< ٢ أخبار 20 >

ثُمَّ بَعْدَ ذَلِكَ أَتَى بَنُو مُوآبَ وَبَنُو عَمُّونَ وَمَعَهُمُ ٱلْعَمُّونِيُّونَ عَلَى يَهُوشَافَاطَ لِلْمُحَارَبَةِ. ١ 1
ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.
فَجَاءَ أُنَاسٌ وَأَخْبَرُوا يَهُوشَافَاطَ قَائِلِينَ: «قَدْ جَاءَ عَلَيْكَ جُمْهُورٌ كَثِيرٌ مِنْ عَبْرِ ٱلْبَحْرِ مِنْ أَرَامَ، وَهَا هُمْ فِي حَصُّونَ تَامَارَ». هِيَ عَيْنُ جَدْيٍ. ٢ 2
ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು.
فَخَافَ يَهُوشَافَاطُ وَجَعَلَ وَجْهَهُ لِيَطْلُبَ ٱلرَّبَّ، وَنَادَى بِصَوْمٍ فِي كُلِّ يَهُوذَا. ٣ 3
ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.
وَٱجْتَمَعَ يَهُوذَا لِيَسْأَلُوا ٱلرَّبَّ. جَاءُوا أَيْضًا مِنْ كُلِّ مُدُنِ يَهُوذَا لِيَسْأَلُوا ٱلرَّبَّ. ٤ 4
ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.
فَوَقَفَ يَهُوشَافَاطُ فِي جَمَاعَةِ يَهُوذَا وَأُورُشَلِيمَ فِي بَيْتِ ٱلرَّبِّ أَمَامَ ٱلدَّارِ ٱلْجَدِيدَةِ ٥ 5
ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,
وَقَالَ: «يَارَبُّ إِلَهَ آبَائِنَا، أَمَا أَنْتَ هُوَ ٱللهُ فِي ٱلسَّمَاءِ، وَأَنْتَ ٱلْمُتَسَلِّطُ عَلَى جَمِيعِ مَمَالِكِ ٱلْأُمَمِ، وَبِيَدِكَ قُوَّةٌ وَجَبَرُوتٌ وَلَيْسَ مَنْ يَقِفُ مَعَكَ؟ ٦ 6
“ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?
أَلَسْتَ أَنْتَ إِلَهَنَا ٱلَّذِي طَرَدْتَ سُكَّانَ هَذِهِ ٱلْأَرْضِ مِنْ أَمَامِ شَعْبِكَ إِسْرَائِيلَ وَأَعْطَيْتَهَا لِنَسْلِ إِبْرَاهِيمَ خَلِيلِكَ إِلَى ٱلْأَبَدِ؟ ٧ 7
ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?
فَسَكَنُوا فِيهَا وَبَنَوْا لَكَ فِيهَا مَقْدِسًا لِٱسْمِكَ قَائِلِينَ: ٨ 8
ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು.
إِذَا جَاءَ عَلَيْنَا شَرٌّ، سَيْفٌ قَضَاءٌ أَوْ وَبَأٌ أَوْ جُوعٌ، وَوَقَفْنَا أَمَامَ هَذَا ٱلْبَيْتِ وَأَمَامَكَ، لِأَنَّ ٱسْمَكَ فِي هَذَا ٱلْبَيْتِ، وَصَرَخْنَا إِلَيْكَ مِنْ ضِيقِنَا فَإِنَّكَ تَسْمَعُ وَتُخَلِّصُ. ٩ 9
ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಆಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ತು ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ.
وَٱلْآنَ هُوَذَا بَنُو عَمُّونَ وَمُوآبُ وَجَبَلُ سَاعِيرَ، ٱلَّذِينَ لَمْ تَدَعْ إِسْرَائِيلَ يَدْخُلُونَ إِلَيْهِمْ حِينَ جَاءُوا مِنْ أَرْضِ مِصْرَ، بَلْ مَالُوا عَنْهُمْ وَلَمْ يُهْلِكُوهُمْ، ١٠ 10
೧೦ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.
