< صَمُوئِيلَ ٱلثَّانِي 15 >

وَكَانَ بَعْدَ ذَلِكَ أَنَّ أَبْشَالُومَ ٱتَّخَذَ مَرْكَبَةً وَخَيْلًا وَخَمْسِينَ رَجُلًا يَجْرُونَ قُدَّامَهُ. ١ 1
ಇದರ ತರುವಾಯ ಅಬ್ಷಾಲೋಮನು ತನಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
وَكَانَ أَبْشَالُومُ يُبَكِّرُ وَيَقِفُ بِجَانِبِ طَرِيقِ ٱلْبَابِ، وَكُلُّ صَاحِبِ دَعْوَى آتٍ إِلَى ٱلْمَلِكِ لِأَجْلِ ٱلْحُكْمِ، كَانَ أَبْشَالُومُ يَدْعُوهُ إِلَيْهِ وَيَقُولُ: «مِنْ أَيَّةِ مَدِينَةٍ أَنْتَ؟». فَيَقُولُ: «مِنْ أَحَدِ أَسْبَاطِ إِسْرَائِيلَ عَبْدُكَ». ٢ 2
ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಿಲ ಬಳಿಯಲ್ಲಿ ನಿಂತುಕೊಂಡು, ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು, “ನೀನು ಯಾವ ಪಟ್ಟಣದವನು?” ಎಂದು ಕೇಳಿದನು. ಅದಕ್ಕವನು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರ ಕೊಡುವನು.
فَيَقُولُ أَبْشَالُومُ لَهُ: «ٱنْظُرْ. أُمُورُكَ صَالِحَةٌ وَمُسْتَقِيمَةٌ، وَلَكِنْ لَيْسَ مَنْ يَسْمَعُ لَكَ مِنْ قِبَلِ ٱلْمَلِكِ». ٣ 3
ಆಗ ಅಬ್ಷಾಲೋಮನು ಅವನಿಗೆ, “ನೋಡು ನಿನ್ನ ಕಾರ್ಯವು ಒಳ್ಳೆಯದೂ, ನ್ಯಾಯವಾದದದ್ದೂ ಆಗಿದೆ. ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವುದಕ್ಕೆ ಯಾವನೂ ಇಲ್ಲ,” ಅನ್ನುವನು.
ثُمَّ يَقُولُ أَبْشَالُومُ: «مَنْ يَجْعَلُنِي قَاضِيًا فِي ٱلْأَرْضِ فَيَأْتِيَ إِلَيَّ كُلُّ إِنْسَانٍ لَهُ خُصُومَةٌ وَدَعْوَى فَأُنْصِفَهُ؟». ٤ 4
ಇದಲ್ಲದೆ ಅಬ್ಷಾಲೋಮನು, “ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ನೇಮಕವಾಗಿದ್ದರೆ ಎಷ್ಟೋ ಒಳ್ಳೆಯದು. ಆಗ ವ್ಯಾಜ್ಯವಾದರೂ, ನ್ಯಾಯವಿಚಾರಣೆಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ, ನಾನು ಅವನಿಗೆ ನೀತಿಯಿಂದ ನ್ಯಾಯತೀರಿಸುವೆನು,” ಅನ್ನುವನು.
وَكَانَ إِذَا تَقَدَّمَ أَحَدٌ لِيَسْجُدَ لَهُ، يَمُدُّ يَدَهُ وَيُمْسِكُهُ وَيُقَبِّلُهُ. ٥ 5
ಯಾವನಾದರೂ ಅವನಿಗೆ ವಂದಿಸುವುದಕ್ಕೆ ಬಂದರೆ, ಕೂಡಲೆ ತನ್ನ ಕೈಯನ್ನು ಚಾಚಿ ಅಂಥವನನ್ನು ಎತ್ತಿ ಮುದ್ದಿಡುತ್ತಿದ್ದನು.
وَكَانَ أَبْشَالُومُ يَفْعَلُ مِثْلَ هَذَا ٱلْأَمْرِ لِجَمِيعِ إِسْرَائِيلَ ٱلَّذِينَ كَانُوا يَأْتُونَ لِأَجْلِ ٱلْحُكْمِ إِلَى ٱلْمَلِكِ، فَٱسْتَرَقَّ أَبْشَالُومُ قُلُوبَ رِجَالِ إِسْرَائِيلَ. ٦ 6
ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲರೆಲ್ಲರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲರ ಹೃದಯಗಳನ್ನು ಗೆದ್ದುಕೊಂಡನು.
