< اَلْمُلُوكِ ٱلثَّانِي 3 >
وَمَلَكَ يَهُورَامُ بْنُ أَخْآبَ عَلَى إِسْرَائِيلَ فِي ٱلسَّامِرَةِ، فِي ٱلسَّنَةِ ٱلثَّامِنَةَ عَشْرَةَ لِيَهُوشَافَاطَ مَلِكِ يَهُوذَا. مَلَكَ ٱثْنَتَيْ عَشْرَةَ سَنَةً. | ١ 1 |
೧ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.
وَعَمِلَ ٱلشَّرَّ فِي عَيْنَيِ ٱلرَّبِّ، وَلَكِنْ لَيْسَ كَأَبِيهِ وَأُمِّهِ، فَإِنَّهُ أَزَالَ تِمْثَالَ ٱلْبَعْلِ ٱلَّذِي عَمِلَهُ أَبُوهُ. | ٢ 2 |
೨ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.
إِلَّا أَنَّهُ لَصِقَ بِخَطَايَا يَرُبْعَامَ بْنِ نَبَاطَ ٱلَّذِي جَعَلَ إِسْرَائِيلَ يُخْطِئُ. لَمْ يَحِدْ عَنْهَا. | ٣ 3 |
೩ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
وَكَانَ مِيشَعُ مَلِكُ مُوآبَ صَاحِبَ مَوَاشٍ، فَأَدَّى لِمَلِكِ إِسْرَائِيلَ مِئَةَ أَلْفِ خَرُوفٍ وَمِئَةَ أَلْفِ كَبْشٍ بِصُوفِهَا. | ٤ 4 |
೪ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
وَعِنْدَ مَوْتِ أَخْآبَ عَصَى مَلِكُ مُوآبَ عَلَى مَلِكِ إِسْرَائِيلَ. | ٥ 5 |
೫ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
وَخَرَجَ ٱلْمَلِكُ يَهُورَامُ فِي ذَلِكَ ٱلْيَوْمِ مِنَ ٱلسَّامِرَةِ وَعَدَّ كُلَّ إِسْرَائِيلَ. | ٦ 6 |
೬ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.
وَذَهَبَ وَأَرْسَلَ إِلَى يَهُوشَافَاطَ مَلِكِ يَهُوذَا يَقُولُ: «قَدْ عَصَى عَلَيَّ مَلِكُ مُوآبَ. فَهَلْ تَذْهَبُ مَعِي إِلَى مُوآبَ لِلْحَرْبِ؟» فَقَالَ: «أَصْعَدُ. مَثَلِي مَثَلُكَ. شَعْبِي كَشَعْبِكَ وَخَيْلِي كَخَيْلِكَ». | ٧ 7 |
೭ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.
فَقَالَ: «مِنْ أَيِّ طَرِيقٍ نَصْعَدُ؟». فَقَالَ: «مِنْ طَرِيقِ بَرِّيَّةِ أَدُومَ». | ٨ 8 |
೮ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.
فَذَهَبَ مَلِكُ إِسْرَائِيلَ وَمَلِكُ يَهُوذَا وَمَلِكُ أَدُومَ وَدَارُوا مَسِيرَةَ سَبْعَةِ أَيَّامٍ. وَلَمْ يَكُنْ مَاءٌ لِلْجَيْشِ وَٱلْبَهَائِمِ ٱلَّتِي تَبِعَتْهُمْ. | ٩ 9 |
೯ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.
فَقَالَ مَلِكُ إِسْرَائِيلَ: «آهِ، عَلَى أَنَّ ٱلرَّبَّ قَدْ دَعَا هَؤُلَاءِ ٱلثَّلَاثَةَ ٱلْمُلُوكِ لِيَدْفَعَهُمْ إِلَى يَدِ مُوآبَ!». | ١٠ 10 |
೧೦ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.
