< صَمُوئِيلَ ٱلثَّانِي 18 >

وَأَحْصَى دَاوُدُ ٱلشَّعْبَ ٱلَّذِي مَعَهُ، وَجَعَلَ عَلَيْهِمْ رُؤَسَاءَ أُلُوفٍ وَرُؤَسَاءَ مِئَاتٍ. ١ 1
ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು.
وَأَرْسَلَ دَاوُدُ ٱلشَّعْبَ ثُلْثًا بِيَدِ يُوآبَ، وَثُلْثًا بِيَدِ أَبِيشَايَ ٱبْنِ صَرُويَةَ أَخِي يُوآبَ، وَثُلْثًا بِيَدِ إِتَّايَ ٱلْجَتِّيِّ. وَقَالَ ٱلْمَلِكُ لِلشَّعْبِ: «إِنِّي أَنَا أَيْضًا أَخْرُجُ مَعَكُمْ». ٢ 2
ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.
فَقَالَ ٱلشَّعْبُ: «لَا تَخْرُجْ، لِأَنَّنَا إِذَا هَرَبْنَا لَا يُبَالُونَ بِنَا، وَإِذَا مَاتَ نِصْفُنَا لَا يُبَالُونَ بِنَا. وَٱلْآنَ أَنْتَ كَعَشْرَةِ آلَافٍ مِنَّا. وَٱلْآنَ ٱلْأَصْلَحُ أَنْ تَكُونَ لَنَا نَجْدَةً مِنَ ٱلْمَدِينَةِ». ٣ 3
ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.
فَقَالَ لَهُمُ ٱلْمَلِكُ: «مَا يَحْسُنُ فِي أَعْيُنِكُمْ أَفْعَلُهُ». فَوَقَفَ ٱلْمَلِكُ بِجَانِبِ ٱلْبَابِ وَخَرَجَ جَمِيعُ ٱلشَّعْبِ مِئَاتٍ وَأُلُوفًا. ٤ 4
ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು.
وَأَوْصَى ٱلْمَلِكُ يُوآبَ وَأَبِيشَايَ وَإِتَّايَ قَائِلًا: «تَرَفَّقُوا لِي بِٱلْفَتَى أَبْشَالُومَ». وَسَمِعَ جَمِيعُ ٱلشَّعْبِ حِينَ أَوْصَى ٱلْمَلِكُ جَمِيعَ ٱلرُّؤَسَاءِ بِأَبْشَالُومَ. ٥ 5
ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು.
وَخَرَجَ ٱلشَّعْبُ إِلَى ٱلْحَقْلِ لِلِقَاءِ إِسْرَائِيلَ. وَكَانَ ٱلْقِتَالُ فِي وَعْرِ أَفْرَايِمَ، ٦ 6
ಅನಂತರ ಸೈನಿಕರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾಯೀಮ್ ಅಡವಿಯಲ್ಲಿತ್ತು.
فَٱنْكَسَرَ هُنَاكَ شَعْبُ إِسْرَائِيلَ أَمَامَ عَبِيدِ دَاوُدَ، وَكَانَتْ هُنَاكَ مَقْتَلَةٌ عَظِيمَةٌ فِي ذَلِكَ ٱلْيَوْمِ. قُتِلَ عِشْرُونَ أَلْفًا. ٧ 7
ಅಲ್ಲಿ ಇಸ್ರಾಯೇಲರು ದಾವೀದನ ಸೇವಕರ ಮುಂದೆ ಸಂಹಾರವಾದರು.
وَكَانَ ٱلْقِتَالُ هُنَاكَ مُنْتَشِرًا عَلَى وَجْهِ كُلِّ ٱلْأَرْضِ، وَزَادَ ٱلَّذِينَ أَكَلَهُمُ ٱلْوَعْرُ مِنَ ٱلشَّعْبِ عَلَى ٱلَّذِينَ أَكَلَهُمُ ٱلسَّيْفُ فِي ذَلِكَ ٱلْيَوْمِ. ٨ 8
ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
وَصَادَفَ أَبْشَالُومُ عَبِيدَ دَاوُدَ، وَكَانَ أَبْشَالُومُ رَاكِبًا عَلَى بَغْلٍ، فَدَخَلَ ٱلْبَغْلُ تَحْتَ أَغْصَانِ ٱلْبُطْمَةِ ٱلْعَظِيمَةِ ٱلْمُلْتَفَّةِ، فَتَعَلَّقَ رَأْسُهُ بِٱلْبُطْمَةِ وَعُلِّقَ بَيْنَ ٱلسَّمَاءِ وَٱلْأَرْضِ، وَٱلْبَغْلُ ٱلَّذِي تَحْتَهُ مَرَّ. ٩ 9
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.
