< ٢ أخبار 32 >

وَبَعْدَ هَذِهِ ٱلْأُمُورِ وَهَذِهِ ٱلْأَمَانَةِ، أَتَى سِنْحَارِيبُ مَلِكُ أَشُّورَ وَدَخَلَ يَهُوذَا وَنَزَلَ عَلَى ٱلْمُدُنُ ٱلْحَصِينَةِ وَطَمِعَ بِإِخْضَاعِهَا لِنَفْسِهِ. ١ 1
ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.
وَلَمَّا رَأَى حَزَقِيَّا أَنَّ سِنْحَارِيبَ قَدْ أَتَى وَوَجْهُهُ عَلَى مُحَارَبَةِ أُورُشَلِيمَ، ٢ 2
ಸನ್ಹೇರೀಬನು ಬಂದದ್ದನ್ನೂ, ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ನಿಶ್ಚಯಿಸಿದ್ದನ್ನೂ ಹಿಜ್ಕೀಯನು ಕಂಡಾಗ,
تَشَاوَرَ هُوَ وَرُؤَسَاؤُهُ وَجَبَابِرَتُهُ عَلَى طَمِّ مِيَاهِ ٱلْعُيُونِ ٱلَّتِي هِيَ خَارِجَ ٱلْمَدِينَةِ فَسَاعَدُوهُ. ٣ 3
ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.
فَتَجَمَّعَ شَعْبٌ كَثِيرٌ وَطَمُّوا جَمِيعَ ٱلْيَنَابِيعِ وَٱلنَّهْرَ ٱلْجَارِيَ فِي وَسَطِ ٱلْأَرْضِ، قَائِلِينَ: «لِمَاذَا يَأْتِي مُلُوكُ أَشُّورَ وَيَجِدُونَ مِيَاهًا غَزِيرَةً؟» ٤ 4
ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು.
وَتَشَدَّدَ وَبَنَى كُلَّ ٱلسُّورِ ٱلْمُنْهَدِمِ وَأَعْلَاهُ إِلَى ٱلْأَبْرَاجِ، وَسُورًا آخَرَ خَارِجًا، وَحَصَّنَ ٱلْقَلْعَةَ، مَدِينَةَ دَاوُدَ، وَعَمِلَ سِلَاحًا بِكِثْرَةٍ وَأَتْرَاسًا. ٥ 5
ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು, ಬಿದ್ದುಹೋಗಿದ್ದ ಗೋಡೆಯನ್ನೆಲ್ಲಾ ಕಟ್ಟಿಸಿ, ಗೋಪುರಗಳ ಪರ್ಯಂತರ ಅದನ್ನು ಎತ್ತರಮಾಡಿ, ಅದರ ಹೊರಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ, ದಾವೀದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತಿ ಮಾಡಿ ಈಟಿಗಳನ್ನೂ, ಗುರಾಣಿಗಳನ್ನೂ ಬಹಳವಾಗಿ ಮಾಡಿಸಿದನು.
وَجَعَلَ رُؤَسَاءَ قِتَالٍ عَلَى ٱلشَّعْبِ، وَجَمَعَهُمْ إِلَيْهِ إِلَى سَاحَةِ بَابِ ٱلْمَدِينَةِ، وَطَيَّبَ قُلُوبَهُمْ قَائِلًا: ٦ 6
ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು:
«تَشَدَّدُوا وَتَشَجَّعُوا. لَا تَخَافُوا وَلَا تَرْتَاعُوا مِنْ مَلِكِ أَشُّورَ وَمِنْ كُلِّ ٱلْجُمْهُورِ ٱلَّذِي مَعَهُ، لِأَنَّ مَعَنَا أَكْثَرَ مِمَّا مَعَهُ. ٧ 7
“ಬಲಗೊಳ್ಳಿರಿ, ಧೈರ್ಯವಾಗಿರಿ, ಅಸ್ಸೀರಿಯದ ಅರಸನ ನಿಮಿತ್ತವೂ, ಅವನ ಸಂಗಡ ಕೂಡಿರುವ ಮಹಾ ಗುಂಪಿನ ನಿಮಿತ್ತವೂ ಭಯಪಡಬೇಡಿರಿ, ನಿರಾಶರಾಗಬೇಡಿರಿ. ಏಕೆಂದರೆ ಅವನ ಸಂಗಡ ಇರುವವರಿಗಿಂತ ಮಿಗಿಲಾದದ್ದು ನಮ್ಮ ಸಂಗಡ ಇದೆ.