وَفِي نِهَايَةِ أَرْبَعِينَ سَنَةً قَالَ أَبْشَالُومُ لِلْمَلِكِ: «دَعْنِي فَأَذْهَبَ وَأُوفِيَ نَذْرِي ٱلَّذِي نَذَرْتُهُ لِلرَّبِّ فِي حَبْرُونَ، ٧ 7
ನಾಲ್ಕು ವರ್ಷಗಳಾದ ತರುವಾಯ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವ ದೇವರಿಗೆ ಮಾಡಿಕೊಂಡಿದ್ದ ನನ್ನ ಹರಕೆಯನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವುದಕ್ಕೆ ಅಪ್ಪಣೆಕೊಡಬೇಕು.
لِأَنَّ عَبْدَكَ نَذَرَ نَذْرًا عِنْدَ سُكْنَايَ فِي جَشُورَ فِي أَرَامَ قَائِلًا: إِنْ أَرْجَعَنِي ٱلرَّبُّ إِلَى أُورُشَلِيمَ فَإِنِّي أَعْبُدُ ٱلرَّبَّ». ٨ 8
ಏಕೆಂದರೆ, ‘ಯೆಹೋವ ದೇವರು ನನ್ನನ್ನು ಯೆರೂಸಲೇಮಿಗೆ ತಿರುಗಿ ನಿಜವಾಗಿಯೂ ಬರಮಾಡಿದರೆ, ನಾನು ಯೆಹೋವ ದೇವರನ್ನು ಸೇವಿಸುವೆನು,’ ಎಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಹರಕೆ ಮಾಡಿಕೊಂಡಿದ್ದನು,” ಎಂದನು.
فَقَالَ لَهُ ٱلْمَلِكُ: «ٱذْهَبْ بِسَلَامٍ». فَقَامَ وَذَهَبَ إِلَى حَبْرُونَ. ٩ 9
ಅರಸನು ಅವನಿಗೆ, “ಸಮಾಧಾನವಾಗಿ ಹೋಗು,” ಎಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.
وَأَرْسَلَ أَبْشَالُومُ جَوَاسِيسَ فِي جَمِيعِ أَسْبَاطِ إِسْرَائِيلَ قَائِلًا: «إِذَا سَمِعْتُمْ صَوْتَ ٱلْبُوقِ، فَقُولُوا: قَدْ مَلَكَ أَبْشَالُومُ فِي حَبْرُونَ». ١٠ 10
ಅಬ್ಷಾಲೋಮನು ಇಸ್ರಾಯೇಲಿನ ಸಮಸ್ತ ಗೋತ್ರಗಳಿಗೆ ಗೂಢಚಾರರನ್ನು ಕಳುಹಿಸಿ ಅವರಿಗೆ, “ನೀವು ತುತೂರಿಯ ಶಬ್ದ ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಘೋಷಿಸಿರಿ’ ಎಂದು ಹೇಳಿರಿ,” ಎಂದನು.
وَٱنْطَلَقَ مَعَ أَبْشَالُومَ مِئَتَا رَجُلٍ مِنْ أُورُشَلِيمَ قَدْ دُعُوا وَذَهَبُوا بِبَسَاطَةٍ، وَلَمْ يَكُونُوا يَعْلَمُونَ شَيْئًا. ١١ 11
ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲಾದ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ಒಳಸಂಚನ್ನು ಏನೂ ತಿಳಿಯದೆ ಯಥಾರ್ಥ ಮನಸ್ಸುಳ್ಳವರಾಗಿದ್ದರು.
وَأَرْسَلَ أَبْشَالُومُ إِلَى أَخِيتُوفَلَ ٱلْجِيلُونِيِّ مُشِيرِ دَاوُدَ مِنْ مَدِينَتِهِ جِيلُوهَ إِذْ كَانَ يَذْبَحُ ذَبَائِحَ. وَكَانَتِ ٱلْفِتْنَةُ شَدِيدَةً وَكَانَ ٱلشَّعْبُ لَا يَزَالُ يَتَزَايَدُ مَعَ أَبْشَالُومَ. ١٢ 12
ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.