فَرَآهُ رَجُلٌ وَأَخْبَرَ يُوآبَ وَقَالَ: «إِنِّي قَدْ رَأَيْتُ أَبْشَالُومَ مُعَلَّقًا بِٱلْبُطْمَةِ». ١٠ 10
ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು.
فَقَالَ يُوآبُ لِلرَّجُلِ ٱلَّذِي أَخْبَرَهُ: «إِنَّكَ قَدْ رَأَيْتَهُ، فَلِمَاذَا لَمْ تَضْرِبْهُ هُنَاكَ إِلَى ٱلْأَرْضِ؟ وَعَلَيَّ أَنْ أُعْطِيَكَ عَشْرَةَ مِنَ ٱلْفِضَّةِ وَمِنْطَقَةً». ١١ 11
ಅದಕ್ಕೆ ಯೋವಾಬನು ತನಗೆ ಅದನ್ನು ತಿಳಿಸಿದವನಿಗೆ, “ನೀನು ಕಂಡು ಅವನನ್ನು ಏಕೆ ಕಡಿದು ನೆಲಕ್ಕೆ ಉರುಳಿಸಲಿಲ್ಲ? ನಾನು ನಿನಗೆ ಹತ್ತು ಬೆಳ್ಳಿ ನಾಣ್ಯಗಳನ್ನು, ಒಂದು ಬೆಳ್ಳಿ ನಡುಕಟ್ಟನ್ನು ಕೊಡುತ್ತಿದ್ದೆನು,” ಎಂದನು.
فَقَالَ ٱلرَّجُلُ لِيُوآبَ: «فَلَوْ وُزِنَ فِي يَدِي أَلْفٌ مِنَ ٱلْفِضَّةِ لَمَا كُنْتُ أَمُدُّ يَدِي إِلَى ٱبْنِ ٱلْمَلِكِ، لِأَنَّ ٱلْمَلِكَ أَوْصَاكَ فِي آذَانِنَا أَنْتَ وَأَبِيشَايَ وَإِتَّايَ قَائِلًا: ٱحْتَرِزُوا أَيًّا كَانَ مِنْكُمْ عَلَى ٱلْفَتَى أَبْشَالُومَ. ١٢ 12
ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.
وَإِلَّا فَكُنْتُ فَعَلْتُ بِنَفْسِي زُورًا، إِذْ لَا يَخْفَى عَنِ ٱلْمَلِكِ شَيْءٌ، وأَنْتَ كُنْتَ وَقَفْتَ ضِدِّي». ١٣ 13
ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು.
فَقَالَ يُوآبُ: «إِنِّي لَا أَصْبِرُ هَكَذَا أَمَامَكَ». فَأَخَذَ ثَلَاثَةَ سِهَامٍ بِيَدِهِ وَنَشَّبَهَا فِي قَلْبِ أَبْشَالُومَ، وَهُوَ بَعْدُ حَيٌّ فِي قَلْبِ ٱلْبُطْمَةِ. ١٤ 14
ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.
وَأَحَاطَ بِهَا عَشْرَةُ غِلْمَانٍ حَامِلُو سِلَاحِ يُوآبَ، وَضَرَبُوا أَبْشَالُومَ وَأَمَاتُوهُ. ١٥ 15
ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು.
وَضَرَبَ يُوآبُ بِٱلْبُوقِ فَرَجَعَ ٱلشَّعْبُ عَنِ ٱتِّبَاعِ إِسْرَائِيلَ، لِأَنَّ يُوآبَ مَنَعَ ٱلشَّعْبَ. ١٦ 16
ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.
وَأَخَذُوا أَبْشَالُومَ وَطَرَحُوهُ فِي ٱلْوَعْرِ فِي ٱلْجُبِّ ٱلْعَظِيمِ، وَأَقَامُوا عَلَيْهِ رُجْمَةً عَظِيمَةً جِدًّا مِنَ ٱلْحِجَارَةِ. وَهَرَبَ كُلُّ إِسْرَائِيلَ، كُلُّ وَاحِدٍ إِلَى خَيْمَتِهِ. ١٧ 17
ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.
