< اَلْمُلُوكِ ٱلثَّانِي 7 >

وَقَالَ أَلِيشَعُ: «ٱسْمَعُوا كَلَامَ ٱلرَّبِّ. هَكَذَا قَالَ ٱلرَّبُّ: فِي مِثْلِ هَذَا ٱلْوَقْتِ غَدًا تَكُونُ كَيْلَةُ ٱلدَّقِيقِ بِشَاقِلٍ، وَكَيْلَتَا ٱلشَّعِيرِ بِشَاقِلٍ فِي بَابِ ٱلسَّامِرَةِ». ١ 1
ಆಗ ಎಲೀಷನು, “ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಿಲಲ್ಲಿ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಆರು ಕಿಲೋಗ್ರಾಂ ಜವೆಗೋಧಿ ಒಂದು ಬೆಳ್ಳಿ ನಾಣ್ಯಕ್ಕೆ ಮಾರಲಾಗುವುದು,” ಎಂದನು.
وَإِنَّ جُنْدِيًّا لِلْمَلِكِ كَانَ يَسْتَنِدُ عَلَى يَدِهِ أَجَابَ رَجُلَ ٱللهِ وَقَالَ: «هُوَذَا ٱلرَّبُّ يَصْنَعُ كُوًى فِي ٱلسَّمَاءِ! هَلْ يَكُونُ هَذَا ٱلْأَمْرُ؟» فَقَالَ: «إِنَّكَ تَرَى بِعَيْنَيْكَ، وَلَكِنْ لَا تَأْكُلُ مِنْهُ». ٢ 2
ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.
وَكَانَ أَرْبَعَةُ رِجَالٍ بُرْصٍ عِنْدَ مَدْخَلِ ٱلْبَابِ، فَقَالَ أَحَدُهُمْ لِصَاحِبِهِ: «لِمَاذَا نَحْنُ جَالِسُونَ هُنَا حَتَّى نَمُوتَ؟ ٣ 3
ಆಗ ಊರು ಬಾಗಿಲ ದ್ವಾರದಲ್ಲಿ ನಾಲ್ಕು ಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರು, “ನಾವು ಸಾಯುವವರೆಗೂ ಇಲ್ಲಿ ಕುಳಿತುಕೊಂಡಿರುವುದೇನು?
إِذَا قُلْنَا نَدْخُلُ ٱلْمَدِينَةَ، فَٱلْجُوعُ فِي ٱلْمَدِينَةِ فَنَمُوتُ فِيهَا. وَإِذَا جَلَسْنَا هُنَا نَمُوتُ. فَٱلْآنَ هَلُمَّ نَسْقُطْ إِلَى مَحَلَّةِ ٱلْأَرَامِيِّينَ، فَإِنِ اِسْتَحْيَوْنَا حَيِينَا، وَإِنْ قَتَلُونَا مُتْنَا». ٤ 4
ನಾವು ಇಲ್ಲಿಯೇ ಇದ್ದರೆ, ಪಟ್ಟಣದಲ್ಲಿ ಬರವಿರುವುದರಿಂದ ಅಲ್ಲಿ ಸಾಯುತ್ತೇವೆ. ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯುತ್ತೇವೆ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಅವರಿಗೆ ಶರಣಾಗೋಣ. ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಅವರು ನಮ್ಮನ್ನು ಕೊಲ್ಲುವುದಾದರೆ ಕೊಲ್ಲಲಿ,” ಎಂದುಕೊಂಡರು.
فَقَامُوا فِي ٱلْعِشَاءِ لِيَذْهَبُوا إِلَى مَحَلَّةِ ٱلْأَرَامِيِّينَ. فَجَاءُوا إِلَى آخِرِ مَحَلَّةِ ٱلْأَرَامِيِّينَ فَلَمْ يَكُنْ هُنَاكَ أَحَدٌ. ٥ 5
ಹಾಗೆಯೇ ಸಂಜೆಯಲ್ಲಿ ಎದ್ದು, ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ, ಅಲ್ಲಿ ಯಾರೂ ಇರಲಿಲ್ಲ.
