< اَلْمُلُوكِ ٱلثَّانِي 19 >

فَلَمَّا سَمِعَ ٱلْمَلِكُ حَزَقِيَّا ذَلِكَ، مَزَّقَ ثِيَابَهُ وَتَغَطَّى بِمِسْحٍ وَدَخَلَ بَيْتَ ٱلرَّبِّ. ١ 1
ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
وَأَرْسَلَ أَلِيَاقِيمَ ٱلَّذِي عَلَى ٱلْبَيْتِ وَشِبْنَةَ ٱلْكَاتِبَ وَشُيُوخَ ٱلْكَهَنَةِ مُتَغَطِّينَ بِمِسْحٍ إِلَى إِشَعْيَا ٱلنَّبِيِّ ٱبْنِ آمُوصَ، ٢ 2
ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.
فَقَالُوا لَهُ: «هَكَذَا يَقُولُ حَزَقِيَّا: هَذَا ٱلْيَوْمُ يَوْمُ شِدَّةٍ وَتَأْدِيبٍ وَإِهَانَةٍ، لِأَنَّ ٱلْأَجِنَّةَ قَدْ دَنَتْ إِلَى ٱلْمَوْلِدِ وَلَا قُوَّةَ لِلْوِلَادَةِ. ٣ 3
ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.
لَعَلَّ ٱلرَّبَّ إِلَهَكَ يَسْمَعُ جَمِيعَ كَلَامِ رَبْشَاقَى ٱلَّذِي أَرْسَلَهُ مَلِكُ أَشُّورَ سَيِّدُهُ لِيُعَيِّرَ ٱلْإِلَهَ ٱلْحَيَّ، فَيُوَبِّخَ عَلَى ٱلْكَلَامِ ٱلَّذِي سَمِعَهُ ٱلرَّبُّ إِلَهُكَ. فَٱرْفَعْ صَلَاةً مِنْ أَجْلِ ٱلْبَقِيَّةِ ٱلْمَوْجُودَةِ». ٤ 4
ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.
فَجَاءَ عَبِيدُ ٱلْمَلِكِ حَزَقِيَّا إِلَى إِشَعْيَا، ٥ 5
ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ,
فَقَالَ لَهُمْ إِشَعْيَا: «هَكَذَا تَقُولُونَ لِسَيِّدِكُمْ: هَكَذَا قَالَ ٱلرَّبُّ: لَا تَخَفْ بِسَبَبِ ٱلْكَلَامِ ٱلَّذِي سَمِعْتَهُ، ٱلَّذِي جَدَّفَ عَلَيَّ بِهِ غِلْمَانُ مَلِكِ أَشُّورَ. ٦ 6
ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
هَأَنَذَا أَجْعَلُ فِيهِ رُوحًا فَيَسْمَعُ خَبَرًا وَيَرْجِعُ إِلَى أَرْضِهِ، وَأُسْقِطُهُ بِٱلسَّيْفِ فِي أَرْضِهِ». ٧ 7
ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.
فَرَجَعَ رَبْشَاقَى وَوَجَدَ مَلِكَ أَشُّورَ يُحَارِبُ لِبْنَةَ، لِأَنَّهُ سَمِعَ أَنَّهُ ٱرْتَحَلَ عَنْ لَخِيشَ. ٨ 8
ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
وَسَمِعَ عَنْ تُرْهَاقَةَ مَلِكِ كُوشٍ قَوْلًا: «قَدْ خَرَجَ لِيُحَارِبَكَ». فَعَادَ وَأَرْسَلَ رُسُلًا إِلَى حَزَقِيَّا قَائِلًا: ٩ 9
ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,
«هَكَذَا تُكَلِّمُونَ حَزَقِيَّا مَلِكَ يَهُوذَا قَائِلِينَ: لَا يَخْدَعْكَ إِلَهُكَ ٱلَّذِي أَنْتَ مُتَّكِلٌ عَلَيْهِ قَائِلًا: لَا تُدْفَعُ أُورُشَلِيمُ إِلَى يَدِ مَلِكِ أَشُّورَ. ١٠ 10
೧೦ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ
إِنَّكَ قَدْ سَمِعْتَ مَا فَعَلَ مُلُوكُ أَشُّورَ بِجَمِيعِ ٱلْأَرَاضِي لِإِهْلَاكِهَا، وَهَلْ تَنْجُو أَنْتَ؟ ١١ 11
೧೧ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?
