< ٢ بطرس 2 >

وَلَكِنْ، كَانَ أَيْضًا فِي ٱلشَّعْبِ أَنْبِيَاءُ كَذَبَةٌ، كَمَا سَيَكُونُ فِيكُمْ أَيْضًا مُعَلِّمُونَ كَذَبَةٌ، ٱلَّذِينَ يَدُسُّونَ بِدَعَ هَلَاكٍ. وَإِذْ هُمْ يُنْكِرُونَ ٱلرَّبَّ ٱلَّذِي ٱشْتَرَاهُمْ، يَجْلِبُونَ عَلَى أَنْفُسِهِمْ هَلَاكًا سَرِيعًا. ١ 1
ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
وَسَيَتْبَعُ كَثِيرُونَ تَهْلُكَاتِهِمْ. ٱلَّذِينَ بِسَبَبِهِمْ يُجَدَّفُ عَلَى طَرِيقِ ٱلْحَقِّ. ٢ 2
ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
وَهُمْ فِي ٱلطَّمَعِ يَتَّجِرُونَ بِكُمْ بِأَقْوَالٍ مُصَنَّعَةٍ، ٱلَّذِينَ دَيْنُونَتُهُمْ مُنْذُ ٱلْقَدِيمِ لَا تَتَوَانَى، وَهَلَاكُهُمْ لَا يَنْعَسُ. ٣ 3
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
لِأَنَّهُ إِنْ كَانَ ٱللهُ لَمْ يُشْفِقْ عَلَى مَلَائِكَةٍ قَدْ أَخْطَأُوا، بَلْ فِي سَلَاسِلِ ٱلظَّلَامِ طَرَحَهُمْ فِي جَهَنَّمَ، وَسَلَّمَهُمْ مَحْرُوسِينَ لِلْقَضَاءِ، (Tartaroō g5020) ٤ 4
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. (Tartaroō g5020)
وَلَمْ يُشْفِقْ عَلَى ٱلْعَالَمِ ٱلْقَدِيمِ، بَلْ إِنَّمَا حَفِظَ نُوحًا ثَامِنًا كَارِزًا لِلْبِرِّ، إِذْ جَلَبَ طُوفَانًا عَلَى عَالَمِ ٱلْفُجَّارِ. ٥ 5
ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
وَإِذْ رَمَّدَ مَدِينَتَيْ سَدُومَ وَعَمُورَةَ، حَكَمَ عَلَيْهِمَا بِٱلِٱنْقِلَابِ، وَاضِعًا عِبْرَةً لِلْعَتِيدِينَ أَنْ يَفْجُرُوا، ٦ 6
ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
وَأَنْقَذَ لُوطًا ٱلْبَارَّ، مَغْلُوبًا مِنْ سِيرَةِ ٱلْأَرْدِيَاءِ فِي ٱلدَّعَارَةِ. ٧ 7
ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.
إِذْ كَانَ ٱلْبَارُّ، بِٱلنَّظَرِ وَٱلسَّمْعِ وَهُوَ سَاكِنٌ بَيْنَهُمْ، يُعَذِّبُ يَوْمًا فَيَوْمًا نَفْسَهُ ٱلْبَارَّةَ بِٱلْأَفْعَالِ ٱلْأَثِيمَةِ. ٨ 8
ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
يَعْلَمُ ٱلرَّبُّ أَنْ يُنْقِذَ ٱلْأَتْقِيَاءَ مِنَ ٱلتَّجْرِبَةِ، وَيَحْفَظَ ٱلْأَثَمَةَ إِلَى يَوْمِ ٱلدِّينِ مُعَاقَبِينَ، ٩ 9
ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
وَلَا سِيَّمَا ٱلَّذِينَ يَذْهَبُونَ وَرَاءَ ٱلْجَسَدِ فِي شَهْوَةِ ٱلنَّجَاسَةِ، وَيَسْتَهِينُونَ بِٱلسِّيَادَةِ. جَسُورُونَ، مُعْجِبُونَ بِأَنْفُسِهِمْ، لَا يَرْتَعِبُونَ أَنْ يَفْتَرُوا عَلَى ذَوِي ٱلْأَمْجَادِ، ١٠ 10
೧೦ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
حَيْثُ مَلَائِكَةٌ- وَهُمْ أَعْظَمُ قُوَّةً وَقُدْرَةً - لَا يُقَدِّمُونَ عَلَيْهِمْ لَدَى ٱلرَّبِّ حُكْمَ ٱفْتِرَاءٍ. ١١ 11
೧೧ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
