< اَلْمُلُوكِ ٱلثَّانِي 16 >

فِي ٱلسَّنَةِ ٱلسَّابِعَةَ عَشْرَةَ لِفَقْحَ بْنِ رَمَلْيَا، مَلَكَ آحَازُ بْنُ يُوثَامَ مَلِكِ يَهُوذَا. ١ 1
ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.
كَانَ آحَازُ ٱبْنَ عِشْرِينَ سَنَةً حِينَ مَلَكَ، وَمَلَكَ سِتَّ عَشْرَةَ سَنَةً فِي أُورُشَلِيمَ. وَلَمْ يَعْمَلِ ٱلْمُسْتَقِيمَ فِي عَيْنَيِ ٱلرَّبِّ إِلَهِهِ كَدَاوُدَ أَبِيهِ، ٢ 2
ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.
بَلْ سَارَ فِي طَرِيقِ مُلُوكِ إِسْرَائِيلَ، حَتَّى إِنَّهُ عَبَّرَ ٱبْنَهُ فِي ٱلنَّارِ حَسَبَ أَرْجَاسِ ٱلْأُمَمِ ٱلَّذِينَ طَرَدَهُمُ ٱلرَّبُّ مِنْ أَمَامِ بَنِي إِسْرَائِيلَ. ٣ 3
ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.
وَذَبَحَ وَأَوْقَدَ عَلَى ٱلْمُرْتَفَعَاتِ وَعَلَى ٱلتِّلَالِ وَتَحْتَ كُلِّ شَجَرَةٍ خَضْرَاءَ. ٤ 4
ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.
حِينَئِذٍ صَعِدَ رَصِينُ مَلِكُ أَرَامَ وَفَقْحُ بْنُ رَمَلْيَا مَلِكُ إِسْرَائِيلَ إِلَى أُورُشَلِيمَ لِلْمُحَارَبَةِ، فَحَاصَرُوا آحَازَ وَلَمْ يَقْدِرُوا أَنْ يَغْلِبُوهُ. ٥ 5
ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.
فِي ذَلِكَ ٱلْوَقْتِ أَرْجَعَ رَصِينُ مَلِكُ أَرَامَ أَيْلَةَ لِلْأَرَامِيِّينَ، وَطَرَدَ ٱلْيَهُودَ مِنْ أَيْلَةَ. وَجَاءَ ٱلْأَرَامِيُّونَ إِلَى أَيْلَةَ وَأَقَامُوا هُنَاكَ إِلَى هَذَا ٱلْيَوْمِ. ٦ 6
ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು. ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.
وَأَرْسَلَ آحَازُ رُسُلًا إِلَى تَغْلَثَ فَلَاسِرَ مَلِكِ أَشُّورَ قَائِلًا: «أَنَا عَبْدُكَ وَٱبْنُكَ. ٱصْعَدْ وَخَلِّصْنِي مِنْ يَدِ مَلِكِ أَرَامَ وَمِنْ يَدِ مَلِكِ إِسْرَائِيلَ ٱلْقَائِمَيْنِ عَلَيَّ». ٧ 7
ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.
فَأَخَذَ آحَازُ ٱلْفِضَّةَ وَٱلذَّهَبَ ٱلْمَوْجُودَةَ فِي بَيْتِ ٱلرَّبِّ وَفِي خَزَائِنِ بَيْتِ ٱلْمَلِكِ وَأَرْسَلَهَا إِلَى مَلِكِ أَشُّورَ هَدِيَّةً. ٨ 8
ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.
فَسَمِعَ لَهُ مَلِكُ أَشُّورَ، وَصَعِدَ مَلِكُ أَشُّورَ إِلَى دِمَشْقَ وَأَخَذَهَا وَسَبَاهَا إِلَى قِيرَ، وَقَتَلَ رَصِينَ. ٩ 9
ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.
وَسَارَ ٱلْمَلِكُ آحَازُ لِلِقَاءِ تَغْلَثَ فَلَاسِرَ مَلِكِ أَشُّورَ، إِلَى دِمَشْقَ. وَرَأَى ٱلْمَذْبَحَ ٱلَّذِي فِي دِمَشْقَ. وَأَرْسَلَ ٱلْمَلِكُ آحَازُ إِلَى أُورِيَّا ٱلْكَاهِنِ شِبْهَ ٱلْمَذْبَحِ وَشَكْلَهُ حَسَبَ كُلِّ صِنَاعَتِهِ. ١٠ 10
೧೦ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.
