< ٢ أخبار 30 >

وَأَرْسَلَ حَزَقِيَّا إِلَى جَمِيعِ إِسْرَائِيلَ وَيَهُوذَا، وَكَتَبَ أَيْضًا رَسَائِلَ إِلَى أَفْرَايِمَ وَمَنَسَّى أَنْ يَأْتُوا إِلَى بَيْتِ ٱلرَّبِّ فِي أُورُشَلِيمَ لِيَعْمَلُوا فِصْحًا لِلرَّبِّ إِلَهِ إِسْرَائِيلَ. ١ 1
ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
فَتَشَاوَرَ ٱلْمَلِكُ وَرُؤَسَاؤُهُ وَكُلُّ ٱلْجَمَاعَةِ فِي أُورُشَلِيمَ أَنْ يَعْمَلُوا ٱلْفِصْحَ فِي ٱلشَّهْرِ ٱلثَّانِي، ٢ 2
ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.
لِأَنَّهُمْ لَمْ يَقْدِرُوا أَنْ يَعْمَلُوهُ فِي ذَلِكَ ٱلْوَقْتِ، لِأَنَّ ٱلْكَهَنَةَ لَمْ يَتَقَدَّسُوا بِٱلْكِفَايَةِ، وَٱلشَّعْبَ لَمْ يَجْتَمِعُوا إِلَى أُورُشَلِيمَ. ٣ 3
ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.
فَحَسُنَ ٱلْأَمْرُ فِي عَيْنَيِ ٱلْمَلِكِ وَعُيُونِ كُلِّ ٱلْجَمَاعَةِ. ٤ 4
ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ
فَٱعْتَمَدُوا عَلَى إِطْلَاقِ ٱلنِّدَاءِ فِي جَمِيعِ إِسْرَائِيلَ مِنْ بِئْرِ سَبْعٍ إِلَى دَانَ أَنْ يَأْتُوا لِعَمَلِ ٱلْفِصْحِ لِلرَّبِّ إِلَهِ إِسْرَائِيلَ فِي أُورُشَلِيمَ، لِأَنَّهُمْ لَمْ يَعْمَلُوهُ كَمَا هُوَ مَكْتُوبٌ مُنْذُ زَمَانٍ كَثِيرٍ. ٥ 5
ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.
فَذَهَبَ ٱلسُّعَاةُ بِٱلرَّسَائِلِ مِنْ يَدِ ٱلْمَلِكِ وَرُؤَسَائِهِ فِي جَمِيعِ إِسْرَائِيلَ وَيَهُوذَا، وَحَسَبَ وَصِيَّةِ ٱلْمَلِكِ كَانُوا يَقُولُونَ: «يَا بَنِي إِسْرَائِيلَ، ٱرْجِعُوا إِلَى ٱلرَّبِّ إِلَهِ إِبْرَاهِيمَ وَإِسْحَاقَ وَإِسْرَائِيلَ، فَيَرْجِعَ إِلَى ٱلنَّاجِينَ ٱلْبَاقِينَ لَكُمْ مِنْ يَدِ مُلُوكِ أَشُّورَ. ٦ 6
ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
وَلَا تَكُونُوا كَآبَائِكُمْ وَكَإِخْوَتِكُمُ ٱلَّذِينَ خَانُوا ٱلرَّبَّ إِلَهَ آبَائِهِمْ فَجَعَلَهُمْ دَهْشَةً كَمَا أَنْتُمْ تَرَوْنَ. ٧ 7
ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
ٱلْآنَ لَا تُصَلِّبُوا رِقَابَكُمْ كَآبَائِكُمْ، بَلِ ٱخْضَعُوا لِلرَّبِّ وَٱدْخُلُوا مَقْدِسَهُ ٱلَّذِي قَدَّسَهُ إِلَى ٱلْأَبَدِ، وَٱعْبُدُوا ٱلرَّبَّ إِلَهَكُمْ فَيَرْتَدَّ عَنْكُمْ حُمُوُّ غَضَبِهِ. ٨ 8
ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.
