< ٢ أخبار 21 >

وَٱضْطَجَعَ يَهُوشَافَاطُ مَعَ آبَائِهِ فَدُفِنَ مَعَ آبَائِهِ فِي مَدِينَةِ دَاوُدَ، وَمَلَكَ يَهُورَامُ ٱبْنُهُ عِوَضًا عَنْهُ. ١ 1
ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.
وَكَانَ لَهُ إِخْوَةٌ، بَنُو يَهُوشَافَاطَ: عَزَرْيَا وَيَحِيئِيلُ وَزَكَرِيَّا وَعَزَرْيَاهُو وَمِيخَائِيلُ وَشَفَطْيَا. كُلُّ هَؤُلَاءِ بَنُو يَهُوشَافَاطَ مَلِكِ إِسْرَائِيلَ. ٢ 2
ಇವನ ಸಹೋದರರಾಗಿರುವ ಯೆಹೋಷಾಫಾಟನ ಪುತ್ರರಾದ ಅಜರ್ಯನೂ, ಯೆಹೀಯೇಲನೂ, ಜೆಕರ್ಯನೂ, ಅಜರ್ಯನೂ, ಮೀಕಾಯೇಲನೂ, ಶೆಫಟ್ಯನೂ ಇದ್ದರು. ಇವರೆಲ್ಲರು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಪುತ್ರರು.
وَأَعْطَاهُمْ أَبُوهُمْ عَطَايَا كَثِيرَةً مِنْ فِضَّةٍ وَذَهَبٍ وَتُحَفٍ مَعَ مُدُنٍ حَصِينَةٍ فِي يَهُوذَا. وَأَمَّا ٱلْمَمْلَكَةُ فَأَعْطَاهَا لِيَهُورَامَ لِأَنَّهُ ٱلْبِكْرُ. ٣ 3
ಅವರ ತಂದೆ ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಯನ್ನೂ, ಬಂಗಾರವನ್ನೂ, ಬೆಲೆಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲ ಮಗನಾದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
فَقَامَ يَهُورَامُ عَلَى مَمْلَكَةِ أَبِيهِ وَتَشَدَّدَ وَقَتَلَ جَمِيعَ إِخْوَتِهِ بِٱلسَّيْفِ، وَأَيْضًا بَعْضًا مِنْ رُؤَسَاءِ إِسْرَائِيلَ. ٤ 4
ಯೆಹೋರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ, ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ, ಇಸ್ರಾಯೇಲಿನ ಪ್ರಧಾನರಲ್ಲಿ ಕೆಲವರನ್ನೂ ಖಡ್ಗದಿಂದ ಕೊಂದುಹಾಕಿದನು.
كَانَ يَهُورَامُ ٱبْنَ ٱثْنَتَيْنِ وَثَلَاثِينَ سَنَةً حِينَ مَلَكَ، وَمَلَكَ ثَمَانِيَ سِنِينَ فِي أُورُشَلِيمَ. ٥ 5
ಯೆಹೋರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
وَسَارَ فِي طَرِيقِ مُلُوكِ إِسْرَائِيلَ كَمَا فَعَلَ بَيْتُ أَخْآبَ، لِأَنَّ بِنْتَ أَخْآبَ كَانَتْ لَهُ ٱمْرَأَةً. وَعَمِلَ ٱلشَّرَّ فِي عَيْنَيِ ٱلرَّبِّ. ٦ 6
ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
وَلَمْ يَشَإِ ٱلرَّبُّ أَنْ يُبِيدَ بَيْتَ دَاوُدَ لِأَجْلِ ٱلْعَهْدِ ٱلَّذِي قَطَعَهُ مَعَ دَاوُدَ، وَلِأَنَّهُ قَالَ إِنَّهُ يُعْطِيهِ وَبَنِيهِ سِرَاجًا كُلَّ ٱلْأَيَّامِ. ٧ 7
ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.
فِي أَيَّامِهِ عَصَى أَدُومُ مِنْ تَحْتِ يَدِ يَهُوذَا وَمَلَّكُوا عَلَى أَنْفُسِهِمْ مَلِكًا. ٨ 8
ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.
