< اَلْمُلُوكِ ٱلثَّانِي 12 >

فِي ٱلسَّنَةِ ٱلسَّابِعَةِ لِيَاهُو، مَلَكَ يَهُوآشُ. مَلَكَ أَرْبَعِينَ سَنَةً فِي أُورُشَلِيمَ، وَٱسْمُ أُمِّهِ ظَبْيَةُ مِنْ بِئْرِ سَبْعٍ. ١ 1
ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೋವಾಷನು ಅರಸನಾಗಿ, ಯೆರೂಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಚಿಬ್ಯಳು. ಅವಳು ಬೇರ್ಷೆಬ ಊರಿನವಳು.
وَعَمِلَ يَهُوآشُ مَا هُوَ مُسْتَقِيمٌ فِي عَيْنَيِ ٱلرَّبِّ كُلَّ أَيَّامِهِ ٱلَّتِي فِيهَا عَلَّمَهُ يَهُويَادَاعُ ٱلْكَاهِنُ، ٢ 2
ಯಾಜಕನಾದ ಯೆಹೋಯಾದಾವನು ಯೋವಾಷನಿಗೆ ಬೋಧಿಸಿದ ಎಲ್ಲಾ ವರ್ಷಗಳಲ್ಲಿ ಯೋವಾಷನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
إِلَّا أَنَّ ٱلْمُرْتَفَعَاتِ لَمْ تُنْتَزَعْ، بَلْ كَانَ ٱلشَّعْبُ لَا يَزَالُونَ يَذْبَحُونَ وَيُوقِدُونَ عَلَى ٱلْمُرْتَفَعَاتِ. ٣ 3
ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.
وَقَالَ يَهُوآشُ لِلْكَهَنَةِ: «جَمِيعُ فِضَّةِ ٱلْأَقْدَاسِ ٱلَّتِي أُدْخِلَتْ إِلَى بَيْتِ ٱلرَّبِّ، ٱلْفِضَّةُ ٱلرَّائِجَةُ، فِضَّةُ كُلِّ وَاحِدٍ حَسَبَ ٱلنُّفُوسِ ٱلْمُقَوَّمَةِ، كُلُّ فِضَّةٍ يَخْطُرُ بِبَالِ إِنْسَانٍ أَنْ يُدْخِلَهَا إِلَى بَيْتِ ٱلرَّبِّ، ٤ 4
ಯೋವಾಷನು ಯಾಜಕರಿಗೆ, “ಯೆಹೋವ ದೇವರ ಆಲಯಕ್ಕೆ ಪವಿತ್ರ ಅರ್ಪಣೆಗಳಾಗಿ ತರಲಾದ ಜನಗಣತಿಯಲ್ಲಿ ಸಂಗ್ರಹಿಸಿದ ಹಣ, ವೈಯಕ್ತಿಕ ಪ್ರತಿಜ್ಞೆಗಳಿಂದ ಪಡೆದ ಹಣ ಮತ್ತು ದೇವಾಲಯಕ್ಕೆ ಸ್ವಯಂಪ್ರೇರಣೆಯಿಂದ ತಂದ ಹಣವನ್ನು ಸಂಗ್ರಹಿಸಿರಿ ಎಂದನು.
لِيَأْخُذَهَا ٱلْكَهَنَةُ لِأَنْفُسِهِمْ كُلُّ وَاحِدٍ مِنْ عِنْدِ صَاحِبِهِ، وَهُمْ يُرَمِّمُونَ مَا تَهَدَّمَ مِنَ ٱلْبَيْتِ، كُلَّ مَا وُجِدَ فِيهِ مُتَهَدِّمًا». ٥ 5
ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು.
وَفِي ٱلسَّنَةِ ٱلثَّالِثَةِ وَٱلْعِشْرِينَ لِلْمَلِكِ يَهُوآشَ لَمْ تَكُنِ ٱلْكَهَنَةُ رَمَّمُوا مَا تَهَدَّمَ مِنَ ٱلْبَيْتِ. ٦ 6
ಆದರೆ ಯಾಜಕರು ಅರಸನಾದ ಯೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡದೆ ಇದ್ದರು.
