< اَلْمُلُوكِ ٱلثَّانِي 20 >

فِي تِلْكَ ٱلْأَيَّامِ مَرِضَ حَزَقِيَّا لِلْمَوْتِ، فَجَاءَ إِلَيْهِ إِشَعْيَا بْنُ آمُوصَ ٱلنَّبِيُّ وَقَالَ لَهُ: «هَكَذَا قَالَ ٱلرَّبُّ: أَوْصِ بَيْتَكَ لِأَنَّكَ تَمُوتُ وَلَا تَعِيشُ». ١ 1
ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.
فَوَجَّهَ وَجْهَهُ إِلَى ٱلْحَائِطِ وَصَلَّى إِلَى ٱلرَّبِّ قَائِلًا: ٢ 2
ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು.
«آهِ يَارَبُّ، ٱذْكُرْ كَيْفَ سِرْتُ أَمَامَكَ بِٱلْأَمَانَةِ وَبِقَلْبٍ سَلِيمٍ، وَفَعَلْتُ ٱلْحَسَنَ فِي عَيْنَيْكَ». وَبَكَى حَزَقِيَّا بُكَاءً عَظِيمًا. ٣ 3
“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.
وَلَمْ يَخْرُجْ إِشَعْيَا إِلَى ٱلْمَدِينَةِ ٱلْوُسْطَى حَتَّى كَانَ كَلَامُ ٱلرَّبِّ إِلَيْهِ قَائِلًا: ٤ 4
ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.
«ٱرْجِعْ وَقُلْ لِحَزَقِيَّا رَئِيسِ شَعْبِي: هَكَذَا قَالَ ٱلرَّبُّ إِلَهُ دَاوُدَ أَبِيكَ: قَدْ سَمِعْتُ صَلَاتَكَ. قَدْ رَأَيْتُ دُمُوعَكَ. هَأَنَذَا أَشْفِيكَ. فِي ٱلْيَوْمِ ٱلثَّالِثِ تَصْعَدُ إِلَى بَيْتِ ٱلرَّبِّ. ٥ 5
“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.
وَأَزِيدُ عَلَى أَيَّامِكَ خَمْسَ عَشْرَةَ سَنَةً، وَأُنْقِذُكَ مِنْ يَدِ مَلِكِ أَشُّورَ مَعَ هَذِهِ ٱلْمَدِينَةِ، وَأُحَامِي عَنْ هَذِهِ ٱلْمَدِينَةِ مِنْ أَجْلِ نَفْسِي، وَمِنْ أَجْلِ دَاوُدَ عَبْدِي». ٦ 6
ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.
فَقَالَ إِشَعْيَا: «خُذُوا قُرْصَ تِينٍ». فَأَخَذُوهَا وَوَضَعُوهَا عَلَى ٱلدَّبْلِ فَبَرِئَ. ٧ 7
ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.
وَقَالَ حَزَقِيَّا لِإِشَعْيَا: «مَا ٱلْعَلَامَةُ أَنَّ ٱلرَّبَّ يَشْفِينِي فَأَصْعَدَ فِي ٱلْيَوْمِ ٱلثَّالِثِ إِلَى بَيْتِ ٱلرَّبِّ؟» ٨ 8
ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.
فَقَالَ إِشَعْيَا: «هَذِهِ لَكَ عَلَامَةٌ مِنْ قِبَلِ ٱلرَّبِّ عَلَى أَنَّ ٱلرَّبَّ يَفْعَلُ ٱلْأَمْرَ ٱلَّذِي تَكَلَّمَ بِهِ: هَلْ يَسِيرُ ٱلظِّلُّ عَشَرَ دَرَجَاتٍ أَوْ يَرْجِعُ عَشَرَ دَرَجَاتٍ؟». ٩ 9
ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.
فَقَالَ حَزَقِيَّا: «إِنَّهُ يَسِيرٌ عَلَى ٱلظِّلِّ أَنْ يَمْتَدَّ عَشَرَ دَرَجَاتٍ. لَا! بَلْ يَرْجِعُ ٱلظِّلُّ إِلَى ٱلْوَرَاءِ عَشَرَ دَرَجَاتٍ!». ١٠ 10
೧೦ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.
فَدَعَا إِشَعْيَا ٱلنَّبِيُّ ٱلرَّبَّ، فَأَرْجَعَ ٱلظِّلَّ بِٱلدَّرَجَاتِ ٱلَّتِي نَزَلَ بِهَا بِدَرَجَاتِ آحَازَ عَشَرَ دَرَجَاتٍ إِلَى ٱلْوَرَاءِ. ١١ 11
೧೧ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.
