< صَمُوئِيلَ ٱلثَّانِي 14 >

وَعَلِمَ يُوآبُ ٱبْنُ صَرُويَةَ أَنَّ قَلْبَ ٱلْمَلِكِ عَلَى أَبْشَالُومَ، ١ 1
ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು
فَأَرْسَلَ يُوآبُ إِلَى تَقُوعَ وَأَخَذَ مِنْ هُنَاكَ ٱمْرَأَةً حَكِيمَةً وَقَالَ لَهَا: «تَظَاهَرِي بِٱلْحُزْنِ، وَٱلْبَسِي ثِيَابَ ٱلْحُزْنِ، وَلَا تَدَّهِنِي بِزَيْتٍ، بَلْ كُونِي كَٱمْرَأَةٍ لَهَا أَيَّامٌ كَثِيرَةٌ وَهِيَ تَنُوحُ عَلَى مَيْتٍ. ٢ 2
ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,
وَٱدْخُلِي إِلَى ٱلْمَلِكِ وَكَلِّمِيهِ بِهَذَا ٱلْكَلَامِ». وَجَعَلَ يُوآبُ ٱلْكَلَامَ فِي فَمِهَا. ٣ 3
ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು” ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.
وَكَلَّمَتِ ٱلْمَرْأَةُ ٱلتَّقُوعِيَّةُ ٱلْمَلِكَ، وَخَرَّتْ عَلَى وَجْهِهَا إِلَى ٱلْأَرْضِ وَسَجَدَتْ وَقَالَتْ: «أَعِنْ أَيُّهَا ٱلْمَلِكُ». ٤ 4
ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು.
فَقَالَ لَهَا ٱلْمَلِكُ: «مَا بَالُكِ؟» فَقَالَتْ: «إِنِّي ٱمْرَأَةٌ أَرْمَلَةٌ. قَدْ مَاتَ رَجُلِي. ٥ 5
ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಲು ಆಕೆಯು,
وَلِجَارِيَتِكَ ٱبْنَانِ، فَتَخَاصَمَا فِي ٱلْحَقْلِ وَلَيْسَ مَنْ يَفْصِلُ بَيْنَهُمَا، فَضَرَبَ أَحَدُهُمَا ٱلْآخَرَ وَقَتَلَهُ. ٦ 6
“ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.
وَهُوَذَا ٱلْعَشِيرَةُ كُلُّهَا قَدْ قَامَتْ عَلَى جَارِيَتِكَ وَقَالُوا: سَلِّمِي ضَارِبَ أَخِيهِ لِنَقْتُلَهُ بِنَفْسِ أَخِيهِ ٱلَّذِي قَتَلَهُ، فَنُهْلِكَ ٱلْوَارِثَ أَيْضًا. فَيُطْفِئُونَ جَمْرَتِي ٱلَّتِي بَقِيَتْ، وَلَا يَتْرُكُونَ لِرَجُلِي ٱسْمًا وَلَا بَقِيَّةً عَلَى وَجْهِ ٱلْأَرْضِ». ٧ 7
ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.
فَقَالَ ٱلْمَلِكُ لِلْمَرْأَةِ: «ٱذْهَبِي إِلَى بَيْتِكِ وَأَنَا أُوصِي فِيكِ». ٨ 8
ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು.
فَقَالَتِ ٱلْمَرْأَةُ ٱلتَّقُوعِيَّةُ لِلْمَلِكِ: «عَلَيَّ ٱلْإِثْمُ يَا سَيِّدِي ٱلْمَلِكَ وَعَلَى بَيْتِ أَبِي، وَٱلْمَلِكُ وَكُرْسِيُّهُ نَقِيَّانِ». ٩ 9
ಆ ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು.
فَقَالَ ٱلْمَلِكُ: «إِذَا كَلَّمَكِ أَحَدٌ فَأْتِي بِهِ إِلَيَّ فَلَا يَعُودَ يَمَسُّكِ بَعْدُ». ١٠ 10
೧೦ಅರಸನು ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ” ಎಂದನು.
