< صَمُوئِيلَ ٱلثَّانِي 15 >

وَكَانَ بَعْدَ ذَلِكَ أَنَّ أَبْشَالُومَ ٱتَّخَذَ مَرْكَبَةً وَخَيْلًا وَخَمْسِينَ رَجُلًا يَجْرُونَ قُدَّامَهُ. ١ 1
ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.
وَكَانَ أَبْشَالُومُ يُبَكِّرُ وَيَقِفُ بِجَانِبِ طَرِيقِ ٱلْبَابِ، وَكُلُّ صَاحِبِ دَعْوَى آتٍ إِلَى ٱلْمَلِكِ لِأَجْلِ ٱلْحُكْمِ، كَانَ أَبْشَالُومُ يَدْعُوهُ إِلَيْهِ وَيَقُولُ: «مِنْ أَيَّةِ مَدِينَةٍ أَنْتَ؟». فَيَقُولُ: «مِنْ أَحَدِ أَسْبَاطِ إِسْرَائِيلَ عَبْدُكَ». ٢ 2
ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.
فَيَقُولُ أَبْشَالُومُ لَهُ: «ٱنْظُرْ. أُمُورُكَ صَالِحَةٌ وَمُسْتَقِيمَةٌ، وَلَكِنْ لَيْسَ مَنْ يَسْمَعُ لَكَ مِنْ قِبَلِ ٱلْمَلِكِ». ٣ 3
ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.
ثُمَّ يَقُولُ أَبْشَالُومُ: «مَنْ يَجْعَلُنِي قَاضِيًا فِي ٱلْأَرْضِ فَيَأْتِيَ إِلَيَّ كُلُّ إِنْسَانٍ لَهُ خُصُومَةٌ وَدَعْوَى فَأُنْصِفَهُ؟». ٤ 4
ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.
وَكَانَ إِذَا تَقَدَّمَ أَحَدٌ لِيَسْجُدَ لَهُ، يَمُدُّ يَدَهُ وَيُمْسِكُهُ وَيُقَبِّلُهُ. ٥ 5
ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.
وَكَانَ أَبْشَالُومُ يَفْعَلُ مِثْلَ هَذَا ٱلْأَمْرِ لِجَمِيعِ إِسْرَائِيلَ ٱلَّذِينَ كَانُوا يَأْتُونَ لِأَجْلِ ٱلْحُكْمِ إِلَى ٱلْمَلِكِ، فَٱسْتَرَقَّ أَبْشَالُومُ قُلُوبَ رِجَالِ إِسْرَائِيلَ. ٦ 6
ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.
وَفِي نِهَايَةِ أَرْبَعِينَ سَنَةً قَالَ أَبْشَالُومُ لِلْمَلِكِ: «دَعْنِي فَأَذْهَبَ وَأُوفِيَ نَذْرِي ٱلَّذِي نَذَرْتُهُ لِلرَّبِّ فِي حَبْرُونَ، ٧ 7
ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.
لِأَنَّ عَبْدَكَ نَذَرَ نَذْرًا عِنْدَ سُكْنَايَ فِي جَشُورَ فِي أَرَامَ قَائِلًا: إِنْ أَرْجَعَنِي ٱلرَّبُّ إِلَى أُورُشَلِيمَ فَإِنِّي أَعْبُدُ ٱلرَّبَّ». ٨ 8
ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.
فَقَالَ لَهُ ٱلْمَلِكُ: «ٱذْهَبْ بِسَلَامٍ». فَقَامَ وَذَهَبَ إِلَى حَبْرُونَ. ٩ 9
ಆಗ ಅರಸನು, “ಹೋಗಿಬಾ, ನಿನಗೆ ಶುಭವಾಗಲಿ” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.
وَأَرْسَلَ أَبْشَالُومُ جَوَاسِيسَ فِي جَمِيعِ أَسْبَاطِ إِسْرَائِيلَ قَائِلًا: «إِذَا سَمِعْتُمْ صَوْتَ ٱلْبُوقِ، فَقُولُوا: قَدْ مَلَكَ أَبْشَالُومُ فِي حَبْرُونَ». ١٠ 10
೧೦ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.
