< ٢ بطرس 2 >

وَلَكِنْ، كَانَ أَيْضًا فِي ٱلشَّعْبِ أَنْبِيَاءُ كَذَبَةٌ، كَمَا سَيَكُونُ فِيكُمْ أَيْضًا مُعَلِّمُونَ كَذَبَةٌ، ٱلَّذِينَ يَدُسُّونَ بِدَعَ هَلَاكٍ. وَإِذْ هُمْ يُنْكِرُونَ ٱلرَّبَّ ٱلَّذِي ٱشْتَرَاهُمْ، يَجْلِبُونَ عَلَى أَنْفُسِهِمْ هَلَاكًا سَرِيعًا. ١ 1
ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.
وَسَيَتْبَعُ كَثِيرُونَ تَهْلُكَاتِهِمْ. ٱلَّذِينَ بِسَبَبِهِمْ يُجَدَّفُ عَلَى طَرِيقِ ٱلْحَقِّ. ٢ 2
ಆ ಸುಳ್ಳು ಬೋಧಕರ ಅಸಹ್ಯ ಕೃತ್ಯಗಳನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
وَهُمْ فِي ٱلطَّمَعِ يَتَّجِرُونَ بِكُمْ بِأَقْوَالٍ مُصَنَّعَةٍ، ٱلَّذِينَ دَيْنُونَتُهُمْ مُنْذُ ٱلْقَدِيمِ لَا تَتَوَانَى، وَهَلَاكُهُمْ لَا يَنْعَسُ. ٣ 3
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.
لِأَنَّهُ إِنْ كَانَ ٱللهُ لَمْ يُشْفِقْ عَلَى مَلَائِكَةٍ قَدْ أَخْطَأُوا، بَلْ فِي سَلَاسِلِ ٱلظَّلَامِ طَرَحَهُمْ فِي جَهَنَّمَ، وَسَلَّمَهُمْ مَحْرُوسِينَ لِلْقَضَاءِ، (Tartaroō g5020) ٤ 4
ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು. (Tartaroō g5020)
وَلَمْ يُشْفِقْ عَلَى ٱلْعَالَمِ ٱلْقَدِيمِ، بَلْ إِنَّمَا حَفِظَ نُوحًا ثَامِنًا كَارِزًا لِلْبِرِّ، إِذْ جَلَبَ طُوفَانًا عَلَى عَالَمِ ٱلْفُجَّارِ. ٥ 5
ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.
وَإِذْ رَمَّدَ مَدِينَتَيْ سَدُومَ وَعَمُورَةَ، حَكَمَ عَلَيْهِمَا بِٱلِٱنْقِلَابِ، وَاضِعًا عِبْرَةً لِلْعَتِيدِينَ أَنْ يَفْجُرُوا، ٦ 6
ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.
وَأَنْقَذَ لُوطًا ٱلْبَارَّ، مَغْلُوبًا مِنْ سِيرَةِ ٱلْأَرْدِيَاءِ فِي ٱلدَّعَارَةِ. ٧ 7
ದೇವರು ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದರು.
إِذْ كَانَ ٱلْبَارُّ، بِٱلنَّظَرِ وَٱلسَّمْعِ وَهُوَ سَاكِنٌ بَيْنَهُمْ، يُعَذِّبُ يَوْمًا فَيَوْمًا نَفْسَهُ ٱلْبَارَّةَ بِٱلْأَفْعَالِ ٱلْأَثِيمَةِ. ٨ 8
ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯಕೃತ್ಯಗಳನ್ನು ನೋಡುತ್ತಾ, ಕೇಳುತ್ತಾ, ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
يَعْلَمُ ٱلرَّبُّ أَنْ يُنْقِذَ ٱلْأَتْقِيَاءَ مِنَ ٱلتَّجْرِبَةِ، وَيَحْفَظَ ٱلْأَثَمَةَ إِلَى يَوْمِ ٱلدِّينِ مُعَاقَبِينَ، ٩ 9
ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.
وَلَا سِيَّمَا ٱلَّذِينَ يَذْهَبُونَ وَرَاءَ ٱلْجَسَدِ فِي شَهْوَةِ ٱلنَّجَاسَةِ، وَيَسْتَهِينُونَ بِٱلسِّيَادَةِ. جَسُورُونَ، مُعْجِبُونَ بِأَنْفُسِهِمْ، لَا يَرْتَعِبُونَ أَنْ يَفْتَرُوا عَلَى ذَوِي ٱلْأَمْجَادِ، ١٠ 10
ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.
حَيْثُ مَلَائِكَةٌ- وَهُمْ أَعْظَمُ قُوَّةً وَقُدْرَةً - لَا يُقَدِّمُونَ عَلَيْهِمْ لَدَى ٱلرَّبِّ حُكْمَ ٱفْتِرَاءٍ. ١١ 11
ಆದರೂ ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಸ್ವರ್ಗೀಯ ಜೀವಿಗಳ ವಿರೋಧವಾಗಿ ಕರ್ತದೇವರ ಮುಂದೆ ಇವರು ನ್ಯಾಯತೀರ್ಪನ್ನು ತರುವುದಿಲ್ಲ.
أَمَّا هَؤُلَاءِ فَكَحَيَوَانَاتٍ غَيْرِ نَاطِقَةٍ، طَبِيعِيَّةٍ، مَوْلُودَةٍ لِلصَّيْدِ وَٱلْهَلَاكِ، يَفْتَرُونَ عَلَى مَا يَجْهَلُونَ، فَسَيَهْلِكُونَ فِي فَسَادِهِمْ، ١٢ 12
ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.