أَمَّا هَؤُلَاءِ فَكَحَيَوَانَاتٍ غَيْرِ نَاطِقَةٍ، طَبِيعِيَّةٍ، مَوْلُودَةٍ لِلصَّيْدِ وَٱلْهَلَاكِ، يَفْتَرُونَ عَلَى مَا يَجْهَلُونَ، فَسَيَهْلِكُونَ فِي فَسَادِهِمْ، ١٢ 12
೧೨ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
آخِذِينَ أُجْرَةَ ٱلْإِثْمِ. ٱلَّذِينَ يَحْسِبُونَ تَنَعُّمَ يَوْمٍ لَذَّةً. أَدْنَاسٌ وَعُيُوبٌ، يَتَنَعَّمُونَ فِي غُرُورِهِمْ صَانِعِينَ وَلَائِمَ مَعَكُمْ. ١٣ 13
೧೩ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
لَهُمْ عُيُونٌ مَمْلُوَّةٌ فِسْقًا، لَا تَكُفُّ عَنِ ٱلْخَطِيَّةِ، خَادِعُونَ ٱلنُّفُوسَ غَيْرَ ٱلثَّابِتَةِ. لَهُمْ قَلْبٌ مُتَدَرِّبٌ فِي ٱلطَّمَعِ. أَوْلَادُ ٱللَّعْنَةِ. ١٤ 14
೧೪ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
قَدْ تَرَكُوا ٱلطَّرِيقَ ٱلْمُسْتَقِيمَ، فَضَلُّوا، تَابِعِينَ طَرِيقَ بَلْعَامَ بْنِ بَصُورَ ٱلَّذِي أَحَبَّ أُجْرَةَ ٱلْإِثْمِ. ١٥ 15
೧೫ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
وَلَكِنَّهُ حَصَلَ عَلَى تَوْبِيخِ تَعَدِّيهِ، إِذْ مَنَعَ حَمَاقَةَ ٱلنَّبِيِّ حِمَارٌ أَعْجَمُ نَاطِقًا بِصَوْتِ إِنْسَانٍ. ١٦ 16
೧೬ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.
هَؤُلَاءِ هُمْ آبَارٌ بِلَا مَاءٍ، غُيُومٌ يَسُوقُهَا ٱلنَّوْءُ. ٱلَّذِينَ قَدْ حُفِظَ لَهُمْ قَتَامُ ٱلظَّلَامِ إِلَى ٱلْأَبَدِ. (questioned) ١٧ 17
೧೭ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. (questioned)
لِأَنَّهُمْ إِذْ يَنْطِقُونَ بِعَظَائِمِ ٱلْبُطْلِ، يَخْدَعُونَ بِشَهَوَاتِ ٱلْجَسَدِ فِي ٱلدَّعَارَةِ، مَنْ هَرَبَ قَلِيلًا مِنَ ٱلَّذِينَ يَسِيرُونَ فِي ٱلضَّلَالِ، ١٨ 18
೧೮ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
وَاعِدِينَ إِيَّاهُمْ بِٱلْحُرِّيَّةِ، وَهُمْ أَنْفُسُهُمْ عَبِيدُ ٱلْفَسَادِ. لِأَنَّ مَا ٱنْغَلَبَ مِنْهُ أَحَدٌ، فَهُوَ لَهُ مُسْتَعْبَدٌ أَيْضًا! ١٩ 19
೧೯ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.
لِأَنَّهُ إِذَا كَانُوا، بَعْدَمَا هَرَبُوا مِنْ نَجَاسَاتِ ٱلْعَالَمِ، بِمَعْرِفَةِ ٱلرَّبِّ وَٱلْمُخَلِّصِ يَسُوعَ ٱلْمَسِيحِ، يَرْتَبِكُونَ أَيْضًا فِيهَا، فَيَنْغَلِبُونَ، فَقَدْ صَارَتْ لَهُمُ ٱلْأَوَاخِرُ أَشَرَّ مِنَ ٱلْأَوَائِلِ. ٢٠ 20
೨೦ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
لِأَنَّهُ كَانَ خَيْرًا لَهُمْ لَوْ لَمْ يَعْرِفُوا طَرِيقَ ٱلْبِرِّ، مِنْ أَنَّهُمْ بَعْدَمَا عَرَفُوا، يَرْتَدُّونَ عَنِ ٱلْوَصِيَّةِ ٱلْمُقَدَّسَةِ ٱلْمُسَلَّمَةِ لَهُمْ. ٢١ 21
೨೧ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
قَدْ أَصَابَهُمْ مَا فِي ٱلْمَثَلِ ٱلصَّادِقِ: «كَلْبٌ قَدْ عَادَ إِلَى قَيْئِهِ»، وَ«خِنْزِيرَةٌ مُغْتَسِلَةٌ إِلَى مَرَاغَةِ ٱلْحَمْأَةِ». ٢٢ 22
೨೨“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.

< ٢ بطرس 2 >