< ٢ أخبار 28 >

كَانَ آحَازُ ٱبْنَ عِشْرِينَ سَنَةً حِينَ مَلَكَ، وَمَلَكَ سِتَّ عَشَرَةَ سَنَةً فِي أُورُشَلِيمَ، وَلَمْ يَفْعَلِ ٱلْمُسْتَقِيمَ فِي عَيْنَيِ ٱلرَّبِّ كَدَاوُدَ أَبِيهِ، ١ 1
ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ.
بَلْ سَارَ فِي طُرُقِ مُلُوكِ إِسْرَائِيلَ، وَعَمِلَ أَيْضًا تَمَاثِيلَ مَسْبُوكَةً لِلْبَعْلِيمِ. ٢ 2
ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದು, ಆರಾಧಿಸುವುದಕ್ಕಾಗಿ ಬಾಳನ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಸಿದನು.
وَهُوَ أَوْقَدَ فِي وَادِي ٱبْنِ هِنُّومَ وَأَحْرَقَ بَنِيهِ بِٱلنَّارِ حَسَبَ رَجَاسَاتِ ٱلْأُمَمِ ٱلَّذِينَ طَرَدَهُمُ ٱلرَّبُّ مِنْ أَمَامِ بَنِي إِسْرَائِيلَ. ٣ 3
ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.
وَذَبَحَ وَأَوْقَدَ عَلَى ٱلْمُرْتَفَعَاتِ وَعَلَى ٱلتِّلَالِ وَتَحْتَ كُلِّ شَجَرَةٍ خَضْرَاءَ. ٤ 4
ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
فَدَفَعَهُ ٱلرَّبُّ إِلَهُهُ لِيَدِ مَلِكِ أَرَامَ، فَضَرَبُوهُ وَسَبَوْا مِنْهُ سَبْيًا عَظِيمًا وَأَتَوْا بِهِمْ إِلَى دِمَشْقَ. وَدُفِعَ أَيْضًا لِيَدِ مَلِكِ إِسْرَائِيلَ فَضَرَبَهُ ضَرْبَةً عَظِيمَةً. ٥ 5
ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.
وَقَتَلَ فَقَحُ بْنُ رَمَلْيَا فِي يَهُوذَا مِئَةً وَعِشْرِينَ أَلْفًا فِي يَوْمٍ وَاحِدٍ، ٱلْجَمِيعُ بَنُو بَأْسٍ، لِأَنَّهُمْ تَرَكُوا ٱلرَّبَّ إِلَهَ آبَائِهِمْ. ٦ 6
ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
وَقَتَلَ زِكْرِي جَبَّارُ أَفْرَايِمَ مَعَسِيَا ٱبْنَ ٱلْمَلِكِ، وَعَزْرِيقَامَ رَئِيسَ ٱلْبَيْتِ، وَأَلْقَانَةَ ثَانِيَ ٱلْمَلِكِ. ٧ 7
ಇದಲ್ಲದೆ ಎಫ್ರಾಯೀಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ಮಾಸೇಯನನ್ನೂ, ಅರಮನೆಯ ನಾಯಕನಾದ ಅಜ್ರೀಕಾಮನನ್ನೂ, ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
وَسَبَى بَنُو إِسْرَائِيلَ مِنْ إِخْوَتِهِمْ مِئَتَيْ أَلْفٍ مِنَ ٱلنِّسَاءِ وَٱلْبَنِينَ وَٱلْبَنَاتِ، وَنَهَبُوا أَيْضًا مِنْهُمْ غَنِيمَةً وَافِرَةً وَأَتَوْا بِٱلْغَنِيمَةِ إِلَى ٱلسَّامِرَةِ. ٨ 8
ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.
وَكَانَ هُنَاكَ نَبِيٌّ لِلرَّبِّ ٱسْمُهُ عُودِيدُ، فَخَرَجَ لِلِقَاءِ ٱلْجَيْشِ ٱلْآتِي إِلَى ٱلسَّامِرَةِ وَقَالَ لَهُمْ: «هُوَذَا مِنْ أَجْلِ غَضَبِ ٱلرَّبِّ إِلَهِ آبَائِكُمْ عَلَى يَهُوذَا قَدْ دَفَعَهُمْ لِيَدِكُمْ وَقَدْ قَتَلْتُمُوهُمْ بِغَضَبٍ بَلَغَ ٱلسَّمَاءَ. ٩ 9
ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.
وَٱلْآنَ أَنْتُمْ عَازِمُونَ عَلَى إِخْضَاعِ بَنِي يَهُوذَا وَأُورُشَلِيمَ عَبِيدًا وَإِمَاءً لَكُمْ. أَمَا عِنْدَكُمْ أَنْتُمْ آثَامٌ لِلرَّبِّ إِلَهِكُمْ؟ ١٠ 10
ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ?
