< اَلْمُلُوكِ ٱلثَّانِي 25 >

وَفِي ٱلسَّنَةِ ٱلتَّاسِعَةِ لِمُلْكِهِ، فِي ٱلشَّهْرِ ٱلْعَاشِرِ فِي عَاشِرِ ٱلشَّهْرِ، جَاءَ نَبُوخَذْنَاصَّرُ مَلِكُ بَابِلَ هُوَ وَكُلُّ جَيْشِهِ عَلَى أُورُشَلِيمَ وَنَزَلَ عَلَيْهَا، وَبَنَوْا عَلَيْهَا أَبْرَاجًا حَوْلَهَا. ١ 1
ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.
وَدَخَلَتِ ٱلْمَدِينَةُ تَحْتَ ٱلْحِصَارِ إِلَى ٱلسَّنَةِ ٱلْحَادِيَةَ عَشْرَةَ لِلْمَلِكِ صِدْقِيَّا. ٢ 2
ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು.
فِي تَاسِعِ ٱلشَّهْرِ ٱشْتَدَّ ٱلْجُوعُ فِي ٱلْمَدِينَةِ، وَلَمْ يَكُنْ خُبْزٌ لِشَعْبِ ٱلْأَرْضِ. ٣ 3
ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
فَثُغِرَتِ ٱلْمَدِينَةُ، وَهَرَبَ جَمِيعُ رِجَالِ ٱلْقِتَالِ لَيْلًا مِنْ طَرِيقِ ٱلْبَابِ بَيْنَ ٱلسُّورَيْنِ ٱللَّذَيْنِ نَحْوَ جَنَّةِ ٱلْمَلِكِ. وَكَانَ ٱلْكِلْدَانِيُّونَ حَوْلَ ٱلْمَدِينَةِ مُسْتَدِيرِينَ. فَذَهَبُوا فِي طَرِيقِ ٱلْبَرِّيَّةِ. ٤ 4
ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
فَتَبِعَتْ جُيُوشُ ٱلْكِلْدَانِيِّينَ ٱلْمَلِكَ فَأَدْرَكُوهُ فِي بَرِّيَّةِ أَرِيحَا، وَتَفَرَّقَتْ جَمِيعُ جُيُوشِهِ عَنْهُ. ٥ 5
ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
فَأَخَذُوا ٱلْمَلِكَ وَأَصْعَدُوهُ إِلَى مَلِكِ بَابِلَ إِلَى رَبْلَةَ وَكَلَّمُوهُ بِٱلْقَضَاءِ عَلَيْهِ. ٦ 6
ಅವರು ಅರಸನನ್ನು ಹಿಡಿದುಕೊಂಡರು. ರಿಬ್ಲದಲ್ಲಿರುವ ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
وَقَتَلُوا بَنِي صِدْقِيَّا أَمَامَ عَيْنَيْهِ، وَقَلَعُوا عَيْنَيْ صِدْقِيَّا وَقَيَّدُوهُ بِسِلْسِلَتَيْنِ مِنْ نُحَاسٍ، وَجَاءُوا بِهِ إِلَى بَابِلَ. ٧ 7
ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
وَفِي ٱلشَّهْرِ ٱلْخَامِسِ، فِي سَابِعِ ٱلشَّهْرِ، وَهِيَ ٱلسَّنَةُ ٱلتَّاسِعَةَ عَشْرَةَ لِلْمَلِكِ نَبُوخَذْنَاصَّرَ مَلِكِ بَابِلَ، جَاءَ نَبُوزَرَادَانُ رَئِيسُ ٱلشُّرَطِ عَبْدُ مَلِكِ بَابِلَ إِلَى أُورُشَلِيمَ، ٨ 8
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,
وَأَحْرَقَ بَيْتَ ٱلرَّبِّ وَبَيْتَ ٱلْمَلِكِ، وَكُلَّ بُيُوتِ أُورُشَلِيمَ، وَكُلَّ بُيُوتِ ٱلْعُظَمَاءِ أَحْرَقَهَا بِٱلنَّارِ. ٩ 9
ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.