فَهُوَذَا هُمْ يُكَافِئُونَنَا بِمَجِيئِهِمْ لِطَرْدِنَا مِنْ مُلْكِكَ ٱلَّذِي مَلَّكْتَنَا إِيَّاهُ. ١١ 11
೧೧ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.
يَا إِلَهَنَا أَمَا تَقْضِي عَلَيْهِمْ، لِأَنَّهُ لَيْسَ فِينَا قُوَّةٌ أَمَامَ هَذَا ٱلْجُمْهُورِ ٱلْكَثِيرِ ٱلْآتِي عَلَيْنَا، وَنَحْنُ لَا نَعْلَمُ مَاذَا نَعْمَلُ وَلَكِنْ نَحْوَكَ أَعْيُنُنَا». ١٢ 12
೧೨ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.
وَكَانَ كُلُّ يَهُوذَا وَاقِفِينَ أَمَامَ ٱلرَّبِّ مَعَ أَطْفَالِهِمْ وَنِسَائِهِمْ وَبَنِيهِمْ. ١٣ 13
೧೩ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.
وَإِنَّ يَحْزَئِيلَ بْنَ زَكَرِيَّا بْنِ بَنَايَا بْنِ يَعِيئِيلَ بْنِ مَتَّنِيَّا ٱللَّاوِيِّ مِنْ بَنِي آسَافَ، كَانَ عَلَيْهِ رُوحُ ٱلرَّبِّ فِي وَسَطِ ٱلْجَمَاعَةِ، ١٤ 14
೧೪ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.
فَقَالَ: «ٱصْغَوْا يَا جَمِيعَ يَهُوذَا وَسُكَّانَ أُورُشَلِيمَ، وَأَيُّهَا ٱلْمَلِكُ يَهُوشَافَاطُ. هَكَذَا قَالَ ٱلرَّبُّ لَكُمْ: لَا تَخَافُوا وَلَا تَرْتَاعُوا بِسَبَبِ هَذَا ٱلْجُمْهُورِ ٱلْكَثِيرِ، لِأَنَّ ٱلْحَرْبَ لَيْسَتْ لَكُمْ بَلْ لِلهِ. ١٥ 15
೧೫ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.
غَدًا ٱنْزِلُوا عَلَيْهِمْ. هُوَذَا هُمْ صَاعِدُونَ فِي عَقَبَةِ صِيصَ فَتَجِدُوهُمْ فِي أَقْصَى ٱلْوَادِي أَمَامَ بَرِّيَّةِ يَرُوئِيلَ. ١٦ 16
೧೬ನಾಳೆ ಬೆಳಗ್ಗೆ ಅವರಿಗೆ ವಿರುದ್ಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
لَيْسَ عَلَيْكُمْ أَنْ تُحَارِبُوا فِي هَذِهِ. قِفُوا ٱثْبُتُوا وَٱنْظُرُوا خَلَاصَ ٱلرَّبِّ مَعَكُمْ يَا يَهُوذَا وَأُورُشَلِيمُ. لَا تَخَافُوا وَلَا تَرْتَاعُوا. غَدًا ٱخْرُجُوا لِلِقَائِهِمْ وَٱلرَّبُّ مَعَكُمْ». ١٧ 17
೧೭ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.
فَخَرَّ يَهُوشَافَاطُ لِوَجْهِهِ عَلَى ٱلْأَرْضِ، وَكُلُّ يَهُوذَا وَسُكَّانُ أُورُشَلِيمَ سَقَطُوا أَمَامَ ٱلرَّبِّ سُجُودًا لِلرَّبِّ. ١٨ 18
೧೮ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.
فَقَامَ ٱللَّاوِيُّونَ مِنْ بَنِي ٱلْقَهَاتِيِّينَ وَمِنْ بَنِي ٱلْقُورَحِيِّينَ لِيُسَبِّحُوا ٱلرَّبَّ إِلَهَ إِسْرَائِيلَ بِصَوْتٍ عَظِيمٍ جِدًّا. ١٩ 19
೧೯ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.
