< اَلْمُلُوكِ ٱلثَّانِي 25 >

وَفِي ٱلسَّنَةِ ٱلتَّاسِعَةِ لِمُلْكِهِ، فِي ٱلشَّهْرِ ٱلْعَاشِرِ فِي عَاشِرِ ٱلشَّهْرِ، جَاءَ نَبُوخَذْنَاصَّرُ مَلِكُ بَابِلَ هُوَ وَكُلُّ جَيْشِهِ عَلَى أُورُشَلِيمَ وَنَزَلَ عَلَيْهَا، وَبَنَوْا عَلَيْهَا أَبْرَاجًا حَوْلَهَا. ١ 1
ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.
وَدَخَلَتِ ٱلْمَدِينَةُ تَحْتَ ٱلْحِصَارِ إِلَى ٱلسَّنَةِ ٱلْحَادِيَةَ عَشْرَةَ لِلْمَلِكِ صِدْقِيَّا. ٢ 2
ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
فِي تَاسِعِ ٱلشَّهْرِ ٱشْتَدَّ ٱلْجُوعُ فِي ٱلْمَدِينَةِ، وَلَمْ يَكُنْ خُبْزٌ لِشَعْبِ ٱلْأَرْضِ. ٣ 3
ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.
فَثُغِرَتِ ٱلْمَدِينَةُ، وَهَرَبَ جَمِيعُ رِجَالِ ٱلْقِتَالِ لَيْلًا مِنْ طَرِيقِ ٱلْبَابِ بَيْنَ ٱلسُّورَيْنِ ٱللَّذَيْنِ نَحْوَ جَنَّةِ ٱلْمَلِكِ. وَكَانَ ٱلْكِلْدَانِيُّونَ حَوْلَ ٱلْمَدِينَةِ مُسْتَدِيرِينَ. فَذَهَبُوا فِي طَرِيقِ ٱلْبَرِّيَّةِ. ٤ 4
ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.
فَتَبِعَتْ جُيُوشُ ٱلْكِلْدَانِيِّينَ ٱلْمَلِكَ فَأَدْرَكُوهُ فِي بَرِّيَّةِ أَرِيحَا، وَتَفَرَّقَتْ جَمِيعُ جُيُوشِهِ عَنْهُ. ٥ 5
ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.
فَأَخَذُوا ٱلْمَلِكَ وَأَصْعَدُوهُ إِلَى مَلِكِ بَابِلَ إِلَى رَبْلَةَ وَكَلَّمُوهُ بِٱلْقَضَاءِ عَلَيْهِ. ٦ 6
ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.
وَقَتَلُوا بَنِي صِدْقِيَّا أَمَامَ عَيْنَيْهِ، وَقَلَعُوا عَيْنَيْ صِدْقِيَّا وَقَيَّدُوهُ بِسِلْسِلَتَيْنِ مِنْ نُحَاسٍ، وَجَاءُوا بِهِ إِلَى بَابِلَ. ٧ 7
ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
وَفِي ٱلشَّهْرِ ٱلْخَامِسِ، فِي سَابِعِ ٱلشَّهْرِ، وَهِيَ ٱلسَّنَةُ ٱلتَّاسِعَةَ عَشْرَةَ لِلْمَلِكِ نَبُوخَذْنَاصَّرَ مَلِكِ بَابِلَ، جَاءَ نَبُوزَرَادَانُ رَئِيسُ ٱلشُّرَطِ عَبْدُ مَلِكِ بَابِلَ إِلَى أُورُشَلِيمَ، ٨ 8
ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.
وَأَحْرَقَ بَيْتَ ٱلرَّبِّ وَبَيْتَ ٱلْمَلِكِ، وَكُلَّ بُيُوتِ أُورُشَلِيمَ، وَكُلَّ بُيُوتِ ٱلْعُظَمَاءِ أَحْرَقَهَا بِٱلنَّارِ. ٩ 9
ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
وَجَمِيعُ أَسْوَارِ أُورُشَلِيمَ مُسْتَدِيرًا هَدَمَهَا كُلُّ جُيُوشِ ٱلْكِلْدَانِيِّينَ ٱلَّذِينَ مَعَ رَئِيسِ ٱلشُّرَطِ. ١٠ 10
೧೦ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.