لِأَنَّهُ بِرُجُوعِكُمْ إِلَى ٱلرَّبِّ يَجِدُ إِخْوَتُكُمْ وَبَنُوكُمْ رَحْمَةً أَمَامَ ٱلَّذِينَ يَسْبُونَهُمْ، فَيَرْجِعُونَ إِلَى هَذِهِ ٱلْأَرْضِ، لِأَنَّ ٱلرَّبَّ إِلَهَكُمْ حَنَّانٌ وَرَحِيمٌ، وَلَا يُحَوِّلُ وَجْهَهُ عَنْكُمْ إِذَا رَجَعْتُمْ إِلَيْهِ». ٩ 9
ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”
فَكَانَ ٱلسُّعَاةُ يَعْبُرُونَ مِنْ مَدِينَةٍ إِلَى مَدِينَةٍ فِي أَرْضِ أَفْرَايِمَ وَمَنَسَّى حَتَّى زَبُولُونَ، فَكَانُوا يَضْحَكُونَ عَلَيْهِمْ وَيَهْزَأُونَ بِهِمْ. ١٠ 10
೧೦ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.
إِلَّا إِنَّ قَوْمًا مِنْ أَشِيرَ وَمَنَسَّى وَزَبُولُونَ تَوَاضَعُوا وَأَتَوْا إِلَى أُورُشَلِيمَ. ١١ 11
೧೧ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
وَكَانَتْ يَدُ ٱللهِ فِي يَهُوذَا أَيْضًا، فَأَعْطَاهُمْ قَلْبًا وَاحِدًا لِيَعْمَلُوا بِأَمْرِ ٱلْمَلِكِ وَٱلرُّؤَسَاءِ، حَسَبَ قَوْلِ ٱلرَّبِّ. ١٢ 12
೧೨ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
فَٱجْتَمَعَ إِلَى أُورُشَلِيمَ شَعْبٌ كَثِيرٌ لِعَمَلِ عِيدِ ٱلْفَطِيرِ فِي ٱلشَّهْرِ ٱلثَّانِي، جَمَاعَةٌ كَثِيرَةٌ جِدًّا. ١٣ 13
೧೩ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.
وَقَامُوا وَأَزَالُوا ٱلْمَذَابِحَ ٱلَّتِي فِي أُورُشَلِيمَ، وَأَزَالُوا كُلَّ مَذَابِحِ ٱلتَّبْخِيرِ وَطَرَحُوهَا إِلَى وَادِي قَدْرُونَ. ١٤ 14
೧೪ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.
وَذَبَحُوا ٱلْفِصْحَ فِي ٱلرَّابِعِ عَشَرَ مِنَ ٱلشَّهْرِ ٱلثَّانِي. وَٱلْكَهَنَةُ وَٱللَّاوِيُّونَ خَجِلُوا وَتَقَدَّسُوا وَأَدْخَلُوا ٱلْمُحْرَقَاتِ إِلَى بَيْتِ ٱلرَّبِّ، ١٥ 15
೧೫ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು. ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.
وَأَقَامُوا عَلَى مَقَامِهِمْ حَسَبَ حُكْمِهِمْ كَنَامُوسِ مُوسَى رَجُلِ ٱللهِ. كَانَ ٱلْكَهَنَةُ يَرُشُّونَ ٱلدَّمَ مِنْ يَدِ ٱللَّاوِيِّينَ. ١٦ 16
೧೬ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
لِأَنَّهُ كَانَ كَثِيرُونَ فِي ٱلْجَمَاعَةِ لَمْ يَتَقَدَّسُوا، فَكَانَ ٱللَّاوِيُّونَ عَلَى ذَبْحِ ٱلْفِصْحِ عَنْ كُلِّ مَنْ لَيْسَ بِطَاهِرٍ لِتَقْدِيسِهِمْ لِلرَّبِّ. ١٧ 17
೧೭ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.
لِأَنَّ كَثِيرِينَ مِنَ ٱلشَّعْبِ، كَثِيرِينَ مِنْ أَفْرَايِمَ وَمَنَسَّى وَيَسَّاكَرَ وَزَبُولُونَ لَمْ يَتَطَهَّرُوا، بَلْ أَكَلُوا ٱلْفِصْحَ لَيْسَ كَمَا هُوَ مَكْتُوبٌ. إِلَّا إِنَّ حَزَقِيَّا صَلَّى عَنْهُمْ قَائِلًا: «ٱلرَّبُّ ٱلصَّالِحُ يُكَفِّرُ عَنْ ١٨ 18
೧೮ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.
