< ٢ أخبار 21 >

وَٱضْطَجَعَ يَهُوشَافَاطُ مَعَ آبَائِهِ فَدُفِنَ مَعَ آبَائِهِ فِي مَدِينَةِ دَاوُدَ، وَمَلَكَ يَهُورَامُ ٱبْنُهُ عِوَضًا عَنْهُ. ١ 1
ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು.
وَكَانَ لَهُ إِخْوَةٌ، بَنُو يَهُوشَافَاطَ: عَزَرْيَا وَيَحِيئِيلُ وَزَكَرِيَّا وَعَزَرْيَاهُو وَمِيخَائِيلُ وَشَفَطْيَا. كُلُّ هَؤُلَاءِ بَنُو يَهُوشَافَاطَ مَلِكِ إِسْرَائِيلَ. ٢ 2
ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮಿಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಇಸ್ರಾಯೇಲರ ಅರಸನಾದ ಯೆಹೋಷಾಫಾಟನ ಮಕ್ಕಳು.
وَأَعْطَاهُمْ أَبُوهُمْ عَطَايَا كَثِيرَةً مِنْ فِضَّةٍ وَذَهَبٍ وَتُحَفٍ مَعَ مُدُنٍ حَصِينَةٍ فِي يَهُوذَا. وَأَمَّا ٱلْمَمْلَكَةُ فَأَعْطَاهَا لِيَهُورَامَ لِأَنَّهُ ٱلْبِكْرُ. ٣ 3
ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
فَقَامَ يَهُورَامُ عَلَى مَمْلَكَةِ أَبِيهِ وَتَشَدَّدَ وَقَتَلَ جَمِيعَ إِخْوَتِهِ بِٱلسَّيْفِ، وَأَيْضًا بَعْضًا مِنْ رُؤَسَاءِ إِسْرَائِيلَ. ٤ 4
ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.
كَانَ يَهُورَامُ ٱبْنَ ٱثْنَتَيْنِ وَثَلَاثِينَ سَنَةً حِينَ مَلَكَ، وَمَلَكَ ثَمَانِيَ سِنِينَ فِي أُورُشَلِيمَ. ٥ 5
ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
وَسَارَ فِي طَرِيقِ مُلُوكِ إِسْرَائِيلَ كَمَا فَعَلَ بَيْتُ أَخْآبَ، لِأَنَّ بِنْتَ أَخْآبَ كَانَتْ لَهُ ٱمْرَأَةً. وَعَمِلَ ٱلشَّرَّ فِي عَيْنَيِ ٱلرَّبِّ. ٦ 6
ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
وَلَمْ يَشَإِ ٱلرَّبُّ أَنْ يُبِيدَ بَيْتَ دَاوُدَ لِأَجْلِ ٱلْعَهْدِ ٱلَّذِي قَطَعَهُ مَعَ دَاوُدَ، وَلِأَنَّهُ قَالَ إِنَّهُ يُعْطِيهِ وَبَنِيهِ سِرَاجًا كُلَّ ٱلْأَيَّامِ. ٧ 7
ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.
فِي أَيَّامِهِ عَصَى أَدُومُ مِنْ تَحْتِ يَدِ يَهُوذَا وَمَلَّكُوا عَلَى أَنْفُسِهِمْ مَلِكًا. ٨ 8
ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.
وَعَبَرَ يَهُورَامُ مَعَ رُؤَسَائِهِ وَجَمِيعُ ٱلْمَرْكَبَاتِ مَعَهُ، وَقَامَ لَيْلًا وَضَرَبَ أَدُومَ ٱلْمُحِيطَ بِهِ وَرُؤَسَاءَ ٱلْمَرْكَبَاتِ. ٩ 9
ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.
فَعَصَى أَدُومُ مِنْ تَحْتِ يَدِ يَهُوذَا إِلَى هَذَا ٱلْيَوْمِ. حِينَئِذٍ عَصَتْ لِبْنَةُ فِي ذَلِكَ ٱلْوَقْتِ مِنْ تَحْتِ يَدِهِ لِأَنَّهُ تَرَكَ ٱلرَّبَّ إِلَهَ آبَائِهِ. ١٠ 10
೧೦ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.
وَهُوَ أَيْضًا عَمِلَ مُرْتَفَعَاتٍ فِي جِبَالِ يَهُوذَا، وَجَعَلَ سُكَّانَ أُورُشَلِيمَ يَزْنُونَ، وَطَوَّحَ يَهُوذَا. ١١ 11
೧೧ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.