فَقَالَتِ: «ٱذْكُرْ أَيُّهَا ٱلْمَلِكُ ٱلرَّبَّ إِلَهَكَ حَتَّى لَا يُكَثِّرَ وَلِيُّ ٱلدَّمِ ٱلْقَتْلَ، لِئَلَّا يُهْلِكُوا ٱبْنِي». فَقَالَ: «حَيٌّ هُوَ ٱلرَّبُّ، إِنَّهُ لَا تَسْقُطُ شَعْرَةٌ مِنْ شَعْرِ ٱبْنِكِ إِلَى ٱلْأَرْضِ». ١١ 11
೧೧ಆಗ ಆ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು.
فَقَالَتِ ٱلْمَرْأَةُ: «لِتَتَكَلَّمْ جَارِيَتُكَ كَلِمَةً إِلَى سَيِّدِي ٱلْمَلِكِ». فَقَالَ: «تَكَلَّمِي» ١٢ 12
೧೨ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು.
فَقَالَتِ ٱلْمَرْأَةُ: «وَلِمَاذَا ٱفْتَكَرْتَ بِمِثْلِ هَذَا ٱلْأَمْرِ عَلَى شَعْبِ ٱللهِ؟ وَيَتَكَلَّمُ ٱلْمَلِكُ بِهَذَا ٱلْكَلَامِ كَمُذْنِبٍ بِمَا أَنَّ ٱلْمَلِكَ لَا يَرُدُّ مَنْفِيَّهُ. ١٣ 13
೧೩ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?
لِأَنَّهُ لَا بُدَّ أَنْ نَمُوتَ وَنَكُونَ كَٱلْمَاءِ ٱلْمُهْرَاقِ عَلَى ٱلْأَرْضِ ٱلَّذِي لَا يُجْمَعُ أَيْضًا. وَلَا يَنْزِعُ ٱللهُ نَفْسًا بَلْ يُفَكِّرُ أَفْكَارًا حَتَّى لَا يُطْرَدَ عَنْهُ مَنْفِيُّهُ. ١٤ 14
೧೪ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.
وَٱلْآنَ حَيْثُ إِنِّي جِئْتُ لِأُكَلِّمَ ٱلْمَلِكَ سَيِّدِي بِهَذَا ٱلْأَمْرِ، لِأَنَّ ٱلشَّعْبَ أَخَافَنِي، فَقَالَتْ جَارِيَتُكَ: أُكَلِّمُ ٱلْمَلِكَ لَعَلَّ ٱلْمَلِكَ يَفْعَلُ كَقَوْلِ أَمَتِهِ. ١٥ 15
೧೫ಅದಿರಲಿ ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ, ‘ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ, ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಬಹುದು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವುದಕ್ಕೆ ಬಂದೆನು ಎಂದಳು.
لِأَنَّ ٱلْمَلِكَ يَسْمَعُ لِيُنْقِذَ أَمَتَهُ مِنْ يَدِ ٱلرَّجُلِ ٱلَّذِي يُرِيدُ أَنْ يُهْلِكَنِي أَنَا وَٱبْنِي مَعًا مِنْ نَصِيبِ ٱللهِ. ١٦ 16
೧೬ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’
فَقَالَتْ جَارِيَتُكَ: لِيَكُنْ كَلَامُ سَيِّدِي ٱلْمَلِكِ عَزَاءً، لِأَنَّهُ سَيِّدِي ٱلْمَلِكُ إِنَّمَا هُوَ كَمَلَاكِ ٱللهِ لِفَهْمِ ٱلْخَيْرِ وَٱلشَّرِّ، وَٱلرَّبُّ إِلَهُكَ يَكُونُ مَعَكَ». ١٧ 17
೧೭ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.
فَأَجَابَ ٱلْمَلِكُ وَقَالَ لِلْمَرْأَةِ: «لَا تَكْتُمِي عَنِّي أَمْرًا أَسْأَلُكِ عَنْهُ». فَقَالَتِ ٱلْمَرْأَةُ: «لِيَتَكَلَّمْ سَيِّدِي ٱلْمَلِكُ». ١٨ 18
೧೮ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು” ಎಂದನು. ಆಗ ಆಕೆಯು, “ಅರಸನ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟಳು.
