< ٢ أخبار 19 >

وَرَجَعَ يَهُوشَافَاطُ مَلِكُ يَهُوذَا إِلَى بَيْتِهِ بِسَلَامٍ إِلَى أُورُشَلِيمَ. ١ 1
ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ಯೆರೂಸಲೇಮಿಗೆ ಹಿಂದಿರುಗಿದನು.
وَخَرَجَ لِلِقَائِهِ يَاهُو بْنُ حَنَانِي ٱلرَّائِي وَقَالَ لِلْمَلِكِ يَهُوشَافَاطَ: «أَتُسَاعِدُ ٱلشِّرِّيرَ وَتُحِبُّ مُبْغِضِي ٱلرَّبِّ؟ فَلِذَلِكَ ٱلْغَضَبُ عَلَيْكَ مِنْ قِبَلِ ٱلرَّبِّ. ٢ 2
ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.
غَيْرَ أَنَّهُ وُجِدَ فِيكَ أُمُورٌ صَالِحَةٌ لِأَنَّكَ نَزَعْتَ ٱلسَّوَارِيَ مِنَ ٱلْأَرْضِ وَهَيَّأْتَ قَلْبَكَ لِطَلَبِ ٱللهِ». ٣ 3
ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.
وَأَقَامَ يَهُوشَافَاطُ فِي أُورُشَلِيمَ، ثُمَّ رَجَعَ وَخَرَجَ أَيْضًا بَيْنَ ٱلشَّعْبِ مِنْ بِئْرِ سَبْعٍ إِلَى جَبَلِ أَفْرَايِمَ وَرَدَّهُمْ إِلَى ٱلرَّبِّ إِلَهِ آبَائِهِمْ. ٤ 4
ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.
وَأَقَامَ قُضَاةً فِي ٱلْأَرْضِ فِي كُلِّ مُدُنِ يَهُوذَا ٱلْمُحَصَّنَةِ فِي كُلِّ مَدِينَةٍ فَمَدِينَةٍ. ٥ 5
ಅವನು ಯೆಹೂದ ದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.
وَقَالَ لِلْقُضَاةِ: «ٱنْظُرُوا مَا أَنْتُمْ فَاعِلُونَ، لِأَنَّكُمْ لَا تَقْضُونَ لِلْإِنْسَانِ بَلْ لِلرَّبِّ، وَهُوَ مَعَكُمْ فِي أَمْرِ ٱلْقَضَاءِ. ٦ 6
ಅವನು ಅವರಿಗೆ, “ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.
وَٱلْآنَ لِتَكُنْ هَيْبَةُ ٱلرَّبِّ عَلَيْكُمُ. ٱحْذَرُوا وَٱفْعَلُوا. لِأَنَّهُ لَيْسَ عِنْدَ ٱلرَّبِّ إِلَهِنَا ظُلْمٌ وَلَا مُحَابَاةٌ وَلَا ٱرْتِشَاءٌ». ٧ 7
ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.
وَكَذَا فِي أُورُشَلِيمَ أَقَامَ يَهُوشَافَاطُ مِنَ ٱللَّاوِيِّينَ وَٱلْكَهَنَةِ وَمِنْ رُؤُوسِ آبَاءِ إِسْرَائِيلَ لِقَضَاءِ ٱلرَّبِّ وَٱلدَّعَاوِي. وَرَجَعُوا إِلَى أُورُشَلِيمَ. ٨ 8
ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.
وَأَمَرَهُمْ قَائِلًا: «هَكَذَا تَفْعَلُونَ بِتَقْوَى ٱلرَّبِّ بِأَمَانَةٍ وَقَلْبٍ كَامِلٍ. ٩ 9
ಅವರಿಗೆ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ,
وَفِي كُلِّ دَعْوَى تَأْتِي إِلَيْكُمْ مِنْ إِخْوَتِكُمُ ٱلسَّاكِنِينَ فِي مُدُنِهِمْ، بَيْنَ دَمٍ وَدَمٍ، بَيْنَ شَرِيعَةٍ وَوَصِيَّةٍ مِنْ جِهَةِ فَرَائِضَ أَوْ أَحْكَامٍ، حَذِّرُوهُمْ فَلَا يَأْثَمُوا إِلَى ٱلرَّبِّ فَيَكُونَ غَضَبٌ عَلَيْكُمْ وَعَلَى إِخْوَتِكُمْ. هَكَذَا ٱفْعَلُوا فَلَا تَأْثَمُوا. ١٠ 10
೧೦ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.
وَهُوَذَا أَمَرْيَا ٱلْكَاهِنُ ٱلرَّأْسُ عَلَيْكُمْ فِي كُلِّ أُمُورِ ٱلرَّبِّ، وَزَبَدْيَا بْنُ يَشْمَعِئِيلَ ٱلرَّئِيسُ عَلَى بَيْتِ يَهُوذَا فِي كُلِّ أُمُورِ ٱلْمَلِكِ، وَٱلْعُرَفَاءُ ٱللَّاوِيُّونَ أَمَامَكُمْ. تَشَدَّدُوا وَٱفْعَلُوا، وَلْيَكُنِ ٱلرَّبُّ مَعَ ٱلصَّالِحِ». ١١ 11
೧೧ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.

< ٢ أخبار 19 >