< اَلْمُلُوكِ ٱلثَّانِي 14 >

فِي ٱلسَّنَةِ ٱلثَّانِيَةِ لِيُوآشَ بْنِ يُوأَحَازَ مَلِكِ إِسْرَائِيلَ، مَلَكَ أَمَصْيَا بْنُ يُوآشَ مَلِكِ يَهُوذَا. ١ 1
ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.
كَانَ ٱبْنَ خَمْسٍ وَعِشْرِينَ سَنَةً حِينَ مَلَكَ، وَمَلَكَ تِسْعًا وَعِشْرِينَ سَنَةً فِي أُورُشَلِيمَ، وَٱسْمُ أُمِّهِ يَهُوعَدَّانُ مِنْ أُورُشَلِيمَ. ٢ 2
ಅವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಯೆರೂಸಲೇಮಿನವಳಾದ ಯೆಹೋವದ್ದೀನ್ ಎಂಬಾಕೆಯು ಇವನ ತಾಯಿ.
وَعَمِلَ مَا هُوَ مُسْتَقِيمٌ فِي عَيْنَيِ ٱلرَّبِّ، وَلَكِنْ لَيْسَ كَدَاوُدَ أَبِيهِ، عَمِلَ حَسَبَ كُلِّ مَا عَمِلَ يُوآشُ أَبُوهُ. ٣ 3
ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು, ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ.
إِلَّا أَنَّ ٱلْمُرْتَفَعَاتِ لَمْ تُنْتَزَعْ، بَلْ كَانَ ٱلشَّعْبُ لَا يَزَالُونَ يَذْبَحُونَ وَيُوقِدُونَ عَلَى ٱلْمُرْتَفَعَاتِ. ٤ 4
ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
وَلَمَّا تَثَبَّتَتِ ٱلْمَمْلَكَةُ بِيَدِهِ، قَتَلَ عَبِيدَهُ ٱلَّذِينَ قَتَلُوا ٱلْمَلِكَ أَبَاهُ. ٥ 5
ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೇ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆ ವಿಧಿಸಿದನು.
وَلَكِنَّهُ لَمْ يَقْتُلْ أَبْنَاءَ ٱلْقَاتِلِينَ حَسَبَ مَا هُوَ مَكْتُوبٌ فِي سِفْرِ شَرِيعَةِ مُوسَى، حَيْثُ أَمَرَ ٱلرَّبُّ قَائِلًا: «لَا يُقْتَلُ ٱلْآبَاءُ مِنْ أَجْلِ ٱلْبَنِينَ، وَٱلْبَنُونَ لَا يُقْتَلُونَ مِنْ أَجْلِ ٱلْآبَاءِ. إِنَّمَا كُلُّ إِنْسَانٍ يُقْتَلُ بِخَطِيَّتِهِ». ٦ 6
ಮೋಶೆಯ ಧರ್ಮನಿಯಮಗ್ರಂಥದಲ್ಲಿರುವ ಯೆಹೋವನ ಅಪ್ಪಣೆಯಂತೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ, ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು” ಎಂಬುದನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
هُوَ قَتَلَ مِنْ أَدُومَ فِي وَادِي ٱلْمِلْحِ عَشْرَةَ آلَافٍ، وَأَخَذَ سَالِعَ بِٱلْحَرْبِ، وَدَعَا ٱسْمَهَا يَقْتَئِيلَ إِلَى هَذَا ٱلْيَوْمِ. ٧ 7
ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
حِينَئِذٍ أَرْسَلَ أَمَصْيَا رُسُلًا إِلَى يَهُوآشَ بْنِ يَهُوأَحَازَ بْنِ يَاهُو مَلِكِ إِسْرَائِيلَ قَائِلًا: «هَلُمَّ نَتَرَاءَ مُواجَهَةً». ٨ 8
ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನಾದ ಯೆಹೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾವು ಒಬ್ಬರನ್ನೊಬ್ಬರು ಒಂದು ಕೈ ನೋಡೋಣ ಬಾ” ಎಂದು ಹೇಳಿದನು.
فَأَرْسَلَ يَهُوآشُ مَلِكُ إِسْرَائِيلَ إِلَى أَمَصْيَا مَلِكِ يَهُوذَا قَائِلًا: «اَلْعَوْسَجُ ٱلَّذِي فِي لُبْنَانَ أَرْسَلَ إِلَى ٱلْأَرْزِ ٱلَّذِي فِي لُبْنَانَ يَقُولُ: أَعْطِ ٱبْنَتَكَ لِٱبْنِي ٱمْرَأَةً. فَعَبَرَ حَيَوَانٌ بَرِّيٌّ كَانَ فِي لُبْنَانَ وَدَاسَ ٱلْعَوْسَجَ. ٩ 9
ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು.
إِنَّكَ قَدْ ضَرَبْتَ أَدُومَ فَرَفَعَكَ قَلْبُكَ. تَمَجَّدْ وَأَقِمْ فِي بَيْتِكَ. وَلِمَاذَا تَهْجُمُ عَلَى ٱلشَّرِّ فَتَسْقُطَ أَنْتَ وَيَهُوذَا مَعَكَ؟». ١٠ 10
೧೦ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು.