فَإِنَّ ٱلرَّبَّ أَسْمَعَ جَيْشَ ٱلْأَرَامِيِّينَ صَوْتَ مَرْكَبَاتٍ وَصَوْتَ خَيْلٍ، صَوْتَ جَيْشٍ عَظِيمٍ. فَقَالُوا ٱلْوَاحِدُ لِأَخِيهِ: «هُوَذَا مَلِكُ إِسْرَائِيلَ قَدِ ٱسْتَأْجَرَ ضِدَّنَا مُلُوكَ ٱلْحِثِّيِّينَ وَمُلُوكَ ٱلْمِصْرِيِّينَ لِيَأْتُوا عَلَيْنَا». ٦ 6
ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.
فَقَامُوا وَهَرَبُوا فِي ٱلْعِشَاءِ وَتَرَكُوا خِيَامَهُمْ وَخَيْلَهُمْ وَحَمِيرَهُمُ، ٱلْمَحَلَّةَ كَمَا هِيَ، وَهَرَبُوا لِأَجْلِ نَجَاةِ أَنْفُسِهِمْ. ٧ 7
ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ, ತಮ್ಮ ಕುದುರೆಗಳನ್ನೂ, ತಮ್ಮ ಕತ್ತೆಗಳನ್ನೂ ಬಿಟ್ಟುಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋಗಿದ್ದರು.
وَجَاءَ هَؤُلَاءِ ٱلْبُرْصُ إِلَى آخِرِ ٱلْمَحَلَّةِ وَدَخَلُوا خَيْمَةً وَاحِدَةً، فَأَكَلُوا وَشَرِبُوا وَحَمَلُوا مِنْهَا فِضَّةً وَذَهَبًا وَثِيَابًا وَمَضَوْا وَطَمَرُوهَا. ثُمَّ رَجَعُوا وَدَخَلُوا خَيْمَةً أُخْرَى وَحَمَلُوا مِنْهَا وَمَضَوْا وَطَمَرُوا. ٨ 8
ಆ ಕುಷ್ಠರೋಗಿಗಳು ದಂಡಿನ ಅಂಚಿನವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿಬಂಗಾರವನ್ನೂ, ವಸ್ತ್ರಗಳನ್ನೂ ತೆಗೆದುಕೊಂಡುಹೋಗಿ ಬಚ್ಚಿಟ್ಟರು. ತಿರುಗಿಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡುಹೋಗಿ ಬಚ್ಚಿಟ್ಟರು.
ثُمَّ قَالَ بَعْضُهُمْ لِبَعْضٍ: «لَسْنَا عَامِلِينَ حَسَنًا. هَذَا ٱلْيَوْمُ هُوَ يَوْمُ بِشَارَةٍ وَنَحْنُ سَاكِتُونَ، فَإِنِ ٱنْتَظَرْنَا إِلَى ضَوْءِ ٱلصَّبَاحِ يُصَادِفُنَا شَرٌّ. فَهَلُمَّ ٱلْآنَ نَدْخُلْ وَنُخْبِرْ بَيْتَ ٱلْمَلِكِ». ٩ 9
ಅನಂತರ ಅವರು, “ಇದು ಶುಭವಾರ್ತೆಯ ದಿವಸ, ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ, ಶಿಕ್ಷೆಗೆ ಪಾತ್ರರಾಗಬಹುದು. ಆದ್ದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತನಾಡಿಕೊಂಡರು.
فَجَاءُوا وَدَعَوْا بَوَّابَ ٱلْمَدِينَةِ وَأَخْبَرُوهُ قَائِلِينَ: «إِنَّنَا دَخَلْنَا مَحَلَّةَ ٱلْأَرَامِيِّينَ فَلَمْ يَكُنْ هُنَاكَ أَحَدٌ وَلَا صَوْتُ إِنْسَانٍ، وَلَكِنْ خَيْلٌ مَرْبُوطَةٌ وَحَمِيرٌ مَرْبُوطَةٌ وَخِيَامٌ كَمَا هِيَ». ١٠ 10
ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.
فَدَعَا ٱلْبَوَّابِينَ فَأَخْبَرُوا بَيْتَ ٱلْمَلِكِ دَاخِلًا. ١١ 11
ಅವನು ಬಾಗಿಲು ಕಾಯುವವರನ್ನು ಕರೆದನು. ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು.