وَبَكَّرُوا صَبَاحًا وَخَرَجُوا إِلَى بَرِّيَّةِ تَقُوعَ. وَعِنْدَ خُرُوجِهِمْ وَقَفَ يَهُوشَافَاطُ وَقَالَ: «ٱسْمَعُوا يَايَهُوذَا وَسُكَّانَ أُورُشَلِيمَ، آمِنُوا بِٱلرَّبِّ إِلَهِكُمْ فَتَأْمَنُوا. آمِنُوا بِأَنْبِيَائِهِ فَتُفْلِحُوا». ٢٠ 20
೨೦ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.
وَلَمَّا ٱسْتَشَارَ ٱلشَّعْبَ أَقَامَ مُغَنِّينَ لِلرَّبِّ وَمُسَبِّحِينَ فِي زِينَةٍ مُقَدَّسَةٍ عِنْدَ خُرُوجِهِمْ أَمَامَ ٱلْمُتَجَرِّدِينَ وَقَائِلِينَ: «ٱحْمَدُوا ٱلرَّبَّ لِأَنَّ إِلَى ٱلْأَبَدِ رَحْمَتَهُ». ٢١ 21
೨೧ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.
وَلَمَّا ٱبْتَدَأُوا فِي ٱلْغِنَاءِ وَٱلتَّسْبِيحِ جَعَلَ ٱلرَّبُّ أَكْمِنَةً عَلَى بَنِي عَمُّونَ وَمُوآبَ وَجَبَلِ سَاعِيرَ ٱلْآتِينَ عَلَى يَهُوذَا فَٱنْكَسَرُوا. ٢٢ 22
೨೨ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.
وَقَامَ بَنُو عَمُّونَ وَمُوآبُ عَلَى سُكَّانِ جَبَلِ سَاعِيرَ لِيُحَرِّمُوهُمْ وَيُهْلِكُوهُمْ. وَلَمَّا فَرَغُوا مِنْ سُكَّانِ سَاعِيرَ سَاعَدَ بَعْضُهُمْ عَلَى إِهْلَاكِ بَعْضٍ. ٢٣ 23
೨೩ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.
وَلَمَّا جَاءَ يَهُوذَا إِلَى ٱلْمَرْقَبِ فِي ٱلْبَرِّيَّةِ تَطَلَّعُوا نَحْوَ ٱلْجُمْهُورِ وَإِذَا هُمْ جُثَثٌ سَاقِطَةٌ عَلَى ٱلْأَرْضِ وَلَمْ يَنْفَلِتْ أَحَدٌ. ٢٤ 24
೨೪ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.
فَأَتَى يَهُوشَافَاطُ وَشَعْبُهُ لِنَهْبِ أَمْوَالِهِمْ، فَوَجَدُوا بَيْنَهُمْ أَمْوَالًا وَجُثَثًا وَأَمْتِعَةً ثَمِينَةً بِكَثْرَةٍ، فَأَخَذُوهَا لِأَنْفُسِهِمْ حَتَّى لَمْ يَقْدِرُوا أَنْ يَحْمِلُوهَا. وَكَانُوا ثَلَاثَةَ أَيَّامٍ يَنْهَبُونَ ٱلْغَنِيمَةَ لِأَنَّهَا كَانَتْ كَثِيرَةً. ٢٥ 25
೨೫ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.
وَفِي ٱلْيَوْمِ ٱلرَّابِعِ ٱجْتَمَعُوا فِي وَادِي بَرَكَةَ، لِأَنَّهُمْ هُنَاكَ بَارَكُوا ٱلرَّبَّ، لِذَلِكَ دَعَوْا ٱسْمَ ذَلِكَ ٱلْمَكَانِ «وَادِي بَرَكَةَ» إِلَى ٱلْيَوْمِ. ٢٦ 26
೨೬ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.
ثُمَّ ٱرْتَدَّ كُلُّ رِجَالِ يَهُوذَا وَأُورُشَلِيمَ وَيَهُوشَافَاطُ بِرَأْسِهِمْ لِيَرْجِعُوا إِلَى أُورُشَلِيمَ بِفَرَحٍ، لِأَنَّ ٱلرَّبَّ فَرَّحَهُمْ عَلَى أَعْدَائِهِمْ. ٢٧ 27
೨೭ಆ ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು.
