< اَلْمُلُوكِ ٱلثَّانِي 19 >

فَلَمَّا سَمِعَ ٱلْمَلِكُ حَزَقِيَّا ذَلِكَ، مَزَّقَ ثِيَابَهُ وَتَغَطَّى بِمِسْحٍ وَدَخَلَ بَيْتَ ٱلرَّبِّ. ١ 1
ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.
وَأَرْسَلَ أَلِيَاقِيمَ ٱلَّذِي عَلَى ٱلْبَيْتِ وَشِبْنَةَ ٱلْكَاتِبَ وَشُيُوخَ ٱلْكَهَنَةِ مُتَغَطِّينَ بِمِسْحٍ إِلَى إِشَعْيَا ٱلنَّبِيِّ ٱبْنِ آمُوصَ، ٢ 2
ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.
فَقَالُوا لَهُ: «هَكَذَا يَقُولُ حَزَقِيَّا: هَذَا ٱلْيَوْمُ يَوْمُ شِدَّةٍ وَتَأْدِيبٍ وَإِهَانَةٍ، لِأَنَّ ٱلْأَجِنَّةَ قَدْ دَنَتْ إِلَى ٱلْمَوْلِدِ وَلَا قُوَّةَ لِلْوِلَادَةِ. ٣ 3
ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.
لَعَلَّ ٱلرَّبَّ إِلَهَكَ يَسْمَعُ جَمِيعَ كَلَامِ رَبْشَاقَى ٱلَّذِي أَرْسَلَهُ مَلِكُ أَشُّورَ سَيِّدُهُ لِيُعَيِّرَ ٱلْإِلَهَ ٱلْحَيَّ، فَيُوَبِّخَ عَلَى ٱلْكَلَامِ ٱلَّذِي سَمِعَهُ ٱلرَّبُّ إِلَهُكَ. فَٱرْفَعْ صَلَاةً مِنْ أَجْلِ ٱلْبَقِيَّةِ ٱلْمَوْجُودَةِ». ٤ 4
ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’” ಎಂದರು.
فَجَاءَ عَبِيدُ ٱلْمَلِكِ حَزَقِيَّا إِلَى إِشَعْيَا، ٥ 5
ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,
فَقَالَ لَهُمْ إِشَعْيَا: «هَكَذَا تَقُولُونَ لِسَيِّدِكُمْ: هَكَذَا قَالَ ٱلرَّبُّ: لَا تَخَفْ بِسَبَبِ ٱلْكَلَامِ ٱلَّذِي سَمِعْتَهُ، ٱلَّذِي جَدَّفَ عَلَيَّ بِهِ غِلْمَانُ مَلِكِ أَشُّورَ. ٦ 6
ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
هَأَنَذَا أَجْعَلُ فِيهِ رُوحًا فَيَسْمَعُ خَبَرًا وَيَرْجِعُ إِلَى أَرْضِهِ، وَأُسْقِطُهُ بِٱلسَّيْفِ فِي أَرْضِهِ». ٧ 7
ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’” ಎಂದು ಹೇಳಿದನು.
فَرَجَعَ رَبْشَاقَى وَوَجَدَ مَلِكَ أَشُّورَ يُحَارِبُ لِبْنَةَ، لِأَنَّهُ سَمِعَ أَنَّهُ ٱرْتَحَلَ عَنْ لَخِيشَ. ٨ 8
ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.
وَسَمِعَ عَنْ تُرْهَاقَةَ مَلِكِ كُوشٍ قَوْلًا: «قَدْ خَرَجَ لِيُحَارِبَكَ». فَعَادَ وَأَرْسَلَ رُسُلًا إِلَى حَزَقِيَّا قَائِلًا: ٩ 9
ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,
«هَكَذَا تُكَلِّمُونَ حَزَقِيَّا مَلِكَ يَهُوذَا قَائِلِينَ: لَا يَخْدَعْكَ إِلَهُكَ ٱلَّذِي أَنْتَ مُتَّكِلٌ عَلَيْهِ قَائِلًا: لَا تُدْفَعُ أُورُشَلِيمُ إِلَى يَدِ مَلِكِ أَشُّورَ. ١٠ 10
“ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
إِنَّكَ قَدْ سَمِعْتَ مَا فَعَلَ مُلُوكُ أَشُّورَ بِجَمِيعِ ٱلْأَرَاضِي لِإِهْلَاكِهَا، وَهَلْ تَنْجُو أَنْتَ؟ ١١ 11
ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?
