< اَلْمُلُوكِ ٱلثَّانِي 10 >

وَكَانَ لِأَخْآبَ سَبْعُونَ ٱبْنًا فِي ٱلسَّامِرَةِ. فَكَتَبَ يَاهُو رَسَائِلَ وَأَرْسَلَهَا إِلَى ٱلسَّامِرَةِ، إِلَى رُؤَسَاءِ يَزْرَعِيلَ ٱلشُّيُوخِ وَإِلَى مُرَبِّي أَخْآبَ قَائِلًا: ١ 1
ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.
«فَٱلْآنَ عِنْدَ وُصُولِ هَذِهِ ٱلرِّسَالَةِ إِلَيْكُمْ، إِذْ عِنْدَكُمْ بَنُو سَيِّدِكُمْ، وَعِنْدَكُمْ مَرْكَبَاتٌ وَخَيْلٌ وَمَدِينَةٌ مُحَصَّنَةٌ وَسِلَاحٌ، ٢ 2
ಪತ್ರಗಳಲ್ಲಿ, “ನಿಮ್ಮ ವಶದಲ್ಲಿರುವ ನಿಮ್ಮ ಯಜಮಾನನ ಮಕ್ಕಳೂ, ರಥಾಶ್ವಬಲಗಳೂ, ಕೋಟೆಕೊತ್ತಲುಗಳುಳ್ಳ ಪಟ್ಟಣಗಳೂ, ಯುದ್ಧಾಯುಧಗಳೂ ಇರುತ್ತವಷ್ಟೇ.
ٱنْظُرُوا ٱلْأَفْضَلَ وَٱلْأَصْلَحَ مِنْ بَنِي سَيِّدِكُمْ وَإِجْعَلُوهُ عَلَى كُرْسِيِّ أَبِيهِ، وَحَارِبُوا عَنْ بَيْتِ سَيِّدِكُمْ». ٣ 3
ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು.
فَخَافُوا جِدًّا جِدًّا وَقَالُوا: «هُوَذَا مَلِكَانِ لَمْ يَقِفَا أَمَامَهُ، فَكَيْفَ نَقِفُ نَحْنُ؟» ٤ 4
ಅವರು ಬಹಳವಾಗಿ ಭಯಪಟ್ಟು, “ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?” ಅಂದುಕೊಂಡರು.
فَأَرْسَلَ ٱلَّذِي عَلَى ٱلْبَيْتِ وَٱلَّذِي عَلَى ٱلْمَدِينَةِ وَٱلشُّيُوخُ وَٱلْمُرَبُّونَ إِلَى يَاهُو قَائِلِينَ: «عَبِيدُكَ نَحْنُ، وَكُلَّ مَا قُلْتَ لَنَا نَفْعَلُهُ. لَا نُمَلِّكُ أَحَدًا. مَا يَحْسُنُ فِي عَيْنَيْكَ فَٱفْعَلْهُ». ٥ 5
ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, “ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ” ಎಂದು ಹೇಳಿ ಕಳುಹಿಸಿದರು.
فَكَتَبَ إِلَيْهِمْ رِسَالَةً ثَانِيَةً قَائِلًا: «إِنْ كُنْتُمْ لِي وَسَمِعْتُمْ لِقَوْلِي، فَخُذُوا رُؤُوسَ ٱلرِّجَالِ بَنِي سَيِّدِكُمْ، وَتَعَالَوْا إِلَيَّ فِي نَحْوِ هَذَا ٱلْوَقْتِ غَدًا إِلَى يَزْرَعِيلَ». وَبَنُو ٱلْمَلِكِ سَبْعُونَ رَجُلًا كَانُوا مَعَ عُظَمَاءِ ٱلْمَدِينَةِ ٱلَّذِينَ رَبَّوْهُمْ. ٦ 6
ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.
فَلَمَّا وَصَلَتِ ٱلرِّسَالَةُ إِلَيْهِمْ أَخَذُوا بَنِي ٱلْمَلِكِ وَقَتَلُوا سَبْعِينَ رَجُلًا وَوَضَعُوا رُؤُوسَهُمْ فِي سِلَالٍ وَأَرْسَلُوهَا إِلَيْهِ إِلَى يَزْرَعِيلَ. ٧ 7
ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.
فَجَاءَ ٱلرَّسُولُ وَأَخْبَرَهُ قَائِلًا: «قَدْ أَتَوْا بِرُؤُوسِ بَنِي ٱلْمَلِكِ». فَقَالَ: «ٱجْعَلُوهَا كَوْمَتَيْنِ فِي مَدْخَلِ ٱلْبَابِ إِلَى ٱلصَّبَاحِ». ٨ 8
ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ತಲುಪಿದಾಗ ಅವನು, “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಮಾಡಿ ಹಾಕಿರಿ” ಎಂದು ಆಜ್ಞಾಪಿಸಿದನು.