وَكَانَ أَبْشَالُومُ قَدْ أَخَذَ وَأَقَامَ لِنَفْسِهِ وَهُوَ حَيٌّ ٱلنُّصْبَ ٱلَّذِي فِي وَادِي ٱلْمَلِكِ، لِأَنَّهُ قَالَ: «لَيْسَ لِيَ ٱبْنٌ لِأَجْلِ تَذْكِيرِ ٱسْمِي». وَدَعَا ٱلنُّصْبَ بِٱسْمِهِ، وَهُوَ يُدْعَى «يَدَ أَبْشَالُومَ» إِلَى هَذَا ٱلْيَوْمِ. ١٨ 18
ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ.
وَقَالَ أَخِيمَعَصُ بْنُ صَادُوقَ: «دَعْنِي أَجْرِ فَأُبَشِّرَ ٱلْمَلِكَ، لِأَنَّ ٱللهَ قَدِ ٱنْتَقَمَ لَهُ مِنْ أَعْدَائِهِ». ١٩ 19
ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.
فَقَالَ لَهُ يُوآبُ: «مَا أَنْتَ صَاحِبُ بِشَارَةٍ فِي هَذَا ٱلْيَوْمِ. فِي يَوْمٍ آخَرَ تُبَشِّرُ، وَهَذَا ٱلْيَوْمَ لَا تُبَشِّرُ مِنْ أَجْلِ أَنَّ ٱبْنَ ٱلْمَلِكِ قَدْ مَاتَ». ٢٠ 20
ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.
وَقَالَ يُوآبُ لِكُوشِي: «ٱذْهَبْ وَأَخْبِرِ ٱلْمَلِكَ بِمَا رَأَيْتَ». فَسَجَدَ كُوشِي لِيُوآبَ وَرَكَضَ. ٢١ 21
ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು.
وَعَادَ أَيْضًا أَخِيمَعَصُ بْنُ صَادُوقَ فَقَالَ لِيُوآبَ: «مَهْمَا كَانَ، فَدَعْنِي أَجْرِ أَنَا أَيْضًا وَرَاءَ كُوشِي». فَقَالَ يُوآبُ: «لِمَاذَا تَجْرِي أَنْتَ يَا ٱبْنِي، وَلَيْسَ لَكَ بِشَارَةٌ تُجَازَى؟» ٢٢ 22
ಆಗ ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, ಏನೇ ಆಗಲಿ, “ನಾನು ಕೂಷ್ಯ ದೇಶವಾಸಿ ಹಿಂದೆ ಓಡಿಹೋಗುವ ಹಾಗೆ ಅಪ್ಪಣೆಕೊಡಬೇಕು,” ಎಂದನು. ಅದಕ್ಕೆ ಯೋವಾಬನು, “ನನ್ನ ಮಗನೇ, ನೀನು ಏಕೆ ಹೋಗಲು ಬಯಸುತ್ತಿರುವೆ? ನಿನಗೆ ಪ್ರಶಸ್ತಿಯನ್ನು ತರುವ ಯಾವುದೇ ಸುದ್ದಿ ನಿನ್ನ ಬಳಿ ಇಲ್ಲ,” ಎಂದನು.
قَالَ: «مَهْمَا كَانَ أَجْرِي». فَقَالَ لَهُ: «ٱجْرِ». فَجَرَى أَخِيمَعَصُ فِي طَرِيقِ ٱلْغَوْرِ وَسَبَقَ كُوشِيَ. ٢٣ 23
ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
وَكَانَ دَاوُدُ جَالِسًا بَيْنَ ٱلْبَابَيْنِ، وَطَلَعَ ٱلرَّقِيبُ إِلَى سَطْحِ ٱلْبَابِ إِلَى ٱلسُّورِ وَرَفَعَ عَيْنَيْهِ وَنَظَرَ وَإِذَا بِرَجُلٍ يَجْرِي وَحْدَهُ. ٢٤ 24
ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು.
فَنَادَى ٱلرَّقِيبُ وَأَخْبَرَ ٱلْمَلِكَ. فَقَالَ ٱلْمَلِكُ: «إِنْ كَانَ وَحْدَهُ فَفِي فَمِهِ بِشَارَةٌ». وَكَانَ يَسْعَى وَيَقْرُبُ. ٢٥ 25
ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು, “ಅವನು ಒಬ್ಬನಾಗಿ ಬಂದರೆ, ಅವನ ಬಳಿ ಒಳ್ಳೆಯ ಸಮಾಚಾರ ಇರುವುದು,” ಎಂದನು. ಅವನು ಬಂದು ಸಮೀಪಿಸಿದನು.
