< ٢ أخبار 24 >

كَانَ يُوآشُ ٱبْنَ سَبْعِ سِنِينَ حِينَ مَلَكَ، وَمَلَكَ أَرْبَعِينَ سَنَةً فِي أُورُشَلِيمَ، وَٱسْمُ أُمِّهِ ظَبْيَةُ مِنْ بِئْرِ سَبْعٍ. ١ 1
ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
وَعَمِلَ يُوآشُ ٱلْمُسْتَقِيمَ فِي عَيْنَيِ ٱلرَّبِّ كُلَّ أَيَّامِ يَهُويَادَاعَ ٱلْكَاهِنِ. ٢ 2
ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.
وَٱتَّخَذَ يَهُويَادَاعُ لَهُ ٱمْرَأَتَيْنِ فَوَلَدَ بَنِينَ وَبَنَاتٍ. ٣ 3
ಯೆಹೋಯಾದನು, ಯೆಹೋವಾಷನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.
وَحَدَثَ بَعْدَ ذَلِكَ أَنَّهُ كَانَ فِي قَلْبِ يُوآشَ أَنْ يُجَدِّدَ بَيْتَ ٱلرَّبِّ. ٤ 4
ಕ್ರಮೇಣ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡುವುದಕ್ಕೆ ಮನಸ್ಸು ಮಾಡಿದನು.
فَجَمَعَ ٱلْكَهَنَةَ وَٱللَّاوِيِّينَ وَقَالَ لَهُمُ: «ٱخْرُجُوا إِلَى مُدُنِ يَهُوذَا وَٱجْمَعُوا مِنْ جَمِيعِ إِسْرَائِيلَ فِضَّةً لِأَجْلِ تَرْمِيمِ بَيْتِ إِلَهِكُمْ مِنْ سَنَةٍ إِلَى سَنَةٍ، وَبَادِرُوا أَنْتُمْ إِلَى هَذَا ٱلْأَمْرِ». فَلَمْ يُبَادِرِ ٱللَّاوِيُّونَ. ٥ 5
ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, “ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಆಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ” ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ.
فَدَعَا ٱلْمَلِكُ يَهُويَادَاعَ ٱلرَّأْسَ وَقَالَ لَهُ: «لِمَاذَا لَمْ تَطْلُبْ مِنَ ٱللَّاوِيِّينَ أَنْ يَأْتُوا مِنْ يَهُوذَا وَأُورُشَلِيمَ بِجِزْيَةِ مُوسَى عَبْدِ ٱلرَّبِّ وَجَمَاعَةِ إِسْرَائِيلَ لِخَيْمَةِ ٱلشَّهَادَةِ؟ ٦ 6
ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
لِأَنَّ بَنِي عَثَلْيَا ٱلْخَبِيثَةِ قَدْ هَدَمُوا بَيْتَ ٱللهِ، وَصَيَّرُوا كُلَّ أَقْدَاسِ بَيْتِ ٱلرَّبِّ لِلْبَعْلِيمِ». ٧ 7
ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು.
وَأَمَرَ ٱلْمَلِكُ فَعَمِلُوا صُنْدُوقًا وَجَعَلُوهُ فِي بَابِ بَيْتِ ٱلرَّبِّ خَارِجًا، ٨ 8
ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು.
وَنَادَوْا فِي يَهُوذَا وَأُورُشَلِيمَ بِأَنْ يَأْتُوا إِلَى ٱلرَّبِّ بِجِزْيَةِ مُوسَى عَبْدِ ٱلرَّبِّ ٱلْمَفْرُوضَةِ عَلَى إِسْرَائِيلَ فِي ٱلْبَرِّيَّةِ. ٩ 9
ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.
فَفَرِحَ كُلُّ ٱلرُّؤَسَاءِ وَكُلُّ ٱلشَّعْبِ وَأَدْخَلُوا وَأَلْقَوْا فِي ٱلصُّنْدُوقِ حَتَّى ٱمْتَلَأَ. ١٠ 10
೧೦ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.