وَٱلْآنَ ٱسْمَعُوا لِي وَرُدُّوا ٱلسَّبْيَ ٱلَّذِي سَبَيْتُمُوهُ مِنْ إِخْوَتِكُمْ لِأَنَّ حُمُوَّ غَضَبِ ٱلرَّبِّ عَلَيْكُمْ». ١١ 11
ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.
ثُمَّ قَامَ رِجَالٌ مِنْ رُؤُوسِ بَنِي أَفْرَايِمَ: عَزَرْيَا بْنُ يَهُوحَانَانَ، وَبَرَخْيَا بْنُ مَشُلِّيمُوتَ، وَيَحَزْقِيَا بْنُ شَلُّومَ، وَعَمَاسَا بْنُ حِدْلَايَ عَلَى ٱلْمُقْبِلِينَ مِنَ ٱلْجَيْشِ، ١٢ 12
ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯನೂ, ಮೆಷಿಲ್ಲೇಮೋತನ ಮಗ ಬೆರೆಕ್ಯನೂ, ಶಲ್ಲೂಮನ ಮಗ ಹಿಜ್ಕೀಯನೂ, ಹದ್ಲೈಯನ ಮಗ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧವಾಗಿ ಎದ್ದು
وَقَالُوا لَهُمْ: «لَا تَدْخُلُونَ بِٱلسَّبْيِ إِلَى هُنَا لِأَنَّ عَلَيْنَا إِثْمًا لِلرَّبِّ، وَأَنْتُمْ عَازِمُونَ أَنْ تَزِيدُوا عَلَى خَطَايَانَا وَعَلَى إِثْمِنَا، لِأَنَّ لَنَا إِثْمًا كَثِيرًا، وَعَلَى إِسْرَائِيلَ حُمُوُّ غَضَبٍ». ١٣ 13
ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.
فَتَرَكَ ٱلْمُتَجَرِّدُونَ ٱلسَّبْيَ وَٱلنَّهْبَ أَمَامَ ٱلرُّؤَسَاءِ وَكُلِّ ٱلْجَمَاعَةِ. ١٤ 14
ಆಗ ಸೈನ್ಯದವರು ಸೆರೆಯವರನ್ನೂ, ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ, ಸಮಸ್ತ ಕೂಟದ ಮುಂದೆಯೂ ಬಿಟ್ಟುಬಿಟ್ಟರು.
وَقَامَ ٱلرِّجَالُ ٱلْمُعَيَّنَةُ أَسْمَاؤُهُمْ وَأَخَذُوا ٱلْمَسْبِيِّينَ وَأَلْبَسُوا كُلَّ عُرَاتِهِمْ مِنَ ٱلْغَنِيمَةِ، وَكَسَوْهُمْ وَحَذَوْهُمْ وَأَطْعَمُوهُمْ وَأَسْقَوْهُمْ وَدَهَّنُوهُمْ، وَحَمَلُوا عَلَى حَمِيرٍ جَمِيعَ ٱلْمُعْيِينَ مِنْهُمْ، وَأَتَوْا بِهِمْ إِلَى أَرِيحَا، مَدِينَةِ ٱلنَّخْلِ، إِلَى إِخْوَتِهِمْ. ثُمَّ رَجَعُوا إِلَى ٱلسَّامِرَةِ. ١٥ 15
ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.
فِي ذَلِكَ ٱلْوَقْتِ أَرْسَلَ ٱلْمَلِكُ آحَازُ إِلَى مُلُوكِ أَشُّورَ لِكَيْ يُسَاعِدُوهُ. ١٦ 16
ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.
فَإِنَّ ٱلْأَدُومِيِّينَ أَتَوْا أَيْضًا وَضَرَبُوا يَهُوذَا وَسَبَوْا سَبْيًا. ١٧ 17
ಏಕೆಂದರೆ ಎದೋಮ್ಯರು ತಿರುಗಿಬಂದು ಯೆಹೂದದವರನ್ನು ಸಂಹರಿಸಿ, ಕೆಲವರನ್ನು ಸೆರೆಯಾಗಿ ತೆಗೆದುಕೊಂಡು ಹೋದರು.
وَٱقْتَحَمَ ٱلْفِلِسْطِينِيُّونَ مُدُنَ ٱلسَّوَاحِلِ وَجَنُوبِيَّ يَهُوذَا، وَأَخَذُوا بَيْتَ شَمْسٍ وَأَيَّلُونَ وَجَدِيرُوتَ وَسُوكُو وَقُرَاهَا، وَتِمْنَةَ وَقُرَاهَا، وَحِمْزُو وَقُرَاهَا، وَسَكَنُوا هُنَاكَ. ١٨ 18
ಇದಲ್ಲದೆ ಫಿಲಿಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ, ಯೆಹೂದದ ದಕ್ಷಿಣ ಪ್ರಾಂತದಲ್ಲಿಯೂ ನುಗ್ಗಿ, ಬೇತ್ ಷೆಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ ಅದರ ಗ್ರಾಮಗಳನ್ನೂ, ತಿಮ್ನಾ ಅದರ ಗ್ರಾಮಗಳನ್ನೂ, ಗಿಮ್ಜೋ ಅದರ ಗ್ರಾಮಗಳನ್ನೂ ತೆಗೆದುಕೊಂಡು ಅಲ್ಲಿ ವಾಸವಾಗಿದ್ದರು.
