< اَلْمُلُوكِ ٱلثَّانِي 11 >

فَلَمَّا رَأَتْ عَثَلْيَا أُمُّ أَخَزْيَا، أَنَّ ٱبْنَهَا قَدْ مَاتَ، قَامَتْ فَأَبَادَتْ جَمِيعَ ٱلنَّسْلِ ٱلْمَلِكِيِّ. ١ 1
ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.
فَأَخَذَتْ يَهُوشَبَعُ بِنْتُ ٱلْمَلِكِ يُورَامَ، أُخْتُ أَخَزْيَا، يُوآشَ بْنَ أَخَزْيَا وَسَرِقَتْهُ مِنْ وَسْطِ بَنِي ٱلْمَلِكِ ٱلَّذِينَ قُتِلُوا، هُوَ وَمُرْضِعَتَهُ مِنْ مُخْدَعِ ٱلسَّرِيرِ، وَخَبَّأُوهُ مِنْ وَجْهِ عَثَلْيَا فَلَمْ يُقْتَلْ. ٢ 2
ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.
وَكَانَ مَعَهَا فِي بَيْتِ ٱلرَّبِّ مُخْتَبِئًا سِتَّ سِنِينَ. وَعَثَلْيَا مَالِكَةٌ عَلَى ٱلْأَرْضِ. ٣ 3
ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.
وَفِي ٱلسَّنَةِ ٱلسَّابِعَةِ أَرْسَلَ يَهُويَادَاعُ فَأَخَذَ رُؤَسَاءَ مِئَاتِ ٱلْجَلَّادِينَ وَٱلسُّعَاةِ، وَأَدْخَلَهُمْ إِلَيْهِ إِلَى بَيْتِ ٱلرَّبِّ، وَقَطَعَ مَعَهُمْ عَهْدًا وَٱسْتَحْلَفَهُمْ فِي بَيْتِ ٱلرَّبِّ وَأَرَاهُمُ ٱبْنَ ٱلْمَلِكِ. ٤ 4
ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.
وَأَمَرَهُمْ قَائِلًا: «هَذَا مَا تَفْعَلُونَهُ: ٱلثُّلْثُ مِنْكُمُ ٱلَّذِينَ يَدْخُلُونَ فِي ٱلسَّبْتِ يَحْرُسُونَ حِرَاسَةَ بَيْتِ ٱلْمَلِكِ، ٥ 5
ಅವರಿಗೆ, “ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ಅರಮನೆಯ ಕಾವಲುಗಾರರಾಗಿರಬೇಕು.
وَٱلثُّلْثُ عَلَى بَابِ سُورٍ، وَٱلثُّلْثُ عَلَى ٱلْبَابِ وَرَاءَ ٱلسُّعَاةِ. فَتَحْرُسُونَ حِرَاسَةَ ٱلْبَيْتِ لِلصَّدِّ. ٦ 6
ಇನ್ನೊಂದು ಭಾಗವು ಸೂರ್ ಎಂಬ ಬಾಗಿಲ ಬಳಿಯಲ್ಲಿಯೂ, ಮತ್ತೊಂದು ಭಾಗವು ಕಾವಲಿನ ಹಿಂದೆ ಇರುವ ಬಾಗಿಲ ಬಳಿಯಲ್ಲಿಯೂ ಇರಿ. ಹೀಗೆಯೇ ದೇವಾಲಯ ಕಾವಲು ಮುರಿಯದ ಹಾಗೆ ಅದನ್ನು ಕಾಯಿರಿ.
وَٱلْفِرْقَتَانِ مِنْكُمْ، جَمِيعُ ٱلْخَارِجِينَ فِي ٱلسَّبْتِ، يَحْرُسُونَ حِرَاسَةَ بَيْتِ ٱلرَّبِّ حَوْلَ ٱلْمَلِكِ. ٧ 7
ಇದಲ್ಲದೆ ಸಬ್ಬತ್ ದಿನದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಯೆಹೋವ ದೇವರ ಆಲಯದಲ್ಲಿರುವ ಅರಸನನ್ನು ಕಾಯುವವರಾಗಿರಿ.
وَتُحِيطُونَ بِٱلْمَلِكِ حَوَالَيْهِ، كُلُّ وَاحِدٍ سِلَاحُهُ بِيَدِهِ. وَمَنْ دَخَلَ ٱلصُّفُوفَ يُقْتَلُ. وَكُونُوا مَعَ ٱلْمَلِكِ فِي خُرُوجِهِ وَدُخُولِهِ». ٨ 8
ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಯಾವನಾದರೂ ನಿಮ್ಮ ಸಾಲುಗಳಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಆದರೆ ಅರಸನು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಆಜ್ಞಾಪಿಸಿದನು.
فَفَعَلَ رُؤَسَاءُ ٱلْمِئَاتِ حَسَبَ كُلِّ مَا أَمَرَ بِهِ يَهُويَادَاعُ ٱلْكَاهِنُ، وَأَخَذُوا كُلُّ وَاحِدٍ رِجَالَهُ ٱلدَّاخِلِينَ فِي ٱلسَّبْتِ مَعَ ٱلْخَارِجِينَ فِي ٱلسَّبْتِ، وَجَاءُوا إِلَى يَهُويَادَاعَ ٱلْكَاهِنِ. ٩ 9
ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಶತಾಧಿಪತಿಗಳು ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಯೆಹೋಯಾದಾವನ ಬಳಿಗೆ ಕರೆದುಕೊಂಡು ಬಂದರು.