فَقَامَ ٱلْمَلِكُ لَيْلًا وَقَالَ لِعَبِيدِهِ: «لَأُخْبِرَنَّكُمْ مَا فَعَلَ لَنَا ٱلْأَرَامِيُّونَ. عَلِمُوا أَنَّنَا جِيَاعٌ فَخَرَجُوا مِنَ ٱلْمَحَلَّةِ لِيَخْتَبِئُوا فِي حَقْلٍ قَائِلِينَ: إِذَا خَرَجُوا مِنَ ٱلْمَدِينَةِ قَبَضْنَا عَلَيْهِمْ أَحْيَاءً وَدَخَلْنَا ٱلْمَدِينَةَ». ١٢ 12
ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ. ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದ್ದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೇ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ.”
فَأَجَابَ وَاحِدٌ مِنْ عَبِيدِهِ وَقَالَ: «فَلْيَأْخُذُوا خَمْسَةً مِنَ ٱلْخَيْلِ ٱلْبَاقِيَةِ ٱلَّتِي بَقِيَتْ فِيهَا. هِيَ نَظِيرُ كُلِّ جُمْهُورِ إِسْرَائِيلَ ٱلَّذِينَ بَقَوْا بِهَا، أَوْ هِيَ نَظِيرُ كُلِّ جُمْهُورِ إِسْرَائِيلَ ٱلَّذِينَ فَنَوْا. فَنُرْسِلُ وَنَرَى». ١٣ 13
ಆಗ ಅವನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತೆಗೆದುಕೊಂಡು ಹೋಗಲಿ. ಅವು ಇಸ್ರಾಯೇಲಿನ ಸಮಸ್ತ ಸಮೂಹದಲ್ಲಿ ಉಳಿದವುಗಳ ಹಾಗೆ ಇವೆ. ಅಂದರೆ ಇಸ್ರಾಯೇಲಿನ ಸಮಸ್ತ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ, ನಾವು ಕಳುಹಿಸಿ ನೋಡೋಣ,” ಎಂದನು.
فَأَخَذُوا مَرْكَبَتَيْ خَيْلٍ. وَأَرْسَلَ ٱلْمَلِكُ وَرَاءَ جَيْشِ ٱلْأَرَامِيِّينَ قَائِلًا: «ٱذْهَبُوا وَٱنْظُرُوا». ١٤ 14
ಆದ್ದರಿಂದ ಅವರು ಎರಡು ಜೋಡಿ ಕುದುರೆಗಳೊಂದಿಗೆ ಎರಡು ರಥಗಳನ್ನು ಆರಿಸಿಕೊಂಡರು ಮತ್ತು ಅರಸನು ಅರಾಮ್ಯರ ಸೈನ್ಯದ ಹಿಂದೆ ಅವರನ್ನು ಕಳುಹಿಸಿ, “ಹೋಗಿ ಏನಾಯಿತು ಎಂದು ತಿಳಿದುಕೊಳ್ಳಿ” ಎಂದು ಅವನು ರಾಹುತರಿಗೆ ಆಜ್ಞಾಪಿಸಿದನು.
فَٱنْطَلَقُوا وَرَاءَهُمْ إِلَى ٱلْأُرْدُنِّ، وَإِذَا كُلُّ ٱلطَّرِيقِ مَلآنٌ ثِيَابًا وَآنِيَةً قَدْ طَرَحَهَا ٱلْأَرَامِيُّونَ مِنْ عَجَلَتِهِمْ. فَرَجَعَ ٱلرُّسُلُ وَأَخْبَرُوا ٱلْمَلِكَ. ١٥ 15
ಅವರು ಅವರ ಹಿಂದೆ ಯೊರ್ದನಿನವರೆಗೆ ಹೋದರು. ಮಾರ್ಗದಲ್ಲೆಲ್ಲಾ ಅರಾಮ್ಯರು ಅವಸರದಿಂದ ಬಿಸಾಡಿದ ವಸ್ತ್ರಗಳೂ, ಪಾತ್ರೆಗಳೂ ತುಂಬಿದ್ದವು. ದೂತರು ತಿರುಗಿಬಂದು ಅರಸನಿಗೆ ತಿಳಿಸಿದರು.
