< ٢ بطرس 3 >
هَذِهِ أَكْتُبُهَا ٱلْآنَ إِلَيْكُمْ رِسَالَةً ثَانِيَةً أَيُّهَا ٱلْأَحِبَّاءُ، فِيهِمَا أُنْهِضُ بِٱلتَّذْكِرَةِ ذِهْنَكُمُ ٱلنَّقِيَّ، | ١ 1 |
೧ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.
لِتَذْكُرُوا ٱلْأَقْوَالَ ٱلَّتِي قَالَهَا سَابِقًا ٱلْأَنْبِيَاءُ ٱلْقِدِّيسُونَ، وَوَصِيَّتَنَا نَحْنُ ٱلرُّسُلَ، وَصِيَّةَ ٱلرَّبِّ وَٱلْمُخَلِّصِ. | ٢ 2 |
೨ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.
عَالِمِينَ هَذَا أَوَّلًا: أَنَّهُ سَيَأْتِي فِي آخِرِ ٱلْأَيَّامِ قَوْمٌ مُسْتَهْزِئُونَ، سَالِكِينَ بِحَسَبِ شَهَوَاتِ أَنْفُسِهِمْ، | ٣ 3 |
೩ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,
وَقَائِلِينَ: «أَيْنَ هُوَ مَوْعِدُ مَجِيئِهِ؟ لِأَنَّهُ مِنْ حِينَ رَقَدَ ٱلْآبَاءُ كُلُّ شَيْءٍ بَاقٍ هَكَذَا مِنْ بَدْءِ ٱلْخَلِيقَةِ». | ٤ 4 |
೪“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.
لِأَنَّ هَذَا يَخْفَى عَلَيْهِمْ بِإِرَادَتِهِمْ: أَنَّ ٱلسَّمَاوَاتِ كَانَتْ مُنْذُ ٱلْقَدِيمِ، وَٱلْأَرْضَ بِكَلِمَةِ ٱللهِ قَائِمَةٌ مِنَ ٱلْمَاءِ وَبِٱلْمَاءِ، | ٥ 5 |
೫ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.
ٱللَّوَاتِي بِهِنَّ ٱلْعَالَمُ ٱلْكَائِنُ حِينَئِذٍ فَاضَ عَلَيْهِ ٱلْمَاءُ فَهَلَكَ. | ٦ 6 |
೬ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು.
وَأَمَّا ٱلسَّمَاوَاتُ وَٱلْأَرْضُ ٱلْكَائِنَةُ ٱلْآنَ، فَهِيَ مَخْزُونَةٌ بِتِلْكَ ٱلْكَلِمَةِ عَيْنِهَا، مَحْفُوظَةً لِلنَّارِ إِلَى يَوْمِ ٱلدِّينِ وَهَلَاكِ ٱلنَّاسِ ٱلْفُجَّارِ. | ٧ 7 |
೭ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
وَلَكِنْ لَا يَخْفَ عَلَيْكُمْ هَذَا ٱلشَّيْءُ ٱلْوَاحِدُ أَيُّهَا ٱلْأَحِبَّاءُ: أَنَّ يَوْمًا وَاحِدًا عِنْدَ ٱلرَّبِّ كَأَلْفِ سَنَةٍ، وَأَلْفَ سَنَةٍ كَيَوْمٍ وَاحِدٍ. | ٨ 8 |
೮ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
لَا يَتَبَاطَأُ ٱلرَّبُّ عَنْ وَعْدِهِ كَمَا يَحْسِبُ قَوْمٌ ٱلتَّبَاطُؤَ، لَكِنَّهُ يَتَأَنَّى عَلَيْنَا، وَهُوَ لَا يَشَاءُ أَنْ يَهْلِكَ أُنَاسٌ، بَلْ أَنْ يُقْبِلَ ٱلْجَمِيعُ إِلَى ٱلتَّوْبَةِ. | ٩ 9 |
೯ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
وَلَكِنْ سَيَأْتِي كَلِصٍّ فِي ٱللَّيْلِ، يَوْمُ ٱلرَّبِّ، ٱلَّذِي فِيهِ تَزُولُ ٱلسَّمَاوَاتُ بِضَجِيجٍ، وَتَنْحَلُّ ٱلْعَنَاصِرُ مُحْتَرِقَةً، وَتَحْتَرِقُ ٱلْأَرْضُ وَٱلْمَصْنُوعَاتُ ٱلَّتِي فِيهَا. | ١٠ 10 |
೧೦ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
فَبِمَا أَنَّ هَذِهِ كُلَّهَا تَنْحَلُّ، أَيَّ أُنَاسٍ يَجِبُ أَنْ تَكُونُوا أَنْتُمْ فِي سِيرَةٍ مُقَدَّسَةٍ وَتَقْوَى؟ | ١١ 11 |
೧೧ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.