فِي ذَلِكَ ٱلزَّمَانِ أَرْسَلَ بَرُودَخُ بَلَادَانُ بْنُ بَلَادَانَ مَلِكُ بَابِلَ رَسَائِلَ وَهَدِيَّةً إِلَى حَزَقِيَّا، لِأَنَّهُ سَمِعَ أَنَّ حَزَقِيَّا قَدْ مَرِضَ. ١٢ 12
೧೨ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
فَسَمِعَ لَهُمْ حَزَقِيَّا وَأَرَاهُمْ كُلَّ بَيْتِ ذَخَائِرِهِ، وَٱلْفِضَّةَ وَٱلذَّهَبَ وَٱلْأَطْيَابَ وَٱلزَّيْتَ ٱلطَّيِّبَ، وَكُلَّ بَيْتِ أَسْلِحَتِهِ وَكُلَّ مَا وُجِدَ فِي خَزَائِنِهِ. لَمْ يَكُنْ شَيْءٌ لَمْ يُرِهِمْ إِيَّاهُ حَزَقِيَّا فِي بَيْتِهِ وَفِي كُلِّ سَلْطَنَتِهِ. ١٣ 13
೧೩ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
فَجَاءَ إِشَعْيَا ٱلنَّبِيُّ إِلَى ٱلْمَلِكِ حَزَقِيَّا وَقَالَ لَهُ: «مَاذَا قَالَ هَؤُلَاءِ ٱلرِّجَالُ؟ وَمِنْ أَيْنَ جَاءُوا إِلَيْكَ؟» فَقَالَ حَزَقِيَّا: «جَاءُوا مِنْ أَرْضٍ بَعِيدَةٍ، مِنْ بَابِلَ» ١٤ 14
೧೪ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು.
فَقَالَ: «مَاذَا رَأَوْا فِي بَيْتِكَ؟» فَقَالَ حَزَقِيَّا: «رَأَوْا كُلَّ مَا فِي بَيْتِي. لَيْسَ فِي خَزَائِنِي شَيْءٌ لَمْ أُرِهِمْ إِيَّاهُ». ١٥ 15
೧೫ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು.
فَقَالَ إِشَعْيَا لِحَزَقِيَّا: «ٱسْمَعْ قَوْلَ ٱلرَّبِّ: ١٦ 16
೧೬ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನ ಮಾತನ್ನು ಕೇಳು,
هُوَذَا تَأْتِي أَيَّامٌ يُحْمَلُ فِيهَا كُلُّ مَا فِي بَيْتِكَ، وَمَا ذَخَرَهُ آبَاؤُكَ إِلَى هَذَا ٱلْيَوْمِ إِلَى بَابِلَ. لَا يُتْرَكُ شَيْءٌ، يَقُولُ ٱلرَّبُّ. ١٧ 17
೧೭‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.
وَيُؤْخَذُ مِنْ بَنِيكَ ٱلَّذِينَ يَخْرُجُونَ مِنْكَ، ٱلَّذِينَ تَلِدُهُمْ، فَيَكُونُونَ خِصْيَانًا فِي قَصْرِ مَلِكِ بَابِلَ». ١٨ 18
೧೮ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.
فَقَالَ حَزَقِيَّا لِإِشَعْيَا: «جَيِّدٌ هُوَ قَوْلُ ٱلرَّبِّ ٱلَّذِي تَكَلَّمْتَ بِهِ». ثُمَّ قَالَ: «فَكَيْفَ لَا، إِنْ يَكُنْ سَلَامٌ وَأَمَانٌ فِي أَيَّامِي؟». ١٩ 19
೧೯ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.
وَبَقِيَّةُ أُمُورِ حَزَقِيَّا وَكُلُّ جَبَرُوتِهِ، وَكَيْفَ عَمِلَ ٱلْبِرْكَةَ وَٱلْقَنَاةَ وَأَدْخَلَ ٱلْمَاءَ إِلَى ٱلْمَدِينَةِ، أَمَا هِيَ مَكْتُوبَةٌ فِي سِفْرِ أَخْبَارِ ٱلْأَيَّامِ لِمُلُوكِ يَهُوذَا؟ ٢٠ 20
೨೦ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
ثُمَّ ٱضْطَجَعَ حَزَقِيَّا مَعَ آبَائِهِ، وَمَلَكَ مَنَسَّى ٱبْنُهُ عِوَضًا عَنْهُ. ٢١ 21
೨೧ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

< اَلْمُلُوكِ ٱلثَّانِي 20 >