وَحِينَمَا كَانَ يُؤْتَى بِٱلصُّنْدُوقِ إِلَى وَكَالَةِ ٱلْمَلِكِ بِيَدِ ٱللَّاوِيِّينَ، عِنْدَمَا يَرَوْنَ أَنَّ ٱلْفِضَّةَ قَدْ كَثُرَتْ، كَانَ يَأْتِي كَاتِبُ ٱلْمَلِكِ وَوَكِيلُ ٱلْكَاهِنِ ٱلرَّأْسِ وَيُفْرِغَانِ ٱلصُّنْدُوقَ، ثُمَّ يَحْمِلَانِهِ وَيَرُدَّانِهِ إِلَى مَكَانِهِ. هَكَذَا كَانُوا يَفْعَلُونَ يَوْمًا فَيَوْمًا، حَتَّى جَمَعُوا فِضَّةً بِكَثْرَةٍ. ١١ 11
೧೧ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡು ಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು, ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಲೇಖಕನೂ, ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದನ್ನು ಅದರ ಸ್ಥಳದಲ್ಲಿಡುತ್ತಿದ್ದರು.
وَدَفَعَهَا ٱلْمَلِكُ وَيَهُويَادَاعُ لِعَامِلِي شُغْلِ خِدْمَةِ بَيْتِ ٱلرَّبِّ، وَكَانُوا يَسْتَأْجِرُونَ نَحَّاتِينَ وَنَجَّارِينَ لِتَجْدِيدِ بَيْتِ ٱلرَّبِّ، وَلِلْعَامِلِينَ فِي ٱلْحَدِيدِ وَٱلنُّحَاسِ أَيْضًا لِتَرْمِيمِ بَيْتِ ٱلرَّبِّ. ١٢ 12
೧೨ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.
فَعَمِلَ عَامِلُو ٱلشُّغْلِ وَنَجَحَ ٱلْعَمَلُ بِأَيْدِيهِمْ، وَأَقَامُوا بَيْتَ ٱللهِ عَلَى رَسْمِهِ وَثَبَّتُوهُ. ١٣ 13
೧೩ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.
وَلَمَّا أَكْمَلُوا أَتَوْا إِلَى مَا بَيْنَ يَدَيِ ٱلْمَلِكِ وَيَهُويَادَاعَ بِبَقِيَّةِ ٱلْفِضَّةِ وَعَمِلُوهَا آنِيَةً لِبَيْتِ ٱلرَّبِّ، آنِيَةَ خِدْمَةٍ وَإِصْعَادٍ وَصُحُونًا وَآنِيَةَ ذَهَبٍ وَفِضَّةٍ. وَكَانُوا يُصْعِدُونَ مُحْرَقَاتٍ فِي بَيْتِ ٱلرَّبِّ دَائِمًا كُلَّ أَيَّامِ يَهُويَادَاعَ. ١٤ 14
೧೪ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.
وَشَاخَ يَهُويَادَاعُ وَشَبِعَ مِنَ ٱلْأَيَّامِ وَمَاتَ. كَانَ ٱبْنَ مِئَةٍ وَثَلَاثِينَ سَنَةً عِنْدَ وَفَاتِهِ. ١٥ 15
೧೫ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.
فَدَفَنُوهُ فِي مَدِينَةِ دَاوُدَ مَعَ ٱلْمُلُوكِ لِأَنَّهُ عَمِلَ خَيْرًا فِي إِسْرَائِيلَ وَمَعَ ٱللهِ وَبَيْتِهِ. ١٦ 16
೧೬ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.
وَبَعْدَ مَوْتِ يَهُويَادَاعَ جَاءَ رُؤَسَاءُ يَهُوذَا وَسَجَدُوا لِلْمَلِكِ. حِينَئِذٍ سَمِعَ ٱلْمَلِكُ لَهُمْ. ١٧ 17
೧೭ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.
وَتَرَكُوا بَيْتَ ٱلرَّبِّ إِلَهِ آبَائِهِمْ وَعَبَدُوا ٱلسَّوَارِيَ وَٱلْأَصْنَامَ، فَكَانَ غَضَبٌ عَلَى يَهُوذَا وَأُورُشَلِيمَ لِأَجْلِ إِثْمِهِمْ هَذَا. ١٨ 18
೧೮ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.
