< ٢ أخبار 30 >

وَأَرْسَلَ حَزَقِيَّا إِلَى جَمِيعِ إِسْرَائِيلَ وَيَهُوذَا، وَكَتَبَ أَيْضًا رَسَائِلَ إِلَى أَفْرَايِمَ وَمَنَسَّى أَنْ يَأْتُوا إِلَى بَيْتِ ٱلرَّبِّ فِي أُورُشَلِيمَ لِيَعْمَلُوا فِصْحًا لِلرَّبِّ إِلَهِ إِسْرَائِيلَ. ١ 1
ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು.
فَتَشَاوَرَ ٱلْمَلِكُ وَرُؤَسَاؤُهُ وَكُلُّ ٱلْجَمَاعَةِ فِي أُورُشَلِيمَ أَنْ يَعْمَلُوا ٱلْفِصْحَ فِي ٱلشَّهْرِ ٱلثَّانِي، ٢ 2
ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.
لِأَنَّهُمْ لَمْ يَقْدِرُوا أَنْ يَعْمَلُوهُ فِي ذَلِكَ ٱلْوَقْتِ، لِأَنَّ ٱلْكَهَنَةَ لَمْ يَتَقَدَّسُوا بِٱلْكِفَايَةِ، وَٱلشَّعْبَ لَمْ يَجْتَمِعُوا إِلَى أُورُشَلِيمَ. ٣ 3
ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು.
فَحَسُنَ ٱلْأَمْرُ فِي عَيْنَيِ ٱلْمَلِكِ وَعُيُونِ كُلِّ ٱلْجَمَاعَةِ. ٤ 4
ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು.
فَٱعْتَمَدُوا عَلَى إِطْلَاقِ ٱلنِّدَاءِ فِي جَمِيعِ إِسْرَائِيلَ مِنْ بِئْرِ سَبْعٍ إِلَى دَانَ أَنْ يَأْتُوا لِعَمَلِ ٱلْفِصْحِ لِلرَّبِّ إِلَهِ إِسْرَائِيلَ فِي أُورُشَلِيمَ، لِأَنَّهُمْ لَمْ يَعْمَلُوهُ كَمَا هُوَ مَكْتُوبٌ مُنْذُ زَمَانٍ كَثِيرٍ. ٥ 5
ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.
فَذَهَبَ ٱلسُّعَاةُ بِٱلرَّسَائِلِ مِنْ يَدِ ٱلْمَلِكِ وَرُؤَسَائِهِ فِي جَمِيعِ إِسْرَائِيلَ وَيَهُوذَا، وَحَسَبَ وَصِيَّةِ ٱلْمَلِكِ كَانُوا يَقُولُونَ: «يَا بَنِي إِسْرَائِيلَ، ٱرْجِعُوا إِلَى ٱلرَّبِّ إِلَهِ إِبْرَاهِيمَ وَإِسْحَاقَ وَإِسْرَائِيلَ، فَيَرْجِعَ إِلَى ٱلنَّاجِينَ ٱلْبَاقِينَ لَكُمْ مِنْ يَدِ مُلُوكِ أَشُّورَ. ٦ 6
ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು.
وَلَا تَكُونُوا كَآبَائِكُمْ وَكَإِخْوَتِكُمُ ٱلَّذِينَ خَانُوا ٱلرَّبَّ إِلَهَ آبَائِهِمْ فَجَعَلَهُمْ دَهْشَةً كَمَا أَنْتُمْ تَرَوْنَ. ٧ 7
ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
ٱلْآنَ لَا تُصَلِّبُوا رِقَابَكُمْ كَآبَائِكُمْ، بَلِ ٱخْضَعُوا لِلرَّبِّ وَٱدْخُلُوا مَقْدِسَهُ ٱلَّذِي قَدَّسَهُ إِلَى ٱلْأَبَدِ، وَٱعْبُدُوا ٱلرَّبَّ إِلَهَكُمْ فَيَرْتَدَّ عَنْكُمْ حُمُوُّ غَضَبِهِ. ٨ 8
ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.