فَقَالَ يَهُوشَافَاطُ: «أَلَيْسَ هُنَا نَبِيٌّ لِلرَّبِّ فَنَسْأَلَ ٱلرَّبَّ بِهِ؟» فَأَجَابَ وَاحِدٌ مِنْ عَبِيدِ مَلِكِ إِسْرَائِيلَ وَقَالَ: «هُنَا أَلِيشَعُ بْنُ شَافَاطَ ٱلَّذِي كَانَ يَصُبُّ مَاءً عَلَى يَدَيْ إِيلِيَّا». | ١١ 11 |
೧೧ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
فَقَالَ يَهُوشَافَاطُ: «عِنْدَهُ كَلَامُ ٱلرَّبِّ». فَنَزَلَ إِلَيْهِ مَلِكُ إِسْرَائِيلَ وَيَهُوشَافَاطُ وَمَلِكُ أَدُومَ. | ١٢ 12 |
೧೨ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.
فَقَالَ أَلِيشَعُ لِمَلِكِ إِسْرَائِيلَ: «مَا لِي وَلَكَ! ٱذْهَبْ إِلَى أَنْبِيَاءِ أَبِيكَ وَإِلَى أَنْبِيَاءِ أُمِّكَ». فَقَالَ لَهُ مَلِكُ إِسْرَائِيلَ: «كَّلَا. لِأَنَّ ٱلرَّبَّ قَدْ دَعَا هَؤُلَاءِ ٱلثَّلَاثَةَ ٱلْمُلُوكِ لِيَدْفَعَهُمْ إِلَى يَدِ مُوآبَ». | ١٣ 13 |
೧೩ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.
فَقَالَ أَلِيشَعُ: «حَيٌّ هُوَ رَبُّ ٱلْجُنُودِ ٱلَّذِي أَنَا وَاقِفٌ أَمَامَهُ، إِنَّهُ لَوْلَا أَنِّي رَافِعٌ وَجْهَ يَهُوشَافَاطَ مَلِكِ يَهُوذَا، لَمَا كُنْتُ أَنْظُرُ إِلَيْكَ وَلَا أَرَاكَ. | ١٤ 14 |
೧೪ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.
وَٱلْآنَ فَأْتُونِي بِعَوَّادٍ». وَلَمَّا ضَرَبَ ٱلْعَوَّادُ بِٱلْعُودِ كَانَتْ عَلَيْهِ يَدُ ٱلرَّبِّ، | ١٥ 15 |
೧೫ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
فَقَالَ: «هَكَذَا قَالَ ٱلرَّبُّ: ٱجْعَلُوا هَذَا ٱلْوَادِيَ جِبَابًا جِبَابًا. | ١٦ 16 |
೧೬ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.
لِأَنَّهُ هَكَذَا قَالَ ٱلرَّبُّ: لَا تَرَوْنَ رِيحًا وَلَا تَرَوْنَ مَطَرًا وَهَذَا ٱلْوَادِي يَمْتَلِئُ مَاءً، فَتَشْرَبُونَ أَنْتُمْ وَمَاشِيَتُكُمْ وَبَهَائِمُكُمْ. | ١٧ 17 |
೧೭‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.
وَذَلِكَ يَسِيرٌ فِي عَيْنَيِ ٱلرَّبِّ، فَيَدْفَعُ مُوآبَ إِلَى أَيْدِيكُمْ. | ١٨ 18 |
೧೮“ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
فَتَضْرِبُونَ كُلَّ مَدِينَةٍ مُحَصَّنَةٍ، وَكُلَّ مَدِينَةٍ مُخْتَارَةٍ، وَتَقْطَعُونَ كُلَّ شَجَرَةٍ طَيِّبَةٍ، وَتَطُمُّونَ جَمِيعَ عُيُونِ ٱلْمَاءِ، وَتُفْسِدُونَ كُلَّ حَقْلَةٍ جَيِّدَةٍ بِٱلْحِجَارَةِ». | ١٩ 19 |
೧೯ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.