وَجَمِيعُ أَسْوَارِ أُورُشَلِيمَ مُسْتَدِيرًا هَدَمَهَا كُلُّ جُيُوشِ ٱلْكِلْدَانِيِّينَ ٱلَّذِينَ مَعَ رَئِيسِ ٱلشُّرَطِ. ١٠ 10
ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.
وَبَقِيَّةُ ٱلشَّعْبِ ٱلَّذِينَ بَقُوا فِي ٱلْمَدِينَةِ، وَٱلْهَارِبُونَ ٱلَّذِينَ هَرَبُوا إِلَى مَلِكِ بَابِلَ، وَبَقِيَّةُ ٱلْجُمْهُورِ سَبَاهُمْ نَبُوزَرَادَانُ رَئِيسُ ٱلشُّرَطِ. ١١ 11
ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.
وَلَكِنَّ رَئِيسَ ٱلشُّرَطِ أَبْقَى مِنْ مَسَاكِينِ ٱلْأَرْضِ كَرَّامِينَ وَفَلَّاحِينَ. ١٢ 12
ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
وَأَعْمِدَةَ ٱلنُّحَاسِ ٱلَّتِي فِي بَيْتِ ٱلرَّبِّ وَٱلْقَوَاعِدَ وَبَحْرَ ٱلنُّحَاسِ ٱلَّذِي فِي بَيْتِ ٱلرَّبِّ كَسَّرَهَا ٱلْكِلْدَانِيُّونَ، وَحَمَلُوا نُحَاسَهَا إِلَى بَابِلَ. ١٣ 13
ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
وَٱلْقُدُورَ وَٱلرُّفُوشَ وَٱلْمَقَاصَّ وَٱلصُّحُونَ وَجَمِيعَ آنِيَةِ ٱلنُّحَاسِ ٱلَّتِي كَانُوا يَخْدِمُونَ بِهَا، أَخَذُوهَا. ١٤ 14
ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.
وَٱلْمَجَامِرَ وَٱلْمَنَاضِحَ. مَا كَانَ مِنْ ذَهَبٍ فَٱلذَّهَبُ، وَمَا كَانَ مِنْ فِضَّةٍ فَٱلْفِضَّةُ، أَخَذَهَا رَئِيسُ ٱلشُّرَطِ. ١٥ 15
ಕಾವಲುಗಾರರ ಅಧಿಪತಿಯು ಅಗ್ನಿ ಪಾತ್ರೆಗಳನ್ನೂ, ತಟ್ಟೆಗಳನ್ನೂ, ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.
وَٱلْعَمُودَانِ وَٱلْبَحْرُ ٱلْوَاحِدُ وَٱلْقَوَاعِدُ ٱلَّتِي عَمِلَهَا سُلَيْمَانُ لِبَيْتِ ٱلرَّبِّ، لَمْ يَكُنْ وَزْنٌ لِنُحَاسِ كُلِّ هَذِهِ ٱلْأَدَوَاتِ. ١٦ 16
ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಂಚಿನ ಸಮುದ್ರವೆಂಬ ಪಾತ್ರೆ, ಚಕ್ರದ ಬಂಡಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.
ثَمَانِي عَشْرَةَ ذِرَاعًا ٱرْتِفَاعُ ٱلْعَمُودِ ٱلْوَاحِدِ، وَعَلَيْهِ تَاجٌ مِنْ نُحَاسٍ، وَٱرْتِفَاعُ ٱلتَّاجِ ثَلَاثُ أَذْرُعٍ، وَٱلشَّبَكَةُ وَٱلرُّمَّانَاتُ ٱلَّتِي عَلَى ٱلتَّاجِ مُسْتَدِيرَةً جَمِيعُهَا مِنْ نُحَاسٍ. وَكَانَ لِلْعَمُودِ ٱلثَّانِي مِثْلُ هَذِهِ عَلَى ٱلشَّبَكَةِ. ١٧ 17
ಪ್ರತಿಯೊಂದು ಕಂಬ ಎಂಟು ಮೀಟರ್ ಎತ್ತರವಿತ್ತು. ಪ್ರತಿಯೊಂದರ ಮೇಲೆ ಸುಮಾರು ಒಂದೂವರೆ ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು.