ثُمَّ رَأَى ٱلرَّقِيبُ رَجُلًا آخَرَ يَجْرِي، فَنَادَى ٱلرَّقِيبُ ٱلْبَوَّابَ وَقَالَ: «هُوَذَا رَجُلٌ يَجْرِي وَحْدَهُ». فَقَالَ ٱلْمَلِكُ: «وَهَذَا أَيْضًا مُبَشِّرٌ». ٢٦ 26
ಕಾವಲುಗಾರನು ಬೇರೊಬ್ಬನು ಓಡಿಬರುವುದನ್ನು ಕಂಡು, ಬಾಗಿಲು ಕಾಯುವವನನ್ನು ಕರೆದು, “ಇಗೋ, ಮತ್ತೊಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ,” ಎಂದನು. ಅದಕ್ಕೆ ಅರಸನು, “ಅವನೂ ಸಹ ಒಳ್ಳೆಯ ಸಮಾಚಾರ ತೆಗೆದುಕೊಂಡು ಬರುತ್ತಾನೆ,” ಎಂದನು.
وَقَالَ ٱلرَّقِيبُ: «إِنِّي أَرَى جَرْيَ ٱلْأَوَّلِ كَجَرْيِ أَخِيمَعَصَ بْنِ صَادُوقَ». فَقَالَ ٱلْمَلِكُ: «هَذَا رَجُلٌ صَالِحٌ وَيَأْتِي بِبِشَارَةٍ صَالِحَةٍ». ٢٧ 27
ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.
فَنَادَى أَخِيمَعَصُ وَقَالَ لِلْمَلِكِ: «ٱلسَّلَامُ». وَسَجَدَ لِلْمَلِكِ عَلَى وَجْهِهِ إِلَى ٱلْأَرْضِ. وَقَالَ: «مُبَارَكٌ ٱلرَّبُّ إِلَهُكَ ٱلَّذِي دَفَعَ ٱلْقَوْمَ ٱلَّذِينَ رَفَعُوا أَيْدِيَهُمْ عَلَى سَيِّدِي ٱلْمَلِكِ». ٢٨ 28
ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.
فَقَالَ ٱلْمَلِكُ: «أَسَلَامٌ لِلْفَتَى أَبْشَالُومَ؟» فَقَالَ أَخِيمَعَصُ: «قَدْ رَأَيْتُ جُمْهُورًا عَظِيمًا عِنْدَ إِرْسَالِ يُوآبَ عَبْدَ ٱلْمَلِكِ وَعَبْدَكَ، وَلَمْ أَعْلَمْ مَاذَا». ٢٩ 29
ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.
فَقَالَ ٱلْمَلِكُ: «دُرْ وَقِفْ هَهُنَا». فَدَارَ وَوَقَفَ. ٣٠ 30
ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು.
وَإِذَا بِكُوشِي قَدْ أَتَى، وَقَالَ كُوشِي: «لِيُبَشَّرْ سَيِّدِي ٱلْمَلِكُ، لِأَنَّ ٱلرَّبَّ قَدِ ٱنْتَقَمَ لَكَ ٱلْيَوْمَ مِنْ جَمِيعِ ٱلْقَائِمِينَ عَلَيْكَ». ٣١ 31
ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು.
فَقَالَ ٱلْمَلِكُ لِكُوشِي: «أَسَلَامٌ لِلْفَتَى أَبْشَالُومَ؟» فَقَالَ كُوشِي: «لِيَكُنْ كَٱلْفَتَى أَعْدَاءُ سَيِّدِي ٱلْمَلِكِ وَجَمِيعُ ٱلَّذِينَ قَامُوا عَلَيْكَ لِلشَّرِّ». ٣٢ 32
ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು.
فَٱنْزَعَجَ ٱلْمَلِكُ وَصَعِدَ إِلَى عِلِّيَّةِ ٱلْبَابِ وَكَانَ يَبْكِي وَيَقُولُ هكَذَا وَهُوَ يَتَمَشَّى: «يَا ٱبْنِي أَبْشَالُومُ، يَا ٱبْنِي، يَا ٱبْنِي أَبْشَالُومُ! يَالَيْتَنِي مُتُّ عِوَضًا عَنْكَ! يَا أَبْشَالُومُ ٱبْنِي، يَا ٱبْنِي». ٣٣ 33
ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.

< صَمُوئِيلَ ٱلثَّانِي 18 >