فَأَتَى مُخَبِّرٌ إِلَى دَاوُدَ قَائِلًا: «إِنَّ قُلُوبَ رِجَالِ إِسْرَائِيلَ صَارَتْ وَرَاءَ أَبْشَالُومَ». ١٣ 13
ದಾವೀದನ ಬಳಿಗೆ ಒಬ್ಬ ದೂತನು ಬಂದು, “ಇಸ್ರಾಯೇಲರ ಹೃದಯಗಳು ಅಬ್ಷಾಲೋಮನ ಕಡೆ ತಿರುಗಿಕೊಂಡಿವೆ,” ಎಂದನು.
فَقَالَ دَاوُدُ لِجَمِيعِ عَبِيدِهِ ٱلَّذِينَ مَعَهُ فِي أُورُشَلِيمَ: «قُومُوا بِنَا نَهْرُبُ، لِأَنَّهُ لَيْسَ لَنَا نَجَاةٌ مِنْ وَجْهِ أَبْشَالُومَ. أَسْرِعُوا لِلذَّهَابِ لِئَلَّا يُبَادِرَ وَيُدْرِكَنَا وَيُنْزِلَ بِنَا ٱلشَّرَّ وَيَضْرِبَ ٱلْمَدِينَةَ بِحَدِّ ٱلسَّيْفِ». ١٤ 14
ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಸಮಸ್ತ ಸೇವಕರಿಗೆ, “ಏಳಿರಿ, ನಾವು ಓಡಿಹೋಗೋಣ. ಇಲ್ಲದಿದ್ದರೆ ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಂಡು ಹೋಗಲಾರೆವು. ಅವನು ಫಕ್ಕನೆ ನಮ್ಮನ್ನು ಹಿಡಿದು, ನಮ್ಮ ಮೇಲೆ ಕೇಡನ್ನು ಬರಮಾಡಿ, ಪಟ್ಟಣವನ್ನು ಖಡ್ಗದಿಂದ ಹೊಡೆಯದ ಹಾಗೆ ಹೊರಟು ಹೋಗುವುದಕ್ಕೆ ತ್ವರೆಮಾಡಿರಿ,” ಎಂದನು.
فَقَالَ عَبِيدُ ٱلْمَلِكِ لِلْمَلِكِ: «حَسَبَ كُلِّ مَا يَخْتَارُهُ سَيِّدُنَا ٱلْمَلِكُ نَحْنُ عَبِيدُهُ». ١٥ 15
ಆಗ ಅರಸನ ಸೇವಕರು ಅರಸನಿಗೆ, “ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ, ಅದನ್ನು ಮಾಡುವುದಕ್ಕೆ ನಿನ್ನ ಸೇವಕರು ಸಿದ್ಧವಾಗಿದ್ದೇವೆ,” ಎಂದರು.
فَخَرَجَ ٱلْمَلِكُ وَجَمِيعُ بَيْتِهِ وَرَاءَهُ. وَتَرَكَ ٱلْمَلِكُ عَشَرَ نِسَاءٍ سَرَارِيَّ لِحِفْظِ ٱلْبَيْتِ. ١٦ 16
ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು, ಅವನೂ, ಅವನ ಮನೆಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.
وَخَرَجَ ٱلْمَلِكُ وَكُلُّ ٱلشَّعْبِ فِي أَثَرِهِ وَوَقَفُوا عِنْدَ ٱلْبَيْتِ ٱلْأَبْعَدِ. ١٧ 17
ಅರಸನೂ, ಅವನ ಹಿಂದೆ ಸಮಸ್ತ ಜನರೂ ಹೊರಟುಹೋಗಿ ಪಟ್ಟಣದ ಕಡೆಯ ಮನೆಯ ಬಳಿ ಬಂದು ಅಲ್ಲಿ ನಿಂತರು.