مَعَهُ ذِرَاعُ بَشَرٍ، وَمَعَنَا ٱلرَّبُّ إِلَهُنَا لِيُسَاعِدَنَا وَيُحَارِبَ حُرُوبَنَا». فَٱسْتَنَدَ ٱلشَّعْبُ عَلَى كَلَامِ حَزَقِيَّا مَلِكِ يَهُوذَا. ٨ 8
ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.
بَعْدَ هَذَا أَرْسَلَ سِنْحَارِيبُ مَلِكُ أَشُّورَ عَبِيدَهُ إِلَى أُورُشَلِيمَ، وَهُوَ عَلَى لَخِيشَ وَكُلُّ سَلْطَنَتِهِ مَعَهُ، إِلَى حَزَقِيَّا مَلِكِ يَهُوذَا وَإِلَى كُلِّ يَهُوذَا ٱلَّذِينَ فِي أُورُشَلِيمَ يَقُولُونَ: ٩ 9
ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು.
«هَكَذَا يَقُولُ سِنْحَارِيبُ مَلِكُ أَشُّورَ: عَلَى مَاذَا تَتَّكِلُونَ وَتُقِيمُونَ فِي ٱلْحِصَارِ فِي أُورُشَلِيمَ؟ ١٠ 10
“ಅಸ್ಸೀರಿಯದ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ಉಳಿದಿರುವಿರಿ?
أَلَيْسَ حَزَقِيَّا يُغْوِيكُمْ لِيَدْفَعَكُمْ لِلْمَوْتِ بِٱلْجُوعِ وَٱلْعَطَشِ، قَائِلًا: ٱلرَّبُّ إِلَهُنَا يُنْقِذُنَا مِنْ يَدِ مَلِكِ أَشُّورَ؟ ١١ 11
‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
أَلَيْسَ حَزَقِيَّا هُوَ ٱلَّذِي أَزَالَ مُرْتَفَعَاتِهِ وَمَذَابِحَهُ، وَكَلَّمَ يَهُوذَا وَأُورُشَلِيمَ قَائِلًا: أَمَامَ مَذْبَحٍ وَاحِدٍ تَسْجُدُونَ، وَعَلَيْهِ تُوقِدُونَ؟ ١٢ 12
ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?
أَمَا تَعْلَمُونَ مَا فَعَلْتُهُ أَنَا وَآبَائِي بِجَمِيعِ شُعُوبِ ٱلْأَرَاضِي؟ فَهَلْ قَدِرَتْ آلِهَةُ أُمَمِ ٱلْأَرَاضِي أَنْ تُنْقِذَ أَرْضَهَا مِنْ يَدِي؟ ١٣ 13
“ನಾನೂ, ನನ್ನ ಪಿತೃಗಳು ದೇಶಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವಿತ್ತೋ?
مَنْ مِنْ جَمِيعِ آلِهَةِ هَؤُلَاءِ ٱلْأُمَمِ ٱلَّذِينَ حَرَّمَهُمْ آبَائِي، ٱسْتَطَاعَ أَنْ يُنْقِذَ شَعْبَهُ مِنْ يَدِي حَتَّى يَسْتَطِيعَ إِلَهُكُمْ أَنْ يُنْقِذَكُمْ مِنْ يَدِي؟ ١٤ 14
ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?
وَٱلْآنَ لَا يَخْدَعَنَّكُمْ حَزَقِيَّا، وَلَا يُغْوِيَنَّكُمْ هَكَذَا وَلَا تُصَدِّقُوهُ، لِأَنَّهُ لَمْ يَقْدِرْ إِلَهُ أُمَّةٍ أَوْ مَمْلَكَةٍ أَنْ يُنْقِذَ شَعْبَهُ مِنْ يَدِي وَيَدِ آبَائِي، فَكَمْ بِٱلْحَرِيِّ إِلَهُكُمْ لَا يُنْقِذُكُمْ مِنْ يَدِي؟». ١٥ 15
ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.
وَتَكَلَّمَ عَبِيدُهُ أَكْثَرَ ضِدَّ ٱلرَّبِّ ٱلْإِلَهِ وَضِدَّ حَزَقِيَّا عَبْدِهِ. ١٦ 16
ಹೀಗೆ ಅವನ ಸೇವಕರು ಇನ್ನೂ ದೇವರಾದ ಯೆಹೋವ ದೇವರಿಗೆ ವಿರೋಧವಾಗಿಯೂ, ಅವರ ಸೇವಕನಾದ ಹಿಜ್ಕೀಯನಿಗೆ ವಿರೋಧವಾಗಿಯೂ ಮಾತನಾಡಿದರು.