فَلَمْ يَسْمَعْ أَمَصْيَا، فَصَعِدَ يَهُوآشُ مَلِكُ إِسْرَائِيلَ وَتَرَاءَيَا مُواجَهَةً، هُوَ وَأَمَصْيَا مَلِكُ يَهُوذَا فِي بَيْتِ شَمْسٍ ٱلَّتِي لِيَهُوذَا. ١١ 11
೧೧ಅಮಚ್ಯನು ಇದನ್ನು ಗಮನಕ್ಕೆ ತೆಗೆದುಕೊಳ್ಳದೆ ಇದ್ದುದರಿಂದ ಇಸ್ರಾಯೇಲರ ಅರಸನಾದ ಯೆಹೋವಾಷನು ಯುದ್ಧಕ್ಕೆ ಹೊರಟನು. ಅವರು ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
فَٱنْهَزَمَ يَهُوذَا أَمَامَ إِسْرَائِيلَ وَهَرَبُوا كُلُّ وَاحِدٍ إِلَى خَيْمَتِهِ. ١٢ 12
೧೨ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
وَأَمَّا أَمَصْيَا مَلِكُ يَهُوذَا ٱبْنُ يَهُوآشَ بْنِ أَخَزْيَا فَأَمْسَكَهُ يَهُوآشُ مَلِكُ إِسْرَائِيلَ فِي بَيْتِ شَمْسٍ، وَجَاءَ إِلَى أُورُشَلِيمَ وَهَدَمَ سُورَ أُورُشَلِيمَ مِنْ بَابِ أَفْرَايِمَ إِلَى بَابِ ٱلزَّاوِيَةِ، أَرْبَعَ مِئَةِ ذِرَاعٍ. ١٣ 13
೧೩ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಯನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು.
وَأَخَذَ كُلَّ ٱلذَّهَبِ وَٱلْفِضَّةِ وَجَمِيعَ ٱلْآنِيَةِ ٱلْمَوْجُودَةِ فِي بَيْتِ ٱلرَّبِّ وَفِي خَزَائِنِ بَيْتِ ٱلْمَلِكِ وَٱلرُّهَنَاءَ وَرَجَعَ إِلَى ٱلسَّامِرَةِ. ١٤ 14
೧೪ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ, ಪಾತ್ರೆಗಳನ್ನೂ ತೆಗೆದುಕೊಂಡು ಒತ್ತೆಯಾಳಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.
وَبَقِيَّةُ أُمُورِ يَهُوآشَ ٱلَّتِي عَمِلَ وَجَبَرُوتُهُ وَكَيْفَ حَارَبَ أَمَصْيَا مَلِكَ يَهُوذَا، أَمَا هِيَ مَكْتُوبَةٌ فِي سِفْرِ أَخْبَارِ ٱلْأَيَّامِ لِمُلُوكِ إِسْرَائِيلَ؟ ١٥ 15
೧೫ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ ಮತ್ತು ಯೆಹೂದ ರಾಜನಾದ ಅಮಚ್ಯನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
ثُمَّ ٱضْطَجَعَ يَهُوآشُ مَعَ آبَائِهِ، وَدُفِنَ فِي ٱلسَّامِرَةِ مَعَ مُلُوكِ إِسْرَائِيلَ، وَمَلَكَ يَرُبْعَامُ ٱبْنُهُ عِوَضًا عَنْهُ. ١٦ 16
೧೬ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೊಬ್ಬಾಮನು ಅರಸನಾದನು.
وَعَاشَ أَمَصْيَا بْنُ يُوآشَ مَلِكُ يَهُوذَا بَعْدَ وَفَاةِ يَهُوآشَ بْنِ يَهُوأَحَازَ مَلِكِ إِسْرَائِيلَ خَمْسَ عَشْرَةَ سَنَةً. ١٧ 17
೧೭ಇಸ್ರಾಯೇಲರ ಅರಸನೂ, ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.
وَبَقِيَّةُ أُمُورِ أَمَصْيَا، أَمَا هِيَ مَكْتُوبَةٌ فِي سِفْرِ أَخْبَارِ ٱلْأَيَّامِ لِمُلُوكِ يَهُوذَا؟ ١٨ 18
೧೮ಅಮಚ್ಯನ ಉಳಿದ ಚರಿತ್ರೆಯು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
وَفَتَنُوا عَلَيْهِ فِتْنَةً فِي أُورُشَلِيمَ، فَهَرَبَ إِلَى لَخِيشَ، فَأَرْسَلُوا وَرَاءَهُ إِلَى لَخِيشَ وَقَتَلُوهُ هُنَاكَ. ١٩ 19
೧೯ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.
وَحَمَلُوهُ عَلَى ٱلْخَيْلِ فَدُفِنَ فِي أُورُشَلِيمَ مَعَ آبَائِهِ فِي مَدِينَةِ دَاوُدَ. ٢٠ 20
೨೦ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಯೆರೂಸಲೇಮಿಗೆ ತಂದು ದಾವೀದನಗರದೊಳಗೆ ಅವನ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.