هَلْ أَنْقَذَتْ آلِهَةُ ٱلْأُمَمِ هَؤُلَاءِ ٱلَّذِينَ أَهْلَكَهُمْ آبَائِي، جُوزَانَ وَحَارَانَ وَرَصْفَ وَبَنِي عَدَنَ ٱلَّذِينَ فِي تَلَاسَّارَ؟ ١٢ 12
೧೨ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
أَيْنَ مَلِكُ حَمَاةَ وَمَلِكُ أَرْفَادَ وَمَلِكُ مَدِينَةِ سَفْرَوَايِمَ وَهَيْنَعَ وَعِوَّا؟». ١٣ 13
೧೩ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”
فَأَخَذَ حَزَقِيَّا ٱلرَّسَائِلَ مِنْ أَيْدِي ٱلرُّسُلِ وَقَرَأَهَا، ثُمَّ صَعِدَ إِلَى بَيْتِ ٱلرَّبِّ، وَنَشَرَهَا حَزَقِيَّا أَمَامَ ٱلرَّبِّ. ١٤ 14
೧೪ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
وَصَلَّى حَزَقِيَّا أَمَامَ ٱلرَّبِّ وَقَالَ: «أَيُّهَا ٱلرَّبُّ إِلَهُ إِسْرَائِيلَ، ٱلْجَالِسُ فَوْقَ ٱلْكَرُوبِيمَ، أَنْتَ هُوَ ٱلْإِلَهُ وَحْدَكَ لِكُلِّ مَمَالِكِ ٱلْأَرْضِ. أَنْتَ صَنَعْتَ ٱلسَّمَاءَ وَٱلْأَرْضَ. ١٥ 15
೧೫ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
أَمِلْ يَارَبُّ أُذُنَكَ وَٱسْمَعْ. اِفْتَحْ يَارَبُّ عَيْنَيْكَ وَٱنْظُرْ، وَٱسْمَعْ كَلَامَ سَنْحَارِيبَ ٱلَّذِي أَرْسَلَهُ لِيُعَيِّرَ ٱللهَ ٱلْحَيَّ. ١٦ 16
೧೬ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.
حَقًّا يَارَبُّ إِنَّ مُلُوكَ أَشُّورَ قَدْ خَرَّبُوا ٱلْأُمَمَ وَأَرَاضِيَهُمْ، ١٧ 17
೧೭ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.
وَدَفَعُوا آلِهَتَهُمْ إِلَى ٱلنَّارِ. وَلِأَنَّهُمْ لَيْسُوا آلِهَةً، بَلْ صَنْعَةُ أَيْدِي ٱلنَّاسِ: خَشَبٌ وَحَجَرٌ، فَأَبَادُوهُمْ. ١٨ 18
೧೮ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.
