< ٢ أخبار 32 >

وَبَعْدَ هَذِهِ ٱلْأُمُورِ وَهَذِهِ ٱلْأَمَانَةِ، أَتَى سِنْحَارِيبُ مَلِكُ أَشُّورَ وَدَخَلَ يَهُوذَا وَنَزَلَ عَلَى ٱلْمُدُنُ ٱلْحَصِينَةِ وَطَمِعَ بِإِخْضَاعِهَا لِنَفْسِهِ. ١ 1
ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
وَلَمَّا رَأَى حَزَقِيَّا أَنَّ سِنْحَارِيبَ قَدْ أَتَى وَوَجْهُهُ عَلَى مُحَارَبَةِ أُورُشَلِيمَ، ٢ 2
ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.
تَشَاوَرَ هُوَ وَرُؤَسَاؤُهُ وَجَبَابِرَتُهُ عَلَى طَمِّ مِيَاهِ ٱلْعُيُونِ ٱلَّتِي هِيَ خَارِجَ ٱلْمَدِينَةِ فَسَاعَدُوهُ. ٣ 3
ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
فَتَجَمَّعَ شَعْبٌ كَثِيرٌ وَطَمُّوا جَمِيعَ ٱلْيَنَابِيعِ وَٱلنَّهْرَ ٱلْجَارِيَ فِي وَسَطِ ٱلْأَرْضِ، قَائِلِينَ: «لِمَاذَا يَأْتِي مُلُوكُ أَشُّورَ وَيَجِدُونَ مِيَاهًا غَزِيرَةً؟» ٤ 4
ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.
وَتَشَدَّدَ وَبَنَى كُلَّ ٱلسُّورِ ٱلْمُنْهَدِمِ وَأَعْلَاهُ إِلَى ٱلْأَبْرَاجِ، وَسُورًا آخَرَ خَارِجًا، وَحَصَّنَ ٱلْقَلْعَةَ، مَدِينَةَ دَاوُدَ، وَعَمِلَ سِلَاحًا بِكِثْرَةٍ وَأَتْرَاسًا. ٥ 5
ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
وَجَعَلَ رُؤَسَاءَ قِتَالٍ عَلَى ٱلشَّعْبِ، وَجَمَعَهُمْ إِلَيْهِ إِلَى سَاحَةِ بَابِ ٱلْمَدِينَةِ، وَطَيَّبَ قُلُوبَهُمْ قَائِلًا: ٦ 6
ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,
«تَشَدَّدُوا وَتَشَجَّعُوا. لَا تَخَافُوا وَلَا تَرْتَاعُوا مِنْ مَلِكِ أَشُّورَ وَمِنْ كُلِّ ٱلْجُمْهُورِ ٱلَّذِي مَعَهُ، لِأَنَّ مَعَنَا أَكْثَرَ مِمَّا مَعَهُ. ٧ 7
“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
مَعَهُ ذِرَاعُ بَشَرٍ، وَمَعَنَا ٱلرَّبُّ إِلَهُنَا لِيُسَاعِدَنَا وَيُحَارِبَ حُرُوبَنَا». فَٱسْتَنَدَ ٱلشَّعْبُ عَلَى كَلَامِ حَزَقِيَّا مَلِكِ يَهُوذَا. ٨ 8
ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
بَعْدَ هَذَا أَرْسَلَ سِنْحَارِيبُ مَلِكُ أَشُّورَ عَبِيدَهُ إِلَى أُورُشَلِيمَ، وَهُوَ عَلَى لَخِيشَ وَكُلُّ سَلْطَنَتِهِ مَعَهُ، إِلَى حَزَقِيَّا مَلِكِ يَهُوذَا وَإِلَى كُلِّ يَهُوذَا ٱلَّذِينَ فِي أُورُشَلِيمَ يَقُولُونَ: ٩ 9
ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,
«هَكَذَا يَقُولُ سِنْحَارِيبُ مَلِكُ أَشُّورَ: عَلَى مَاذَا تَتَّكِلُونَ وَتُقِيمُونَ فِي ٱلْحِصَارِ فِي أُورُشَلِيمَ؟ ١٠ 10
೧೦“ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?
أَلَيْسَ حَزَقِيَّا يُغْوِيكُمْ لِيَدْفَعَكُمْ لِلْمَوْتِ بِٱلْجُوعِ وَٱلْعَطَشِ، قَائِلًا: ٱلرَّبُّ إِلَهُنَا يُنْقِذُنَا مِنْ يَدِ مَلِكِ أَشُّورَ؟ ١١ 11
೧೧ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.