وَفِي ٱلصَّبَاحِ خَرَجَ وَوَقَفَ وَقَالَ لِجَمِيعِ ٱلشَّعْبِ: «أَنْتُمْ أَبْرِيَاءُ. هَأَنَذَا قَدْ عَصَيْتُ عَلَى سَيِّدِي وَقَتَلْتُهُ، وَلَكِنْ مَنْ قَتَلَ كُلَّ هَؤُلَاءِ؟ ٩ 9
ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?
فَٱعْلَمُوا ٱلْآنَ أَنَّهُ لَا يَسْقُطُ مِنْ كَلَامِ ٱلرَّبِّ إِلَى ٱلْأَرْضِ ٱلَّذِي تَكَلَّمَ بِهِ ٱلرَّبُّ عَلَى بَيْتِ أَخْآبَ، وَقَدْ فَعَلَ ٱلرَّبُّ مَا تَكَلَّمَ بِهِ عَنْ يَدِ عَبْدِهِ إِيلِيَّا». ١٠ 10
೧೦ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ” ಎಂದು ಹೇಳಿದನು.
وَقَتَلَ يَاهُو كُلَّ ٱلَّذِينَ بَقُوا لِبَيْتِ أَخْآبَ فِي يَزْرَعِيلَ وَكُلَّ عُظَمَائِهِ وَمَعَارِفِهِ وَكَهَنَتِهِ، حَتَّى لَمْ يُبْقِ لَهُ شَارِدًا. ١١ 11
೧೧ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.
ثُمَّ قَامَ وَجَاءَ سَائِرًا إِلَى ٱلسَّامِرَةِ. وَإِذْ كَانَ عِنْدَ بَيْتِ عَقْدِ ٱلرُّعَاةِ فِي ٱلطَّرِيقِ، ١٢ 12
೧೨ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,
صَادَفَ يَاهُو إِخْوَةَ أَخَزْيَا مَلِكِ يَهُوذَا، فَقَالَ: «مَنْ أَنْتُمْ؟» فَقَالُوا: «نَحْنُ إِخْوَةُ أَخَزْيَا، وَنَحْنُ نَازِلُونَ لِنُسَلِّمَ عَلَى بَنِي ٱلْمَلِكِ وَبَنِي ٱلْمَلِكَةِ». ١٣ 13
೧೩ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.
فَقَالَ: «أَمْسِكُوهُمْ أَحْيَاءً». فَأَمْسَكُوهُمْ أَحْيَاءً وَقَتَلُوهُمْ عِنْدَ بِئْرِ بَيْتِ عَقْدٍ، ٱثْنَيْنِ وَأَرْبَعِينَ رَجُلًا وَلَمْ يُبْقِ مِنْهُمْ أَحَدًا. ١٤ 14
೧೪ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.
ثُمَّ ٱنْطَلَقَ مِنْ هُنَاكَ فَصَادَفَ يَهُونَادَابَ بْنَ رَكَابٍ يُلَاقِيهِ، فَبَارَكَهُ وَقَالَ لَهُ: «هَلْ قَلْبُكَ مُسْتَقِيمٌ نَظِيرُ قَلْبِي مَعَ قَلْبِكَ؟» فَقَالَ يَهُونَادَابُ: «نَعَمْ وَنَعَمْ».«هَاتِ يَدَكَ». فَأَعْطَاهُ يَدَهُ، فَأَصْعَدَهُ إِلَيْهِ إِلَى ٱلْمَرْكَبَةِ. ١٥ 15
೧೫ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
وَقَالَ: «هَلُمَّ مَعِي وَٱنْظُرْ غَيْرَتِي لِلرَّبِّ». وَأَرْكَبَهُ مَعَهُ فِي مَرْكَبَتِهِ. ١٦ 16
೧೬ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.
وَجَاءَ إِلَى ٱلسَّامِرَةِ، وَقَتَلَ جَمِيعَ ٱلَّذِينَ بَقُوا لِأَخْآبَ فِي ٱلسَّامِرَةِ حَتَّى أَفْنَاهُ، حَسَبَ كَلَامِ ٱلرَّبِّ ٱلَّذِي كَلَّمَ بِهِ إِيلِيَّا. ١٧ 17
೧೭ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
ثُمَّ جَمَعَ يَاهُو كُلَّ ٱلشَّعْبِ وَقَالَ لَهُمْ: «إِنَّ أَخْآبَ قَدْ عَبَدَ ٱلْبَعْلَ قَلِيلًا، وَأَمَّا يَاهُو فَإِنَّهُ يَعْبُدُهُ كَثِيرًا. ١٨ 18
೧೮ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.