وَٱلْآنَ أَيُّهَا ٱلرَّبُّ إِلَهُنَا خَلِّصْنَا مِنْ يَدِهِ، فَتَعْلَمَ مَمَالِكُ ٱلْأَرْضِ كُلُّهَا أَنَّكَ أَنْتَ ٱلرَّبُّ ٱلْإِلَهُ وَحْدَكَ». ١٩ 19
೧೯ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
فَأَرْسَلَ إِشَعْيَا بْنُ آمُوصَ إِلَى حَزَقِيَّا قَائِلًا: «هَكَذَا قَالَ ٱلرَّبُّ إِلَهُ إِسْرَائِيلَ ٱلَّذِي صَلَّيْتَ إِلَيْهِ مِنْ جِهَةِ سَنْحَارِيبَ مَلِكِ أَشُّورَ: قَدْ سَمِعْتُ. ٢٠ 20
೨೦ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’
هَذَا هُوَ ٱلْكَلَامُ ٱلَّذِي تَكَلَّمَ بِهِ ٱلرَّبُّ عَلَيْهِ: ٱحْتَقَرَتْكَ وَٱسْتَهْزَأَتْ بِكَ ٱلْعَذْرَاءُ ٱبْنَةُ صِهْيَوْنَ، وَنَحْوَكَ أَنْغَضَتِ ٱبْنَةُ أُورُشَلِيمَ رَأْسَهَا. ٢١ 21
೨೧ಯೆಹೋವನು ಅವನನ್ನು ಕುರಿತು, “ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ. ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
مَنْ عَيَّرْتَ وَجَدَّفْتَ؟ وَعَلَى مَنْ عَلَّيْتَ صَوْتًا؟ وَقَدْ رَفَعْتَ إِلَى ٱلْعَلَاءِ عَيْنَيْكَ عَلَى قُدُّوسِ إِسْرَائِيلَ! ٢٢ 22
೨೨ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!
عَلَى يَدِ رُسُلِكَ عَيَّرْتَ ٱلسَّيِّدَ، وَقُلْتَ: بِكَثْرَةِ مَرْكَبَاتِي قَدْ صَعِدْتُ إِلَى عُلْوِ ٱلْجِبَالِ، إِلَى عِقَابِ لُبْنَانَ وَأَقْطَعُ أَرْزَهُ ٱلطَّوِيلَ وَأَفْضَلَ سَرْوِهِ، وَأَدْخُلُ أَقْصَى عُلْوِهِ، وَعْرَ كَرْمَلِهِ. ٢٣ 23
೨೩ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
أَنَا قَدْ حَفَرْتُ وَشَرِبْتُ مِيَاهًا غَرِيبَةً، وَأُنَشِّفُ بِأَسْفَلِ قَدَمَيَّ جَمِيعَ خُلْجَانِ مِصْرَ. ٢٤ 24
೨೪ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?”
أَلَمْ تَسْمَعْ؟ مُنْذُ ٱلْبَعِيدِ صَنَعْتُهُ، مُنْذُ ٱلْأَيَّامِ ٱلْقَدِيمَةِ صَوَّرْتُهُ. ٱلْآنَ أَتَيْتُ بِهِ. فَتَكُونُ لِتَخْرِيبِ مُدُنٍ مُحَصَّنَةٍ حَتَّى تَصِيرَ رَوَابِيَ خَرِبَةً. ٢٥ 25
೨೫ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?
فَسُكَّانُهَا قِصَارُ ٱلْأَيْدِي قَدِ ٱرْتَاعُوا وَخَجِلُوا، صَارُوا كَعُشْبِ ٱلْحَقْلِ وَكَالنَّبَاتِ ٱلْأَخْضَرِ، كَحَشِيشِ ٱلسُّطُوحِ وَكَمَلْفُوحٍ قَبْلَ نُمُوِّهِ. ٢٦ 26
೨೬ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.
وَلَكِنِّي عَالِمٌ بِجُلُوسِكَ وَخُرُوجِكَ وَدُخُولِكَ وَهَيَجَانِكَ عَلَيَّ. ٢٧ 27
೨೭“ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.