فَدَعَا ٱلْمَلِكُ يَهُوآشُ يَهُويَادَاعَ ٱلْكَاهِنَ وَٱلْكَهَنَةَ وَقَالَ لَهُمْ: «لِمَاذَا لَمْ تُرَمِّمُوا مَا تَهَدَّمَ مِنَ ٱلْبَيْتِ؟ فَٱلْآنَ لَا تَأْخُذُوا فِضَّةً مِنْ عِنْدِ أَصْحَابِكُمْ، بَلِ ٱجْعَلُوهَا لِمَا تَهَدَّمَ مِنَ ٱلْبَيْتِ». ٧ 7
ಆದ್ದರಿಂದ ಅರಸನಾದ ಯೋವಾಷನು ಯಾಜಕನಾದ ಯೆಹೋಯಾದಾವನನ್ನು, ಇತರ ಯಾಜಕರನ್ನು ಕರೆದು ಅವರಿಗೆ, “ನೀವು ದೇವಾಲಯದ ಒಡಕುಗಳನ್ನು ಏಕೆ ದುರಸ್ತಿ ಮಾಡಿಸುತ್ತಿಲ್ಲ? ಇನ್ನು ಮೇಲೆ ನೀವು ನಿಮಗೆ ಪರಿಚಯವಿರುವ ಖಜಾಂಚಿಯವರಿಂದ ಹಣವನ್ನು ತೆಗೆದುಕೊಳ್ಳದೆ ದೇವಾಲಯದ ಒಡಕುಗಳನ್ನು ದುರಸ್ತಿ ಮಾಡಿಸಲು ಅದನ್ನು ಒಪ್ಪಿಸಿಕೊಡಿರಿ,” ಎಂದನು.
فَوَافَقَ ٱلْكَهَنَةُ عَلَى أَنْ لَا يَأْخُذُوا فِضَّةً مِنَ ٱلشَّعْبِ، وَلَا يُرَمِّمُوا مَا تَهَدَّمَ مِنَ ٱلْبَيْتِ. ٨ 8
ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈ ಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು.
فَأَخَذَ يَهُويَادَاعُ ٱلْكَاهِنُ صُنْدُوقًا وَثَقَبَ ثَقْبًا فِي غِطَائِهِ، وَجَعَلَهُ بِجَانِبِ ٱلْمَذْبَحِ عَنِ ٱلْيَمِينِ عِنْدَ دُخُولِ ٱلْإِنْسَانِ إِلَى بَيْتِ ٱلرَّبِّ. وَٱلْكَهَنَةُ حَارِسُو ٱلْبَابِ جَعَلُوا فِيهِ كُلَّ ٱلْفِضَّةِ ٱلْمُدْخَّلَةِ إِلَى بَيْتِ ٱلرَّبِّ. ٩ 9
ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಅದರ ಮುಚ್ಚಳದಲ್ಲಿ ಒಂದು ರಂಧ್ರವನ್ನು ಮಾಡಿದನು. ಅವನು ಅದನ್ನು ಬಲಿಪೀಠದ ಬಳಿಯಲ್ಲಿ ಯೆಹೋವ ದೇವರ ಆಲಯ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಿಲು ಕಾಯುವ ಯಾಜಕರು ಯೆಹೋವ ದೇವರ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿ ಹಾಕಿಸುತ್ತಿದ್ದರು.
وَكَانَ لَمَّا رَأَوْا ٱلْفِضَّةَ قَدْ كَثُرَتْ فِي ٱلصُّنْدُوقِ، أَنَّهُ صَعِدَ كَاتِبُ ٱلْمَلِكِ وَٱلْكَاهِنُ ٱلْعَظِيمُ وَصَرُّوا وَحَسَبُوا ٱلْفِضَّةَ ٱلْمَوْجُودَةَ فِي بَيْتِ ٱلرَّبِّ. ١٠ 10
ಪೆಟ್ಟಿಗೆಯಲ್ಲಿ ಬಹಳ ಹಣ ಉಂಟೆಂದು ಅವರು ಕಂಡಾಗಲೆಲ್ಲಾ ಅರಸನ ಲೇಖಕನೂ, ಮಹಾಯಾಜಕನೂ ಬಂದು, ಯೆಹೋವ ದೇವರ ಆಲಯದಲ್ಲಿ ತಂದಿದ್ದ ಹಣವನ್ನು ಎಣಿಸಿ, ಚೀಲಗಳಲ್ಲಿ ಹಾಕಿದರು.