وَجَمِيعُ عَبِيدِهِ كَانُوا يَعْبُرُونَ بَيْنَ يَدَيْهِ مَعَ جَمِيعِ ٱلْجَلَّادِينَ وَٱلسُّعَاةِ وَجَمِيعُ ٱلْجَتِّيِّينَ، سِتُّ مِئَةِ رَجُلٍ أَتَوْا وَرَاءَهُ مِنْ جَتَّ، وَكَانُوا يَعْبُرُونَ بَيْنَ يَدَيِ ٱلْمَلِكِ. ١٨ 18
ಅವನ ಸಮಸ್ತ ಸೇವಕರೂ, ಸಮಸ್ತ ಕೆರೇತ್ಯರೂ, ಸಮಸ್ತ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತೀಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
فَقَالَ ٱلْمَلِكُ لِإِتَّايَ ٱلْجَتِّيِّ: «لِمَاذَا تَذْهَبُ أَنْتَ أَيْضًا مَعَنَا؟ اِرْجِعْ وَأَقِمْ مَعَ ٱلْمَلِكِ لِأَنَّكَ غَرِيبٌ وَمَنْفِيٌّ أَيْضًا مِنْ وَطَنِكَ. ١٩ 19
ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ಕಂಡು, “ನೀನು ನಮ್ಮ ಸಂಗಡ ಬರುವುದು ಏಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ, ಅರಸನ ಸಂಗಡ ಇರು. ಏಕೆಂದರೆ ನೀನು ವಿದೇಶಿ. ನಿನ್ನ ದೇಶದಿಂದ ಸೆರೆಯಾಳಾಗಿ ಬಂದವನು.
أَمْسًا جِئْتَ وَٱلْيَوْمَ أُتِيهُكَ بِٱلذَّهَابِ مَعَنَا وَأَنَا أَنْطَلِقُ إِلَى حَيْثُ أَنْطَلِقُ؟ اِرْجِعْ وَرَجِّعْ إِخْوَتَكَ. ٱلرَّحْمَةُ وَٱلْحَقُّ مَعَكَ». ٢٠ 20
ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು.
فَأَجَابَ إِتَّايُ ٱلْمَلِكَ وَقَالَ: «حَيٌّ هُوَ ٱلرَّبُّ وَحَيٌّ سَيِّدِي ٱلْمَلِكُ، إِنَّهُ حَيْثُمَا كَانَ سَيِّدِي ٱلْمَلِكُ، إِنْ كَانَ لِلْمَوْتِ أَوْ لِلْحَيَاةِ، فَهُنَاكَ يَكُونُ عَبْدُكَ أَيْضًا». ٢١ 21
ಆದರೆ ಇತ್ತೈಯೂ ಅರಸನಿಗೆ ಉತ್ತರವಾಗಿ, “ಯೆಹೋವ ದೇವರ ಜೀವದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ, ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ, ಸಾವಾದರೂ ಬದುಕಾದರೂ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು,” ಎಂದನು.
فَقَالَ دَاوُدُ لِإِتَّايَ: «ٱذْهَبْ وَٱعْبُرْ». فَعَبَرَ إِتَّايُ ٱلْجَتِّيُّ وَجَمِيعُ رِجَالِهِ وَجَمِيعُ ٱلْأَطْفَالِ ٱلَّذِينَ مَعَهُ. ٢٢ 22
ಆಗ ದಾವೀದನು ಇತ್ತೈಗೆ, “ನೀನು ಹೋಗಿ ದಾಟು,” ಎಂದನು. ಆದ್ದರಿಂದ ಗಿತ್ತೀಯನಾದ ಇತ್ತೈಯೂ, ಅವನ ಸಮಸ್ತ ಮನುಷ್ಯರೂ, ಅವನ ಸಂಗಡ ಇರುವ ಸಮಸ್ತ ಚಿಕ್ಕವರೂ ಕೂಡ ದಾಟಿಹೋದರು.
وَكَانَتْ جَمِيعُ ٱلْأَرْضِ تَبْكِي بِصَوْتٍ عَظِيمٍ، وَجَمِيعُ ٱلشَّعْبِ يَعْبُرُونَ. وَعَبَرَ ٱلْمَلِكُ فِي وَادِي قَدْرُونَ، وَعَبَرَ جَمِيعُ ٱلشَّعْبِ نَحْوَ طَرِيقِ ٱلْبَرِّيَّةِ. ٢٣ 23
ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.
