< صَمُوئِيلَ ٱلثَّانِي 17 >

وَقَالَ أَخِيتُوفَلُ لِأَبْشَالُومَ: «دَعْنِي أَنْتَخِبُ ٱثْنَيْ عَشَرَ أَلْفَ رَجُلٍ وَأَقُومُ وَأَسْعَى وَرَاءَ دَاوُدَ هَذِهِ ٱللَّيْلَةَ، ١ 1
ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.
فَآتِيَ عَلَيْهِ وَهُوَ مُتْعَبٌ وَمُرْتَخِي ٱلْيَدَيْنِ فَأُزْعِجُهُ، فَيَهْرُبَ كُلُّ ٱلشَّعْبِ ٱلَّذِي مَعَهُ، وَأَضْرِبُ ٱلْمَلِكَ وَحْدَهُ. ٢ 2
ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.
وَأَرُدَّ جَمِيعَ ٱلشَّعْبِ إِلَيْكَ. كَرُجُوعِ ٱلْجَمِيعِ هُوَ ٱلرَّجُلُ ٱلَّذِي تَطْلُبُهُ، فَيَكُونُ كُلُّ ٱلشَّعْبِ فِي سَلَامٍ». ٣ 3
ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.
فَحَسُنَ ٱلْأَمْرُ فِي عَيْنَيْ أَبْشَالُومَ وَأَعْيُنِ جَمِيعِ شُيُوخِ إِسْرَائِيلَ. ٤ 4
ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.
فَقَالَ أَبْشَالُومُ: «ٱدْعُ أَيْضًا حُوشَايَ ٱلْأَرْكِيَّ فَنَسْمَعَ مَا يَقُولُ هُوَ أَيْضًا». ٥ 5
ಆಮೇಲೆ ಅಬ್ಷಾಲೋಮನು, “ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ” ಎಂದು ಹೇಳಿದನು.
فَلَمَّا جَاءَ حُوشَايُ إِلَى أَبْشَالُومَ، كَلَّمَهُ أَبْشَالُومُ قَائِلًا: «بِمِثْلِ هَذَا ٱلْكَلَامِ تَكَلَّمَ أَخِيتُوفَلُ. أَنَعْمَلُ حَسَبَ كَلَامِهِ أَمْ لَا؟ تَكَلَّمْ أَنْتَ». ٦ 6
ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
فَقَالَ حُوشَايُ لِأَبْشَالُومَ: «لَيْسَتْ حَسَنَةً ٱلْمَشُورَةُ ٱلَّتِي أَشَارَ بِهَا أَخِيتُوفَلُ هَذِهِ ٱلْمَرَّةَ». ٧ 7
ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.
ثُمَ قَالَ حُوشَايُ: «أَنْتَ تَعْلَمُ أَبَاكَ وَرِجَالَهُ أَنَّهُمْ جَبَابِرَةٌ، وَأَنَّ أَنْفُسَهُمْ مُرَّةٌ كَدُبَّةٍ مُثْكِلٍ فِي ٱلْحَقْلِ. وَأَبُوكَ رَجُلُ قِتَالٍ وَلَا يَبِيتُ مَعَ ٱلشَّعْبِ. ٨ 8
ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.
هَا هُوَ ٱلْآنَ مُخْتَبِئٌ فِي إِحْدَى ٱلْحُفَرِ أَوْ أَحَدِ ٱلْأَمَاكِنِ. وَيَكُونُ إِذَا سَقَطَ بَعْضُهُمْ فِي ٱلِٱبْتِدَاءِ أَنَّ ٱلسَّامِعَ يَسْمَعُ فَيَقُولُ: قَدْ صَارَتْ كَسْرَةٌ فِي ٱلشَّعْبِ ٱلَّذِي وَرَاءَ أَبْشَالُومَ. ٩ 9
ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.
أَيْضًا ذُو ٱلْبَأْسِ ٱلَّذِي قَلْبُهُ كَقَلْبِ ٱلْأَسَدِ يَذُوبُ ذَوَبَانًا، لِأَنَّ جَمِيعَ إِسْرَائِيلَ يَعْلَمُونَ أَنَّ أَبَاكَ جَبَّارٌ، وَٱلَّذِينَ مَعَهُ ذَوُو بَأْسٍ. ١٠ 10
೧೦ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.
