< صَمُوئِيلَ ٱلثَّانِي 10 >

وَكَانَ بَعْدَ ذَلِكَ أَنَّ مَلِكَ بَنِي عَمُّونَ مَاتَ، وَمَلَكَ حَانُونُ ٱبْنُهُ عِوَضًا عَنْهُ. ١ 1
ಇದರ ತರುವಾಯ, ಅಮ್ಮೋನಿಯರ ಅರಸನು ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗ ಹಾನೂನನು ಅರಸನಾದನು.
فَقَالَ دَاوُدُ: «أَصْنَعُ مَعْرُوفًا مَعَ حَانُونَ بْنِ نَاحَاشَ كَمَا صَنَعَ أَبُوهُ مَعِي مَعْرُوفًا». فَأَرْسَلَ دَاوُدُ بِيَدِ عَبِيدِهِ يُعَزِّيهِ عَنْ أَبِيهِ. فَجَاءَ عَبِيدُ دَاوُدَ إِلَى أَرْضِ بَنِي عَمُّونَ. ٢ 2
ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.
فَقَالَ رُؤَسَاءُ بَنِي عَمُّونَ لِحَانُونَ سَيِّدِهِمْ: «هَلْ يُكْرِمُ دَاوُدُ أَبَاكَ فِي عَيْنَيْكَ حَتَّى أَرْسَلَ إِلَيْكَ مُعَزِّينَ؟ أَلَيْسَ لِأَجْلِ فَحْصِ ٱلْمَدِينَةِ وَتَجَسُّسِهَا وَقَلْبِهَا، أَرْسَلَ دَاوُدُ عَبِيدَهُ إِلَيْكَ؟» ٣ 3
ಆಗ ಅಮ್ಮೋನಿಯರ ಪ್ರಧಾನರು ತಮ್ಮ ಯಜಮಾನನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ದಾವೀದನು ತನ್ನ ಸೇವಕರನ್ನು ಈ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಕಳುಹಿಸಿದ್ದಾನಲ್ಲವೇ,” ಎಂದರು.
فَأَخَذَ حَانُونُ عَبِيدَ دَاوُدَ وَحَلَقَ أَنْصَافَ لِحَاهُمْ، وَقَصَّ ثِيَابَهُمْ مِنَ ٱلْوَسَطِ إِلَى أَسْتَاهِهِمْ، ثُمَّ أَطْلَقَهُمْ. ٤ 4
ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು, ಅವರ ಅರ್ಧ ಗಡ್ಡವನ್ನು ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.
وَلَمَّا أَخْبَرُوا دَاوُدَ أَرْسَلَ لِلِقَائِهِمْ، لِأَنَّ ٱلرِّجَالَ كَانُوا خَجِلِينَ جِدًّا. وَقَالَ ٱلْمَلِكُ: «أَقِيمُوا فِي أَرِيحَا حَتَّى تَنْبُتَ لِحَاكُمْ ثُمَّ ٱرْجِعُوا». ٥ 5
ಅವರು ಈ ವಿಷಯದ ಕುರಿತು ದಾವೀದನಿಗೆ ಹೇಳಿ ಕಳುಹಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ” ಎಂದು ಹೇಳಿಸಿದನು.
وَلَمَّا رَأَى بَنُو عَمُّونَ أَنَّهُمْ قَدْ أَنْتَنُوا عِنْدَ دَاوُدَ، أَرْسَلَ بَنُو عَمُّونَ وَٱسْتَأْجَرُوا أَرَامَ بَيْتِ رَحُوبَ وَأَرَامَ صُوبَا، عِشْرِينَ أَلْفَ رَاجِلٍ، وَمِنْ مَلِكِ مَعْكَةَ أَلْفَ رَجُلٍ، وَرِجَالَ طُوبَ ٱثْنَيْ عَشَرَ أَلْفَ رَجُلٍ. ٦ 6
ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
فَلَمَّا سَمِعَ دَاوُدُ أَرْسَلَ يُوآبَ وَكُلَّ جَيْشِ ٱلْجَبَابِرَةِ. ٧ 7
ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.
وَخَرَجَ بَنُو عَمُّونَ وَٱصْطَفُّوا لِلْحَرْبِ عْنْدَ مَدْخَلِ ٱلْبَابِ، وَكَانَ أَرَامُ صُوبَا وَرَحُوبُ وَرِجَالُ طُوبَ وَمَعْكَةَ وَحْدَهُمْ فِي ٱلْحَقْلِ. ٨ 8
ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.
فَلَمَّا رَأَى يُوآبُ أَنَّ مُقَدَّمَةَ ٱلْحَرْبِ كَانَتْ نَحْوَهُ مِنْ قُدَّامٍ وَمِنْ وَرَاءٍ، ٱخْتَارَ مِنْ جَمِيعِ مُنْتَخَبِي إِسْرَائِيلَ وَصَفَّهُمْ لِلِقَاءِ أَرَامَ ٩ 9
ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.