وَكَتَبَ رَسَائِلَ لِتَعْيِيرِ ٱلرَّبِّ إِلَهِ إِسْرَائِيلَ وَلِلتَّكَلُّمِ ضِدَّهُ قَائِلًا: «كَمَا أَنَّ آلِهَةَ أُمَمِ ٱلْأَرَاضِي لَمْ تُنْقِذْ شُعُوبَهَا مِنْ يَدِي، كَذَلِكَ لَا يُنْقِذُ إِلَهُ حَزَقِيَّا شَعْبَهُ مِنْ يَدِي». ١٧ 17
ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು.
وَصَرَخُوا بِصَوْتٍ عَظِيمٍ بِٱلْيَهُودِيِّ إِلَى شَعْبِ أُورُشَلِيمَ ٱلَّذِينَ عَلَى ٱلسُّورِ لِتَخْوِيفِهِمْ وَتَرْوِيعِهِمْ لِكَيْ يَأْخُذُوا ٱلْمَدِينَةَ. ١٨ 18
ಇದಲ್ಲದೆ ಅವರು ಪಟ್ಟಣವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವುದಕ್ಕೂ, ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ದೊಡ್ಡ ಶಬ್ದದಿಂದ ಅವರನ್ನು ಕೂಗಿದರು.
وَتَكَلَّمُوا عَلَى إِلَهِ أُورُشَلِيمَ كَمَا عَلَى آلِهَةِ شُعُوبِ ٱلْأَرْضِ صَنْعَةِ أَيْدِي ٱلنَّاسِ. ١٩ 19
ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
فَصَلَّى حَزَقِيَّا ٱلْمَلِكُ وَإِشَعْيَاءُ بْنُ آمُوصَ ٱلنَّبِيُّ لِذَلِكَ وَصَرَخَا إِلَى ٱلسَّمَاءِ، ٢٠ 20
ಇದರ ನಿಮಿತ್ತ ಅರಸನಾದ ಹಿಜ್ಕೀಯನೂ, ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
فَأَرْسَلَ ٱلرَّبُّ مَلَاكًا فَأَبَادَ كُلَّ جَبَّارِ بَأْسٍ وَرَئِيسٍ وَقَائِدٍ فِي مَحَلَّةِ مَلِكِ أَشُّورَ. فَرَجَعَ بِخِزْيِ ٱلْوَجْهِ إِلَى أَرْضِهِ. وَلَمَّا دَخَلَ بَيْتَ إِلَهِهِ قَتَلَهُ هُنَاكَ بِٱلسَّيْفِ ٱلَّذِينَ خَرَجُوا مِنْ أَحْشَائِهِ. ٢١ 21
ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.
وَخَلَّصَ ٱلرَّبُّ حَزَقِيَّا وَسُكَّانَ أُورُشَلِيمَ مِنْ سِنْحَارِيبَ مَلِكِ أَشُّورَ وَمِنْ يَدِ ٱلْجَمِيعِ، وَحَمَاهُمْ مِنْ كُلِّ نَاحِيَةٍ. ٢٢ 22
ಹೀಗೆ ಯೆಹೋವ ದೇವರು ಹಿಜ್ಕೀಯನನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ, ಅಸ್ಸೀರಿಯದ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ, ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ, ಸಮಸ್ತ ಕಡೆಯಿಂದ ಅವರನ್ನು ನಡೆಸಿದರು.
وَكَانَ كَثِيرُونَ يَأْتُونَ بِتَقْدِمَاتِ ٱلرَّبِّ إِلَى أُورُشَلِيمَ، وَتُحَفٍ لِحَزَقِيَّا مَلِكِ يَهُوذَا، وَٱعْتُبِرَ فِي أَعْيُنِ جَمِيعِ ٱلْأُمَمِ بَعْدَ ذَلِكَ. ٢٣ 23
ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.
فِي تِلْكَ ٱلْأَيَّامِ مَرِضَ حَزَقِيَّا إِلَى حَدِّ ٱلْمَوْتِ وَصَلَّى إِلَى ٱلرَّبِّ فَكَلَّمَهُ وَأَعْطَاهُ عَلَامَةً. ٢٤ 24
ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು.