كُلِّ مَنْ هَيَّأَ قَلْبَهُ لِطَلَبِ ٱللهِ ٱلرَّبِّ إِلَهِ آبَائِهِ، وَلَيْسَ كَطَهَارَةِ ٱلْقُدْسِ». ١٩ 19
೧೯ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.
فَسَمِعَ ٱلرَّبُّ لِحَزَقِيَّا وَشَفَى ٱلشَّعْبَ. ٢٠ 20
೨೦ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.
وَعَمِلَ بَنُو إِسْرَائِيلَ ٱلْمَوْجُودُونَ فِي أُورُشَلِيمَ عِيدَ ٱلْفَطِيرِ سَبْعَةَ أَيَّامٍ بِفَرَحٍ عَظِيمٍ، وَكَانَ ٱللَّاوِيُّونَ وَٱلْكَهَنَةُ يُسَبِّحُونَ ٱلرَّبَّ يَوْمًا فَيَوْمًا بِآلَاتِ حَمْدٍ لِلرَّبِّ. ٢١ 21
೨೧ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
وَطَيَّبَ حَزَقِيَّا قُلُوبَ جَمِيعِ ٱللَّاوِيِّينَ ٱلْفَطِنِينَ فِطْنَةً صَالِحَةً لِلرَّبِّ، وَأَكَلُوا ٱلْمَوْسِمَ سَبْعَةَ أَيَّامٍ يَذْبَحُونَ ذَبَائِحَ سَلَامَةٍ وَيَحْمَدُونَ ٱلرَّبَّ إِلَهَ آبَائِهِمْ. ٢٢ 22
೨೨ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.
وَتَشَاوَرَ كُلُّ ٱلْجَمَاعَةِ أَنْ يَعْمَلُوا سَبْعَةَ أَيَّامٍ أُخْرَى، فَعَمِلُوا سَبْعَةَ أَيَّامٍ بِفَرَحٍ. ٢٣ 23
೨೩ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು
لِأَنَّ حَزَقِيَّا مَلِكَ يَهُوذَا قَدَّمَ لِلْجَمَاعَةِ أَلْفَ ثَوْرٍ وَسَبْعَةَ آلَافٍ مِنَ ٱلضَّأْنِ، وَٱلرُّؤَسَاءُ قَدَّمُوا لِلْجَمَاعَةِ أَلْفَ ثَوْرٍ وَعَشَرَةَ آلَافٍ مِنَ ٱلضَّأْنِ، وَتَقَدَّسَ كَثِيرُونَ مِنَ ٱلْكَهَنَةِ. ٢٤ 24
೨೪ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.
وَفَرِحَ كُلُّ جَمَاعَةِ يَهُوذَا، وَٱلْكَهَنَةُ وَٱللَّاوِيُّونَ، وَكُلُّ ٱلْجَمَاعَةِ ٱلْآتِينَ مِنْ إِسْرَائِيلَ، وَٱلْغُرَبَاءُ ٱلْآتُونَ مِنْ أَرْضِ إِسْرَائِيلَ وَٱلسَّاكِنُونَ فِي يَهُوذَا. ٢٥ 25
೨೫ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.
وَكَانَ فَرَحٌ عَظِيمٌ فِي أُورُشَلِيمَ، لِأَنَّهُ مِنْ أَيَّامِ سُلَيْمَانَ بْنِ دَاوُدَ مَلِكِ إِسْرَائِيلَ لَمْ يَكُنْ كَهَذَا فِي أُورُشَلِيمَ. ٢٦ 26
೨೬ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.
وَقَامَ ٱلْكَهَنَةُ ٱللَّاوِيُّونَ وَبَارَكُوا ٱلشَّعْبَ، فَسُمِعَ صَوْتُهُمْ وَدَخَلَتْ صَلَاتُهُمْ إِلَى مَسْكَنِ قُدْسِهِ إِلَى ٱلسَّمَاءِ. ٢٧ 27
೨೭ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.

< ٢ أخبار 30 >