وَدَفَعُوا ٱلْفِضَّةَ ٱلْمَحْسُوبَةَ إِلَى أَيْدِي عَامِلِي ٱلشُّغْلِ ٱلْمُوَكَّلِينَ عَلَى بَيْتِ ٱلرَّبِّ، وَأَنْفَقُوهَا لِلنَّجَّارِينَ وَٱلْبَنَّائِينَ ٱلْعَامِلِينَ فِي بَيْتِ ٱلرَّبِّ، ١١ 11
ಅವರು ಎಣಿಸಿದ ಹಣವನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಅದರೊಂದಿಗೆ, ಅವರು ಯೆಹೋವ ದೇವರ ದೇವಸ್ಥಾನದಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ,
وَلِبَنَّائِي ٱلْحِيطَانِ وَنَحَّاتِي ٱلْحِجَارَةِ، وَلِشِرَاءِ ٱلْأَخْشَابِ وَٱلْحِجَارَةِ ٱلْمَنْحُوتَةِ لِتَرْمِيمِ مَا تَهَدَّمَ مِنْ بَيْتِ ٱلرَّبِّ، وَلِكُلِّ مَا يُنْفَقُ عَلَى ٱلْبَيْتِ لِتَرْمِيمِهِ. ١٢ 12
ಉಪ್ಪಾರ, ಕಲ್ಲುಕುಟಿಗರಿಗೆ ಕೊಟ್ಟರು. ಇದಲ್ಲದೆ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಮರ, ಕೆತ್ತಿದ ಕಲ್ಲುಗಳನ್ನು ತೆಗೆದುಕೊಳ್ಳುವುದಕ್ಕೂ, ಆಲಯ ದುರಸ್ತಿ ಮಾಡಲು ಬೇಕಾದ ಸಮಸ್ತ ಖರ್ಚಿಗೂ ಕೊಟ್ಟರು.
إِلَّا أَنَّهُ لَمْ يُعْمَلْ لِبَيْتِ ٱلرَّبِّ طُسُوسُ فِضَّةٍ وَلَا مِقَصَّاتٌ وَلَا مَنَاضِحُ وَلَا أَبْوَاقٌ، كُلُّ آنِيَةِ ٱلذَّهَبِ وَآنِيَةِ ٱلْفِضَّةِ مِنَ ٱلْفِضَّةِ ٱلدَّاخِلَةِ إِلَى بَيْتِ ٱلرَّبِّ، ١٣ 13
ಯೆಹೋವ ದೇವರ ಆಲಯದೊಳಗೆ ತಂದ ಹಣದಿಂದ ಬೆಳ್ಳಿ ಬಟ್ಟಲು, ಕತ್ತರಿ, ಪಾತ್ರೆ, ತುತೂರಿ, ಬೆಳ್ಳಿಬಂಗಾರದ ಸಾಮಾನುಗಳು, ಇವೆಲ್ಲವುಗಳನ್ನು ಮಾಡಿಸದೆ,
بَلْ كَانُوا يَدْفَعُونَهَا لِعَامِلِي ٱلشُّغْلِ، فَكَانُوا يُرَمِّمُونَ بِهَا بَيْتَ ٱلرَّبِّ. ١٤ 14
ಅವರು ಅದನ್ನು ಕೆಲಸದವರಿಗೆ ಕೊಟ್ಟು, ಯೆಹೋವ ದೇವರ ಆಲಯದ ದುರಸ್ತಿ ಮಾಡಿಸಿದರು.
وَلَمْ يُحَاسِبُوا ٱلرِّجَالَ ٱلَّذِينَ سَلَّمُوهُمُ ٱلْفِضَّةَ بِأَيْدِيهِمْ لِكَيْ يُعْطُوهَا لِعَامِلِي ٱلشُّغْلِ، لِأَنَّهُمْ كَانُوا يَعْمَلُونَ بِأَمَانَةٍ. ١٥ 15
ಇದಲ್ಲದೆ ಅವರು ಕೆಲಸಮಾಡುವವರಿಗೆ ಹಣ ಕೊಡುವುದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ, ಅವರಿಂದ ಹಣದ ಲೆಕ್ಕವನ್ನು ತೆಗೆದುಕೊಳ್ಳಲಿಲ್ಲ, ಏಕೆಂದರೆ ಅವರು ನಂಬಿಗಸ್ತರಾಗಿದ್ದರು.