فَقَالَ ٱلْمَلِكُ: «هَلْ يَدُ يُوآبَ مَعَكِ فِي هَذَا كُلِّهِ؟» فَأَجَابَتِ ٱلْمَرْأَةُ وَقَالَتْ: «حَيَّةٌ هِيَ نَفْسُكَ يَا سَيِّدِي ٱلْمَلِكَ، لَا يُحَادُ يَمِينًا أَوْ يَسَارًا عَنْ كُلِّ مَا تَكَلَّمَ بِهِ سَيِّدِي ٱلْمَلِكُ، لِأَنَّ عَبْدَكَ يُوآبَ هُوَ أَوْصَانِي، وَهُوَ وَضَعَ فِي فَمِ جَارِيَتِكَ كُلَّ هَذَا ٱلْكَلَامِ. ١٩ 19
೧೯ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.
لِأَجْلِ تَحْوِيلِ وَجْهِ ٱلْكَلَامِ فَعَلَ عَبْدُكَ يُوآبُ هَذَا ٱلْأَمْرَ، وَسَيِّدِي حَكِيمٌ كَحِكْمَةِ مَلَاكِ ٱللهِ لِيَعْلَمَ كُلَّ مَا فِي ٱلْأَرْضِ». ٢٠ 20
೨೦ಅಬ್ಷಾಲೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು” ಎಂದು ಉತ್ತರಕೊಟ್ಟಳು.
فَقَالَ ٱلْمَلِكُ لِيُوآبَ: «هَأَنَذَا قَدْ فَعَلْتُ هَذَا ٱلْأَمْرَ، فَٱذْهَبْ رُدَّ ٱلْفَتَى أَبْشَالُومَ». ٢١ 21
೨೧ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ, ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರೆದುಕೊಂಡು ಬಾ” ಅಂದನು.
فَسَقَطَ يُوآبُ عَلَى وَجْهِهِ إِلَى ٱلْأَرْضِ وَسَجَدَ وَبَارَكَ ٱلْمَلِكَ، وَقَالَ يُوآبُ: «ٱلْيَوْمَ عَلِمَ عَبْدُكَ أَنِّي قَدْ وَجَدْتُ نِعْمَةً فِي عَيْنَيْكَ يَا سَيِّدِي ٱلْمَلِكَ، إِذْ فَعَلَ ٱلْمَلِكُ قَوْلَ عَبْدِهِ». ٢٢ 22
೨೨ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.
ثُمَّ قَامَ يُوآبُ وَذَهَبَ إِلَى جَشُورَ وَأَتَى بِأَبْشَالُومَ إِلَى أُورُشَلِيمَ. ٢٣ 23
೨೩ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.
فَقَالَ ٱلْمَلِكُ: «لِيَنْصَرِفْ إِلَى بَيْتِهِ وَلَا يَرَ وَجْهِي». فَٱنْصَرَفَ أَبْشَالُومُ إِلَى بَيْتِهِ وَلَمْ يَرَ وَجْهَ ٱلْمَلِكِ. ٢٤ 24
೨೪ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು” ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.
وَلَمْ يَكُنْ فِي كُلِّ إِسْرَائِيلَ رَجُلٌ جَمِيلٌ وَمَمْدُوحٌ جِدًّا كَأَبْشَالُومَ، مِنْ بَاطِنِ قَدَمِهِ حَتَّى هَامَتِهِ لَمْ يَكُنْ فِيهِ عَيْبٌ. ٢٥ 25
೨೫ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.
وَعِنْدَ حَلْقِهِ رَأْسَهُ، إِذْ كَانَ يَحْلِقُهُ فِي آخِرِ كُلِّ سَنَةٍ، لِأَنَّهُ كَانَ يَثْقُلُ عَلَيْهِ فَيَحْلِقُهُ، كَانَ يَزِنُ شَعْرُ رَأْسِهِ مِئَتَيْ شَاقِلٍ بِوَزْنِ ٱلْمَلِكِ. ٢٦ 26
೨೬ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು.