وَبَقِيَّةُ ٱلشَّعْبِ ٱلَّذِينَ بَقُوا فِي ٱلْمَدِينَةِ، وَٱلْهَارِبُونَ ٱلَّذِينَ هَرَبُوا إِلَى مَلِكِ بَابِلَ، وَبَقِيَّةُ ٱلْجُمْهُورِ سَبَاهُمْ نَبُوزَرَادَانُ رَئِيسُ ٱلشُّرَطِ. ١١ 11
೧೧ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
وَلَكِنَّ رَئِيسَ ٱلشُّرَطِ أَبْقَى مِنْ مَسَاكِينِ ٱلْأَرْضِ كَرَّامِينَ وَفَلَّاحِينَ. ١٢ 12
೧೨ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
وَأَعْمِدَةَ ٱلنُّحَاسِ ٱلَّتِي فِي بَيْتِ ٱلرَّبِّ وَٱلْقَوَاعِدَ وَبَحْرَ ٱلنُّحَاسِ ٱلَّذِي فِي بَيْتِ ٱلرَّبِّ كَسَّرَهَا ٱلْكِلْدَانِيُّونَ، وَحَمَلُوا نُحَاسَهَا إِلَى بَابِلَ. ١٣ 13
೧೩ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
وَٱلْقُدُورَ وَٱلرُّفُوشَ وَٱلْمَقَاصَّ وَٱلصُّحُونَ وَجَمِيعَ آنِيَةِ ٱلنُّحَاسِ ٱلَّتِي كَانُوا يَخْدِمُونَ بِهَا، أَخَذُوهَا. ١٤ 14
೧೪ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.
وَٱلْمَجَامِرَ وَٱلْمَنَاضِحَ. مَا كَانَ مِنْ ذَهَبٍ فَٱلذَّهَبُ، وَمَا كَانَ مِنْ فِضَّةٍ فَٱلْفِضَّةُ، أَخَذَهَا رَئِيسُ ٱلشُّرَطِ. ١٥ 15
೧೫ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.
وَٱلْعَمُودَانِ وَٱلْبَحْرُ ٱلْوَاحِدُ وَٱلْقَوَاعِدُ ٱلَّتِي عَمِلَهَا سُلَيْمَانُ لِبَيْتِ ٱلرَّبِّ، لَمْ يَكُنْ وَزْنٌ لِنُحَاسِ كُلِّ هَذِهِ ٱلْأَدَوَاتِ. ١٦ 16
೧೬ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.
ثَمَانِي عَشْرَةَ ذِرَاعًا ٱرْتِفَاعُ ٱلْعَمُودِ ٱلْوَاحِدِ، وَعَلَيْهِ تَاجٌ مِنْ نُحَاسٍ، وَٱرْتِفَاعُ ٱلتَّاجِ ثَلَاثُ أَذْرُعٍ، وَٱلشَّبَكَةُ وَٱلرُّمَّانَاتُ ٱلَّتِي عَلَى ٱلتَّاجِ مُسْتَدِيرَةً جَمِيعُهَا مِنْ نُحَاسٍ. وَكَانَ لِلْعَمُودِ ٱلثَّانِي مِثْلُ هَذِهِ عَلَى ٱلشَّبَكَةِ. ١٧ 17
೧೭ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.
وَأَخَذَ رَئِيسُ ٱلشُّرَطِ سَرَايَا ٱلْكَاهِنَ ٱلرَّئِيسَ، وَصَفَنْيَا ٱلْكَاهِنَ ٱلثَّانِي، وَحَارِسِي ٱلْبَابِ ٱلثَّلَاثَةَ. ١٨ 18
೧೮ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,
وَمِنَ ٱلْمَدِينَةِ أَخَذَ خَصِيًّا وَاحِدًا كَانَ وَكِيلًا عَلَى رِجَالِ ٱلْحَرْبِ، وَخَمْسَةَ رِجَالٍ مِنَ ٱلَّذِينَ يَنْظُرُونَ وَجْهَ ٱلْمَلِكِ ٱلَّذِينَ وُجِدُوا فِي ٱلْمَدِينَةِ، وَكَاتِبَ رَئِيسِ ٱلْجُنْدِ ٱلَّذِي كَانَ يَجْمَعُ شَعْبَ ٱلْأَرْضِ، وَسِتِّينَ رَجُلًا مِنْ شَعْبِ ٱلْأَرْضِ ٱلْمَوْجُودِينَ فِي ٱلْمَدِينَةِ ١٩ 19
೧೯ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದ್ದ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ಜನರೂ ಇದ್ದರು.
وَأَخَذَهُمْ نَبُوزَرَادَانُ رَئِيسُ ٱلشُّرَطِ وَسَارَ بِهِمْ إِلَى مَلِكِ بَابِلَ إِلَى رَبْلَةَ. ٢٠ 20
೨೦ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,
فَضَرَبَهُمْ مَلِكُ بَابِلَ وَقَتَلَهُمْ فِي رَبْلَةَ فِي أَرْضِ حَمَاةَ. فَسُبِيَ يَهُوذَا مِنْ أَرْضِهِ. ٢١ 21
೨೧ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
وَأَمَّا ٱلشَّعْبُ ٱلَّذِي بَقِيَ فِي أَرْضِ يَهُوذَا، ٱلَّذِينَ أَبْقَاهُمْ نَبُوخَذْنَاصَّرُ مَلِكُ بَابِلَ، فَوَكَّلَ عَلَيْهِمْ جَدَلْيَا بْنَ أَخِيقَامَ بْنِ شَافَانَ. ٢٢ 22
೨೨ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.