وَفِي ٱلصَّبَاحِ عِنْدَ إِصْعَادِ ٱلتَّقْدِمَةِ إِذَا مِيَاهٌ آتِيَةٌ عَنْ طَرِيقِ أَدُومَ، فَٱمْتَلَأَتِ ٱلْأَرْضُ مَاءً. | ٢٠ 20 |
೨೦ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.
وَلَمَّا سَمِعَ كُلُّ ٱلْمُوآبِيِّينَ أَنَّ ٱلْمُلُوكَ قَدْ صَعِدُوا لِمُحَارَبَتِهِمْ جَمَعُوا كُلَّ مُتَقَلِّدِي ٱلسِّلَاحِ فَمَا فَوْقُ، وَوَقَفُوا عَلَى ٱلتُّخُمِ. | ٢١ 21 |
೨೧ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.
وَبَكَّرُوا صَبَاحًا وَٱلشَّمْسُ أَشْرَقَتْ عَلَى ٱلْمِيَاهِ، وَرَأَى ٱلْمُوآبِيُّونَ مُقَابِلَهُمُ ٱلْمِيَاهَ حَمْرَاءَ كَٱلدَّمِ. | ٢٢ 22 |
೨೨ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.
فَقَالُوا: «هَذَا دَمٌ! قَدْ تَحَارَبَ ٱلْمُلُوكُ وَضَرَبَ بَعْضُهُمْ بَعْضًا، وَٱلْآنَ فَإِلَى ٱلنَّهْبِ يَا مُوآبُ». | ٢٣ 23 |
೨೩ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.
وَأَتَوْا إِلَى مَحَلَّةِ إِسْرَائِيلَ، فَقَامَ إِسْرَائِيلُ وَضَرَبُوا ٱلْمُوآبِيِّينَ فَهَرَبُوا مِنْ أَمَامِهِمْ، فَدَخَلُوهَا وَهُمْ يَضْرِبُونَ ٱلْمُوآبِيِّينَ. | ٢٤ 24 |
೨೪ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.
وَهَدَمُوا ٱلْمُدُنَ، وَكَانَ كُلُّ وَاحِدٍ يُلْقِي حَجَرَهُ فِي كُلِّ حَقْلَةٍ جَيِّدَةٍ حَتَّى مَلَأُوهَا، وَطَمُّوا جَمِيعَ عُيُونِ ٱلْمَاءِ وَقَطَعُوا كُلَّ شَجَرَةٍ طَيِّبَةٍ. وَلَكِنَّهُمْ أَبْقَوْا فِي قِيرِ حَارِسَةَ حِجَارَتَهَا. وَٱسْتَدَارَ أَصْحَابُ ٱلْمَقَالِيعِ وَضَرَبُوهَا. | ٢٥ 25 |
೨೫ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.
فَلَمَّا رَأَى مَلِكُ مُوآبَ أَنَّ ٱلْحَرْبَ قَدِ ٱشْتَدَّتْ عَلَيْهِ أَخَذَ مَعَهُ سَبْعَ مِئَةِ رَجُلٍ مُسْتَلِّي ٱلسُّيُوفِ لِكَيْ يَشُقُّوا إِلَى مَلِكِ أَدُومَ، فَلَمْ يَقْدِرُوا. | ٢٦ 26 |
೨೬ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.
فَأَخَذَ ٱبْنَهُ ٱلْبِكْرَ ٱلَّذِي كَانَ مَلَكَ عِوَضًا عَنْهُ، وَأَصْعَدَهُ مُحْرَقَةً عَلَى ٱلسُّورِ. فَكَانَ غَيْظٌ عَظِيمٌ عَلَى إِسْرَائِيلَ. فَٱنْصَرَفُوا عَنْهُ وَرَجَعُوا إِلَى أَرْضِهِمْ. | ٢٧ 27 |
೨೭ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.