فَخَرَجَ ٱلشَّعْبُ وَنَهَبُوا مَحَلَّةَ ٱلْأَرَامِيِّينَ. فَكَانَتْ كَيْلَةُ ٱلدَّقِيقِ بِشَاقِلٍ، وَكَيْلَتَا ٱلشَّعِيرِ بِشَاقِلٍ حَسَبَ كَلَامِ ٱلرَّبِّ. ١٦ 16
ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲಿದುಕೊಂಡರು. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರವೇ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೂ, ಆರು ಕಿಲೋಗ್ರಾಂ ಜವೆಗೋಧಿಯು ಒಂದು ಬೆಳ್ಳಿ ನಾಣ್ಯಕ್ಕೂ ಮಾರಲಾಯಿತು.
وَأَقَامَ ٱلْمَلِكُ عَلَى ٱلْبَابِ ٱلْجُنْدِيَّ ٱلَّذِي كَانَ يَسْتَنِدُ عَلَى يَدِهِ، فَدَاسَهُ ٱلشَّعْبُ فِي ٱلْبَابِ، فَمَاتَ كَمَا قَالَ رَجُلُ ٱللهِ ٱلَّذِي تَكَلَّمَ عِنْدَ نُزُولِ ٱلْمَلِكِ إِلَيْهِ. ١٧ 17
ಆದರೆ ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಿಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ, ದೇವರ ಮನುಷ್ಯನು ಹೇಳಿದ್ದ ಪ್ರಕಾರವೇ ಜನರು ಆ ಅಧಿಕಾರಿಯನ್ನು ಪಟ್ಟಣದ ಬಾಗಿಲಲ್ಲಿ ತುಳಿದುಹಾಕಿದ್ದರಿಂದ ಅವನು ಮರಣಹೊಂದಿದನು.
فَإِنَّهُ لَمَّا تَكَلَّمَ رَجُلُ ٱللهِ إِلَى ٱلْمَلِكِ قَائِلًا: «كَيْلَتَا شَعِيرٍ بِشَاقِلٍ وَكَيْلَةُ دَقِيقٍ بِشَاقِلٍ تَكُونُ فِي مِثْلِ هَذَا ٱلْوَقْتِ غَدًا فِي بَابِ ٱلسَّامِرَةِ» ١٨ 18
ಹಾಗೆಯೇ, “ಆರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಜವೆಗೋಧಿ ಹನ್ನೆರಡು ಕಿಲೋಗ್ರಾಂ ಒಂದು ಬೆಳ್ಳಿ ನಾಣ್ಯಕ್ಕೆ ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಮಾರಲಾಗುವುದು,” ಎಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
وَأَجَابَ ٱلْجُنْدِيُّ رَجُلَ ٱللهِ وَقَالَ: «هُوَذَا ٱلرَّبُّ يَصْنَعُ كُوًى فِي ٱلسَّمَاءِ! هَلْ يَكُونُ مِثْلَ هَذَا ٱلْأَمْرِ؟» قَالَ: «إِنَّكَ تَرَى بِعَيْنَيْكَ وَلَكِنَّكَ لَا تَأْكُلُ مِنْهُ». ١٩ 19
ಆ ಅಧಿಕಾರಿ ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ, ಸಂಭವಿಸುವುದೋ?” ಎಂದು ನುಡಿದಿದ್ದನು. ಅದಕ್ಕವನು, “ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವೆ, ಆದರೆ ನೀನು ಅದನ್ನು ತಿನ್ನುವುದಿಲ್ಲ,” ಎಂದು ಪ್ರವಾದಿಯು ಹೇಳಿದ್ದನು.
فَكَانَ لَهُ كَذَلِكَ. دَاسَهُ ٱلشَّعْبُ فِي ٱلْبَابِ فَمَاتَ. ٢٠ 20
ಆ ಪ್ರಕಾರವೇ ಅವನಿಗೆ ಸಂಭವಿಸಿತು. ಬಾಗಿಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಮರಣಹೊಂದಿದನು.

< اَلْمُلُوكِ ٱلثَّانِي 7 >