وَأَخَذَ رَئِيسُ ٱلشُّرَطِ سَرَايَا ٱلْكَاهِنَ ٱلرَّئِيسَ، وَصَفَنْيَا ٱلْكَاهِنَ ٱلثَّانِي، وَحَارِسِي ٱلْبَابِ ٱلثَّلَاثَةَ. ١٨ 18
ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.
وَمِنَ ٱلْمَدِينَةِ أَخَذَ خَصِيًّا وَاحِدًا كَانَ وَكِيلًا عَلَى رِجَالِ ٱلْحَرْبِ، وَخَمْسَةَ رِجَالٍ مِنَ ٱلَّذِينَ يَنْظُرُونَ وَجْهَ ٱلْمَلِكِ ٱلَّذِينَ وُجِدُوا فِي ٱلْمَدِينَةِ، وَكَاتِبَ رَئِيسِ ٱلْجُنْدِ ٱلَّذِي كَانَ يَجْمَعُ شَعْبَ ٱلْأَرْضِ، وَسِتِّينَ رَجُلًا مِنْ شَعْبِ ٱلْأَرْضِ ٱلْمَوْجُودِينَ فِي ٱلْمَدِينَةِ ١٩ 19
ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಐದು ಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು.
وَأَخَذَهُمْ نَبُوزَرَادَانُ رَئِيسُ ٱلشُّرَطِ وَسَارَ بِهِمْ إِلَى مَلِكِ بَابِلَ إِلَى رَبْلَةَ. ٢٠ 20
ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.
فَضَرَبَهُمْ مَلِكُ بَابِلَ وَقَتَلَهُمْ فِي رَبْلَةَ فِي أَرْضِ حَمَاةَ. فَسُبِيَ يَهُوذَا مِنْ أَرْضِهِ. ٢١ 21
ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
وَأَمَّا ٱلشَّعْبُ ٱلَّذِي بَقِيَ فِي أَرْضِ يَهُوذَا، ٱلَّذِينَ أَبْقَاهُمْ نَبُوخَذْنَاصَّرُ مَلِكُ بَابِلَ، فَوَكَّلَ عَلَيْهِمْ جَدَلْيَا بْنَ أَخِيقَامَ بْنِ شَافَانَ. ٢٢ 22
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.
وَلَمَّا سَمِعَ جَمِيعُ رُؤَسَاءِ ٱلْجُيُوشِ هُمْ وَرِجَالُهُمْ أَنَّ مَلِكَ بَابِلَ قَدْ وَكَّلَ جَدَلْيَا أَتَوْا إِلَى جَدَلْيَا إِلَى ٱلْمِصْفَاةِ، وَهُمْ إِسْمَاعِيلُ بْنُ نَثَنْيَا، وَيُوحَنَانُ بْنُ قَارِيحَ، وَسَرَايَا بْنُ تَنْحُومَثَ ٱلنَّطُوفَاتِيِّ، وَيَازَنْيَا ٱبْنُ ٱلْمَعْكِيِّ، هُمْ وَرِجَالُهُمْ. ٢٣ 23
ಆದರೆ ಬಾಬಿಲೋನಿನ ಅರಸನು ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಕೇಳಿದ ಮೇಲೆ, ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ, ನೆತನ್ಯನ ಮಗ ಇಷ್ಮಾಯೇಲನೂ, ಕಾರೇಹನ ಮಗ ಯೋಹಾನಾನ್, ನೆಟೋಫದವನಾದ ತನ್ಹುಮೆತನ ಮಗ ಸೆರಾಯ್, ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ, ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
وَحَلَفَ جَدَلْيَا لَهُمْ وَلِرِجَالِهِمْ، وَقَالَ لَهُمْ: «لَا تَخَافُوا مِنْ عَبِيدِ ٱلْكِلْدَانِيِّينَ. ٱسْكُنُوا ٱلْأَرْضَ وَتَعَبَّدُوا لِمَلِكِ بَابِلَ فَيَكُونَ لَكُمْ خَيْرٌ». ٢٤ 24
ಆಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ಬಾಬಿಲೋನಿಯದ ಸೈನಿಕರಿಗೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,” ಎಂದನು.