أَلَيْسَ حَزَقِيَّا هُوَ ٱلَّذِي أَزَالَ مُرْتَفَعَاتِهِ وَمَذَابِحَهُ، وَكَلَّمَ يَهُوذَا وَأُورُشَلِيمَ قَائِلًا: أَمَامَ مَذْبَحٍ وَاحِدٍ تَسْجُدُونَ، وَعَلَيْهِ تُوقِدُونَ؟ ١٢ 12
೧೨ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
أَمَا تَعْلَمُونَ مَا فَعَلْتُهُ أَنَا وَآبَائِي بِجَمِيعِ شُعُوبِ ٱلْأَرَاضِي؟ فَهَلْ قَدِرَتْ آلِهَةُ أُمَمِ ٱلْأَرَاضِي أَنْ تُنْقِذَ أَرْضَهَا مِنْ يَدِي؟ ١٣ 13
೧೩ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
مَنْ مِنْ جَمِيعِ آلِهَةِ هَؤُلَاءِ ٱلْأُمَمِ ٱلَّذِينَ حَرَّمَهُمْ آبَائِي، ٱسْتَطَاعَ أَنْ يُنْقِذَ شَعْبَهُ مِنْ يَدِي حَتَّى يَسْتَطِيعَ إِلَهُكُمْ أَنْ يُنْقِذَكُمْ مِنْ يَدِي؟ ١٤ 14
೧೪ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ
وَٱلْآنَ لَا يَخْدَعَنَّكُمْ حَزَقِيَّا، وَلَا يُغْوِيَنَّكُمْ هَكَذَا وَلَا تُصَدِّقُوهُ، لِأَنَّهُ لَمْ يَقْدِرْ إِلَهُ أُمَّةٍ أَوْ مَمْلَكَةٍ أَنْ يُنْقِذَ شَعْبَهُ مِنْ يَدِي وَيَدِ آبَائِي، فَكَمْ بِٱلْحَرِيِّ إِلَهُكُمْ لَا يُنْقِذُكُمْ مِنْ يَدِي؟». ١٥ 15
೧೫ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
وَتَكَلَّمَ عَبِيدُهُ أَكْثَرَ ضِدَّ ٱلرَّبِّ ٱلْإِلَهِ وَضِدَّ حَزَقِيَّا عَبْدِهِ. ١٦ 16
೧೬ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
وَكَتَبَ رَسَائِلَ لِتَعْيِيرِ ٱلرَّبِّ إِلَهِ إِسْرَائِيلَ وَلِلتَّكَلُّمِ ضِدَّهُ قَائِلًا: «كَمَا أَنَّ آلِهَةَ أُمَمِ ٱلْأَرَاضِي لَمْ تُنْقِذْ شُعُوبَهَا مِنْ يَدِي، كَذَلِكَ لَا يُنْقِذُ إِلَهُ حَزَقِيَّا شَعْبَهُ مِنْ يَدِي». ١٧ 17
೧೭ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.
وَصَرَخُوا بِصَوْتٍ عَظِيمٍ بِٱلْيَهُودِيِّ إِلَى شَعْبِ أُورُشَلِيمَ ٱلَّذِينَ عَلَى ٱلسُّورِ لِتَخْوِيفِهِمْ وَتَرْوِيعِهِمْ لِكَيْ يَأْخُذُوا ٱلْمَدِينَةَ. ١٨ 18
೧೮ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ
وَتَكَلَّمُوا عَلَى إِلَهِ أُورُشَلِيمَ كَمَا عَلَى آلِهَةِ شُعُوبِ ٱلْأَرْضِ صَنْعَةِ أَيْدِي ٱلنَّاسِ. ١٩ 19
೧೯ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
فَصَلَّى حَزَقِيَّا ٱلْمَلِكُ وَإِشَعْيَاءُ بْنُ آمُوصَ ٱلنَّبِيُّ لِذَلِكَ وَصَرَخَا إِلَى ٱلسَّمَاءِ، ٢٠ 20
೨೦ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
فَأَرْسَلَ ٱلرَّبُّ مَلَاكًا فَأَبَادَ كُلَّ جَبَّارِ بَأْسٍ وَرَئِيسٍ وَقَائِدٍ فِي مَحَلَّةِ مَلِكِ أَشُّورَ. فَرَجَعَ بِخِزْيِ ٱلْوَجْهِ إِلَى أَرْضِهِ. وَلَمَّا دَخَلَ بَيْتَ إِلَهِهِ قَتَلَهُ هُنَاكَ بِٱلسَّيْفِ ٱلَّذِينَ خَرَجُوا مِنْ أَحْشَائِهِ. ٢١ 21
೨೧ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
وَخَلَّصَ ٱلرَّبُّ حَزَقِيَّا وَسُكَّانَ أُورُشَلِيمَ مِنْ سِنْحَارِيبَ مَلِكِ أَشُّورَ وَمِنْ يَدِ ٱلْجَمِيعِ، وَحَمَاهُمْ مِنْ كُلِّ نَاحِيَةٍ. ٢٢ 22
೨೨ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.