وَأَتَتْ إِلَيْهِ كِتَابَةٌ مِنْ إِيلِيَّا ٱلنَّبِيِّ تَقُولُ: «هَكَذَا قَالَ ٱلرَّبُّ إِلَهُ دَاوُدَ أَبِيكَ: مِنْ أَجْلِ أَنَّكَ لَمْ تَسْلُكْ فِي طُرُقِ يَهُوشَافَاطَ أَبِيكَ وَطُرُقِ آسَا مَلِكِ يَهُوذَا، ١٢ 12
೧೨ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;
بَلْ سَلَكْتَ فِي طُرُقِ مُلُوكِ إِسْرَائِيلَ، وَجَعَلْتَ يَهُوذَا وَسُكَّانَ أُورُشَلِيمَ يَزْنُونَ كَزِنَا بَيْتِ أَخْآبَ، وَقَتَلْتَ أَيْضًا إِخْوَتَكَ مِنْ بَيْتِ أَبِيكَ ٱلَّذِينَ هُمْ أَفْضَلُ مِنْكَ، ١٣ 13
೧೩ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.
هُوَذَا يَضْرِبُ ٱلرَّبُّ شَعْبَكَ وَبَنِيكَ وَنِسَاءَكَ وَكُلَّ مَالِكَ ضَرْبَةً عَظِيمَةً. ١٤ 14
೧೪ಆದುದರಿಂದ ಯೆಹೋವನು ನಿನ್ನ ಪ್ರಜೆಗಳ, ಹೆಂಡತಿ ಮಕ್ಕಳನ್ನೂ, ಆಸ್ತಿಪಾಸ್ತಿ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವನು.
وَإِيَّاكَ بِأَمْرَاضٍ كَثِيرَةٍ بِدَاءِ أَمْعَائِكَ حَتَّى تَخْرُجَ أَمْعَاؤُكَ بِسَبَبِ ٱلْمَرَضِ يَوْمًا فَيَوْمًا». ١٥ 15
೧೫ನಿನಗಾದರೋ ಕರುಳು ಬೇನೆಯ ಕಠಿಣ ರೋಗ ಬರುವುದು. ಅದು ಬಹು ದಿನಗಳವರೆಗೂ ಇದ್ದು ವಾಸಿಯಾಗದೇ ನಿನ್ನ ಕರುಳುಗಳು ಹೊರಗೆ ಬೀಳುವುವು” ಎಂದು ತಿಳಿಸಿದನು.
وَأَهَاجَ ٱلرَّبُّ عَلَى يَهُورَامَ رُوحَ ٱلْفِلِسْطِينِيِّينَ وَٱلْعَرَبَ ٱلَّذِينَ بِجَانِبِ ٱلْكُوشِيِّينَ، ١٦ 16
೧೬ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.
فَصَعِدُوا إِلَى يَهُوذَا وَٱفْتَتَحُوهَا، وَسَبَوْا كُلَّ ٱلْأَمْوَالِ ٱلْمَوْجُودَةِ فِي بَيْتِ ٱلْمَلِكِ مَعَ بَنِيهِ وَنِسَائِهِ أَيْضًا، وَلَمْ يَبْقَ لَهُ ٱبْنٌ إِلَّا يَهُوآحَازُ أَصْغَرُ بَنِيهِ. ١٧ 17
೧೭ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.
وَبَعْدَ هَذَا كُلِّهِ ضَرَبَهُ ٱلرَّبُّ فِي أَمْعَائِهِ بِمَرَضٍ لَيْسَ لَهُ شِفَاءٌ. ١٨ 18
೧೮ಇದೆಲ್ಲಾ ಆದಮೇಲೆ, ಯೆಹೋವನು ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದನು.
وَكَانَ مِنْ يَوْمٍ إِلَى يَوْمٍ وَحَسَبَ ذِهَابِ ٱلْمُدَّةِ عِنْدَ نَهَايَةِ سَنَتَيْنِ، أَنَّ أَمْعَاءَهُ خَرَجَتْ بِسَبَبِ مَرَضِهِ، فَمَاتَ بِأَمْرَاضٍ رَدِيَّةٍ، وَلَمْ يَعْمَلْ لَهُ شَعْبُهُ حَرِيقَةً كَحَرِيقَةِ آبَائِهِ. ١٩ 19
೧೯ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ.
كَانَ ٱبْنَ ٱثْنَتَيْنِ وَثَلَاثِينَ سَنَةً حِينَ مَلَكَ، وَمَلَكَ ثَمَانِيَ سِنِينَ فِي أُورُشَلِيمَ، وَذَهَبَ غَيْرَ مَأْسُوفٍ عَلَيْهِ، وَدَفَنُوهُ فِي مَدِينَةِ دَاوُدَ، وَلَكِنْ لَيْسَ فِي قُبُورِ ٱلْمُلُوكِ. ٢٠ 20
೨೦ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.

< ٢ أخبار 21 >