وَٱلْآنَ فَٱدْعُوا إِلَيَّ جَمِيعَ أَنْبِيَاءِ ٱلْبَعْلِ وَكُلَّ عَابِدِيهِ وَكُلَّ كَهَنَتِهِ. لَا يُفْقَدْ أَحَدٌ، لِأَنَّ لِي ذَبِيحَةً عَظِيمَةً لِلْبَعْلِ. كُلُّ مَنْ فُقِدَ لَا يَعِيشُ». وَقَدْ فَعَلَ يَاهُو بِمَكْرٍ لِكَيْ يُفْنِيَ عَبَدَةَ ٱلْبَعْلِ. ١٩ 19
೧೯ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.
وَقَالَ يَاهُو: «قَدِّسُوا ٱعْتِكَافًا لِلْبَعْلِ». فَنَادَوْا بِهِ. ٢٠ 20
೨೦ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.
وَأَرْسَلَ يَاهُو فِي كُلِّ إِسْرَائِيلَ، فَأَتَى جَمِيعُ عَبَدَةِ ٱلْبَعْلِ وَلَمْ يَبْقَ أَحَدٌ إِلَّا أَتَى، وَدَخَلُوا بَيْتَ ٱلْبَعْلِ، فَٱمْتَلَأَ بَيْتُ ٱلْبَعْلِ مِنْ جَانِبٍ إِلَى جَانِبٍ. ٢١ 21
೨೧ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ, ಬಾಳ್ ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳ್ ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು.
فَقَالَ لِلَّذِي عَلَى ٱلْمَلَابِسِ: «أَخْرِجْ مَلَابِسَ لِكُلِّ عَبَدَةِ ٱلْبَعْلِ». فَأَخْرَجَ لَهُمْ مَلَابِسَ. ٢٢ 22
೨೨ಯೇಹುವು ವಸ್ತ್ರಗಾರದ ಅಧಿಪತಿಗೆ, “ಬಾಳ್ ದೇವತೆಯನ್ನು ಸೇವಿಸುವ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು” ಎಂದು ಆಜ್ಞಾಪಿಸಿಲು ಅವನು ತಂದುಕೊಟ್ಟನು.
وَدَخَلَ يَاهُو وَيَهُونَادَابُ بْنُ رَكَابٍ إِلَى بَيْتِ ٱلْبَعْلِ. فَقَالَ لِعَبَدَةِ ٱلْبَعْلِ: «فَتِّشُوا وَٱنْظُرُوا لِئَلَّا يَكُونَ مَعَكُمْ هَهُنَا أَحَدٌ مِنْ عَبِيدِ ٱلرَّبِّ، وَلَكِنَّ عَبَدَةَ ٱلْبَعْلِ وَحْدَهُمْ». ٢٣ 23
೨೩ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು.
وَدَخَلُوا لِيُقَرِّبُوا ذَبَائِحَ وَمُحْرَقَاتٍ. وَأَمَّا يَاهُو فَأَقَامَ خَارِجًا ثَمَانِينَ رَجُلًا وَقَالَ: «ٱلرَّجُلُ ٱلَّذِي يَنْجُو مِنَ ٱلرِّجَالِ ٱلَّذِينَ أَتَيْتُ بِهِمْ إِلَى أَيْدِيكُمْ تَكُونُ أَنْفُسُكُمْ بَدَلَ نَفْسِهِ». ٢٤ 24
೨೪ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು” ಎಂಬುದಾಗಿ ಆಜ್ಞಾಪಿಸಿದ್ದನು.
وَلَمَّا ٱنْتَهَوْا مِنْ تَقْرِيبِ ٱلْمُحْرَقَةِ قَالَ يَاهُو لِلسُّعَاةِ وَٱلثَّوَالِثِ: «ٱدْخُلُوا ٱضْرِبُوهُمْ. لَا يَخْرُجْ أَحَدٌ». فَضَرَبُوهُمْ بِحَدِّ ٱلسَّيْفِ، وَطَرَحَهُمُ ٱلسُّعَاةُ وَٱلثَّوَالِثُ. وَسَارُوا إِلَى مَدِينَةِ بَيْتِ ٱلْبَعْلِ، ٢٥ 25
೨೫ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.
وَأَخْرَجُوا تَمَاثِيلَ بَيْتِ ٱلْبَعْلِ وَأَحْرَقُوهَا، ٢٦ 26
೨೬ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.