آخِذِينَ أُجْرَةَ ٱلْإِثْمِ. ٱلَّذِينَ يَحْسِبُونَ تَنَعُّمَ يَوْمٍ لَذَّةً. أَدْنَاسٌ وَعُيُوبٌ، يَتَنَعَّمُونَ فِي غُرُورِهِمْ صَانِعِينَ وَلَائِمَ مَعَكُمْ. ١٣ 13
ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯನ್ನು ಹಗಲಲ್ಲಿ ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಕಳಂಕಕ್ಕೂ, ನಿಂದೆಗೂ ಕಾರಣರಾಗಿದ್ದಾರೆ.
لَهُمْ عُيُونٌ مَمْلُوَّةٌ فِسْقًا، لَا تَكُفُّ عَنِ ٱلْخَطِيَّةِ، خَادِعُونَ ٱلنُّفُوسَ غَيْرَ ٱلثَّابِتَةِ. لَهُمْ قَلْبٌ مُتَدَرِّبٌ فِي ٱلطَّمَعِ. أَوْلَادُ ٱللَّعْنَةِ. ١٤ 14
ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
قَدْ تَرَكُوا ٱلطَّرِيقَ ٱلْمُسْتَقِيمَ، فَضَلُّوا، تَابِعِينَ طَرِيقَ بَلْعَامَ بْنِ بَصُورَ ٱلَّذِي أَحَبَّ أُجْرَةَ ٱلْإِثْمِ. ١٥ 15
ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
وَلَكِنَّهُ حَصَلَ عَلَى تَوْبِيخِ تَعَدِّيهِ، إِذْ مَنَعَ حَمَاقَةَ ٱلنَّبِيِّ حِمَارٌ أَعْجَمُ نَاطِقًا بِصَوْتِ إِنْسَانٍ. ١٦ 16
ಆದರೆ ಅವನ ದುಷ್ಟತನಕ್ಕೆ ಖಂಡನೆಯಾಯಿತು. ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.
هَؤُلَاءِ هُمْ آبَارٌ بِلَا مَاءٍ، غُيُومٌ يَسُوقُهَا ٱلنَّوْءُ. ٱلَّذِينَ قَدْ حُفِظَ لَهُمْ قَتَامُ ٱلظَّلَامِ إِلَى ٱلْأَبَدِ. (questioned) ١٧ 17
ಈ ಸುಳ್ಳು ಬೋಧಕರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ಕಾರ್ಗತ್ತಲು ಇಟ್ಟಿರುವುದು.
لِأَنَّهُمْ إِذْ يَنْطِقُونَ بِعَظَائِمِ ٱلْبُطْلِ، يَخْدَعُونَ بِشَهَوَاتِ ٱلْجَسَدِ فِي ٱلدَّعَارَةِ، مَنْ هَرَبَ قَلِيلًا مِنَ ٱلَّذِينَ يَسِيرُونَ فِي ٱلضَّلَالِ، ١٨ 18
ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.
وَاعِدِينَ إِيَّاهُمْ بِٱلْحُرِّيَّةِ، وَهُمْ أَنْفُسُهُمْ عَبِيدُ ٱلْفَسَادِ. لِأَنَّ مَا ٱنْغَلَبَ مِنْهُ أَحَدٌ، فَهُوَ لَهُ مُسْتَعْبَدٌ أَيْضًا! ١٩ 19
ಇಂಥವರು ಸ್ವಾತಂತ್ರ್ಯಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ. ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತು ಹೋಗಿರುವನೋ, ಅವನು ಅದರ ದಾಸತ್ವದೊಳಗಿರುವನಷ್ಟೆ.
لِأَنَّهُ إِذَا كَانُوا، بَعْدَمَا هَرَبُوا مِنْ نَجَاسَاتِ ٱلْعَالَمِ، بِمَعْرِفَةِ ٱلرَّبِّ وَٱلْمُخَلِّصِ يَسُوعَ ٱلْمَسِيحِ، يَرْتَبِكُونَ أَيْضًا فِيهَا، فَيَنْغَلِبُونَ، فَقَدْ صَارَتْ لَهُمُ ٱلْأَوَاخِرُ أَشَرَّ مِنَ ٱلْأَوَائِلِ. ٢٠ 20
ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
لِأَنَّهُ كَانَ خَيْرًا لَهُمْ لَوْ لَمْ يَعْرِفُوا طَرِيقَ ٱلْبِرِّ، مِنْ أَنَّهُمْ بَعْدَمَا عَرَفُوا، يَرْتَدُّونَ عَنِ ٱلْوَصِيَّةِ ٱلْمُقَدَّسَةِ ٱلْمُسَلَّمَةِ لَهُمْ. ٢١ 21
ಅವರು ನೀತಿಮಾರ್ಗವನ್ನು ತಿಳಿದುಕೊಂಡ ಮೇಲೆ ತಮಗೆ ಕೊಡಲಾದ ಪವಿತ್ರ ಆಜ್ಞೆಯಿಂದ ತೊಲಗಿ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.
قَدْ أَصَابَهُمْ مَا فِي ٱلْمَثَلِ ٱلصَّادِقِ: «كَلْبٌ قَدْ عَادَ إِلَى قَيْئِهِ»، وَ«خِنْزِيرَةٌ مُغْتَسِلَةٌ إِلَى مَرَاغَةِ ٱلْحَمْأَةِ». ٢٢ 22
“ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡಲು ತಿರುಗಿಕೊಂಡಿತು!” ಎಂಬ ನಿಜವಾದ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.

< ٢ بطرس 2 >