وَعَبَرَ يَهُورَامُ مَعَ رُؤَسَائِهِ وَجَمِيعُ ٱلْمَرْكَبَاتِ مَعَهُ، وَقَامَ لَيْلًا وَضَرَبَ أَدُومَ ٱلْمُحِيطَ بِهِ وَرُؤَسَاءَ ٱلْمَرْكَبَاتِ. ٩ 9
ಆಗ ಯೆಹೋರಾಮನು ತನ್ನ ಪ್ರಧಾನರ ಸಂಗಡ, ಎಲ್ಲಾ ರಥಬಲವನ್ನು ತೆಗೆದುಕೊಂಡುಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ, ತನ್ನ ರಥಗಳ ಅಧಿಪತಿಗಳನ್ನೂ ಸುತ್ತುವರೆದಿದ್ದ ಎದೋಮ್ಯರನ್ನು ಸೋಲಿಸಿದನು.
فَعَصَى أَدُومُ مِنْ تَحْتِ يَدِ يَهُوذَا إِلَى هَذَا ٱلْيَوْمِ. حِينَئِذٍ عَصَتْ لِبْنَةُ فِي ذَلِكَ ٱلْوَقْتِ مِنْ تَحْتِ يَدِهِ لِأَنَّهُ تَرَكَ ٱلرَّبَّ إِلَهَ آبَائِهِ. ١٠ 10
ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು.
وَهُوَ أَيْضًا عَمِلَ مُرْتَفَعَاتٍ فِي جِبَالِ يَهُوذَا، وَجَعَلَ سُكَّانَ أُورُشَلِيمَ يَزْنُونَ، وَطَوَّحَ يَهُوذَا. ١١ 11
ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.
وَأَتَتْ إِلَيْهِ كِتَابَةٌ مِنْ إِيلِيَّا ٱلنَّبِيِّ تَقُولُ: «هَكَذَا قَالَ ٱلرَّبُّ إِلَهُ دَاوُدَ أَبِيكَ: مِنْ أَجْلِ أَنَّكَ لَمْ تَسْلُكْ فِي طُرُقِ يَهُوشَافَاطَ أَبِيكَ وَطُرُقِ آسَا مَلِكِ يَهُوذَا، ١٢ 12
ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ,
بَلْ سَلَكْتَ فِي طُرُقِ مُلُوكِ إِسْرَائِيلَ، وَجَعَلْتَ يَهُوذَا وَسُكَّانَ أُورُشَلِيمَ يَزْنُونَ كَزِنَا بَيْتِ أَخْآبَ، وَقَتَلْتَ أَيْضًا إِخْوَتَكَ مِنْ بَيْتِ أَبِيكَ ٱلَّذِينَ هُمْ أَفْضَلُ مِنْكَ، ١٣ 13
ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು, ಅಹಾಬನ ಮನೆಯವರು ದೇವದ್ರೋಹ ಮಾಡಿದಂತೆ, ಯೆಹೂದದವರನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ ದ್ರೋಹ ಮಾಡಲು ಪ್ರೇರೇಪಿಸಿ, ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆಯವರಾದ ನಿನ್ನ ಸಹೋದರರನ್ನು ಕೊಂದುಹಾಕಿದ್ದರಿಂದ,
هُوَذَا يَضْرِبُ ٱلرَّبُّ شَعْبَكَ وَبَنِيكَ وَنِسَاءَكَ وَكُلَّ مَالِكَ ضَرْبَةً عَظِيمَةً. ١٤ 14
ಯೆಹೋವ ದೇವರು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ, ನಿನ್ನ ಮಕ್ಕಳನ್ನೂ, ನಿನ್ನ ಹೆಂಡತಿಯರನ್ನೂ, ನಿನ್ನ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾರೆ.
وَإِيَّاكَ بِأَمْرَاضٍ كَثِيرَةٍ بِدَاءِ أَمْعَائِكَ حَتَّى تَخْرُجَ أَمْعَاؤُكَ بِسَبَبِ ٱلْمَرَضِ يَوْمًا فَيَوْمًا». ١٥ 15
ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವುದರಿಂದ ನಿನ್ನ ಕರುಳುಗಳು ಹೊರಕ್ಕೆ ಬರುವವರೆಗೆ ಕರುಳುಬೇನೆಯ ರೋಗದಿಂದ ನಿನಗೆ ಕಠಿಣರೋಗ ಬರುವುದು,’” ಎಂದು ಬರೆದಿದ್ದನು.