فَأَعْطَى ٱلْكَاهِنُ لِرُؤَسَاءِ ٱلْمِئَاتِ ٱلْحِرَابَ وَٱلْأَتْرَاسَ ٱلَّتِي لِلْمَلِكِ دَاوُدَ ٱلَّتِي فِي بَيْتِ ٱلرَّبِّ. ١٠ 10
ಆಗ ಯಾಜಕನು ಯೆಹೋವ ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ಗುರಾಣಿಗಳನ್ನೂ ಶತಾಧಿಪತಿಗಳಿಗೆ ಕೊಟ್ಟನು.
وَوَقَفَ ٱلسُّعَاةُ كُلُّ وَاحِدٍ سِلَاحُهُ بِيَدِهِ مِنْ جَانِبِ ٱلْبَيْتِ ٱلْأَيْمَنِ إِلَى جَانِبِ ٱلْبَيْتِ ٱلْأَيْسَرِ حَوْلَ ٱلْمَذْبَحِ وَٱلْبَيْتِ، حَوْلَ ٱلْمَلِكِ مُسْتَدِيرِينَ. ١١ 11
ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು, ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ನಿಂತುಕೊಂಡರು.
وَأَخْرَجَ ٱبْنَ ٱلْمَلِكِ وَوَضَعَ عَلَيْهِ ٱلتَّاجَ وَأَعْطَاهُ ٱلشَّهَادَةَ، فَمَلَّكُوهُ وَمَسَحُوهُ وَصَفَّقُوا وَقَالُوا: «لِيَحْيَ ٱلْمَلِكُ». ١٢ 12
ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
وَلَمَّا سَمِعَتْ عَثَلْيَا صَوْتَ ٱلسُّعَاةِ وَٱلشَّعْبِ، دَخَلَتْ إِلَى ٱلشَّعْبِ إِلَى بَيْتِ ٱلرَّبِّ، ١٣ 13
ಅತಲ್ಯಳು ಕಾವಲುಗಾರರ ಮತ್ತು ಜನರ ಶಬ್ದವನ್ನೂ ಕೇಳಿದಾಗ, ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.
وَنَظَرَتْ وَإِذَا ٱلْمَلِكُ وَاقِفٌ عَلَى ٱلْمِنْبَرِ حَسَبَ ٱلْعَادَةِ، وَٱلرُّؤَسَاءُ وَنَافِخُو ٱلْأَبْوَاقِ بِجَانِبِ ٱلْمَلِكِ، وَكُلُّ شَعْبِ ٱلْأَرْضِ يَفْرَحُونَ وَيَضْرِبُونَ بِٱلْأَبْوَاقِ. فَشَقَّتْ عَثَلْيَا ثِيَابَهَا وَصَرَخَتْ: «خِيَانَةٌ، خِيَانَةٌ!». ١٤ 14
ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
فَأَمَرَ يَهُويَادَاعُ ٱلْكَاهِنُ رُؤَسَاءَ ٱلْمِئَاتِ، قُوَّادَ ٱلْجَيْشِ وَقَالَ لَهُمْ: «أَخْرِجُوهَا إِلَى خَارِجِ ٱلصُّفُوفِ، وَٱلَّذِي يَتْبَعُهَا ٱقْتُلُوهُ بِٱلسَّيْفِ». لِأَنَّ ٱلْكَاهِنَ قَالَ: «لَا تُقْتَلُ فِي بَيْتِ ٱلرَّبِّ». ١٥ 15
ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.
فَأَلْقَوْا عَلَيْهَا ٱلْأَيَادِيَ، وَمَضَتْ فِي طَرِيقِ مَدْخَلِ ٱلْخَيْلِ إِلَى بَيْتِ ٱلْمَلِكِ، وَقُتِلَتْ هُنَاكَ. ١٦ 16
ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಂದುಹಾಕಿದರು.
وَقَطَعَ يَهُويَادَاعُ عَهْدًا بَيْنَ ٱلرَّبِّ وَبَيْنَ ٱلْمَلِكِ وَٱلشَّعْبِ لِيَكُونُوا شَعْبًا لِلرَّبِّ، وَبَيْنَ ٱلْمَلِكِ وَٱلشَّعْبِ. ١٧ 17
ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.
وَدَخَلَ جَمِيعُ شَعْبِ ٱلْأَرْضِ إِلَى بَيْتِ ٱلْبَعْلِ وَهَدَمُوا مَذَابِحَهُ وَكَسَّرُوا تَمَاثِيلَهُ تَمَامًا، وَقَتَلُوا مَتَّانَ كَاهِنَ ٱلْبَعْلِ أَمَامَ ٱلْمَذَابِحِ. وَجَعَلَ ٱلْكَاهِنُ نُظَّارًا عَلَى بَيْتِ ٱلرَّبِّ. ١٨ 18
ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.
وَأَخَذَ رُؤَسَاءَ ٱلْمِئَاتِ وَٱلْجَلَّادِينَ وَٱلسُّعَاةَ وَكُلَّ شَعْبِ ٱلْأَرْضِ، فَأَنْزَلُوا ٱلْمَلِكَ مِنْ بَيْتِ ٱلرَّبِّ وَأَتَوْا فِي طَرِيقِ بَابِ ٱلسُّعَاةِ إِلَى بَيْتِ ٱلْمَلِكِ، فَجَلَسَ عَلَى كُرْسِيِّ ٱلْمُلُوكِ. ١٩ 19
ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
وَفَرِحَ جَمِيعُ شَعْبِ ٱلْأَرْضِ، وَٱسْتَرَاحَتِ ٱلْمَدِينَةُ. وَقَتَلُوا عَثَلْيَا بِٱلسَّيْفِ عِنْدَ بَيْتِ ٱلْمَلِكِ. ٢٠ 20
ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
كَانَ يَهُوآشُ ٱبْنَ سَبْعِ سِنِينَ حِينَ مَلَكَ. ٢١ 21
ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು.

< اَلْمُلُوكِ ٱلثَّانِي 11 >