لِأَنَّ هَيَجَانَكَ عَلَيَّ وَعَجْرَفَتَكَ قَدْ صَعِدَا إِلَى أُذُنَيَّ، أَضَعُ خِزَامَتِي فِي أَنْفِكَ وَلِجَامِي فِي شَفَتَيْكَ، وَأَرُدُّكَ فِي ٱلطَّرِيقِ ٱلَّذِي جِئْتَ فِيهِ. ٢٨ 28
೨೮ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
«وَهَذِهِ لَكَ عَلَامَةٌ: تَأْكُلُونَ هَذِهِ ٱلسَّنَةَ زِرِّيعًا، وَفِي ٱلسَّنَةِ ٱلثَّانِيَةِ خِلْفَةً. وَأَمَّا ٱلسَّنَةُ ٱلثَّالِثَةُ فَفِيهَا تَزْرَعُونَ وَتَحْصِدُونَ وَتَغْرِسُونَ كُرُومًا وَتَأْكُلُونَ أَثْمَارَهَا. ٢٩ 29
೨೯ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
وَيَعُودُ ٱلنَّاجُونَ مِنْ بَيْتِ يَهُوذَا، ٱلْبَاقُونَ، يَتَأَصَّلُونَ إِلَى أَسْفَلُ وَيَصْنَعُونَ ثَمَرًا إِلَى مَا فَوْقُ. ٣٠ 30
೩೦ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.
لِأَنَّهُ مِنْ أُورُشَلِيمَ تَخْرُجُ ٱلْبَقِيَّةُ، وَٱلنَّاجُونَ مِنْ جَبَلِ صِهْيَوْنَ. غَيْرَةُ رَبِّ ٱلْجُنُودِ تَصْنَعُ هَذَا. ٣١ 31
೩೧ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.
«لِذَلِكَ هَكَذَا قَالَ ٱلرَّبُّ عَنْ مَلِكِ أَشُّورَ: لَا يَدْخُلُ هَذِهِ ٱلْمَدِينَةَ، وَلَا يَرْمِي هُنَاكَ سَهْمًا، وَلَا يَتَقَدَّمُ عَلَيْهَا بِتُرْسٍ، وَلَا يُقِيمُ عَلَيْهَا مِتْرَسَةً. ٣٢ 32
೩೨ಯೆಹೋವನು ಅಶ್ಶೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.
فِي ٱلطَّرِيقِ ٱلَّذِي جَاءَ فِيهِ يَرْجِعُ، وَإِلَى هَذِهِ ٱلْمَدِينَةِ لَا يَدْخُلُ، يَقُولُ ٱلرَّبُّ. ٣٣ 33
೩೩ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು. ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ
وَأُحَامِي عَنْ هَذِهِ ٱلْمَدِينَةِ لِأُخَلِّصَهَا مِنْ أَجْلِ نَفْسِي وَمِنْ أَجْلِ دَاوُدَ عَبْدِي». ٣٤ 34
೩೪ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.
وَكَانَ فِي تِلْكَ ٱللَّيْلَةِ أَنَّ مَلَاكَ ٱلرَّبِّ خَرَجَ وَضَرَبَ مِنْ جَيْشِ أَشُّورَ مِئَةَ أَلْفٍ وَخَمْسَةً وَثَمَانِينَ أَلْفًا. وَلَمَّا بَكَّرُوا صَبَاحًا إِذَا هُمْ جَمِيعًا جُثَثٌ مَيْتَةٌ. ٣٥ 35
೩೫ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.
فَٱنْصَرَفَ سَنْحَارِيبُ مَلِكُ أَشُّورَ وَذَهَبَ رَاجِعًا وَأَقَامَ فِي نِينَوَى. ٣٦ 36
೩೬ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.
وَفِيمَا هُوَ سَاجِدٌ فِي بَيْتِ نِسْرُوخَ إِلَهِهِ، ضَرَبَهُ أَدْرَمَّلَكُ وَشَرَآصَرُ ٱبْنَاهُ بِٱلسَّيْفِ، وَنَجَوَا إِلَى أَرْضِ أَرَارَاطَ. وَمَلَكَ آسَرْحَدُّونُ ٱبْنُهُ عِوَضًا عَنْهُ. ٣٧ 37
೩೭ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.

< اَلْمُلُوكِ ٱلثَّانِي 19 >