وَأَهَاجَ ٱلرَّبُّ عَلَى يَهُورَامَ رُوحَ ٱلْفِلِسْطِينِيِّينَ وَٱلْعَرَبَ ٱلَّذِينَ بِجَانِبِ ٱلْكُوشِيِّينَ، ١٦ 16
ಇದಲ್ಲದೆ ಕೂಷ್ಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಯೆಹೋವ ದೇವರು ಎಬ್ಬಿಸಿದರು.
فَصَعِدُوا إِلَى يَهُوذَا وَٱفْتَتَحُوهَا، وَسَبَوْا كُلَّ ٱلْأَمْوَالِ ٱلْمَوْجُودَةِ فِي بَيْتِ ٱلْمَلِكِ مَعَ بَنِيهِ وَنِسَائِهِ أَيْضًا، وَلَمْ يَبْقَ لَهُ ٱبْنٌ إِلَّا يَهُوآحَازُ أَصْغَرُ بَنِيهِ. ١٧ 17
ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ನುಗ್ಗಿ, ಅರಸನ ಅರಮನೆಯಲ್ಲಿ ಸಿಕ್ಕಿದ ಸಮಸ್ತ ಸ್ಥಿತಿಯನ್ನೂ, ಅವನ ಪುತ್ರರನ್ನೂ, ಅವನ ಹೆಂಡತಿಯರನ್ನೂ ತೆಗೆದುಕೊಂಡು ಹೋದರು. ಆದ್ದರಿಂದ ಅವನ ಪುತ್ರರಲ್ಲಿ ಚಿಕ್ಕವನಾದ ಯೆಹೋವಾಹಾಜನ ಹೊರತು ಅವನಿಗೆ ಪುತ್ರರು ಯಾರೂ ಉಳಿಯಲಿಲ್ಲ.
وَبَعْدَ هَذَا كُلِّهِ ضَرَبَهُ ٱلرَّبُّ فِي أَمْعَائِهِ بِمَرَضٍ لَيْسَ لَهُ شِفَاءٌ. ١٨ 18
ಇದೆಲ್ಲದರ ತರುವಾಯ ಯೆಹೋವ ದೇವರು ಯೆಹೋರಾಮನ ಕರುಳುಗಳಲ್ಲಿ ವಾಸಿಯಾಗಲಾರದ ರೋಗದಿಂದ ಅವನನ್ನು ಬಾಧಿಸಿದರು.
وَكَانَ مِنْ يَوْمٍ إِلَى يَوْمٍ وَحَسَبَ ذِهَابِ ٱلْمُدَّةِ عِنْدَ نَهَايَةِ سَنَتَيْنِ، أَنَّ أَمْعَاءَهُ خَرَجَتْ بِسَبَبِ مَرَضِهِ، فَمَاتَ بِأَمْرَاضٍ رَدِيَّةٍ، وَلَمْ يَعْمَلْ لَهُ شَعْبُهُ حَرِيقَةً كَحَرِيقَةِ آبَائِهِ. ١٩ 19
ಎರಡು ವರ್ಷವಾದ ತರುವಾಯ, ಅವನ ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆ ಅವನು ಕಡುಬೇನೆಯಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೆ ಗೌರವಕ್ಕೋಸ್ಕರ ಅಗ್ನಿಕುಂಡ ಹಚ್ಚಲಿಲ್ಲ.
كَانَ ٱبْنَ ٱثْنَتَيْنِ وَثَلَاثِينَ سَنَةً حِينَ مَلَكَ، وَمَلَكَ ثَمَانِيَ سِنِينَ فِي أُورُشَلِيمَ، وَذَهَبَ غَيْرَ مَأْسُوفٍ عَلَيْهِ، وَدَفَنُوهُ فِي مَدِينَةِ دَاوُدَ، وَلَكِنْ لَيْسَ فِي قُبُورِ ٱلْمُلُوكِ. ٢٠ 20
ಯೆಹೋರಾಮ್ ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ.

< ٢ أخبار 21 >