وَٱنْطَلَقَ مَعَ أَبْشَالُومَ مِئَتَا رَجُلٍ مِنْ أُورُشَلِيمَ قَدْ دُعُوا وَذَهَبُوا بِبَسَاطَةٍ، وَلَمْ يَكُونُوا يَعْلَمُونَ شَيْئًا. ١١ 11
೧೧ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.
وَأَرْسَلَ أَبْشَالُومُ إِلَى أَخِيتُوفَلَ ٱلْجِيلُونِيِّ مُشِيرِ دَاوُدَ مِنْ مَدِينَتِهِ جِيلُوهَ إِذْ كَانَ يَذْبَحُ ذَبَائِحَ. وَكَانَتِ ٱلْفِتْنَةُ شَدِيدَةً وَكَانَ ٱلشَّعْبُ لَا يَزَالُ يَتَزَايَدُ مَعَ أَبْشَالُومَ. ١٢ 12
೧೨ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.
فَأَتَى مُخَبِّرٌ إِلَى دَاوُدَ قَائِلًا: «إِنَّ قُلُوبَ رِجَالِ إِسْرَائِيلَ صَارَتْ وَرَاءَ أَبْشَالُومَ». ١٣ 13
೧೩ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.
فَقَالَ دَاوُدُ لِجَمِيعِ عَبِيدِهِ ٱلَّذِينَ مَعَهُ فِي أُورُشَلِيمَ: «قُومُوا بِنَا نَهْرُبُ، لِأَنَّهُ لَيْسَ لَنَا نَجَاةٌ مِنْ وَجْهِ أَبْشَالُومَ. أَسْرِعُوا لِلذَّهَابِ لِئَلَّا يُبَادِرَ وَيُدْرِكَنَا وَيُنْزِلَ بِنَا ٱلشَّرَّ وَيَضْرِبَ ٱلْمَدِينَةَ بِحَدِّ ٱلسَّيْفِ». ١٤ 14
೧೪ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು.
فَقَالَ عَبِيدُ ٱلْمَلِكِ لِلْمَلِكِ: «حَسَبَ كُلِّ مَا يَخْتَارُهُ سَيِّدُنَا ٱلْمَلِكُ نَحْنُ عَبِيدُهُ». ١٥ 15
೧೫ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು.
فَخَرَجَ ٱلْمَلِكُ وَجَمِيعُ بَيْتِهِ وَرَاءَهُ. وَتَرَكَ ٱلْمَلِكُ عَشَرَ نِسَاءٍ سَرَارِيَّ لِحِفْظِ ٱلْبَيْتِ. ١٦ 16
೧೬ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.
وَخَرَجَ ٱلْمَلِكُ وَكُلُّ ٱلشَّعْبِ فِي أَثَرِهِ وَوَقَفُوا عِنْدَ ٱلْبَيْتِ ٱلْأَبْعَدِ. ١٧ 17
೧೭ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.
وَجَمِيعُ عَبِيدِهِ كَانُوا يَعْبُرُونَ بَيْنَ يَدَيْهِ مَعَ جَمِيعِ ٱلْجَلَّادِينَ وَٱلسُّعَاةِ وَجَمِيعُ ٱلْجَتِّيِّينَ، سِتُّ مِئَةِ رَجُلٍ أَتَوْا وَرَاءَهُ مِنْ جَتَّ، وَكَانُوا يَعْبُرُونَ بَيْنَ يَدَيِ ٱلْمَلِكِ. ١٨ 18
೧೮ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.
فَقَالَ ٱلْمَلِكُ لِإِتَّايَ ٱلْجَتِّيِّ: «لِمَاذَا تَذْهَبُ أَنْتَ أَيْضًا مَعَنَا؟ اِرْجِعْ وَأَقِمْ مَعَ ٱلْمَلِكِ لِأَنَّكَ غَرِيبٌ وَمَنْفِيٌّ أَيْضًا مِنْ وَطَنِكَ. ١٩ 19
೧೯ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.