هَلْ أَنْقَذَتْ آلِهَةُ ٱلْأُمَمِ هَؤُلَاءِ ٱلَّذِينَ أَهْلَكَهُمْ آبَائِي، جُوزَانَ وَحَارَانَ وَرَصْفَ وَبَنِي عَدَنَ ٱلَّذِينَ فِي تَلَاسَّارَ؟ ١٢ 12
ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?
أَيْنَ مَلِكُ حَمَاةَ وَمَلِكُ أَرْفَادَ وَمَلِكُ مَدِينَةِ سَفْرَوَايِمَ وَهَيْنَعَ وَعِوَّا؟». ١٣ 13
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.
فَأَخَذَ حَزَقِيَّا ٱلرَّسَائِلَ مِنْ أَيْدِي ٱلرُّسُلِ وَقَرَأَهَا، ثُمَّ صَعِدَ إِلَى بَيْتِ ٱلرَّبِّ، وَنَشَرَهَا حَزَقِيَّا أَمَامَ ٱلرَّبِّ. ١٤ 14
ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.
وَصَلَّى حَزَقِيَّا أَمَامَ ٱلرَّبِّ وَقَالَ: «أَيُّهَا ٱلرَّبُّ إِلَهُ إِسْرَائِيلَ، ٱلْجَالِسُ فَوْقَ ٱلْكَرُوبِيمَ، أَنْتَ هُوَ ٱلْإِلَهُ وَحْدَكَ لِكُلِّ مَمَالِكِ ٱلْأَرْضِ. أَنْتَ صَنَعْتَ ٱلسَّمَاءَ وَٱلْأَرْضَ. ١٥ 15
ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.
أَمِلْ يَارَبُّ أُذُنَكَ وَٱسْمَعْ. اِفْتَحْ يَارَبُّ عَيْنَيْكَ وَٱنْظُرْ، وَٱسْمَعْ كَلَامَ سَنْحَارِيبَ ٱلَّذِي أَرْسَلَهُ لِيُعَيِّرَ ٱللهَ ٱلْحَيَّ. ١٦ 16
ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.
حَقًّا يَارَبُّ إِنَّ مُلُوكَ أَشُّورَ قَدْ خَرَّبُوا ٱلْأُمَمَ وَأَرَاضِيَهُمْ، ١٧ 17
“ಯೆಹೋವ ದೇವರೇ, ಅಸ್ಸೀರಿಯದ ಅರಸರು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.
وَدَفَعُوا آلِهَتَهُمْ إِلَى ٱلنَّارِ. وَلِأَنَّهُمْ لَيْسُوا آلِهَةً، بَلْ صَنْعَةُ أَيْدِي ٱلنَّاسِ: خَشَبٌ وَحَجَرٌ، فَأَبَادُوهُمْ. ١٨ 18
ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.
وَٱلْآنَ أَيُّهَا ٱلرَّبُّ إِلَهُنَا خَلِّصْنَا مِنْ يَدِهِ، فَتَعْلَمَ مَمَالِكُ ٱلْأَرْضِ كُلُّهَا أَنَّكَ أَنْتَ ٱلرَّبُّ ٱلْإِلَهُ وَحْدَكَ». ١٩ 19
ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.
