ ٱلْفِلِسْطِينِيُّونَ تَابُوتَ ٱلرَّبِّ، فَٱنْزِلُوا وَأَصْعِدُوهُ إِلَيْكُمْ». ٢١ 21
೨೧ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು.

< صَمُوئِيلَ ٱلْأَوَّلُ 6 >