أَمْسًا جِئْتَ وَٱلْيَوْمَ أُتِيهُكَ بِٱلذَّهَابِ مَعَنَا وَأَنَا أَنْطَلِقُ إِلَى حَيْثُ أَنْطَلِقُ؟ اِرْجِعْ وَرَجِّعْ إِخْوَتَكَ. ٱلرَّحْمَةُ وَٱلْحَقُّ مَعَكَ». ٢٠ 20
೨೦ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
فَأَجَابَ إِتَّايُ ٱلْمَلِكَ وَقَالَ: «حَيٌّ هُوَ ٱلرَّبُّ وَحَيٌّ سَيِّدِي ٱلْمَلِكُ، إِنَّهُ حَيْثُمَا كَانَ سَيِّدِي ٱلْمَلِكُ، إِنْ كَانَ لِلْمَوْتِ أَوْ لِلْحَيَاةِ، فَهُنَاكَ يَكُونُ عَبْدُكَ أَيْضًا». ٢١ 21
೨೧ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.
فَقَالَ دَاوُدُ لِإِتَّايَ: «ٱذْهَبْ وَٱعْبُرْ». فَعَبَرَ إِتَّايُ ٱلْجَتِّيُّ وَجَمِيعُ رِجَالِهِ وَجَمِيعُ ٱلْأَطْفَالِ ٱلَّذِينَ مَعَهُ. ٢٢ 22
೨೨ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.
وَكَانَتْ جَمِيعُ ٱلْأَرْضِ تَبْكِي بِصَوْتٍ عَظِيمٍ، وَجَمِيعُ ٱلشَّعْبِ يَعْبُرُونَ. وَعَبَرَ ٱلْمَلِكُ فِي وَادِي قَدْرُونَ، وَعَبَرَ جَمِيعُ ٱلشَّعْبِ نَحْوَ طَرِيقِ ٱلْبَرِّيَّةِ. ٢٣ 23
೨೩ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.
وَإِذَا بِصَادُوقَ أَيْضًا وَجَمِيعُ ٱللَّاوِيِّينَ مَعَهُ يَحْمِلُونَ تَابُوتَ عَهْدِ ٱللهِ. فَوَضَعُوا تَابُوتَ ٱللهِ، وَصَعِدَ أَبِيَاثَارُ حَتَّى ٱنْتَهَى جَمِيعُ ٱلشَّعْبِ مِنَ ٱلْعُبُورِ مِنَ ٱلْمَدِينَةِ. ٢٤ 24
೨೪ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.
فَقَالَ ٱلْمَلِكُ لِصَادُوقَ: «أَرْجِعْ تَابُوتَ ٱللهِ إِلَى ٱلْمَدِينَةِ، فَإِنْ وَجَدْتُ نِعْمَةً فِي عَيْنَيِ ٱلرَّبِّ فَإِنَّهُ يُرْجِعُنِي وَيُرِينِي إِيَّاهُ وَمَسْكَنَهُ. ٢٥ 25
೨೫ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.
وَإِنْ قَالَ هَكَذَا: إِنِّي لَمْ أُسَرَّ بِكَ. فَهَأَنَذَا، فَلْيَفْعَلْ بِي حَسَبَمَا يَحْسُنُ فِي عَيْنَيْهِ». ٢٦ 26
೨೬ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು.
ثُمَّ قَالَ ٱلْمَلِكُ لِصَادُوقَ ٱلْكَاهِنِ: «أَأَنْتَ رَاءٍ؟ فَٱرْجِعْ إِلَى ٱلْمَدِينَةِ بِسَلَامٍ أَنْتَ وَأَخِيمَعَصُ ٱبْنُكَ وَيُونَاثَانُ بْنُ أَبِيَاثَارَ. ٱبْنَاكُمَا كِلَاهُمَا مَعَكُمَا. ٢٧ 27
೨೭ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.