لِذَلِكَ أُشِيرُ بِأَنْ يَجْتَمِعَ إِلَيْكَ كُلُّ إِسْرَائِيلَ مِنْ دَانَ إِلَى بِئْرِ سَبْعٍ، كَٱلرَّمْلِ ٱلَّذِي عَلَى ٱلْبَحْرِ فِي ٱلْكَثْرَةِ، وَحَضْرَتُكَ سَائِرٌ فِي ٱلْوَسَطِ. ١١ 11
೧೧ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
وَنَأْتِيَ إِلَيْهِ إِلَى أَحَدِ ٱلْأَمَاكِنِ حَيْثُ هُوَ، وَنَنْزِلَ عَلَيْهِ نُزُولَ ٱلطَّلِّ عَلَى ٱلْأَرْضِ، وَلَا يَبْقَى مِنْهُ وَلَا مِنْ جَمِيعِ ٱلرِّجَالِ ٱلَّذِينَ مَعَهُ وَاحِدٌ. ١٢ 12
೧೨ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.
وَإِذَا ٱنْحَازَ إِلَى مَدِينَةٍ، يَحْمِلُ جَمِيعُ إِسْرَائِيلَ إِلَى تِلْكَ ٱلْمَدِينَةِ حِبَالًا، فَنَجُرُّهَا إِلَى ٱلْوَادِي حَتَّى لَا تَبْقَى هُنَاكَ وَلَا حَصَاةٌ». ١٣ 13
೧೩ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.
فَقَالَ أَبْشَالُومُ وَكُلُّ رِجَالِ إِسْرَائِيلَ: «إِنَّ مَشُورَةَ حُوشَايَ ٱلْأَرْكِيِّ أَحْسَنُ مِنْ مَشُورَةِ أَخِيتُوفَلَ». فَإِنَّ ٱلرَّبَّ أَمَرَ بِإِبْطَالِ مَشُورَةِ أَخِيتُوفَلَ ٱلصَّالِحَةِ، لِكَيْ يُنْزِلَ ٱلرَّبُّ ٱلشَّرَّ بِأَبْشَالُومَ. ١٤ 14
೧೪ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
وَقَالَ حُوشَايُ لِصَادُوقَ وَأَبِيَاثَارَ ٱلْكَاهِنَيْنِ: «كَذَا وَكَذَا أَشَارَ أَخِيتُوفَلُ عَلَى أَبْشَالُومَ وَعَلَى شُيُوخِ إِسْرَائِيلَ، وَكَذَا وَكَذَا أَشَرْتُ أَنَا. ١٥ 15
೧೫ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.
فَٱلْآنَ أَرْسِلُوا عَاجِلًا وَأَخْبِرُوا دَاوُدَ قَائِلِينَ: لَا تَبِتْ هَذِهِ ٱللَّيْلَةَ فِي سُهُولِ ٱلْبَرِّيَّةِ، بَلِ ٱعْبُرْ لِئَلَّا يُبْتَلَعَ ٱلْمَلِكُ وَجَمِيعُ ٱلشَّعْبِ ٱلَّذِي مَعَهُ». ١٦ 16
೧೬ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು
وَكَانَ يُونَاثَانُ وَأَخِيمَعَصُ وَاقِفَيْنِ عِنْدَ عَيْنِ رُوجَلَ، فَٱنْطَلَقَتِ ٱلْجَارِيَةُ وَأَخْبَرَتْهُمَا، وَهُمَا ذَهَبَا وَأَخْبَرَا ٱلْمَلِكَ دَاوُدَ، لِأَنَّهُمَا لَمْ يَقْدِرَا أَنْ يُرَيَا دَاخِلَيْنِ ٱلْمَدِينَةَ. ١٧ 17
೧೭ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.
فَرَآهُمَا غُلَامٌ وَأَخْبَرَ أَبْشَالُومَ. فَذَهَبَا كِلَاهُمَا عَاجِلًا وَدَخَلَا بَيْتَ رَجُلٍ فِي بَحُورِيمَ وَلَهُ بِئْرٌ فِي دَارِهِ، فَنَزَلَا إِلَيْهَا. ١٨ 18
೧೮ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.
فَأَخَذَتِ ٱلْمَرْأَةُ وَفَرَشَتْ سَجْفًا عَلَى فَمِ ٱلْبِئْرِ وَسَطَحَتْ عَلَيْهِ سَمِيذًا فَلَمْ يُعْلَمِ ٱلْأَمْرُ. ١٩ 19
೧೯ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
فَجَاءَ عَبِيدُ أَبْشَالُومَ إِلَى ٱلْمَرْأَةِ إِلَى ٱلْبَيْتِ وَقَالُوا: «أَيْنَ أَخِيمَعَصُ وَيُونَاثَانُ؟» فَقَالَتْ لَهُمُ ٱلْمَرْأَةُ: «قَدْ عَبَرَا قَنَاةَ ٱلْمَاءِ». وَلَمَّا فَتَّشُوا وَلَمْ يَجِدُوهُمَا رَجَعُوا إِلَى أُورُشَلِيمَ. ٢٠ 20
೨೦ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.