فَأَرْسَلَ إِشَعْيَا بْنُ آمُوصَ إِلَى حَزَقِيَّا قَائِلًا: «هَكَذَا قَالَ ٱلرَّبُّ إِلَهُ إِسْرَائِيلَ ٱلَّذِي صَلَّيْتَ إِلَيْهِ مِنْ جِهَةِ سَنْحَارِيبَ مَلِكِ أَشُّورَ: قَدْ سَمِعْتُ. ٢٠ 20
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.
هَذَا هُوَ ٱلْكَلَامُ ٱلَّذِي تَكَلَّمَ بِهِ ٱلرَّبُّ عَلَيْهِ: ٱحْتَقَرَتْكَ وَٱسْتَهْزَأَتْ بِكَ ٱلْعَذْرَاءُ ٱبْنَةُ صِهْيَوْنَ، وَنَحْوَكَ أَنْغَضَتِ ٱبْنَةُ أُورُشَلِيمَ رَأْسَهَا. ٢١ 21
ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “‘ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.
مَنْ عَيَّرْتَ وَجَدَّفْتَ؟ وَعَلَى مَنْ عَلَّيْتَ صَوْتًا؟ وَقَدْ رَفَعْتَ إِلَى ٱلْعَلَاءِ عَيْنَيْكَ عَلَى قُدُّوسِ إِسْرَائِيلَ! ٢٢ 22
ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?
عَلَى يَدِ رُسُلِكَ عَيَّرْتَ ٱلسَّيِّدَ، وَقُلْتَ: بِكَثْرَةِ مَرْكَبَاتِي قَدْ صَعِدْتُ إِلَى عُلْوِ ٱلْجِبَالِ، إِلَى عِقَابِ لُبْنَانَ وَأَقْطَعُ أَرْزَهُ ٱلطَّوِيلَ وَأَفْضَلَ سَرْوِهِ، وَأَدْخُلُ أَقْصَى عُلْوِهِ، وَعْرَ كَرْمَلِهِ. ٢٣ 23
ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.
أَنَا قَدْ حَفَرْتُ وَشَرِبْتُ مِيَاهًا غَرِيبَةً، وَأُنَشِّفُ بِأَسْفَلِ قَدَمَيَّ جَمِيعَ خُلْجَانِ مِصْرَ. ٢٤ 24
ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ.”
أَلَمْ تَسْمَعْ؟ مُنْذُ ٱلْبَعِيدِ صَنَعْتُهُ، مُنْذُ ٱلْأَيَّامِ ٱلْقَدِيمَةِ صَوَّرْتُهُ. ٱلْآنَ أَتَيْتُ بِهِ. فَتَكُونُ لِتَخْرِيبِ مُدُنٍ مُحَصَّنَةٍ حَتَّى تَصِيرَ رَوَابِيَ خَرِبَةً. ٢٥ 25
“‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.
فَسُكَّانُهَا قِصَارُ ٱلْأَيْدِي قَدِ ٱرْتَاعُوا وَخَجِلُوا، صَارُوا كَعُشْبِ ٱلْحَقْلِ وَكَالنَّبَاتِ ٱلْأَخْضَرِ، كَحَشِيشِ ٱلسُّطُوحِ وَكَمَلْفُوحٍ قَبْلَ نُمُوِّهِ. ٢٦ 26
ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.
وَلَكِنِّي عَالِمٌ بِجُلُوسِكَ وَخُرُوجِكَ وَدُخُولِكَ وَهَيَجَانِكَ عَلَيَّ. ٢٧ 27
“‘ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.
لِأَنَّ هَيَجَانَكَ عَلَيَّ وَعَجْرَفَتَكَ قَدْ صَعِدَا إِلَى أُذُنَيَّ، أَضَعُ خِزَامَتِي فِي أَنْفِكَ وَلِجَامِي فِي شَفَتَيْكَ، وَأَرُدُّكَ فِي ٱلطَّرِيقِ ٱلَّذِي جِئْتَ فِيهِ. ٢٨ 28
ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’
«وَهَذِهِ لَكَ عَلَامَةٌ: تَأْكُلُونَ هَذِهِ ٱلسَّنَةَ زِرِّيعًا، وَفِي ٱلسَّنَةِ ٱلثَّانِيَةِ خِلْفَةً. وَأَمَّا ٱلسَّنَةُ ٱلثَّالِثَةُ فَفِيهَا تَزْرَعُونَ وَتَحْصِدُونَ وَتَغْرِسُونَ كُرُومًا وَتَأْكُلُونَ أَثْمَارَهَا. ٢٩ 29
“ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.