ٱنْظُرُوا. أَنِّي أَتَوَانَى فِي سُهُولِ ٱلْبَرِّيَّةِ حَتَّى تَأْتِيَ كَلِمَةٌ مِنْكُمْ لِتَخْبِيرِي». ٢٨ 28
೨೮ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು” ಎಂದು ಹೇಳಿದನು.
فَأَرْجَعَ صَادُوقُ وَأَبِيَاثَارُ تَابُوتَ ٱللهِ إِلَى أُورُشَلِيمَ وَأَقَامَا هُنَاكَ. ٢٩ 29
೨೯ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.
وَأَمَّا دَاوُدُ فَصَعِدَ فِي مِصْعَدِ جَبَلِ ٱلزَّيْتُونِ. كَانَ يَصْعَدُ بَاكِيًا وَرَأْسُهُ مُغَطَّى وَيَمْشِي حَافِيًا، وَجَمِيعُ ٱلشَّعْبِ ٱلَّذِينَ مَعَهُ غَطَّوْا كُلُّ وَاحِدٍ رَأْسَهُ، وَكَانُوا يَصْعَدُونَ وَهُمْ يَبْكُونَ. ٣٠ 30
೩೦ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.
وَأُخْبِرَ دَاوُدُ وَقِيلَ لَهُ: «إِنَّ أَخِيتُوفَلَ بَيْنَ ٱلْفَاتِنِينَ مَعَ أَبْشَالُومَ» فَقَالَ دَاوُدُ: «حَمِّقْ يَارَبُّ مَشُورَةَ أَخِيتُوفَلَ». ٣١ 31
೩೧ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.
وَلَمَّا وَصَلَ دَاوُدُ إِلَى ٱلْقِمَّةِ حَيْثُ سَجَدَ لِلهِ، إِذَا بِحُوشَايَ ٱلْأَرْكِيِّ قَدْ لَقِيَهُ مُمَزَّقَ ٱلثَّوْبِ وَٱلتُّرَابُ عَلَى رَأْسِهِ. ٣٢ 32
೩೨ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.
فَقَالَ لَهُ دَاوُدُ: «إِذَا عَبَرْتَ مَعِي تَكُونُ عَلَيَّ حِمْلًا. ٣٣ 33
೩೩ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ.
وَلَكِنْ إِذَا رَجَعْتَ إِلَى ٱلْمَدِينَةِ وَقُلْتَ لِأَبْشَالُومَ: أَنَا أَكُونُ عَبْدَكَ أَيُّهَا ٱلْمَلِكُ. أَنَا عَبْدُ أَبِيكَ مُنْذُ زَمَانٍ وَٱلْآنَ أَنَا عَبْدُكَ. فَإِنَّكَ تُبْطِلُ لِي مَشُورَةَ أَخِيتُوفَلَ. ٣٤ 34
೩೪ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.
أَلَيْسَ مَعَكَ هُنَاكَ صَادُوقُ وَأَبِيَاثَارُ ٱلْكَاهِنَانِ. فَكُلُّ مَا تَسْمَعُهُ مِنْ بَيْتِ ٱلْمَلِكِ، فَأَخْبِرْ بِهِ صَادُوقَ وَأَبِيَاثَارَ ٱلْكَاهِنَيْنِ. ٣٥ 35
೩೫ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ.
هُوَذَا هُنَاكَ مَعَهُمَا ٱبْنَاهُمَا أَخِيمَعَصُ لِصَادُوقَ وَيُونَاثَانُ لِأَبِيَاثَارَ. فَتُرْسِلُونَ عَلَى أَيْدِيهِمَا إِلَيَّ كُلَّ كَلِمَةٍ تَسْمَعُونَهَا». ٣٦ 36
೩೬ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.
فَأَتَى حُوشَايُ صَاحِبُ دَاوُدَ إِلَى ٱلْمَدِينَةِ، وَأَبْشَالُومُ يَدْخُلُ أُورُشَلِيمَ. ٣٧ 37
೩೭ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.

< صَمُوئِيلَ ٱلثَّانِي 15 >