لِأَنَّهُ بِرُجُوعِكُمْ إِلَى ٱلرَّبِّ يَجِدُ إِخْوَتُكُمْ وَبَنُوكُمْ رَحْمَةً أَمَامَ ٱلَّذِينَ يَسْبُونَهُمْ، فَيَرْجِعُونَ إِلَى هَذِهِ ٱلْأَرْضِ، لِأَنَّ ٱلرَّبَّ إِلَهَكُمْ حَنَّانٌ وَرَحِيمٌ، وَلَا يُحَوِّلُ وَجْهَهُ عَنْكُمْ إِذَا رَجَعْتُمْ إِلَيْهِ». ٩ 9
ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.
فَكَانَ ٱلسُّعَاةُ يَعْبُرُونَ مِنْ مَدِينَةٍ إِلَى مَدِينَةٍ فِي أَرْضِ أَفْرَايِمَ وَمَنَسَّى حَتَّى زَبُولُونَ، فَكَانُوا يَضْحَكُونَ عَلَيْهِمْ وَيَهْزَأُونَ بِهِمْ. ١٠ 10
ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
إِلَّا إِنَّ قَوْمًا مِنْ أَشِيرَ وَمَنَسَّى وَزَبُولُونَ تَوَاضَعُوا وَأَتَوْا إِلَى أُورُشَلِيمَ. ١١ 11
ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
وَكَانَتْ يَدُ ٱللهِ فِي يَهُوذَا أَيْضًا، فَأَعْطَاهُمْ قَلْبًا وَاحِدًا لِيَعْمَلُوا بِأَمْرِ ٱلْمَلِكِ وَٱلرُّؤَسَاءِ، حَسَبَ قَوْلِ ٱلرَّبِّ. ١٢ 12
ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.
فَٱجْتَمَعَ إِلَى أُورُشَلِيمَ شَعْبٌ كَثِيرٌ لِعَمَلِ عِيدِ ٱلْفَطِيرِ فِي ٱلشَّهْرِ ٱلثَّانِي، جَمَاعَةٌ كَثِيرَةٌ جِدًّا. ١٣ 13
ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು.
وَقَامُوا وَأَزَالُوا ٱلْمَذَابِحَ ٱلَّتِي فِي أُورُشَلِيمَ، وَأَزَالُوا كُلَّ مَذَابِحِ ٱلتَّبْخِيرِ وَطَرَحُوهَا إِلَى وَادِي قَدْرُونَ. ١٤ 14
ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.
وَذَبَحُوا ٱلْفِصْحَ فِي ٱلرَّابِعِ عَشَرَ مِنَ ٱلشَّهْرِ ٱلثَّانِي. وَٱلْكَهَنَةُ وَٱللَّاوِيُّونَ خَجِلُوا وَتَقَدَّسُوا وَأَدْخَلُوا ٱلْمُحْرَقَاتِ إِلَى بَيْتِ ٱلرَّبِّ، ١٥ 15
ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.
وَأَقَامُوا عَلَى مَقَامِهِمْ حَسَبَ حُكْمِهِمْ كَنَامُوسِ مُوسَى رَجُلِ ٱللهِ. كَانَ ٱلْكَهَنَةُ يَرُشُّونَ ٱلدَّمَ مِنْ يَدِ ٱللَّاوِيِّينَ. ١٦ 16
ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
لِأَنَّهُ كَانَ كَثِيرُونَ فِي ٱلْجَمَاعَةِ لَمْ يَتَقَدَّسُوا، فَكَانَ ٱللَّاوِيُّونَ عَلَى ذَبْحِ ٱلْفِصْحِ عَنْ كُلِّ مَنْ لَيْسَ بِطَاهِرٍ لِتَقْدِيسِهِمْ لِلرَّبِّ. ١٧ 17
ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು.
