< اَلْمُلُوكِ ٱلثَّانِي 11 >

فَلَمَّا رَأَتْ عَثَلْيَا أُمُّ أَخَزْيَا، أَنَّ ٱبْنَهَا قَدْ مَاتَ، قَامَتْ فَأَبَادَتْ جَمِيعَ ٱلنَّسْلِ ٱلْمَلِكِيِّ. ١ 1
ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.
فَأَخَذَتْ يَهُوشَبَعُ بِنْتُ ٱلْمَلِكِ يُورَامَ، أُخْتُ أَخَزْيَا، يُوآشَ بْنَ أَخَزْيَا وَسَرِقَتْهُ مِنْ وَسْطِ بَنِي ٱلْمَلِكِ ٱلَّذِينَ قُتِلُوا، هُوَ وَمُرْضِعَتَهُ مِنْ مُخْدَعِ ٱلسَّرِيرِ، وَخَبَّأُوهُ مِنْ وَجْهِ عَثَلْيَا فَلَمْ يُقْتَلْ. ٢ 2
ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು
وَكَانَ مَعَهَا فِي بَيْتِ ٱلرَّبِّ مُخْتَبِئًا سِتَّ سِنِينَ. وَعَثَلْيَا مَالِكَةٌ عَلَى ٱلْأَرْضِ. ٣ 3
ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.
وَفِي ٱلسَّنَةِ ٱلسَّابِعَةِ أَرْسَلَ يَهُويَادَاعُ فَأَخَذَ رُؤَسَاءَ مِئَاتِ ٱلْجَلَّادِينَ وَٱلسُّعَاةِ، وَأَدْخَلَهُمْ إِلَيْهِ إِلَى بَيْتِ ٱلرَّبِّ، وَقَطَعَ مَعَهُمْ عَهْدًا وَٱسْتَحْلَفَهُمْ فِي بَيْتِ ٱلرَّبِّ وَأَرَاهُمُ ٱبْنَ ٱلْمَلِكِ. ٤ 4
ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.
وَأَمَرَهُمْ قَائِلًا: «هَذَا مَا تَفْعَلُونَهُ: ٱلثُّلْثُ مِنْكُمُ ٱلَّذِينَ يَدْخُلُونَ فِي ٱلسَّبْتِ يَحْرُسُونَ حِرَاسَةَ بَيْتِ ٱلْمَلِكِ، ٥ 5
ಯೆಹೋಯಾದಾವನು ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,
وَٱلثُّلْثُ عَلَى بَابِ سُورٍ، وَٱلثُّلْثُ عَلَى ٱلْبَابِ وَرَاءَ ٱلسُّعَاةِ. فَتَحْرُسُونَ حِرَاسَةَ ٱلْبَيْتِ لِلصَّدِّ. ٦ 6
ಮೂರರಲ್ಲೊಂದು ಭಾಗವು ಸೂರ್ ಬಾಗಿಲಿನಲ್ಲಿಯೂ, ಮತ್ತೊಂದು ಭಾಗವು ಕಾವಲುದಂಡಿನ ಹಿಂದಿನ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.
وَٱلْفِرْقَتَانِ مِنْكُمْ، جَمِيعُ ٱلْخَارِجِينَ فِي ٱلسَّبْتِ، يَحْرُسُونَ حِرَاسَةَ بَيْتِ ٱلرَّبِّ حَوْلَ ٱلْمَلِكِ. ٧ 7
ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು.
وَتُحِيطُونَ بِٱلْمَلِكِ حَوَالَيْهِ، كُلُّ وَاحِدٍ سِلَاحُهُ بِيَدِهِ. وَمَنْ دَخَلَ ٱلصُّفُوفَ يُقْتَلُ. وَكُونُوا مَعَ ٱلْمَلِكِ فِي خُرُوجِهِ وَدُخُولِهِ». ٨ 8
ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.
فَفَعَلَ رُؤَسَاءُ ٱلْمِئَاتِ حَسَبَ كُلِّ مَا أَمَرَ بِهِ يَهُويَادَاعُ ٱلْكَاهِنُ، وَأَخَذُوا كُلُّ وَاحِدٍ رِجَالَهُ ٱلدَّاخِلِينَ فِي ٱلسَّبْتِ مَعَ ٱلْخَارِجِينَ فِي ٱلسَّبْتِ، وَجَاءُوا إِلَى يَهُويَادَاعَ ٱلْكَاهِنِ. ٩ 9
ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು.
فَأَعْطَى ٱلْكَاهِنُ لِرُؤَسَاءِ ٱلْمِئَاتِ ٱلْحِرَابَ وَٱلْأَتْرَاسَ ٱلَّتِي لِلْمَلِكِ دَاوُدَ ٱلَّتِي فِي بَيْتِ ٱلرَّبِّ. ١٠ 10
೧೦ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು.
وَوَقَفَ ٱلسُّعَاةُ كُلُّ وَاحِدٍ سِلَاحُهُ بِيَدِهِ مِنْ جَانِبِ ٱلْبَيْتِ ٱلْأَيْمَنِ إِلَى جَانِبِ ٱلْبَيْتِ ٱلْأَيْسَرِ حَوْلَ ٱلْمَذْبَحِ وَٱلْبَيْتِ، حَوْلَ ٱلْمَلِكِ مُسْتَدِيرِينَ. ١١ 11
೧೧ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.