وَبَعْدَ ذِهَابِهِمْ خَرَجَا مِنَ ٱلْبِئْرِ وَذَهَبَا وَأَخْبَرَا ٱلْمَلِكَ دَاوُدَ، وَقَالَا لِدَاوُدَ: «قُومُوا وَٱعْبُرُوا سَرِيعًا ٱلْمَاءَ، لِأَنَّ هَكَذَا أَشَارَ عَلَيْكُمْ أَخِيتُوفَلُ». ٢١ 21
೨೧ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು.
فَقَامَ دَاوُدُ وَجَمِيعُ ٱلشَّعْبِ ٱلَّذِي مَعَهُ وَعَبَرُوا ٱلْأُرْدُنَّ. وَعِنْدَ ضَوْءِ ٱلصَّبَاحِ لَمْ يَبْقَ أَحَدٌ لَمْ يَعْبُرِ ٱلْأُرْدُنَّ. ٢٢ 22
೨೨ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.
وَأَمَّا أَخِيتُوفَلُ فَلَمَّا رَأَى أَنَّ مَشُورَتَهُ لَمْ يُعْمَلْ بِهَا، شَدَّ عَلَى ٱلْحِمَارِ وَقَامَ وَٱنْطَلَقَ إِلَى بَيْتِهِ إِلَى مَدِينَتِهِ، وَأَوْصَى لِبَيْتِهِ، وَخَنَقَ نَفْسَهُ وَمَاتَ وَدُفِنَ فِي قَبْرِ أَبِيهِ. ٢٣ 23
೨೩ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
وَجَاءَ دَاوُدُ إِلَى مَحَنَايِمَ. وَعَبَرَ أَبْشَالُومُ ٱلْأُرْدُنَّ هُوَ وَجَمِيعُ رِجَالِ إِسْرَائِيلَ مَعَهُ. ٢٤ 24
೨೪ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.
وَأَقَامَ أَبْشَالُومُ عَمَاسَا بَدَلَ يُوآبَ عَلَى ٱلْجَيْشِ. وَكَانَ عَمَاسَا ٱبْنَ رَجُلٍ ٱسْمُهُ يِثْرَا ٱلْإِسْرَائِيلِيُّ ٱلَّذِي دَخَلَ إِلَى أَبِيجَايِلَ بِنْتِ نَاحَاشَ أُخْتِ صَرُويَةَ أُمِّ يُوآبَ. ٢٥ 25
೨೫ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.
وَنَزَلَ إِسْرَائِيلُ وَأَبْشَالُومُ فِي أَرْضِ جِلْعَادَ. ٢٦ 26
೨೬ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.
وَكَانَ لَمَّا جَاءَ دَاوُدُ إِلَى مَحَنَايِمَ أَنَّ شُوبِيَ بْنَ نَاحَاشَ مِنْ رَبَّةِ بَنِي عَمُّونَ، وَمَاكِيرَ بْنَ عَمِّيئِيلَ مِنْ لُودَبَارَ، وَبَرْزَلَّايَ ٱلْجِلْعَادِيَّ مِنْ رُوجَلِيمَ، ٢٧ 27
೨೭ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು
قَدَّمُوا فَرْشًا وَطُسُوسًا وَآنِيَةَ خَزَفٍ وَحِنْطَةً وَشَعِيرًا وَدَقِيقًا وَفَرِيكًا وَفُولًا وَعَدَسًا وَحِمِّصًا مَشْوِيًّا ٢٨ 28
೨೮ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,
وَعَسَلًا وَزُبْدَةً وَضَأْنًا وَجُبْنَ بَقَرٍ، لِدَاوُدَ وَلِلشَّعْبِ ٱلَّذِي مَعَهُ لِيَأْكُلُوا، لِأَنَّهُمْ قَالُوا: «ٱلشَّعْبُ جَوْعَانُ وَمُتْعَبٌ وَعَطْشَانُ فِي ٱلْبَرِّيَّةِ». ٢٩ 29
೨೯ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.

< صَمُوئِيلَ ٱلثَّانِي 17 >