لِأَنَّ ٱلرَّبَّ ذَلَّلَ يَهُوذَا بِسَبَبِ آحَازَ مَلِكِ إِسْرَائِيلَ، لِأَنَّهُ أَجْمَحَ يَهُوذَا وَخَانَ ٱلرَّبَّ خِيَانَةً. ١٩ 19
ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.
فَجَاءَ عَلَيْهِ تَغْلَثُ فِلْنَاسِرُ مَلِكُ أَشُّورَ وَضَايَقَهُ وَلَمْ يُشَدِّدْهُ. ٢٠ 20
ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು.
لِأَنَّ آحَازَ أَخَذَ قِسْمًا مِنْ بَيْتِ ٱلرَّبِّ وَمِنْ بَيْتِ ٱلْمَلِكِ وَمِنَ ٱلرُّؤَسَاءِ وَأَعْطَاهُ لِمَلِكِ أَشُّورَ وَلَكِنَّهُ لَمْ يُسَاعِدْهُ. ٢١ 21
ಆಹಾಜನು ಯೆಹೋವ ದೇವರ ಆಲಯದಿಂದಲೂ, ಅರಮನೆಯಿಂದಲೂ, ಪ್ರಧಾನರಿಂದಲೂ ಆಸ್ತಿಯ ಒಂದು ಪಾಲನ್ನು ತೆಗೆದುಕೊಂಡು, ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕೊಟ್ಟನು, ಆದರೂ ಅವನು ಆಹಾಜನಿಗೆ ಸಹಾಯ ಮಾಡಲಿಲ್ಲ.
وَفِي ضِيقِهِ زَادَ خِيَانَةً بالرَّبِّ ٱلْمَلِكُ آحَازُ هَذَا، ٢٢ 22
ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.
وَذَبَحَ لِآلِهَةِ دِمَشْقَ ٱلَّذِينَ ضَارَبُوهُ وَقَالَ: «لِأَنَّ آلِهَةَ مُلُوكِ أَرَامَ تُسَاعِدُهُمْ أَنَا أَذْبَحُ لَهُمْ فَيُسَاعِدُونَنِي». وَأَمَّا هُمْ فَكَانُوا سَبَبَ سُقُوطٍ لَهُ وَلِكُلِّ إِسْرَائِيلَ. ٢٣ 23
ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.
وَجَمَعَ آحَازُ آنِيَةَ بَيْتِ ٱللهِ وَقَطَّعَ آنِيَةَ بَيْتِ ٱللهِ وَأَغْلَقَ أَبْوَابَ بَيْتِ ٱلرَّبِّ، وَعَمِلَ لِنَفْسِهِ مَذَابِحَ فِي كُلِّ زَاوِيَةٍ فِي أُورُشَلِيمَ. ٢٤ 24
ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
وَفِي كُلِّ مَدِينَةٍ فَمَدِينَةٍ مِنْ يَهُوذَا عَمِلَ مُرْتَفَعَاتٍ لِلْإِيقَادِ لِآلِهَةٍ أُخْرَى، وَأَسْخَطَ ٱلرَّبَّ إِلَهَ آبَائِهِ. ٢٥ 25
ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.
وَبَقِيَّةُ أُمُورِهِ وَكُلُّ طُرُقِهِ ٱلْأُولَى وَٱلْأَخِيرَةُ، هَا هِيَ مَكْتُوبَةٌ فِي سِفْرِ مُلُوكِ يَهُوذَا وَإِسْرَائِيلَ. ٢٦ 26
ಅವನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳೂ, ಅವನ ಸಕಲ ಮಾರ್ಗಗಳೂ, ಮೊದಲನೆಯವುಗಳೂ, ಕಡೆಯವುಗಳೂ ಯೆಹೂದದ ಮತ್ತು ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
ثُمَّ ٱضْطَجَعَ آحَازُ مَعَ آبَائِهِ فَدَفَنُوهُ فِي ٱلْمَدِينَةِ فِي أُورُشَلِيمَ، لِأَنَّهُمْ لَمْ يَأْتُوا بِهِ إِلَى قُبُورِ مُلُوكِ إِسْرَائِيلَ. وَمَلَكَ حَزَقِيَّا ٱبْنُهُ عِوَضًا عَنْهُ. ٢٧ 27
ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.

< ٢ أخبار 28 >