< ٢ أخبار 19 >

وَرَجَعَ يَهُوشَافَاطُ مَلِكُ يَهُوذَا إِلَى بَيْتِهِ بِسَلَامٍ إِلَى أُورُشَلِيمَ. ١ 1
ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಅರಮನೆಗೆ ತಿರುಗಿಬಂದನು.
وَخَرَجَ لِلِقَائِهِ يَاهُو بْنُ حَنَانِي ٱلرَّائِي وَقَالَ لِلْمَلِكِ يَهُوشَافَاطَ: «أَتُسَاعِدُ ٱلشِّرِّيرَ وَتُحِبُّ مُبْغِضِي ٱلرَّبِّ؟ فَلِذَلِكَ ٱلْغَضَبُ عَلَيْكَ مِنْ قِبَلِ ٱلرَّبِّ. ٢ 2
ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.
غَيْرَ أَنَّهُ وُجِدَ فِيكَ أُمُورٌ صَالِحَةٌ لِأَنَّكَ نَزَعْتَ ٱلسَّوَارِيَ مِنَ ٱلْأَرْضِ وَهَيَّأْتَ قَلْبَكَ لِطَلَبِ ٱللهِ». ٣ 3
ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.
وَأَقَامَ يَهُوشَافَاطُ فِي أُورُشَلِيمَ، ثُمَّ رَجَعَ وَخَرَجَ أَيْضًا بَيْنَ ٱلشَّعْبِ مِنْ بِئْرِ سَبْعٍ إِلَى جَبَلِ أَفْرَايِمَ وَرَدَّهُمْ إِلَى ٱلرَّبِّ إِلَهِ آبَائِهِمْ. ٤ 4
ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದನು. ಅವನು ತಿರುಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯೀಮನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಕಡೆಗೆ ಅವರನ್ನು ತಿರುಗಿಸಿದನು.
وَأَقَامَ قُضَاةً فِي ٱلْأَرْضِ فِي كُلِّ مُدُنِ يَهُوذَا ٱلْمُحَصَّنَةِ فِي كُلِّ مَدِينَةٍ فَمَدِينَةٍ. ٥ 5
ಇದಲ್ಲದೆ ಅವನು ದೇಶದೊಳಗೆ ಪಟ್ಟಣ ಪಟ್ಟಣದಲ್ಲಿ ಯೆಹೂದದ ಸಮಸ್ತ ಕೋಟೆಗಳುಳ್ಳ ಪಟ್ಟಣಗಳೊಳಗೆ ನ್ಯಾಯಾಧಿಪತಿಗಳಿಗೆ,
وَقَالَ لِلْقُضَاةِ: «ٱنْظُرُوا مَا أَنْتُمْ فَاعِلُونَ، لِأَنَّكُمْ لَا تَقْضُونَ لِلْإِنْسَانِ بَلْ لِلرَّبِّ، وَهُوَ مَعَكُمْ فِي أَمْرِ ٱلْقَضَاءِ. ٦ 6
“ನೀವು ಮಾಡುವುದನ್ನು ನೋಡಿಕೊಳ್ಳಿರಿ. ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಯೆಹೋವ ದೇವರಿಗೋಸ್ಕರ ನ್ಯಾಯ ತೀರಿಸುತ್ತೀರಿ.
وَٱلْآنَ لِتَكُنْ هَيْبَةُ ٱلرَّبِّ عَلَيْكُمُ. ٱحْذَرُوا وَٱفْعَلُوا. لِأَنَّهُ لَيْسَ عِنْدَ ٱلرَّبِّ إِلَهِنَا ظُلْمٌ وَلَا مُحَابَاةٌ وَلَا ٱرْتِشَاءٌ». ٧ 7
ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.
وَكَذَا فِي أُورُشَلِيمَ أَقَامَ يَهُوشَافَاطُ مِنَ ٱللَّاوِيِّينَ وَٱلْكَهَنَةِ وَمِنْ رُؤُوسِ آبَاءِ إِسْرَائِيلَ لِقَضَاءِ ٱلرَّبِّ وَٱلدَّعَاوِي. وَرَجَعُوا إِلَى أُورُشَلِيمَ. ٨ 8
ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ,
وَأَمَرَهُمْ قَائِلًا: «هَكَذَا تَفْعَلُونَ بِتَقْوَى ٱلرَّبِّ بِأَمَانَةٍ وَقَلْبٍ كَامِلٍ. ٩ 9
“ನೀವು ಈ ಕಾರ್ಯವನ್ನು ಯೆಹೋವ ದೇವರ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣಹೃದಯದಿಂದಲೂ ಮಾಡಬೇಕು.
وَفِي كُلِّ دَعْوَى تَأْتِي إِلَيْكُمْ مِنْ إِخْوَتِكُمُ ٱلسَّاكِنِينَ فِي مُدُنِهِمْ، بَيْنَ دَمٍ وَدَمٍ، بَيْنَ شَرِيعَةٍ وَوَصِيَّةٍ مِنْ جِهَةِ فَرَائِضَ أَوْ أَحْكَامٍ، حَذِّرُوهُمْ فَلَا يَأْثَمُوا إِلَى ٱلرَّبِّ فَيَكُونَ غَضَبٌ عَلَيْكُمْ وَعَلَى إِخْوَتِكُمْ. هَكَذَا ٱفْعَلُوا فَلَا تَأْثَمُوا. ١٠ 10
ಇದಲ್ಲದೆ ಜೀವಹತ್ಯ, ನ್ಯಾಯಕ್ಕೂ, ಆಜ್ಞೆಗೂ, ನಿಯಮಗಳಿಗೂ, ನ್ಯಾಯತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ, ರೌದ್ರವು ನಿಮ್ಮ ಮೇಲೆಯೂ, ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ. ಆಗ ನೀವು ಅಪರಾಧವಿಲ್ಲದವರಾಗಿರುವಿರಿ.
وَهُوَذَا أَمَرْيَا ٱلْكَاهِنُ ٱلرَّأْسُ عَلَيْكُمْ فِي كُلِّ أُمُورِ ٱلرَّبِّ، وَزَبَدْيَا بْنُ يَشْمَعِئِيلَ ٱلرَّئِيسُ عَلَى بَيْتِ يَهُوذَا فِي كُلِّ أُمُورِ ٱلْمَلِكِ، وَٱلْعُرَفَاءُ ٱللَّاوِيُّونَ أَمَامَكُمْ. تَشَدَّدُوا وَٱفْعَلُوا، وَلْيَكُنِ ٱلرَّبُّ مَعَ ٱلصَّالِحِ». ١١ 11
“ಮುಖ್ಯಯಾಜಕನಾದ ಅಮರ್ಯನು ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಯೆಹೂದದ ಮನೆಯ ನಾಯಕನಾಗಿರುವ ಇಷ್ಮಾಯೇಲನ ಮಗ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇರುವರು. ಇದಲ್ಲದೆ ಲೇವಿಯರು ನಿಮ್ಮ ಮುಂದೆ ಅಧಿಕಾರಿಗಳಾಗಿರುವರು. ನೀವು ಬಲಗೊಂಡು ಕೆಲಸ ನಡೆಸಿರಿ. ಯೆಹೋವ ದೇವರು ಒಳ್ಳೆಯವರ ಸಂಗಡ ಇರುವರು,” ಎಂದನು.

< ٢ أخبار 19 >