وَوُلِدَ لِأَبْشَالُومَ ثَلَاثَةُ بَنِينَ وَبِنْتٌ وَاحِدَةٌ ٱسْمُهَا ثَامَارُ، وَكَانَتِ ٱمْرَأَةً جَمِيلَةَ ٱلْمَنْظَرِ. ٢٧ 27
೨೭ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು.
وَأَقَامَ أَبْشَالُومُ فِي أُورُشَلِيمَ سَنَتَيْنِ وَلَمْ يَرَ وَجْهَ ٱلْمَلِكِ. ٢٨ 28
೨೮ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.
فَأَرْسَلَ أَبْشَالُومُ إِلَى يُوآبَ لِيُرْسِلَهُ إِلَى ٱلْمَلِكِ، فَلَمْ يَشَأْ أَنْ يَأْتِيَ إِلَيْهِ. ثُمَّ أَرْسَلَ أَيْضًا ثَانِيَةً، فَلَمْ يَشَأْ أَنْ يَأْتِيَ. ٢٩ 29
೨೯ಒಂದು ದಿನ ಅವನು ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.
فَقَالَ لِعَبِيدِهِ: «ٱنْظُرُوا. حَقْلَةَ يُوآبَ بِجَانِبِي، وَلَهُ هُنَاكَ شَعِيرٌ. ٱذْهَبُوا وَأَحْرِقُوهُ بِٱلنَّارِ». فَأَحْرَقَ عَبِيدُ أَبْشَالُومَ ٱلْحَقْلَةَ بِٱلنَّارِ. ٣٠ 30
೩೦ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
فَقَامَ يُوآبُ وَجَاءَ إِلَى أَبْشَالُومَ إِلَى ٱلْبَيْتِ وَقَالَ لَهُ: «لِمَاذَا أَحْرَقَ عَبِيدُكَ حَقْلَتِي بِٱلنَّارِ؟» ٣١ 31
೩೧ಆಗ ಯೋವಾಬನು ಅಬ್ಷಾಲೋಮನ ಮನೆಗೆ ಹೋಗಿ, “ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿ ಹಚ್ಚಿದ್ದೇಕೆ?” ಎಂದು ಅವನನ್ನು ಕೇಳಿದನು.
فَقَالَ أَبْشَالُومُ لِيُوآبَ: «هَأَنَذَا قَدْ أَرْسَلْتُ إِلَيْكَ قَائِلًا: تَعَالَ إِلَى هُنَا فَأُرْسِلَكَ إِلَى ٱلْمَلِكِ تَقُولُ: لِمَاذَا جِئْتُ مِنْ جَشُورَ؟ خَيْرٌ لِي لَوْ كُنْتُ بَاقِيًا هُنَاكَ. فَٱلْآنَ إِنِّي أَرَى وَجْهَ ٱلْمَلِكِ، وَإِنْ وُجِدَ فِيَّ إِثْمٌ فَلْيَقْتُلْنِي». ٣٢ 32
೩೨ಅದಕ್ಕೆ ಅಬ್ಷಾಲೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು.
فَجَاءَ يُوآبُ إِلَى ٱلْمَلِكِ وَأَخْبَرَهُ. وَدَعَا أَبْشَالُومَ، فَأَتَى إِلَى ٱلْمَلِكِ وَسَجَدَ عَلَى وَجْهِهِ إِلَى ٱلْأَرْضِ قُدَّامَ ٱلْمَلِكِ، فَقَبَّلَ ٱلْمَلِكُ أَبْشَالُومَ. ٣٣ 33
೩೩ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೇಕಳುಹಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅರಸನು ಅವನನ್ನು ಮುದ್ದಿಟ್ಟನು.

< صَمُوئِيلَ ٱلثَّانِي 14 >