لِأَنَّ كَثِيرِينَ مِنَ ٱلشَّعْبِ، كَثِيرِينَ مِنْ أَفْرَايِمَ وَمَنَسَّى وَيَسَّاكَرَ وَزَبُولُونَ لَمْ يَتَطَهَّرُوا، بَلْ أَكَلُوا ٱلْفِصْحَ لَيْسَ كَمَا هُوَ مَكْتُوبٌ. إِلَّا إِنَّ حَزَقِيَّا صَلَّى عَنْهُمْ قَائِلًا: «ٱلرَّبُّ ٱلصَّالِحُ يُكَفِّرُ عَنْ ١٨ 18
ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, “ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ,
كُلِّ مَنْ هَيَّأَ قَلْبَهُ لِطَلَبِ ٱللهِ ٱلرَّبِّ إِلَهِ آبَائِهِ، وَلَيْسَ كَطَهَارَةِ ٱلْقُدْسِ». ١٩ 19
ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.
فَسَمِعَ ٱلرَّبُّ لِحَزَقِيَّا وَشَفَى ٱلشَّعْبَ. ٢٠ 20
ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.
وَعَمِلَ بَنُو إِسْرَائِيلَ ٱلْمَوْجُودُونَ فِي أُورُشَلِيمَ عِيدَ ٱلْفَطِيرِ سَبْعَةَ أَيَّامٍ بِفَرَحٍ عَظِيمٍ، وَكَانَ ٱللَّاوِيُّونَ وَٱلْكَهَنَةُ يُسَبِّحُونَ ٱلرَّبَّ يَوْمًا فَيَوْمًا بِآلَاتِ حَمْدٍ لِلرَّبِّ. ٢١ 21
ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.
وَطَيَّبَ حَزَقِيَّا قُلُوبَ جَمِيعِ ٱللَّاوِيِّينَ ٱلْفَطِنِينَ فِطْنَةً صَالِحَةً لِلرَّبِّ، وَأَكَلُوا ٱلْمَوْسِمَ سَبْعَةَ أَيَّامٍ يَذْبَحُونَ ذَبَائِحَ سَلَامَةٍ وَيَحْمَدُونَ ٱلرَّبَّ إِلَهَ آبَائِهِمْ. ٢٢ 22
ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.
وَتَشَاوَرَ كُلُّ ٱلْجَمَاعَةِ أَنْ يَعْمَلُوا سَبْعَةَ أَيَّامٍ أُخْرَى، فَعَمِلُوا سَبْعَةَ أَيَّامٍ بِفَرَحٍ. ٢٣ 23
ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು.
لِأَنَّ حَزَقِيَّا مَلِكَ يَهُوذَا قَدَّمَ لِلْجَمَاعَةِ أَلْفَ ثَوْرٍ وَسَبْعَةَ آلَافٍ مِنَ ٱلضَّأْنِ، وَٱلرُّؤَسَاءُ قَدَّمُوا لِلْجَمَاعَةِ أَلْفَ ثَوْرٍ وَعَشَرَةَ آلَافٍ مِنَ ٱلضَّأْنِ، وَتَقَدَّسَ كَثِيرُونَ مِنَ ٱلْكَهَنَةِ. ٢٤ 24
ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು.
وَفَرِحَ كُلُّ جَمَاعَةِ يَهُوذَا، وَٱلْكَهَنَةُ وَٱللَّاوِيُّونَ، وَكُلُّ ٱلْجَمَاعَةِ ٱلْآتِينَ مِنْ إِسْرَائِيلَ، وَٱلْغُرَبَاءُ ٱلْآتُونَ مِنْ أَرْضِ إِسْرَائِيلَ وَٱلسَّاكِنُونَ فِي يَهُوذَا. ٢٥ 25
ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
وَكَانَ فَرَحٌ عَظِيمٌ فِي أُورُشَلِيمَ، لِأَنَّهُ مِنْ أَيَّامِ سُلَيْمَانَ بْنِ دَاوُدَ مَلِكِ إِسْرَائِيلَ لَمْ يَكُنْ كَهَذَا فِي أُورُشَلِيمَ. ٢٦ 26
ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ.
وَقَامَ ٱلْكَهَنَةُ ٱللَّاوِيُّونَ وَبَارَكُوا ٱلشَّعْبَ، فَسُمِعَ صَوْتُهُمْ وَدَخَلَتْ صَلَاتُهُمْ إِلَى مَسْكَنِ قُدْسِهِ إِلَى ٱلسَّمَاءِ. ٢٧ 27
ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.

< ٢ أخبار 30 >