وَأَخْرَجَ ٱبْنَ ٱلْمَلِكِ وَوَضَعَ عَلَيْهِ ٱلتَّاجَ وَأَعْطَاهُ ٱلشَّهَادَةَ، فَمَلَّكُوهُ وَمَسَحُوهُ وَصَفَّقُوا وَقَالُوا: «لِيَحْيَ ٱلْمَلِكُ». ١٢ 12
೧೨ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.
وَلَمَّا سَمِعَتْ عَثَلْيَا صَوْتَ ٱلسُّعَاةِ وَٱلشَّعْبِ، دَخَلَتْ إِلَى ٱلشَّعْبِ إِلَى بَيْتِ ٱلرَّبِّ، ١٣ 13
೧೩ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಸೇರಿ ಬಂದಿದ್ದ ಯೆಹೋವನ ಆಲಯಕ್ಕೆ ಬಂದಳು.
وَنَظَرَتْ وَإِذَا ٱلْمَلِكُ وَاقِفٌ عَلَى ٱلْمِنْبَرِ حَسَبَ ٱلْعَادَةِ، وَٱلرُّؤَسَاءُ وَنَافِخُو ٱلْأَبْوَاقِ بِجَانِبِ ٱلْمَلِكِ، وَكُلُّ شَعْبِ ٱلْأَرْضِ يَفْرَحُونَ وَيَضْرِبُونَ بِٱلْأَبْوَاقِ. فَشَقَّتْ عَثَلْيَا ثِيَابَهَا وَصَرَخَتْ: «خِيَانَةٌ، خِيَانَةٌ!». ١٤ 14
೧೪ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
فَأَمَرَ يَهُويَادَاعُ ٱلْكَاهِنُ رُؤَسَاءَ ٱلْمِئَاتِ، قُوَّادَ ٱلْجَيْشِ وَقَالَ لَهُمْ: «أَخْرِجُوهَا إِلَى خَارِجِ ٱلصُّفُوفِ، وَٱلَّذِي يَتْبَعُهَا ٱقْتُلُوهُ بِٱلسَّيْفِ». لِأَنَّ ٱلْكَاهِنَ قَالَ: «لَا تُقْتَلُ فِي بَيْتِ ٱلرَّبِّ». ١٥ 15
೧೫ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
فَأَلْقَوْا عَلَيْهَا ٱلْأَيَادِيَ، وَمَضَتْ فِي طَرِيقِ مَدْخَلِ ٱلْخَيْلِ إِلَى بَيْتِ ٱلْمَلِكِ، وَقُتِلَتْ هُنَاكَ. ١٦ 16
೧೬ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.
وَقَطَعَ يَهُويَادَاعُ عَهْدًا بَيْنَ ٱلرَّبِّ وَبَيْنَ ٱلْمَلِكِ وَٱلشَّعْبِ لِيَكُونُوا شَعْبًا لِلرَّبِّ، وَبَيْنَ ٱلْمَلِكِ وَٱلشَّعْبِ. ١٧ 17
೧೭ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.
وَدَخَلَ جَمِيعُ شَعْبِ ٱلْأَرْضِ إِلَى بَيْتِ ٱلْبَعْلِ وَهَدَمُوا مَذَابِحَهُ وَكَسَّرُوا تَمَاثِيلَهُ تَمَامًا، وَقَتَلُوا مَتَّانَ كَاهِنَ ٱلْبَعْلِ أَمَامَ ٱلْمَذَابِحِ. وَجَعَلَ ٱلْكَاهِنُ نُظَّارًا عَلَى بَيْتِ ٱلرَّبِّ. ١٨ 18
೧೮ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.
وَأَخَذَ رُؤَسَاءَ ٱلْمِئَاتِ وَٱلْجَلَّادِينَ وَٱلسُّعَاةَ وَكُلَّ شَعْبِ ٱلْأَرْضِ، فَأَنْزَلُوا ٱلْمَلِكَ مِنْ بَيْتِ ٱلرَّبِّ وَأَتَوْا فِي طَرِيقِ بَابِ ٱلسُّعَاةِ إِلَى بَيْتِ ٱلْمَلِكِ، فَجَلَسَ عَلَى كُرْسِيِّ ٱلْمُلُوكِ. ١٩ 19
೧೯ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
وَفَرِحَ جَمِيعُ شَعْبِ ٱلْأَرْضِ، وَٱسْتَرَاحَتِ ٱلْمَدِينَةُ. وَقَتَلُوا عَثَلْيَا بِٱلسَّيْفِ عِنْدَ بَيْتِ ٱلْمَلِكِ. ٢٠ 20
೨೦ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿ ನೆಲೆಸಿತು. ಅತಲ್ಯಳನ್ನು ರಾಜನ ಅರಮನೆಯ ಸಮೀಪದಲ್ಲಿ ಕತ್ತಿಯಿಂದ ಸಂಹರಿಸಿದರು.
كَانَ يَهُوآشُ ٱبْنَ سَبْعِ سِنِينَ حِينَ مَلَكَ. ٢١ 21
೨೧ಯೆಹೋವಾಷನು ಅರಸನಾದಾಗ ಅವನು ಏಳು ವರ್ಷದವನಾಗಿದ್ದನು.

< اَلْمُلُوكِ ٱلثَّانِي 11 >