وَأَمَّا فِضَّةُ ذَبِيحَةِ ٱلْإِثْمِ وَفِضَّةُ ذَبِيحَةِ ٱلْخَطِيَّةِ فَلَمْ تُدْخَلْ إِلَى بَيْتِ ٱلرَّبِّ، بَلْ كَانَتْ لِلْكَهَنَةِ. ١٦ 16
ಆದರೆ ಪ್ರಾಯಶ್ಚಿತ್ತ ಬಲಿಯ ಹಣವನ್ನು, ಪಾಪ ಪರಿಹಾರದ ಬಲಿಯ ಹಣವನ್ನು ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬರಲಿಲ್ಲ, ಅದು ಯಾಜಕರದಾಗಿತ್ತು.
حِينَئِذٍ صَعِدَ حَزَائِيلُ مَلِكُ أَرَامَ وَحَارَبَ جَتَّ وَأَخَذَهَا، ثُمَّ حَوَّلَ حَزَائِيلُ وَجْهَهُ لِيَصْعَدَ إِلَى أُورُشَلِيمَ. ١٧ 17
ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.
فَأَخَذَ يَهُوآشُ مَلِكُ يَهُوذَا جَمِيعَ ٱلْأَقْدَاسِ ٱلَّتِي قَدَّسَهَا يَهُوشَافَاطُ وَيَهُورَامُ وَأَخَزْيَا آبَاؤُهُ مُلُوكُ يَهُوذَا، وَأَقْدَاسَهُ وَكُلَّ ٱلذَّهَبِ ٱلْمَوْجُودِ فِي خَزَائِنِ بَيْتِ ٱلرَّبِّ وَبَيْتِ ٱلْمَلِكِ، وَأَرْسَلَهَا إِلَى حَزَائِيلَ مَلِكِ أَرَامَ فَصَعِدَ عَنْ أُورُشَلِيمَ. ١٨ 18
ಆಗ ಯೆಹೂದದ ಅರಸನಾದ ಯೋವಾಷನು ತನ್ನ ಪೂರ್ವಜರಾದ ಯೆಹೋಷಾಫಾಟ, ಯೆಹೋರಾಮ್, ಅಹಜ್ಯ ಎಂಬ ಯೆಹೂದದ ಅರಸರು ಅರ್ಪಿಸಿದ ಸಮಸ್ತ ಪ್ರತಿಷ್ಠಿತವಾದವುಗಳನ್ನೂ ತಾನೇ ಸ್ವತಃ ಅರ್ಪಿಸಿದ ಪ್ರತಿಷ್ಠಿತವಾದವುಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸದಲ್ಲಿಯೂ, ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತೆಗೆದುಕೊಂಡು ಅರಾಮಿನ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
وَبَقِيَّةُ أُمُورِ يُوآشَ وَكُلُّ مَا عَمِلَ، أَمَا هِيَ مَكْتُوبَةٌ فِي سِفْرِ أَخْبَارِ ٱلْأَيَّامِ لِمُلُوكِ يَهُوذَا؟ ١٩ 19
ಯೋವಾಷನ ಇತರ ಕಾರ್ಯಗಳು, ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
وَقَامَ عَبِيدُهُ وَفَتَنُوا فِتْنَةً وَقَتَلُوا يُوآشَ فِي بَيْتِ ٱلْقَلْعَةِ حَيْثُ يَنْزِلُ إِلَى سَلَّى. ٢٠ 20
ಯೋವಾಷನ ಸೇವಕರು ಎದ್ದು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಸಿಲ್ಲಾ ಊರಿಗೆ ಇಳಿದು ಹೋಗುವ ಮಾರ್ಗವಾದ ಬೇತ್ ಮಿಲ್ಲೋ ಎಂಬ ಸ್ಥಳದಲ್ಲಿ ಯೋವಾಷನನ್ನು ಕೊಂದುಹಾಕಿದರು.
لِأَنَّ يُوزَاكَارَ بْنَ شِمْعَةَ وَيَهُوزَابَادَ بْنَ شُومِيرَ عَبْدَيْهِ ضَرَبَاهُ فَمَاتَ، فَدَفَنُوهُ مَعَ آبَائِهِ فِي مَدِينَةِ دَاوُدَ، وَمَلَكَ أَمَصْيَا ٱبْنُهُ عِوَضًا عَنْهُ. ٢١ 21
ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

< اَلْمُلُوكِ ٱلثَّانِي 12 >