وَأَخَذَ كُلُّ شَعْبِ يَهُوذَا عَزَرْيَا، وَهُوَ ٱبْنُ سِتَّ عَشْرَةَ سَنَةً، وَمَلَّكُوهُ عِوَضًا عَنْ أَبِيهِ أَمَصْيَا. ٢١ 21
೨೧ಅಮಚ್ಯನ ಮರಣದ ನಂತರ ಎಲ್ಲಾ ಯೆಹೂದ್ಯರು ಸೇರಿ ಹದಿನಾರು ವರ್ಷದವನಾದ ಅಜರ್ಯನನ್ನು ಅರಸನನ್ನಾಗಿ ಮಾಡಿದರು.
هُوَ بَنَى أَيْلَةَ وَٱسْتَرَدَّهَا لِيَهُوذَا بَعْدَ ٱضْطِجَاعِ ٱلْمَلِكِ مَعَ آبَائِهِ. ٢٢ 22
೨೨ಅರಸನಾದ ಅಮಚ್ಯನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಉಜ್ಜೀಯನು ಏಲತ್ ಎಂಬ ಪಟ್ಟಣವನ್ನು ಪುನಃ ಯೆಹೂದರಾಜ್ಯಕ್ಕೆ ಸೇರಿಸಿ ಭದ್ರಪಡಿಸಿದನು.
فِي ٱلسَّنَةِ ٱلْخَامِسَةَ عَشْرَةَ لِأَمَصْيَا بْنِ يُوآشَ مَلِكِ يَهُوذَا، مَلَكَ يَرُبْعَامُ بْنُ يُوآشَ مَلِكِ إِسْرَائِيلَ فِي ٱلسَّامِرَةِ إِحْدَى وَأَرْبَعِينَ سَنَةً. ٢٣ 23
೨೩ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು.
وَعَمِلَ ٱلشَّرَّ فِي عَيْنَيِ ٱلرَّبِّ. لَمْ يَحِدْ عَنْ شَيْءٍ مِنْ خَطَايَا يَرُبْعَامَ بْنِ نَبَاطَ ٱلَّذِي جَعَلَ إِسْرَائِيلَ يُخْطِئُ. ٢٤ 24
೨೪ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
هُوَ رَدَّ تُخُمَ إِسْرَائِيلَ مِنْ مَدْخَلِ حَمَاةَ إِلَى بَحْرِ ٱلْعَرَبَةِ، حَسَبَ كَلَامِ ٱلرَّبِّ إِلَهِ إِسْرَائِيلَ ٱلَّذِي تَكَلَّمَ بِهِ عَنْ يَدِ عَبْدِهِ يُونَانَ بْنِ أَمِتَّايَ ٱلنَّبِيِّ ٱلَّذِي مِنْ جَتَّ حَافِرَ. ٢٥ 25
೨೫ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.
لِأَنَّ ٱلرَّبَّ رَأَى ضِيقَ إِسْرَائِيلَ مُرًّا جِدًّا، لِأَنَّهُ لَمْ يَكُنْ مَحْجُوزٌ وَلَا مُطْلَقٌ وَلَيْسَ مُعِينٌ لِإِسْرَائِيلَ. ٢٦ 26
೨೬ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.
وَلَمْ يَتَكَلَّمِ ٱلرَّبُّ بِمَحْوِ ٱسْمِ إِسْرَائِيلَ مِنْ تَحْتِ ٱلسَّمَاءِ، فَخَلَّصَهُمْ بِيَدِ يَرُبْعَامَ ٱبْنِ يُوآشَ. ٢٧ 27
೨೭ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು.
وَبَقِيَّةُ أُمُورِ يَرُبْعَامَ وَكُلُّ مَا عَمِلَ وَجَبَرُوتُهُ، كَيْفَ حَارَبَ وَكَيْفَ ٱسْتَرْجَعَ إِلَى إِسْرَائِيلَ دِمَشْقَ وَحَمَاةَ ٱلَّتِي لِيَهُوذَا، أَمَاهِيَ مَكْتُوبَةٌ فِي سِفْرِ أَخْبَارِ ٱلْأَيَّامِ لِمُلُوكِ إِسْرَائِيلَ؟ ٢٨ 28
೨೮ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
ثُمَّ ٱضْطَجَعَ يَرُبْعَامُ مَعَ آبَائِهِ، مَعَ مُلُوكِ إِسْرَائِيلَ، وَمَلَكَ زَكَرِيَّا ٱبْنُهُ عِوَضًا عَنْهُ. ٢٩ 29
೨೯ಯಾರೊಬ್ಬಾಮನು ಇಸ್ರಾಯೇಲರ ರಾಜರಾಗಿದ್ದ ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ನಂತರ ಅವನ ಮಗನಾದ ಜೆಕರ್ಯನು ಅರಸನಾದನು.

< اَلْمُلُوكِ ٱلثَّانِي 14 >