وَكَانَ كَثِيرُونَ يَأْتُونَ بِتَقْدِمَاتِ ٱلرَّبِّ إِلَى أُورُشَلِيمَ، وَتُحَفٍ لِحَزَقِيَّا مَلِكِ يَهُوذَا، وَٱعْتُبِرَ فِي أَعْيُنِ جَمِيعِ ٱلْأُمَمِ بَعْدَ ذَلِكَ. ٢٣ 23
೨೩ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
فِي تِلْكَ ٱلْأَيَّامِ مَرِضَ حَزَقِيَّا إِلَى حَدِّ ٱلْمَوْتِ وَصَلَّى إِلَى ٱلرَّبِّ فَكَلَّمَهُ وَأَعْطَاهُ عَلَامَةً. ٢٤ 24
೨೪ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
وَلَكِنْ لَمْ يَرُدَّ حَزَقِيَّا حَسْبَمَا أُنْعِمَ عَلَيْهِ لِأَنَّ قَلْبَهُ ٱرْتَفَعَ، فَكَانَ غَضَبٌ عَلَيْهِ وَعَلَى يَهُوذَا وَأُورُشَلِيمَ. ٢٥ 25
೨೫ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
ثُمَّ تَوَاضَعَ حَزَقِيَّا بِسَبَبِ ٱرْتِفَاعِ قَلْبِهِ هُوَ وَسُكَّانُ أُورُشَلِيمَ، فَلَمْ يَأْتِ عَلَيْهِمْ غَضَبُ ٱلرَّبِّ فِي أَيَّامِ حَزَقِيَّا. ٢٦ 26
೨೬ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.
وَكَانَ لِحَزَقِيَّا غِنًى وَكَرَامَةٌ كَثِيرَةٌ جِدًّا، وَعَمِلَ لِنَفْسِهِ خَزَائِنَ لِلْفِضَّةِ وَٱلذَّهَبِ وَٱلْحِجَارَةِ ٱلْكَرِيمَةِ وَٱلْأَطْيَابِ وَٱلْأَتْرَاسِ وَكُلِّ آنِيَةٍ ثَمِينَةٍ، ٢٧ 27
೨೭ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
وَمَخَازِنَ لِغَلَّةِ ٱلْحِنْطَةِ وَٱلْمِسْطَارِ وَٱلزَّيْتِ، وَأَوَارِيَ لِكُلِّ أَنْوَاعِ ٱلْبَهَائِمِ، وَلِلْقُطْعَانِ أَوَارِيَ. ٢٨ 28
೨೮ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು. ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.
وَعَمِلَ لِنَفْسِهِ أَبْرَاجًا وَمَوَاشِيَ غَنَمٍ وَبَقَرٍ بِكَثْرَةٍ، لِأَنَّ ٱللهَ أَعْطَاهُ أَمْوَالًا كَثِيرَةً جِدًّا. ٢٩ 29
೨೯ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
وَحَزَقِيَّا هَذَا سَدَّ مَخْرَجَ مِيَاهِ جَيْحُونَ ٱلْأَعْلَى، وَأَجْرَاهَا تَحْتَ ٱلْأَرْضِ، إِلَى ٱلْجِهَةِ ٱلْغَرْبِيَّةِ مِنْ مَدِينَةِ دَاوُدَ. وَأَفْلَحَ حَزَقِيَّا فِي كُلِّ عَمَلِهِ. ٣٠ 30
೩೦ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.
وَهَكَذَا فِي أَمْرِ تَرَاجِمِ رُؤَسَاءِ بَابِلَ ٱلَّذِينَ أَرْسَلُوا إِلَيْهِ لِيَسْأَلُوا عَنِ ٱلْأُعْجُوبَةِ ٱلَّتِي كَانَتْ فِي ٱلْأَرْضِ، تَرَكَهُ ٱللهُ لِيُجَرِّبَهُ لِيَعْلَمَ كُلَّ مَا فِي قَلْبِهِ. ٣١ 31
೩೧ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
وَبَقِيَّةُ أُمُورِ حَزَقِيَّا وَمَرَاحِمُهُ، هَا هِيَ مَكْتُوبَةٌ فِي رُؤْيَا إِشَعْيَاءَ بْنِ آمُوصَ ٱلنَّبِيِّ فِي سِفْرِ مُلُوكِ يَهُوذَا وَإِسْرَائِيلَ. ٣٢ 32
೩೨ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.
ثُمَّ ٱضْطَجَعَ حَزَقِيَّا مَعَ آبَائِهِ فَدَفَنُوهُ فِي عَقَبَةِ قُبُورِ بَنِي دَاوُدَ، وَعَمِلَ لَهُ إِكْرَامًا عِنْدَ مَوْتِهِ كُلُّ يَهُوذَا وَسُكَّانِ أُورُشَلِيمَ. وَمَلَكَ مَنَسَّى ٱبْنُهُ عِوَضًا عَنْهُ. ٣٣ 33
೩೩ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

< ٢ أخبار 32 >