وَإِذَا بِصَادُوقَ أَيْضًا وَجَمِيعُ ٱللَّاوِيِّينَ مَعَهُ يَحْمِلُونَ تَابُوتَ عَهْدِ ٱللهِ. فَوَضَعُوا تَابُوتَ ٱللهِ، وَصَعِدَ أَبِيَاثَارُ حَتَّى ٱنْتَهَى جَمِيعُ ٱلشَّعْبِ مِنَ ٱلْعُبُورِ مِنَ ٱلْمَدِينَةِ. ٢٤ 24
ಚಾದೋಕನೂ, ಅವನ ಸಂಗಡ ಇರುವ ಸಮಸ್ತ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಅಬಿಯಾತರನು, ಜನರೆಲ್ಲರು ಪಟ್ಟಣದಿಂದ ದಾಟಿಹೋಗುವವರೆಗೆ ಯಜ್ಞ ಸಮರ್ಪಿಸುತ್ತಾ ಮುಂದೆ ನಡೆಯುತ್ತಿದ್ದನು.
فَقَالَ ٱلْمَلِكُ لِصَادُوقَ: «أَرْجِعْ تَابُوتَ ٱللهِ إِلَى ٱلْمَدِينَةِ، فَإِنْ وَجَدْتُ نِعْمَةً فِي عَيْنَيِ ٱلرَّبِّ فَإِنَّهُ يُرْجِعُنِي وَيُرِينِي إِيَّاهُ وَمَسْكَنَهُ. ٢٥ 25
ಆಗ ಅರಸನು ಚಾದೋಕನಿಗೆ, “ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರುಗಿ ತೆಗೆದುಕೊಂಡು ಹೋಗು. ಯೆಹೋವ ದೇವರ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ, ಅವರು ತಿರುಗಿ ನನ್ನನ್ನು ಬರಮಾಡಿ ಅದನ್ನೂ, ಅದರ ವಾಸಸ್ಥಳವನ್ನೂ ನನಗೆ ತೋರಿಸುವರು.
وَإِنْ قَالَ هَكَذَا: إِنِّي لَمْ أُسَرَّ بِكَ. فَهَأَنَذَا، فَلْيَفْعَلْ بِي حَسَبَمَا يَحْسُنُ فِي عَيْنَيْهِ». ٢٦ 26
ಒಂದು ವೇಳೆ ಅವರು, ‘ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು’ ಹೇಳಿದರೆ ಇಗೋ, ಅವರು ತಮ್ಮ ದೃಷ್ಟಿಗೆ ತೋಚಿದ ಹಾಗೆ ನನಗೆ ಮಾಡಲಿ,” ಎಂದನು.
ثُمَّ قَالَ ٱلْمَلِكُ لِصَادُوقَ ٱلْكَاهِنِ: «أَأَنْتَ رَاءٍ؟ فَٱرْجِعْ إِلَى ٱلْمَدِينَةِ بِسَلَامٍ أَنْتَ وَأَخِيمَعَصُ ٱبْنُكَ وَيُونَاثَانُ بْنُ أَبِيَاثَارَ. ٱبْنَاكُمَا كِلَاهُمَا مَعَكُمَا. ٢٧ 27
ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ.
ٱنْظُرُوا. أَنِّي أَتَوَانَى فِي سُهُولِ ٱلْبَرِّيَّةِ حَتَّى تَأْتِيَ كَلِمَةٌ مِنْكُمْ لِتَخْبِيرِي». ٢٨ 28
ನೋಡು, ನನಗೆ ತಿಳಿಸುವುದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವವರೆಗೂ, ನಾನು ಮರುಭೂಮಿಯ ಬಳಿಯಲ್ಲಿ ಇರುವೆನು,” ಎಂದನು.
فَأَرْجَعَ صَادُوقُ وَأَبِيَاثَارُ تَابُوتَ ٱللهِ إِلَى أُورُشَلِيمَ وَأَقَامَا هُنَاكَ. ٢٩ 29
ಹಾಗೆಯೇ ಚಾದೋಕನೂ, ಅಬಿಯಾತರನೂ ದೇವರ ಮಂಜೂಷವನ್ನು ತಿರುಗಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ ಅಲ್ಲಿದ್ದರು.
وَأَمَّا دَاوُدُ فَصَعِدَ فِي مِصْعَدِ جَبَلِ ٱلزَّيْتُونِ. كَانَ يَصْعَدُ بَاكِيًا وَرَأْسُهُ مُغَطَّى وَيَمْشِي حَافِيًا، وَجَمِيعُ ٱلشَّعْبِ ٱلَّذِينَ مَعَهُ غَطَّوْا كُلُّ وَاحِدٍ رَأْسَهُ، وَكَانُوا يَصْعَدُونَ وَهُمْ يَبْكُونَ. ٣٠ 30
ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.