وَكَسَّرُوا تِمْثَالَ ٱلْبَعْلِ، وَهَدَمُوا بَيْتَ ٱلْبَعْلِ، وَجَعَلُوهُ مَزْبَلَةً إِلَى هَذَا ٱلْيَوْمِ. ٢٧ 27
೨೭ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.
وَٱسْتَأْصَلَ يَاهُو ٱلْبَعْلَ مِنْ إِسْرَائِيلَ. ٢٨ 28
೨೮ಹೀಗೆ ಯೇಹುವು ಇಸ್ರಾಯೇಲರಲ್ಲಿ ಬಾಳ್ ದೇವತೆಯ ಪೂಜೆಯನ್ನು ನಿಲ್ಲಿಸಿದನು.
وَلَكِنَّ خَطَايَا يَرُبْعَامَ بْنِ نَبَاطَ ٱلَّذِي جَعَلَ إِسْرَائِيلَ يُخْطِئُ لَمْ يَحِدْ يَاهُو عَنْهَا، أَيْ عُجُولِ ٱلذَّهَبِ ٱلَّتِي فِي بَيْتِ إِيلَ وَٱلَّتِي فِي دَانَ. ٢٩ 29
೨೯ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.
وَقَالَ ٱلرَّبُّ لِيَاهُو: «مِنْ أَجْلِ أَنَّكَ قَدْ أَحْسَنْتَ بِعَمَلِ مَا هُوَ مُسْتَقِيمٌ فِي عَيْنَيَّ، وَحَسَبَ كُلِّ مَا بِقَلْبِي فَعَلْتَ بِبَيْتِ أَخْآبَ، فَأَبْنَاؤُكَ إِلَى ٱلْجِيلِ ٱلرَّابِعِ يَجْلِسُونَ عَلَى كُرْسِيِّ إِسْرَائِيلَ». ٣٠ 30
೩೦ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.
وَلَكِنْ يَاهُو لَمْ يَتَحَفَّظْ لِلسُّلُوكِ فِي شَرِيعَةِ ٱلرَّبِّ إِلَهِ إِسْرَائِيلَ مِنْ كُلِّ قَلْبِهِ. لَمْ يَحِدْ عَنْ خَطَايَا يَرُبْعَامَ ٱلَّذِي جَعَلَ إِسْرَائِيلَ يُخْطِئُ. ٣١ 31
೩೧ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.
فِي تِلْكَ ٱلْأَيَّامِ ٱبْتَدَأَ ٱلرَّبُّ يَقُصُّ إِسْرَائِيلَ، فَضَرَبَهُمْ حَزَائِيلُ فِي جَمِيعِ تُخُومِ إِسْرَائِيلَ ٣٢ 32
೩೨ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.
مِنَ ٱلْأُرْدُنِّ لِجِهَةِ مَشْرِقِ ٱلشَّمْسِ، جَمِيعَ أَرْضِ جِلْعَادَ ٱلْجَادِيِّينَ وَٱلرَّأُوبَيْنِيِّينَ وَٱلْمَنَسِّيِّينَ، مِنْ عَرُوعِيرَ ٱلَّتِي عَلَى وَادِي أَرْنُونَ وَجِلْعَادَ وَبَاشَانَ. ٣٣ 33
೩೩ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು.
وَبَقِيَّةُ أُمُورِ يَاهُو وَكُلُّ مَا عَمَلَ وَكُلُّ جَبَرُوتِهِ، أَمَا هِيَ مَكْتُوبَةٌ فِي سِفْرِ أَخْبَارِ ٱلْأَيَّامِ لِمُلُوكِ إِسْرَائِيلَ؟ ٣٤ 34
೩೪ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
وَٱضْطَجَعَ يَاهُو مَعَ آبَائِهِ فَدَفَنُوهُ فِي ٱلسَّامِرَةِ، وَمَلَكَ يَهُوأَحَازُ ٱبْنُهُ عِوَضًا عَنْهُ. ٣٥ 35
೩೫ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋವಾಹಾಜನು ಅರಸನಾದನು.
وَكَانَتِ ٱلْأَيَّامُ ٱلَّتِي مَلَكَ فِيهَا يَاهُو عَلَى إِسْرَائِيلَ فِي ٱلسَّامِرَةِ ثَمَانِيًا وَعِشْرِينَ سَنَةً. ٣٦ 36
೩೬ಯೇಹುವು ಸಮಾರ್ಯ ಪಟ್ಟಣದಲ್ಲಿ ವಾಸವಾಗಿದ್ದುಕೊಂಡು ಇಸ್ರಾಯೇಲರನ್ನು ಇಪ್ಪತ್ತೆಂಟು ವರ್ಷಗಳ ಕಾಲ ಆಳಿದನು.

< اَلْمُلُوكِ ٱلثَّانِي 10 >