وَدَخَلُوا أُورُشَلِيمَ بِٱلرَّبَابِ وَٱلْعِيدَانِ وَٱلْأَبْوَاقِ إِلَى بَيْتِ ٱلرَّبِّ. ٢٨ 28
೨೮ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.
وَكَانَتْ هَيْبَةُ ٱللهِ عَلَى كُلِّ مَمَالِكِ ٱلْأَرَاضِي حِينَ سَمِعُوا أَنَّ ٱلرَّبَّ حَارَبَ أَعْدَاءَ إِسْرَائِيلَ. ٢٩ 29
೨೯ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.
وَٱسْتَرَاحَتْ مَمْلَكَةُ يَهُوشَافَاطَ، وَأَرَاحَهُ إِلَهُهُ مِنْ كُلِّ جِهَةٍ. ٣٠ 30
೩೦ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.
وَمَلَكَ يَهُوشَافَاطُ عَلَى يَهُوذَا. كَانَ ٱبْنَ خَمْسٍ وَثَلَاثِينَ سَنَةً حِينَ مَلَكَ، وَمَلَكَ خَمْسًا وَعِشْرِينَ سَنَةً فِي أُورُشَلِيمَ، وَٱسْمُ أُمِّهِ عَزُوبَةُ بِنْتُ شَلْحِي. ٣١ 31
೩೧ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಡಳಿತ ನಡೆಸಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.
وَسَارَ فِي طَرِيقِ أَبِيهِ آسَا وَلَمْ يَحِدْ عَنْهَا إِذْ عَمِلَ ٱلْمُسْتَقِيمَ فِي عَيْنَيِ ٱلرَّبِّ. ٣٢ 32
೩೨ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.
إِلَّا أَنَّ ٱلْمُرْتَفَعَاتِ لَمْ تُنْتَزَعْ، بَلْ كَانَ ٱلشَّعْبُ لَمْ يُعِدُّوا بَعْدُ قُلُوبَهُمْ لِإِلَهِ آبَائِهِمْ. ٣٣ 33
೩೩ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.
وَبَقِيَّةُ أُمُورِ يَهُوشَافَاطَ ٱلْأُولَى وَٱلْأَخِيرَةِ، هَا هِيَ مَكْتُوبَةٌ فِي أَخْبَارِ يَاهُوَ بْنِ حَنَانِي ٱلْمَذْكُورِ فِي سِفْرِ مُلُوكِ إِسْرَائِيلَ. ٣٤ 34
೩೪ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.
ثُمَّ بَعْدَ ذَلِكَ ٱتَّحَدَ يَهُوشَافَاطُ مَلِكُ يَهُوذَا مَعَ أَخَزْيَا مَلِكِ إِسْرَائِيلَ ٱلَّذِي أَسَاءَ فِي عَمَلِهِ. ٣٥ 35
೩೫ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡನು.
فَٱتَّحَدَ مَعَهُ فِي عَمَلِ سُفُنٍ تَسِيرُ إِلَى تَرْشِيشَ، فَعَمِلَا ٱلسُّفُنَ فِي عِصْيُونَ جَابِرَ. ٣٦ 36
೩೬ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡುಗುಗಳನ್ನು ಕಟ್ಟಬೇಕೆಂದು ಒಡಬಂಡಿಕೆ ಮಾಡಿಕೊಂಡು ಅವುಗಳನ್ನು ಎಚ್ಯೋನ್ ಗೆಬೆರಿನಲ್ಲಿ ಕಟ್ಟಿಸಿದರು.
وَتَنَبَّأَ أَلِيعَزَرُ بْنُ دُودَاوَاهُو مِنْ مَرِيشَةَ عَلَى يَهُوشَافَاطَ قَائِلًا: «لِأَنَّكَ ٱتَّحَدْتَ مَعَ أَخَزْيَا، قَدِ ٱقْتَحَمَ ٱلرَّبُّ أَعْمَالَكَ». فَتَكَسَّرَتِ ٱلسُّفُنُ وَلَمْ تَسْتَطِعِ ٱلسَّيْرَ إِلَى تَرْشِيشَ. ٣٧ 37
೩೭ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.

< ٢ أخبار 20 >