وَأَرْسَلَ إِلَيْهِمْ أَنْبِيَاءَ لِإِرْجَاعِهِمْ إِلَى ٱلرَّبِّ، وَأَشْهَدُوا عَلَيْهِمْ فَلَمْ يُصْغُوا. ١٩ 19
೧೯ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
وَلَبِسَ رُوحُ ٱللهِ زَكَرِيَّا بْنَ يَهُويَادَاعَ ٱلْكَاهِنَ فَوَقَفَ فَوْقَ ٱلشَّعْبِ وَقَالَ لَهُمْ: «هَكَذَا يَقُولُ ٱللهُ: لِمَاذَا تَتَعَدَّوْنَ وَصَايَا ٱلرَّبِّ فَلَا تُفْلِحُونَ؟ لِأَنَّكُمْ تَرَكْتُمُ ٱلرَّبَّ قَدْ تَرَكَكُمْ». ٢٠ 20
೨೦ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.
فَفَتَنُوا عَلَيْهِ وَرَجَمُوهُ بِحِجَارَةٍ بِأَمْرِ ٱلْمَلِكِ فِي دَارِ بَيْتِ ٱلرَّبِّ. ٢١ 21
೨೧ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
وَلَمْ يَذْكُرْ يُوآشُ ٱلْمَلِكُ ٱلْمَعْرُوفَ ٱلَّذِي عَمِلَهُ يَهُويَادَاعُ أَبُوهُ مَعَهُ، بَلْ قَتَلَ ٱبْنَهُ. وَعِنْدَ مَوْتِهِ قَالَ: «ٱلرَّبُّ يَنْظُرُ وَيُطَالِبُ». ٢٢ 22
೨೨ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.
وَفِي مَدَارِ ٱلسَّنَةِ صَعِدَ عَلَيْهِ جَيْشُ أَرَامَ وَأَتَوْا إِلَى يَهُوذَا وَأُورُشَلِيمَ وَأَهْلَكُوا كُلَّ رُؤَسَاءِ ٱلشَّعْبِ مِنَ ٱلشَّعْبِ، وَجَمِيعَ غَنِيمَتِهِمْ أَرْسَلُوهَا إِلَى مَلِكِ دِمَشْقَ. ٢٣ 23
೨೩ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು.
لِأَنَّ جَيْشَ أَرَامَ جَاءَ بِشِرْذِمَةٍ قَلِيلَةٍ، وَدَفَعَ ٱلرَّبُّ لِيَدِهِمْ جَيْشًا كَثِيرًا جِدًّا لِأَنَّهُمْ تَرَكُوا ٱلرَّبَّ إِلَهَ آبَائِهِمْ. فَأَجْرَوْا قَضَاءً عَلَى يُوآشَ. ٢٤ 24
೨೪ಅರಾಮ್ಯ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ಯರ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು.
وَعِنْدَ ذَهَابِهِمْ عَنْهُ، لِأَنَّهُمْ تَرَكُوهُ بِأَمْرَاضٍ كَثِيرَةٍ، فَتَنَ عَلَيْهِ عَبِيدُهُ مِنْ أَجْلِ دِمَاءِ بَنِي يَهُويَادَاعَ ٱلْكَاهِنِ، وَقَتَلُوهُ عَلَى سَرِيرِهِ فَمَاتَ. فَدَفَنُوهُ فِي مَدِينَةِ دَاوُدَ، وَلَمْ يَدْفِنُوهُ فِي قُبُورِ ٱلْمُلُوكِ. ٢٥ 25
೨೫ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.
وَهَذَانِ هُمَا ٱلْفَاتِنَانِ عَلَيْهِ: زَابَادُ بْنُ شِمْعَةَ ٱلْعَمُّونِيَّةِ، وَيَهُوزَابَادُ بْنُ شِمْرِيتَ ٱلْمُوآبِيَّةِ. ٢٦ 26
೨೬ಅಮ್ಮೋನಿಯರ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರಾತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು.
وَأَمَّا بَنُوهُ وَكَثْرَةُ مَا حُمِلَ عَلَيْهِ وَمَرَمَّةُ بَيْتِ ٱللهِ، هَا هِيَ مَكْتُوبَةٌ فِي مِدْرَسِ سِفْرِ ٱلْمُلُوكِ. وَمَلَكَ أَمَصْيَا ٱبْنُهُ عِوَضًا عَنْهُ ٢٧ 27
೨೭ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.

< ٢ أخبار 24 >