وَلَمَّا سَمِعَ جَمِيعُ رُؤَسَاءِ ٱلْجُيُوشِ هُمْ وَرِجَالُهُمْ أَنَّ مَلِكَ بَابِلَ قَدْ وَكَّلَ جَدَلْيَا أَتَوْا إِلَى جَدَلْيَا إِلَى ٱلْمِصْفَاةِ، وَهُمْ إِسْمَاعِيلُ بْنُ نَثَنْيَا، وَيُوحَنَانُ بْنُ قَارِيحَ، وَسَرَايَا بْنُ تَنْحُومَثَ ٱلنَّطُوفَاتِيِّ، وَيَازَنْيَا ٱبْنُ ٱلْمَعْكِيِّ، هُمْ وَرِجَالُهُمْ. ٢٣ 23
೨೩ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.
وَحَلَفَ جَدَلْيَا لَهُمْ وَلِرِجَالِهِمْ، وَقَالَ لَهُمْ: «لَا تَخَافُوا مِنْ عَبِيدِ ٱلْكِلْدَانِيِّينَ. ٱسْكُنُوا ٱلْأَرْضَ وَتَعَبَّدُوا لِمَلِكِ بَابِلَ فَيَكُونَ لَكُمْ خَيْرٌ». ٢٤ 24
೨೪ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.
وَفِي ٱلشَّهْرِ ٱلسَّابِعِ جَاءَ إِسْمَاعِيلُ بْنُ نَثَنْيَا بْنِ أَلِيشَمَعَ مِنَ ٱلنَّسْلِ ٱلْمَلِكِيِّ، وَعَشْرَةُ رِجَالٍ مَعَهُ وَضَرَبُوا جَدَلْيَا فَمَاتَ، وَأَيْضًا ٱلْيَهُودُ وَٱلْكِلْدَانِيِّينَ ٱلَّذِينَ مَعَهُ فِي ٱلْمِصْفَاةِ. ٢٥ 25
೨೫ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.
فَقَامَ جَمِيعُ ٱلشَّعْبِ مِنَ ٱلصَّغِيرِ إِلَى ٱلْكَبِيرِ وَرُؤَسَاءُ ٱلْجُيُوشِ وَجَاءُوا إِلَى مِصْرَ، لِأَنَّهُمْ خَافُوا مِنَ ٱلْكِلْدَانِيِّينَ. ٢٦ 26
೨೬ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.
وَفِي ٱلسَّنَةِ ٱلسَّابِعَةِ وَٱلثَّلَاثِينَ لِسَبْيِ يَهُويَاكِينَ مَلِكِ يَهُوذَا، فِي ٱلشَّهْرِ ٱلثَّانِي عَشَرَ فِي ٱلسَّابِعِ وَٱلْعِشْرِينَ مِنَ ٱلشَّهْرِ، رَفَعَ أَوِيلُ مَرُودَخُ مَلِكُ بَابِلَ، فِي سَنَةِ تَمَلُّكِهِ، رَأْسَ يَهُويَاكِينَ مَلِكِ يَهُوذَا مِنَ ٱلسِّجْنِ ٢٧ 27
೨೭ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.
وَكَلَّمَهُ بِخَيْرٍ، وَجَعَلَ كُرْسِيَّهُ فَوْقَ كَرَاسِيِّ ٱلْمُلُوكِ ٱلَّذِينَ مَعَهُ فِي بَابِلَ. ٢٨ 28
೨೮ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
وَغَيَّرَ ثِيَابَ سِجْنِهِ. وَكَانَ يَأْكُلُ دَائِمًا ٱلْخُبْزَ أَمَامَهُ كُلَّ أَيَّامِ حَيَاتِهِ. ٢٩ 29
೨೯ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
وَوَظِيفَتُهُ وَظِيفَةٌ دَائِمَةٌ تُعْطَى لَهُ مِنْ عِنْدِ ٱلْمَلِكِ، أَمْرُ كُلِّ يَوْمٍ بِيَوْمِهِ كُلَّ أَيَّامِ حَيَاتِهِ. ٣٠ 30
೩೦ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.

< اَلْمُلُوكِ ٱلثَّانِي 25 >