وَلَكِنْ لَمْ يَرُدَّ حَزَقِيَّا حَسْبَمَا أُنْعِمَ عَلَيْهِ لِأَنَّ قَلْبَهُ ٱرْتَفَعَ، فَكَانَ غَضَبٌ عَلَيْهِ وَعَلَى يَهُوذَا وَأُورُشَلِيمَ. ٢٥ 25
ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.
ثُمَّ تَوَاضَعَ حَزَقِيَّا بِسَبَبِ ٱرْتِفَاعِ قَلْبِهِ هُوَ وَسُكَّانُ أُورُشَلِيمَ، فَلَمْ يَأْتِ عَلَيْهِمْ غَضَبُ ٱلرَّبِّ فِي أَيَّامِ حَزَقِيَّا. ٢٦ 26
ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ.
وَكَانَ لِحَزَقِيَّا غِنًى وَكَرَامَةٌ كَثِيرَةٌ جِدًّا، وَعَمِلَ لِنَفْسِهِ خَزَائِنَ لِلْفِضَّةِ وَٱلذَّهَبِ وَٱلْحِجَارَةِ ٱلْكَرِيمَةِ وَٱلْأَطْيَابِ وَٱلْأَتْرَاسِ وَكُلِّ آنِيَةٍ ثَمِينَةٍ، ٢٧ 27
ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.
وَمَخَازِنَ لِغَلَّةِ ٱلْحِنْطَةِ وَٱلْمِسْطَارِ وَٱلزَّيْتِ، وَأَوَارِيَ لِكُلِّ أَنْوَاعِ ٱلْبَهَائِمِ، وَلِلْقُطْعَانِ أَوَارِيَ. ٢٨ 28
ಇದಲ್ಲದೆ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನೂ, ಸಕಲ ವಿಧವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ, ಕುರಿಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
وَعَمِلَ لِنَفْسِهِ أَبْرَاجًا وَمَوَاشِيَ غَنَمٍ وَبَقَرٍ بِكَثْرَةٍ، لِأَنَّ ٱللهَ أَعْطَاهُ أَمْوَالًا كَثِيرَةً جِدًّا. ٢٩ 29
ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.
وَحَزَقِيَّا هَذَا سَدَّ مَخْرَجَ مِيَاهِ جَيْحُونَ ٱلْأَعْلَى، وَأَجْرَاهَا تَحْتَ ٱلْأَرْضِ، إِلَى ٱلْجِهَةِ ٱلْغَرْبِيَّةِ مِنْ مَدِينَةِ دَاوُدَ. وَأَفْلَحَ حَزَقِيَّا فِي كُلِّ عَمَلِهِ. ٣٠ 30
ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು.
وَهَكَذَا فِي أَمْرِ تَرَاجِمِ رُؤَسَاءِ بَابِلَ ٱلَّذِينَ أَرْسَلُوا إِلَيْهِ لِيَسْأَلُوا عَنِ ٱلْأُعْجُوبَةِ ٱلَّتِي كَانَتْ فِي ٱلْأَرْضِ، تَرَكَهُ ٱللهُ لِيُجَرِّبَهُ لِيَعْلَمَ كُلَّ مَا فِي قَلْبِهِ. ٣١ 31
ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.
وَبَقِيَّةُ أُمُورِ حَزَقِيَّا وَمَرَاحِمُهُ، هَا هِيَ مَكْتُوبَةٌ فِي رُؤْيَا إِشَعْيَاءَ بْنِ آمُوصَ ٱلنَّبِيِّ فِي سِفْرِ مُلُوكِ يَهُوذَا وَإِسْرَائِيلَ. ٣٢ 32
ಹಿಜ್ಕೀಯನ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗ ಪ್ರವಾದಿಯಾದ ಯೆಶಾಯನ ದರ್ಶನದ ಪುಸ್ತಕದಲ್ಲಿ ಮತ್ತು ಯೆಹೂದ ಇಸ್ರಾಯೇಲ್ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
ثُمَّ ٱضْطَجَعَ حَزَقِيَّا مَعَ آبَائِهِ فَدَفَنُوهُ فِي عَقَبَةِ قُبُورِ بَنِي دَاوُدَ، وَعَمِلَ لَهُ إِكْرَامًا عِنْدَ مَوْتِهِ كُلُّ يَهُوذَا وَسُكَّانِ أُورُشَلِيمَ. وَمَلَكَ مَنَسَّى ٱبْنُهُ عِوَضًا عَنْهُ. ٣٣ 33
ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.

< ٢ أخبار 32 >