فَبَنَى أُورِيَّا ٱلْكَاهِنُ مَذْبَحًا. حَسَبَ كُلِّ مَا أَرْسَلَ ٱلْمَلِكُ آحَازُ مِنْ دِمَشْقَ كَذَلِكَ عَمِلَ أُورِيَّا ٱلْكَاهِنُ، رَيْثَمَا جَاءَ ٱلْمَلِكُ آحَازُ مِنْ دِمَشْقَ. ١١ 11
೧೧ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.
فَلَمَّا قَدِمَ ٱلْمَلِكُ مِنْ دِمَشْقَ رَأَى ٱلْمَلِكُ ٱلْمَذْبَحَ، فَتَقَدَّمَ ٱلْمَلِكُ إِلَى ٱلْمَذْبَحِ وَأَصْعَدَ عَلَيْهِ، ١٢ 12
೧೨ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.
وَأَوْقَدَ مُحْرَقَتَهُ وَتَقْدِمَتَهُ وَسَكَبَ سَكِيبَهُ، وَرَشَّ دَمَ ذَبِيحَةِ ٱلسَّلَامَةِ ٱلَّتِي لَهُ عَلَى ٱلْمَذْبَحِ. ١٣ 13
೧೩ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.
وَمَذْبَحُ ٱلنُّحَاسِ ٱلَّذِي أَمَامَ ٱلرَّبِّ قَدَّمَهُ مِنْ أَمَامِ ٱلْبَيْتِ مِنْ بَيْنِ ٱلْمَذْبَحِ وَبَيْتِ ٱلرَّبِّ، وَجَعَلَهُ عَلَى جَانِبِ ٱلْمَذْبَحِ ٱلشِّمَالِيِّ. ١٤ 14
೧೪ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.
وَأَمَرَ ٱلْمَلِكُ آحَازُ أُورِيَّا ٱلْكَاهِنَ قَائِلًا: «عَلَى ٱلْمَذْبَحِ ٱلْعَظِيمِ أَوْقِدْ مُحْرَقَةَ ٱلصَّبَاحِ وَتَقْدِمَةَ ٱلْمَسَاءِ، وَمُحْرَقَةَ ٱلْمَلِكِ وَتَقْدِمَتَهُ، مَعَ مُحْرَقَةِ كُلِّ شَعْبِ ٱلْأَرْضِ وَتَقْدِمَتِهِمْ وَسَكَائِبِهِمْ، وَرُشَّ عَلَيْهِ كُلَّ دَمِ مُحْرَقَةٍ وَكُلَّ دَمِ ذَبِيحَةٍ. وَمَذْبَحُ ٱلنُّحَاسِ يَكُونُ لِي لِلسُّؤَالِ». ١٥ 15
೧೫ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.
فَعَمِلَ أُورِيَّا ٱلْكَاهِنُ حَسَبَ كُلِّ مَا أَمَرَ بِهِ ٱلْمَلِكُ آحَازُ. ١٦ 16
೧೬ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.
وَقَطَعَ ٱلْمَلِكُ آحَازُ أَتْرَاسَ ٱلْقَوَاعِدِ وَرَفَعَ عَنْهَا ٱلْمِرْحَضَةَ، وَأَنْزَلَ ٱلْبَحْرَ عَنْ ثِيرَانِ ٱلنُّحَاسِ ٱلَّتِي تَحْتَهُ وَجَعَلَهُ عَلَى رَصِيفٍ مِنْ حِجَارَةٍ. ١٧ 17
೧೭ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.
وَرِوَاقَ ٱلسَّبْتِ ٱلَّذِي بَنَوْهُ فِي ٱلْبَيْتِ، وَمَدْخَلَ ٱلْمَلِكِ مِنْ خَارِجٍ، غَيَّرَهُ فِي بَيْتِ ٱلرَّبِّ مِنْ أَجْلِ مَلِكِ أَشُّورَ. ١٨ 18
೧೮ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.
وَبَقِيَّةُ أُمُورِ آحَازَ ٱلَّتِي عَمِلَ، أَمَا هِيَ مَكْتُوبَةٌ فِي سِفْرِ أَخْبَارِ ٱلْأَيَّامِ لِمُلُوكِ يَهُوذَا؟ ١٩ 19
೧೯ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
ثُمَّ ٱضْطَجَعَ آحَازُ مَعَ آبَائِهِ، وَدُفِنَ مَعَ آبَائِهِ فِي مَدِينَةِ دَاوُدَ، وَمَلَكَ حَزَقِيَّا ٱبْنُهُ عِوَضًا عَنْهُ. ٢٠ 20
೨೦ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.

< اَلْمُلُوكِ ٱلثَّانِي 16 >