وَسَلَّمَ بَقِيَّةَ ٱلشَّعْبِ لِيَدِ أَخِيهِ أَبِيشَايَ، فَصَفَّهُمْ لِلِقَاءِ بَنِي عَمُّونَ. ١٠ 10
ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,
وَقَالَ: «إِنْ قَوِيَ أَرَامُ عَلَيَّ تَكُونُ لِي مُنْجِدًا، وَإِنْ قَوِيَ عَلَيْكَ بَنُو عَمُّونَ أَذْهَبُ لِنَجْدَتِكَ. ١١ 11
ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.
تَجَلَّدْ وَلْنَتَشَدَّدْ مِنْ أَجْلِ شَعْبِنَا وَمِنْ أَجْلِ مُدُنِ إِلَهِنَا، وَٱلرَّبُّ يَفْعَلُ مَا يَحْسُنُ فِي عَيْنَيْهِ». ١٢ 12
ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.
فَتَقَدَّمَ يُوآبُ وَٱلشَّعْبُ ٱلَّذِينَ مَعَهُ لِمُحَارَبَةِ أَرَامَ فَهَرَبُوا مِنْ أَمَامِهِ. ١٣ 13
ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.
وَلَمَّا رَأَى بَنُو عَمُّونَ أَنَّهُ قَدْ هَرَبَ أَرَامُ، هَرَبُوا مِنْ أَمَامِ أَبِيشَايَ وَدَخَلُوا ٱلْمَدِينَةَ. فَرَجَعَ يُوآبُ عَنْ بَنِي عَمُّونَ وَأَتَى إِلَى أُورُشَلِيمَ. ١٤ 14
ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು.
وَلَمَّا رَأَى أَرَامُ أَنَّهُمْ قَدِ ٱنْكَسَرُوا أَمَامَ إِسْرَائِيلَ، ٱجْتَمَعُوا مَعًا. ١٥ 15
ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರೆಲ್ಲರು ಒಟ್ಟಾಗಿ ಕೂಡಿಬಂದರು.
وَأَرْسَلَ هَدَرُ عَزَرَ فَأَبْرَزَ أَرَامَ ٱلَّذِي فِي عَبْرِ ٱلنَّهْرِ، فَأَتَوْا إِلَى حِيلَامَ وَأَمَامَهُمْ شُوبَكُ رَئِيسُ جَيْشِ هَدَرِ عَزَرَ. ١٦ 16
ಹದದೆಜೆರನು ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡದ್ದರಿಂದ ಅವರು ಹೆಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
وَلَمَّا أُخْبِرَ دَاوُدُ، جَمَعَ كُلَّ إِسْرَائِيلَ وَعَبَرَ ٱلْأُرْدُنَّ وَجَاءَ إِلَى حِيلَامَ، فَٱصْطَفَّ أَرَامُ لِلِقَاءِ دَاوُدَ وَحَارَبُوهُ. ١٧ 17
ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ ಹೆಲಾಮಿಗೆ ಬಂದನು. ಅರಾಮ್ಯರು ದಾವೀದನಿಗೆದುರಾಗಿ ವ್ಯೂಹ ಕಟ್ಟಿ ಯುದ್ಧಮಾಡಿದರು.
وَهَرَبَ أَرَامُ مِنْ أَمَامِ إِسْرَائِيلَ، وَقَتَلَ دَاوُدُ مِنْ أَرَامَ سَبْعَ مِئَةِ مَرْكَبَةٍ وَأَرْبَعِينَ أَلْفَ فَارِسٍ، وَضَرَبَ شُوبَكَ رَئِيسَ جَيْشِهِ فَمَاتَ هُنَاكَ. ١٨ 18
ಆಗ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ ಕೊಂದು, ಅವರ ಸೇನಾಧಿಪತಿಯಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಮರಣಹೊಂದಿದನು.
وَلَمَّا رَأَى جَمِيعُ ٱلْمُلُوكِ، عَبِيدُ هَدَرِ عَزَرَ أَنَّهُمُ ٱنْكَسَرُوا أَمَامَ إِسْرَائِيلَ، صَالَحُوا إِسْرَائِيلَ وَٱسْتُعْبِدُوا لَهُمْ، وَخَافَ أَرَامُ أَنْ يُنْجِدُوا بَنِي عَمُّونَ بَعْدُ. ١٩ 19
ಹದದೆಜೆರನ ಸೇವಕರಾದ ಸಮಸ್ತ ಅರಸರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ಇಸ್ರಾಯೇಲರ ಸಂಗಡ ಸಂಧಾನ ಮಾಡಿಕೊಂಡು ಅವರಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಭಯಪಟ್ಟರು.

< صَمُوئِيلَ ٱلثَّانِي 10 >