مُنْتَظِرِينَ وَطَالِبِينَ سُرْعَةَ مَجِيءِ يَوْمِ ٱلرَّبِّ، ٱلَّذِي بِهِ تَنْحَلُّ ٱلسَّمَاوَاتُ مُلْتَهِبَةً، وَٱلْعَنَاصِرُ مُحْتَرِقَةً تَذُوبُ. | ١٢ 12 |
೧೨ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
وَلَكِنَّنَا بِحَسَبِ وَعْدِهِ نَنْتَظِرُ سَمَاوَاتٍ جَدِيدَةً، وَأَرْضًا جَدِيدَةً، يَسْكُنُ فِيهَا ٱلْبِرُّ. | ١٣ 13 |
೧೩ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
لِذَلِكَ أَيُّهَا ٱلْأَحِبَّاءُ، إِذْ أَنْتُمْ مُنْتَظِرُونَ هَذِهِ، ٱجْتَهِدُوا لِتُوجَدُوا عِنْدَهُ بِلَا دَنَسٍ وَلَا عَيْبٍ، فِي سَلَامٍ. | ١٤ 14 |
೧೪ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
وَٱحْسِبُوا أَنَاةَ رَبِّنَا خَلَاصًا، كَمَا كَتَبَ إِلَيْكُمْ أَخُونَا ٱلْحَبِيبُ بُولُسُ أَيْضًا بِحَسَبِ ٱلْحِكْمَةِ ٱلْمُعْطَاةِ لَهُ، | ١٥ 15 |
೧೫ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.
كَمَا فِي ٱلرَّسَائِلِ كُلِّهَا أَيْضًا، مُتَكَلِّمًا فِيهَا عَنْ هَذِهِ ٱلْأُمُورِ، ٱلَّتِي فِيهَا أَشْيَاءُ عَسِرَةُ ٱلْفَهْمِ، يُحَرِّفُهَا غَيْرُ ٱلْعُلَمَاءِ وَغَيْرُ ٱلثَّابِتِينَ، كَبَاقِي ٱلْكُتُبِ أَيْضًا، لِهَلَاكِ أَنْفُسِهِمْ. | ١٦ 16 |
೧೬ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.
فَأَنْتُمْ أَيُّهَا ٱلْأَحِبَّاءُ، إِذْ قَدْ سَبَقْتُمْ فَعَرَفْتُمُ، ٱحْتَرِسُوا مِنْ أَنْ تَنْقَادُوا بِضَلَالِ ٱلْأَرْدِيَاءِ، فَتَسْقُطُوا مِنْ ثَبَاتِكُمْ. | ١٧ 17 |
೧೭ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.
وَلَكِنِ ٱنْمُوا فِي ٱلنِّعْمَةِ وَفِي مَعْرِفَةِ رَبِّنَا وَمُخَلِّصِنَا يَسُوعَ ٱلْمَسِيحِ. لَهُ ٱلْمَجْدُ ٱلْآنَ وَإِلَى يَوْمِ ٱلدَّهْرِ. آمِينَ. (aiōn ) | ١٨ 18 |
೧೮ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್. (aiōn )