وَفِي ٱلشَّهْرِ ٱلسَّابِعِ جَاءَ إِسْمَاعِيلُ بْنُ نَثَنْيَا بْنِ أَلِيشَمَعَ مِنَ ٱلنَّسْلِ ٱلْمَلِكِيِّ، وَعَشْرَةُ رِجَالٍ مَعَهُ وَضَرَبُوا جَدَلْيَا فَمَاتَ، وَأَيْضًا ٱلْيَهُودُ وَٱلْكِلْدَانِيِّينَ ٱلَّذِينَ مَعَهُ فِي ٱلْمِصْفَاةِ. ٢٥ 25
ಆದರೆ ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಬಾಬಿಲೋನಿಯರನ್ನೂ ಕೊಂದುಹಾಕಿದರು.
فَقَامَ جَمِيعُ ٱلشَّعْبِ مِنَ ٱلصَّغِيرِ إِلَى ٱلْكَبِيرِ وَرُؤَسَاءُ ٱلْجُيُوشِ وَجَاءُوا إِلَى مِصْرَ، لِأَنَّهُمْ خَافُوا مِنَ ٱلْكِلْدَانِيِّينَ. ٢٦ 26
ಆಗ ಹಿರಿಕಿರಿಯರಾದ ಸಮಸ್ತ ಜನರೂ, ದಂಡುಗಳ ಅಧಿಪತಿಗಳೂ ಬಾಬಿಲೋನಿಯದವರಿಗೆ ಹೆದರಿ ಎದ್ದು ಈಜಿಪ್ಟಿಗೆ ಹೋದರು.
وَفِي ٱلسَّنَةِ ٱلسَّابِعَةِ وَٱلثَّلَاثِينَ لِسَبْيِ يَهُويَاكِينَ مَلِكِ يَهُوذَا، فِي ٱلشَّهْرِ ٱلثَّانِي عَشَرَ فِي ٱلسَّابِعِ وَٱلْعِشْرِينَ مِنَ ٱلشَّهْرِ، رَفَعَ أَوِيلُ مَرُودَخُ مَلِكُ بَابِلَ، فِي سَنَةِ تَمَلُّكِهِ، رَأْسَ يَهُويَاكِينَ مَلِكِ يَهُوذَا مِنَ ٱلسِّجْنِ ٢٧ 27
ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.
وَكَلَّمَهُ بِخَيْرٍ، وَجَعَلَ كُرْسِيَّهُ فَوْقَ كَرَاسِيِّ ٱلْمُلُوكِ ٱلَّذِينَ مَعَهُ فِي بَابِلَ. ٢٨ 28
ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
وَغَيَّرَ ثِيَابَ سِجْنِهِ. وَكَانَ يَأْكُلُ دَائِمًا ٱلْخُبْزَ أَمَامَهُ كُلَّ أَيَّامِ حَيَاتِهِ. ٢٩ 29
ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.
وَوَظِيفَتُهُ وَظِيفَةٌ دَائِمَةٌ تُعْطَى لَهُ مِنْ عِنْدِ ٱلْمَلِكِ، أَمْرُ كُلِّ يَوْمٍ بِيَوْمِهِ كُلَّ أَيَّامِ حَيَاتِهِ. ٣٠ 30
ಅವನು ಬದುಕಿರುವವರೆಗೂ ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.

< اَلْمُلُوكِ ٱلثَّانِي 25 >