وَيَعُودُ ٱلنَّاجُونَ مِنْ بَيْتِ يَهُوذَا، ٱلْبَاقُونَ، يَتَأَصَّلُونَ إِلَى أَسْفَلُ وَيَصْنَعُونَ ثَمَرًا إِلَى مَا فَوْقُ. ٣٠ 30
ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.
لِأَنَّهُ مِنْ أُورُشَلِيمَ تَخْرُجُ ٱلْبَقِيَّةُ، وَٱلنَّاجُونَ مِنْ جَبَلِ صِهْيَوْنَ. غَيْرَةُ رَبِّ ٱلْجُنُودِ تَصْنَعُ هَذَا. ٣١ 31
ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.
«لِذَلِكَ هَكَذَا قَالَ ٱلرَّبُّ عَنْ مَلِكِ أَشُّورَ: لَا يَدْخُلُ هَذِهِ ٱلْمَدِينَةَ، وَلَا يَرْمِي هُنَاكَ سَهْمًا، وَلَا يَتَقَدَّمُ عَلَيْهَا بِتُرْسٍ، وَلَا يُقِيمُ عَلَيْهَا مِتْرَسَةً. ٣٢ 32
“ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “‘ಅವನು ಈ ಪಟ್ಟಣದೊಳಗೆ ಬರುವುದಿಲ್ಲ; ಅಲ್ಲಿ ಬಾಣವನ್ನು ಎಸೆಯುವುದಿಲ್ಲ; ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು; ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.
فِي ٱلطَّرِيقِ ٱلَّذِي جَاءَ فِيهِ يَرْجِعُ، وَإِلَى هَذِهِ ٱلْمَدِينَةِ لَا يَدْخُلُ، يَقُولُ ٱلرَّبُّ. ٣٣ 33
ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.
وَأُحَامِي عَنْ هَذِهِ ٱلْمَدِينَةِ لِأُخَلِّصَهَا مِنْ أَجْلِ نَفْسِي وَمِنْ أَجْلِ دَاوُدَ عَبْدِي». ٣٤ 34
ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’”
وَكَانَ فِي تِلْكَ ٱللَّيْلَةِ أَنَّ مَلَاكَ ٱلرَّبِّ خَرَجَ وَضَرَبَ مِنْ جَيْشِ أَشُّورَ مِئَةَ أَلْفٍ وَخَمْسَةً وَثَمَانِينَ أَلْفًا. وَلَمَّا بَكَّرُوا صَبَاحًا إِذَا هُمْ جَمِيعًا جُثَثٌ مَيْتَةٌ. ٣٥ 35
ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.
فَٱنْصَرَفَ سَنْحَارِيبُ مَلِكُ أَشُّورَ وَذَهَبَ رَاجِعًا وَأَقَامَ فِي نِينَوَى. ٣٦ 36
ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
وَفِيمَا هُوَ سَاجِدٌ فِي بَيْتِ نِسْرُوخَ إِلَهِهِ، ضَرَبَهُ أَدْرَمَّلَكُ وَشَرَآصَرُ ٱبْنَاهُ بِٱلسَّيْفِ، وَنَجَوَا إِلَى أَرْضِ أَرَارَاطَ. وَمَلَكَ آسَرْحَدُّونُ ٱبْنُهُ عِوَضًا عَنْهُ. ٣٧ 37
ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.

< اَلْمُلُوكِ ٱلثَّانِي 19 >