وَأُخْبِرَ دَاوُدُ وَقِيلَ لَهُ: «إِنَّ أَخِيتُوفَلَ بَيْنَ ٱلْفَاتِنِينَ مَعَ أَبْشَالُومَ» فَقَالَ دَاوُدُ: «حَمِّقْ يَارَبُّ مَشُورَةَ أَخِيتُوفَلَ». ٣١ 31
ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.
وَلَمَّا وَصَلَ دَاوُدُ إِلَى ٱلْقِمَّةِ حَيْثُ سَجَدَ لِلهِ، إِذَا بِحُوشَايَ ٱلْأَرْكِيِّ قَدْ لَقِيَهُ مُمَزَّقَ ٱلثَّوْبِ وَٱلتُّرَابُ عَلَى رَأْسِهِ. ٣٢ 32
ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿದಾಗ, ಅರ್ಕಿಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅವನನ್ನು ಎದುರುಗೊಳ್ಳಲು ಬಂದನು.
فَقَالَ لَهُ دَاوُدُ: «إِذَا عَبَرْتَ مَعِي تَكُونُ عَلَيَّ حِمْلًا. ٣٣ 33
ಆಗ ದಾವೀದನು ಅವನಿಗೆ, “ನೀನು ನನ್ನ ಸಂಗಡ ಬಂದರೆ, ನನಗೆ ಭಾರವಾಗಿರುವೆ.
وَلَكِنْ إِذَا رَجَعْتَ إِلَى ٱلْمَدِينَةِ وَقُلْتَ لِأَبْشَالُومَ: أَنَا أَكُونُ عَبْدَكَ أَيُّهَا ٱلْمَلِكُ. أَنَا عَبْدُ أَبِيكَ مُنْذُ زَمَانٍ وَٱلْآنَ أَنَا عَبْدُكَ. فَإِنَّكَ تُبْطِلُ لِي مَشُورَةَ أَخِيتُوفَلَ. ٣٤ 34
ನೀನು ಪಟ್ಟಣಕ್ಕೆ ತಿರುಗಿ ಹೋಗಿ ಅಬ್ಷಾಲೋಮನಿಗೆ, ‘ಅರಸನೇ, ನಾನು ನಿನ್ನ ಸೇವಕನಾಗಿರುವೆನು. ನಾನು ಇಂದಿನವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ, ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು,’ ಎಂದು ಹೇಳಿದರೆ, ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಬಹುದು.
أَلَيْسَ مَعَكَ هُنَاكَ صَادُوقُ وَأَبِيَاثَارُ ٱلْكَاهِنَانِ. فَكُلُّ مَا تَسْمَعُهُ مِنْ بَيْتِ ٱلْمَلِكِ، فَأَخْبِرْ بِهِ صَادُوقَ وَأَبِيَاثَارَ ٱلْكَاهِنَيْنِ. ٣٥ 35
ಅಲ್ಲಿ ಯಾಜಕರಾದ ಚಾದೋಕನೂ, ಅಬಿಯಾತರನೂ ನಿನ್ನ ಬಳಿಯಲ್ಲಿ ಇಲ್ಲವೋ? ಆದ್ದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ, ಅದನ್ನು ಯಾಜಕರಾದ ಚಾದೋಕನಿಗೂ, ಎಬ್ಯಾತಾರನಿಗೂ ತಿಳಿಸು.
هُوَذَا هُنَاكَ مَعَهُمَا ٱبْنَاهُمَا أَخِيمَعَصُ لِصَادُوقَ وَيُونَاثَانُ لِأَبِيَاثَارَ. فَتُرْسِلُونَ عَلَى أَيْدِيهِمَا إِلَيَّ كُلَّ كَلِمَةٍ تَسْمَعُونَهَا». ٣٦ 36
ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ. ಚಾದೋಕನ ಮಗ ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಕೈಯಿಂದ ನನಗೆ ಹೇಳಿ ಕಳುಹಿಸಬೇಕು,” ಎಂದನು.
فَأَتَى حُوشَايُ صَاحِبُ دَاوُدَ إِلَى ٱلْمَدِينَةِ، وَأَبْشَالُومُ يَدْخُلُ أُورُشَلِيمَ. ٣٧ 37
ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣದೊಳಗೆ ಬಂದನು. ಆಗ ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.

< صَمُوئِيلَ ٱلثَّانِي 15 >